Advertisement

Category: ಅಂಕಣ

ಗೋಡೆಯಿಂದ ಹಾರಿದ ಹಾವುಗಳು ಮತ್ತು ಗೋಡೆಗಂಟಿದ ಮನುಷ್ಯರು

ಊರಿನ ಪ್ರತಿ ಬೀದಿಯನ್ನೂ ಅಲಂಕರಿಸಿದ್ದ ಹೊಗೆಸೊಪ್ಪಿನ ಬ್ಯಾರಲ್‌ಗಳ ಪೈಕಿ ವರ್ಷಕ್ಕೆ ಒಂದಾದರೂ ಬೆಂಕಿಯೊಳಗೆ ಕುಣಿಯುವುದು ಕಾಯಂ ಆದಮೇಲೆ, ಅವುಗಳನ್ನು ಊರಿಂದ ಆಚೆ ಹಾಕುವ ಮಹಾ ಸಂಚಿಕೆಗಳು ಶುರುವಾದವು. ಫಯರ್ ಆಫೀಸಿನವರ ಎಚ್ಚರಿಕೆಗಳು, ಪೊಲೀಸಿನವರ ಖಾರದ ಮಾತು, ಬ್ಯಾರಲ್ ಸುತ್ತಮುತ್ತಲ ಮನೆಗಳ ಮಂದಿಯ ತಕರಾರುಗಳ ಫಲವಾಗಿ ಬಹುತೇಕ ಬ್ಯಾರಲ್‌ಗಳು ಸದ್ದಿಲ್ಲದಂತೆ ಊರಿಂದ ಆಚೆ ನಡೆದವು. ಹಾಗಂತ ಸಮಸ್ಯೆಗಳೂ ಊರಾಚೆ ನಡೆದು ಹೋದವು ಎನ್ನುವ ಹಾಗಿಲ್ಲ. ‘ಸೊಗದೆ’ ಅಂಕಣದಲ್ಲಿ ಸಹ್ಯಾದ್ರಿ ನಾಗರಾಜ್  ಹೊಗೆಸೊಪ್ಪು ಬ್ಯಾರಲ್ ಗಳ ಕುರಿತು ಬರೆದಿದ್ದಾರೆ. 

Read More

ಶಾಂತಿ, ಕ್ರಾಂತಿ, ಸ್ವಾತಂತ್ರ್ಯದ ಹಗಲುಗನಸು

ಇಪ್ಪತ್ತೊಂದನೇ ಶತಮಾನದ ಈ ವರ್ಷದಲ್ಲೂ ಆಸ್ಟ್ರೇಲಿಯಾದ ಅಬೊರಿಜಿನಲ್ ಮತ್ತು ದ್ವೀಪವಾಸಿಗಳಿಗೆ ಹೇಳಿಕೊಳ್ಳುವಂತಹ ಸಾಮಾಜಿಕ ನ್ಯಾಯವಿನ್ನೂ ಸಿಕ್ಕಿಲ್ಲ. ದೇಶದ ಒಟ್ಟಾರೆ ಜನಸಂಖ್ಯೆಯಲ್ಲಿ ಕೇವಲ ಮೂರು ಶತಭಾಗ ಮಾತ್ರ ಅಬೊರಿಜಿನಲ್ ಮತ್ತು ದ್ವೀಪವಾಸಿಗಳು. ಕಾರಾಗೃಹಗಳಲ್ಲಿ ಅವರ ಸಂಖ್ಯೆ ಸುಮಾರು ಶೇ 29ರಷ್ಟು. ತಮ್ಮ ಹಕ್ಕುಗಳಿಗೆ ಹೋರಾಡುತ್ತಿರುವ ಅವರು, ಭಾರತದಲ್ಲಿ ಗಾಂಧೀಜಿಯ ಶಾಂತಿ ಮಂತ್ರದಿಂದ ಸ್ವಾತಂತ್ರ್ಯ ಸಿಕ್ಕಂತೆ, ತಮ್ಮಲ್ಲೂ ಪರಿವರ್ತನೆಯ ಬೆಳಕೊಂದು ಮೂಡಿಬರುವಂತಾಗಲಿ ಎಂದು ಹಾರೈಸುತ್ತಾರೆ. ಅಬೊರಿಜಿನಲ್ ಮತ್ತು ದ್ವೀಪವಾಸಿಗಳ ಕುರಿತು ಡಾ. ವಿನತೆ ಶರ್ಮ ಆಸ್ಟ್ರೇಲಿಯಾ ಪತ್ರದಲ್ಲಿ ಬರೆದಿದ್ದಾರೆ.

