Advertisement

Category: ಅಂಕಣ

ಕ್ಲಾಸ್‌ಮೇಟ್ಸುಗಳ ಮಕ್ಕಳು ಮತ್ತು ಫಯಾಜ್‌ನ ಪುಲಾವು

‘ಮದುವೆಯಾದ ನಂತರ ಗಂಡು ಅಡುಗೆ ಮಾಡುವುದು ಅವಮಾನ, ಅದೇನಿದ್ದರೂ ಹೆಂಡತಿಯ ಕೆಲಸ’ ಎಂಬ ಅರೆಬೆಂದ ಅಲಿಖಿತ ಕಟ್ಟುಪಾಡೊಂದು ಉಂಟಲ್ಲ, ಅದು ಮೌಢ್ಯ. ಮದುವೆಯಾದ ನಂತರವೂ ಅಡುಗೆ ಕೆಲಸಗಳನ್ನು ಮಾಡುವುದು ಖಂಡಿತ ಅವಮಾನದ ಸಂಗತಿಯಲ್ಲ. ಬದಲಿಗೆ, ಪ್ರೀತಿ ಹೆಚ್ಚಿಸುವ ಸಂಗತಿ. ಕುಟುಂಬವೊಂದು ಹೀಗಿದ್ದಾಗ, ಅದು ಮಕ್ಕಳ ಯೋಚನಾ ಲಹರಿಯ ಮೇಲೂ ಪರಿಣಾಮ ಬೀರುತ್ತದೆ.  ಅಪ್ಪನ ಈ…

Read More

ಹೆಸರು ಗುರುತಿಲ್ಲದ ಕಳೆದುಹೋದ ಜನರ ನೆನಪುಗಳ ದಿನ

ಮೊದಲನೇ ಮತ್ತು ಎರಡನೆ ಮಹಾಯುದ್ಧಗಳಲ್ಲಿ ಬ್ರಿಟನ್ನಿನ ಮತ್ತು ಅವರ ಮಿತ್ರರಾಷ್ಟ್ರಗಳ ಪರವಾಗಿ ಪಾಲ್ಗೊಂಡಿದ್ದ ಆಸ್ಟ್ರೇಲಿಯದ ಸೈನಿಕ ಕುಟುಂಬಗಳಿಗೆ ದೇಶದೊಳಗೆ ಅನೇಕ ಮನ್ನಣೆ ಸಂದಿದೆ. ಆದರೆ ಅವರಲ್ಲಿ ಬಹುತೇಕರು ಬಿಳಿಯರು. ಮಿಕ್ಕವರಿಗೆ ಅದೇ ಮಟ್ಟದಲ್ಲಿ ಮನ್ನಣೆ ಸಿಗಲಿಲ್ಲ. ಆ ಮಿಕ್ಕವರಲ್ಲಿ ಮುಖ್ಯವಾಗಿ ಸೇರಿದವರು ಆಸ್ಟ್ರೇಲಿಯನ್ ಅಬೊರಿಜಿನಲ್ ಜನರು, ಸ್ವಲ್ಪಮಟ್ಟಿಗೆ ಬ್ರಿಟಿಷರ ವಸಾಹತು…

Read More

ತಂದೆಯಂತೆ ಸಮಾಜಮುಖಿಯಾಗಿದ್ದ ಪುನೀತ್ ನೆನಪುಗಳು

ಪುನೀತ್ ಕನ್ನಡ ಸಿನೆಮಾಕ್ಕೆ ನಾಯಕನಾಗಿ ಬರುವಷ್ಟರಲ್ಲಿ ಶಿವರಾಜಕುಮಾರ್ ಆಗಲೇ ದೊಡ್ಡ ತಾರೆಯಾಗಿದ್ದರು ಮತ್ತು ರಾಘವೇಂದ್ರ ರಾಜಕುಮಾರ್ ಹಲವು ಸಿನೆಮಾ ಮಾಡಿ ತೆರೆಯಿಂದ ಮರೆಯಾಗಿದ್ದರು. ಬಾಲನಟನಾಗಿ ಕನ್ನಡಿಗರ ಮನೆಮಾತಾಗಿದ್ದ ಲೋಹಿತ್, ಪುನೀತ್ ಆಗಿ ತೆರೆಯ ಮೇಲೆ ಹೀರೋ ಆಗಿ ಬಂದು ಶಿವಣ್ಣನ ಹಾದಿ ಹಿಡಿಯುತ್ತಾರೋ ಇಲ್ಲವೋ ಎಂದು ಬಹಳ ಚರ್ಚೆ ನಡೆಯುತ್ತಿತ್ತು. ಪುನೀತ್ ಇಬ್ಬರ ಹಾದಿಯನ್ನೂ ತುಳಿಯದೇ ತಂದೆಯ ಹಾದಿ ಹಿಡಿದರು. ಹೀರೋ ವೈಭವೀಕರಣದ ಸಿನೆಮಾಗಳಿದ್ದರೂ ತಂದೆಯಂತೆ ಸಮಾಜ ಮುಖಿಯಾದ…

