Advertisement

Category: ಅಂಕಣ

ಇಂತೀ, ನಿನ್ನ ಪ್ರೀತಿಸುವ…

ನನ್ನನ್ನು ಅನುಕೂಲಕ್ಕೆ ಬಳಸಿಕೊಂಡರೂ, ಅದು ನಾನೆ ಮನಸಾರೆಯಾಗಿ ಕೊಟ್ಟ ಅವಕಾಶ. ನನ್ನ ಮೇಲೆ ಪ್ರೀತಿ ಹೆಚ್ಚಲಿ ಎಂದಿದ್ದ ಸ್ವಾರ್ಥ. ಹಾಗೇನಾದರೂ ಯಾವತ್ತಾದರೂ ಮತ್ತೆ ನನ್ನನ್ನು ನಿನ್ನ ಅನುಕೂಲಕ್ಕೆ ಉಪಯೋಗಿಸಿಕೊಳ್ಳಬೇಕೆನಿಸಿದರೆ ನೆನಪಿಸಿಕೊ. ನನ್ನ ಮನಸ್ಸು ನೆಮ್ಮದಿಯ ನಿಟ್ಟುಸಿರು ಬಿಡಬಹುದು. ಪ್ರೀತಿ ಎಂದರೆ ಕೊಟ್ಟು ಕೊಳ್ಳುವ ವ್ಯಾಪಾರವಲ್ಲ, ಎಲ್ಲವನ್ನೂ ನೀಡುವ ತ್ಯಾಗವಲ್ಲ, ಕಸಿದುಕೊಳ್ಳುವ ದುರ್ಬುದ್ಧಿಯಲ್ಲ, ನಮಗಾಗಿಯೆ ಕೊಡುವ ಸ್ವಾರ್ಥ. ನೋಡುಗರಿಗೆ ಪ್ರೀತಿಯಲ್ಲಿ ಮೋಸ ಕಾಣಿಸಬಹುದು ಆದರೆ ಪ್ರೀತಿಸುವವರಲ್ಲಿ ಕಾಣಿಸಿದರೆ ಅದು ಪ್ರೀತಿಯೆ ಅಲ್ಲ.
ಪ್ರಶಾಂತ್‌ ಬೀಚಿ ಅಂಕಣ

Read More

ಆಸ್ಟ್ರೇಲಿಯ-ಅಂತಾರಾಷ್ಟ್ರೀಯ ವಿದ್ಯಾರ್ಥಿಗಳ ಹಾಡುಪಾಡು

ಕೋವಿಡ್-೧೯ ವರ್ಷದಲ್ಲಿ ಓದುತ್ತಿದ್ದ ಕೆಲ ವಿದ್ಯಾರ್ಥಿಗಳು ರಜೆಗೆಂದು ತಮ್ಮೂರಿಗೆ (ದೇಶಕ್ಕೆ) ಹಿಂದಿರುಗಿ, ಇತ್ತ ವೈರಸ್ ಹಾವಳಿ ಹೆಚ್ಚಾಗಿ, ಅವರು ವಾಪಸ್ ಬರಲು ಆಗದೆ ತಮ್ಮ ಓದನ್ನು ಆನ್ಲೈನ್ ಮುಖಾಂತರ ಮುಂದುವರೆಸುವ ಫಜೀತಿಯಾಗಿತ್ತು. ಕೆಲವರು ಆಸ್ಟ್ರೇಲಿಯಾದಲ್ಲಿ ಇನ್ನೂ ಮನೆ ಬಾಡಿಗೆ ಕಟ್ಟುತ್ತಿದ್ದರು; ಸಾಮಾನು, ಸರಂಜಾಮುಗಳನ್ನು ಇಲ್ಲೇ ಇಟ್ಟಿದ್ದರು. ಪಾರ್ಟ್‌ ಟೈಮ್ ಕೆಲಸವಿದ್ದವರಿಗೆ ಕೆಲಸ ಹೋಯ್ತು. ವೀಸಾ ಮುಂದುವರೆಸಲು ಸರಕಾರ ಕೊಕ್ಕೆ ಹಾಕಿತು. ಡಿಗ್ರಿ ಮುಗಿಸಲೇ ಬೇಕು ಎನ್ನುವುದು ವಿದ್ಯಾರ್ಥಿ ವೀಸಾದ ಷರತ್ತು. ಡಾ.ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ಅಂಕಣ

Read More

ನಕ್ಷತ್ರ ಮಂಡಲ ಇರುವುದು ಎಲ್ಲಿ?