Read More

ಕಾಜುಗಾರ ಮನೆಯ ಇರುಳ ಬೆಳಕು

ಆ ದಿನ ನಾಗರಪಂಚಮಿ ಹಬ್ಬ. ಇದ್ದ ಸಾಮಾನಿನಲ್ಲಿಯೇ ಸೂಳಿರೊಟ್ಟಿ ಮಾಡಬೇಕೆಂಬುದು ಶಿಕ್ಷಕಿಯರ ಸಂಕಲ್ಪ. ಕರಾವಳಿ ಜನರ ಸಂಪ್ರದಾಯದಂತೆ ಹಬ್ಬಕ್ಕೆ ಮನೆ ಮಂದಿಯೆಲ್ಲ ಸೇರಿ ಮಾಡುವ ಸೂಳಿರೊಟ್ಟಿ ಆ ದಿನದ ವಿಶೇಷ ತಿಂಡಿ. ಇದನ್ನು ಮಾಡಲು ಇಡ್ಲಿ ಬೇಯಿಸುವ ಪಾತ್ರೆ ಬೇಕೆ ಬೇಕು. ಆದರೂ ಹೊಂದಿಸಿ ಗುಣಿಸಿ ಇದ್ದ ಅಡುಗೆ ಪಾತ್ರೆಯಲ್ಲಿಯೆ ಸೂಳಿರೊಟ್ಟಿ ಮಾಡಿ ತಿಂದಾಗ ಒಂದು ಸಾಹಸವೇ ಆಗಿತ್ತು. ಅಷ್ಟೊಂದು ನೀಟಾಗಿ ಬರದ ಸೂಳಿರೊಟ್ಟಿಗಳು ಸಿ.ಆರ್‌. ನಾಯ್ಕರ ಬಾಯಿಗೂ ಬಿತ್ತು.  ಅಣಶಿಯ ಚಳಿ ಮಳೆ ಗಾಳಿಯಲ್ಲಿ ಹಬೆಯಾಡುವ ಬೆಳಗ್ಗಿನ ಬಿಸಿ ಬಿಸಿ ಚಹಾದ ಜೊತೆಗೆ…

Read More

ಇದೆಲ್ಲದಕ್ಕೂ ಒಂದು ಅರ್ಥ ಬೇಕಲ್ಲ!

ಮನುಕುಲ ಕಂಡ ಘೋರ ದುರಂತಗಳ ಹಸಿ ಹಸಿ ವಿವರಗಳು ಓದುಗರ ಗಂಟಲು ಕಟ್ಟಿಸುತ್ತವೆ. ಅಧಿಕಾರ ಮಾತ್ರದಿಂದ ಒಂದು ಜನಾಂಗಕ್ಕೆ ಸೇರಿದ ಜನರೆಲ್ಲರ ಹೆಸರು, ವಿದ್ಯೆ, ಊರುಗಳನ್ನೆಲ್ಲ ತೊಡೆದು ಹಾಕಿ ಸಂಖ್ಯೆಯೊಂದರಿಂದ ಮಾತ್ರ ಅವರನ್ನೆಲ್ಲ ಸಾಮೂಹಿಕವಾಗಿ ಗುರುತಿಸುವ ಈ ಜಾಗದಲ್ಲಿ ಇರಬೇಕಾಗಿ ಬಂದವರು ಬದುಕನ್ನು ಹೇಗೆ ಕಾಪಾಡಿಕೊಳ್ಳುತ್ತಿದ್ದರು ಎಂಬ ಬಗ್ಗೆ ಜ್ವಲಂತ ವಿವರಣೆಗಳಿವೆ. ಈ ಪುಸ್ತಕದ ಮೊದಲ ಭಾಗದಲ್ಲಿ ಆಸ್ವಿಚ್ ಎಂಬ ಕುಖ್ಯಾತ ನಾಜಿ ಕ್ಯಾಂಪಿನಲ್ಲಿ ಲೇಖಕರನ್ನು ಬಂಧಿಸಿಟ್ಟಾಗ ಅವರು ಅವರ ಸಹಚರರೊಂದಿಗೆ…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