ಬಸವಣ್ಣ ಹೇಳಿದ “ಸ್ಥಾವರಕ್ಕಳಿವುಂಟು, ಜಂಗಮಕ್ಕಳಿವಿಲ್ಲ” ಎಂಬ ನುಡಿಯೇ ಈ ಕಾದಂಬರಿಯ ಧ್ಯೇಯವಾಕ್ಯ. ಪ್ರತೀ ಅಧ್ಯಾಯದಲ್ಲೂ ಇರುವ ಸರ್ವನಿಯಾಮಕ ಎಳೆಯೆಂದರೆ ಅದು ಸಂಚಾರ, ಚಲನೆ. “ಜಗತ್ತಿಗೆ ಒಂದು ಸ್ಥಳದಲ್ಲಿ ನೆಲೆ ನಿಲ್ಲದವರ ಮೇಲೆ ಏನು ದ್ವೇಷವೋ ಕಾಣೆ. ಅದಕ್ಕೇ ಸಂಚಾರವನ್ನು ಆಯ್ದುಕೊಂಡವರನ್ನೆಲ್ಲ ತಡವಿಲ್ಲದೇ ಹೊಡೆದುರುಳಿಸಿದೆ ಚರಿತ್ರೆ” ಎನ್ನುತ್ತಾಳೆ ಕಾದಂಬರಿಯ ನಿರೂಪಕಿ ಒಂದು ಕಡೆ. ಅವಳು ನಿರಂತರವಾಗಿ ಚಲನೆಯಲ್ಲೇ ಇರುವವಳು. ಅಂದರೆ ಪ್ರಪಂಚದ ಬೇರೆ ಬೇರೆ ಊರುಗಳಿಗೆ ಸೈಟ್ ಸೀಯಿಂಗಿಗೆಂದು ಹೋಗಿ ಬರುವವಳಲ್ಲ.

Read More

ಅನಿವಾಸಿ ಕನ್ನಡಿಗರ ಕತೆಗಳ ʼಗುರುʼ

ಗುರುಪ್ರಸಾದ್ ಕಾಗಿನಲೆ ಅವರ ಕತೆಗಳಲ್ಲಿ ರೂಪಕಗಳ ಉಪಯೋಗ ಮತ್ತು ಪ್ರಯೋಗ ಎರಡೂ ತುಂಬ ಕಡಿಮೆ. ಒಳಪ್ರಪಂಚದ ವಿವರಗಳನ್ನು ಎಷ್ಟು ಬೇಕೋ ಅಷ್ಟೇ ಉಪಯೋಗಿಸುತ್ತಾರೆ. ಅಂತರಂಗದ ಭಾವನಾಲೋಕವನ್ನು ತುಂಬ ಕೆದಕುತ್ತ ಹೋಗುವುದಿಲ್ಲ. ಬಾಹ್ಯವಿವರಗಳನ್ನು ಹೆಚ್ಚಾಗಿ ಕೊಟ್ಟು ಪುಟ ತುಂಬಿಸುವುದೆಂದರೆ ಇವರಿಗಾಗದು. ಯಾವ ಪಾತ್ರವನ್ನೂ ಅವರ ರೂಪ, ಎತ್ತರ, ಅಗಲ ಇತ್ಯಾದಿಗಳನ್ನು ತಿದ್ದಿ ತೀಡಿ ಬರೆಯುವುದಿಲ್ಲ. ಪಾತ್ರಗಳ ಊಹೆಯ ಸ್ವಾತಂತ್ರ್ಯವನ್ನು ನಮಗೇ ಬಿಡುತ್ತಾರೆ…

Read More

ನಾಟಕವೆಂದರೆ ಶೃತಿಗೆ ಅಣಿಗೊಳಿಸಿದ ವೀಣೆಯಂತೆ

ರಂಗದ ಕಾಯಕ ಅಂದರೆ ಮೊದಲು ನಮ್ಮ ಮನೋಧರ್ಮ ಗುರುತಿಸಿಕೊಂಡು ನಾಟಕ ಕಟ್ಟಿ ಅದು ಪ್ರೇಕ್ಷಕರ ಕಣ್ಣುಗಳ ಫ್ರೇಮಿನಲ್ಲಿ ಸರಿಯಾಗಿ ಫಿಟ್ಟಾಗುತ್ತದೆಯೇ ಎಂದು ಅಂದಾಜು ಮಾಡಿಕೊಳ್ಳಬೇಕು. ನಂತರ ಜನರಿಗೆ ಕಾಯಬೇಕು. ಪಾರ್ಕಿಂಗ್ ಕಡೆ ಕಣ್ಣು ಹಾಯಿಸುತ್ತಿರಬೇಕು. ಇಷ್ಟಾದ ಮೇಲೆ ಭರ್ಜಿಯ ಮೊನೆಗಳಿಗೆ ಮೈ ಒಡ್ಡಿ ನಿಲ್ಲಬೇಕು ಮತ್ತು ನೋವಿನಲ್ಲೂ ನಗಬೇಕು. ನಗಲು ಸಾಧ್ಯವಾಗದಿದ್ದರೆ ಮನಸ್ಸಿನ ಹದ ಕೆಡುತ್ತದೆ. ಮನಸ್ಸು ಕೆಟ್ಟರೆ ಬದುಕಿನ ನೋಟಕ್ರಮದ ಜಾಡು ತಪ್ಪುತ್ತದೆ. ಒಟ್ಟು ಚಿತ್ರವೇ ಕಲಕಿಹೋಗುತ್ತದೆ.
‘ರಂಗ ವಠಾರ’ ಅಂಕಣದಲ್ಲಿ ಮತ್ತೆ…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