Read More

ಅಜ್ಜ ಕೊಟ್ಟ ಜಾಗಟೆಯ ಮಹಿಮೆ

ದಿವಂಗತ ಹಿರಿಯ ಬಲಿಪ ನಾರಾಯಣ ಭಾಗವತರು ಉಪಯೋಗಿಸುತ್ತಿದ್ದ ಜಾಗಟೆ ಧರ್ಮಸ್ಥಳದ ಧರ್ಮಾಧಿಕಾರಿಗಳಾಗಿದ್ದ ಮಂಜಯ್ಯ ಹೆಗ್ಗಡೆಯವರು ಕೊಟ್ಟದ್ದು. ಇದು ಈಗಲೂ ಬಲಿಪ ಮನೆತನದ ಅತ್ಯಮೂಲ್ಯ ಆಸ್ತಿಯಂತಿದೆ. ಇದು ಕರಾವಳಿಯ ತೆಂಕುತಿಟ್ಟು ಯಕ್ಷಗಾನದ ಅನಭಿಷಿಕ್ತ ಸಾಮ್ರಾಟ ಮುನ್ನಡೆಸಿದ ಯಕ್ಷಗಾನಗಳಿಗೆ ಸಾಕ್ಷಿಯಂತೆ ಇರುವ, ಐತಿಹಾಸಿಕ ಮಹತ್ವವಿರುವ ಜಾಗಟೆ. ಈಗ ಅದು ನೋಡುತ್ತಿರುವುದು ಬಲಿಪ ಪರಂಪರೆಯ ನಾಲ್ಕನೆಯ ತಲೆಮಾರನ್ನು. ‘ಬಲಿಪ ಮಾರ್ಗ’ ಅಂಕಣದಲ್ಲಿ ಕೃಷ್ಣ ಪ್ರಕಾಶ ಉಳಿತ್ತಾಯ ಬರಹ.

Read More

ಕನ್ನಡ ವಿಮರ್ಶೆಯ ವಿವೇಕ: ಕೆಲವು ಮಾತುಗಳು

ಕನ್ನಡದ ಈ ಕಾಲದ ವಿಮರ್ಶೆ ಮೇಲ್ನೋಟಕ್ಕೆ ತನ್ನನ್ನು ‘ನವ್ಯೋತ್ತರ’ವೆನ್ನಬೇಕೋ ‘ಆಧುನಿಕೋತ್ತರ’ವೆನ್ನಬೇಕೋ, ‘ದಲಿತ ಬಂಡಾಯೋತ್ತರ’ ಎನ್ನಬೇಕೋ ಎಂಬ ಸ್ವನಿರೂಪಣೆಯ ಗೊಂದಲದಲ್ಲಿಯೇ ಸಿಲುಕಿದಂತೆ ಕಂಡರೂ, ಅದು ಕನ್ನಡ ವಿಮರ್ಶೆಯ ಕಾರ್ಯಸೂಚಿ ಎಷ್ಟು ಅನಿರ್ದಿಷ್ಟವಾಗಿದೆ ಎಂಬುದರ ಸೂಚಕವೂ ಆಗಿ ಕಾಣಿಸುತ್ತದೆ. ಈಚಿನ ದಶಕಗಳಲ್ಲಿ ಸಂಸ್ಕೃತಿ ಅಧ್ಯಯನ ಹಾಗೂ ಸ್ತ್ರೀವಾದಿ ವಿಮರ್ಶೆಯ ಮಾದರಿಗಳು ಪ್ರಭಾವಶಾಲಿಯಾಗಿ ಬೆಳೆದಿರುವುದು ನಿಜವಾಗಿದೆ. ಡಾ. ಎಸ್. ಸಿರಾಜ್ ಅಹ್ಮದ್  ತಮ್ಮ ಅಂಕಣದಲ್ಲಿ ಪ್ರಸ್ತಾಪಿಸಿದ್ದಾರೆ. 

Read More

ಈ ಹೃದಯವೆಂಬ ಏಕಾಂಗಿ ಬೇಟೆಗಾರ

ಕೆಲ್ಲಿಯವರ ಮಗಳು ಹನ್ನೆರಡು ವರ್ಷದ ಮಿಕ್‌ಳೊಂದಿಗೆ ಸಿಂಗರ್‌ನ ಸ್ನೇಹ ಶುರುವಾಗುತ್ತದೆ. ಸಂಗೀತದಲ್ಲಿ ತೀವ್ರ ಆಸಕ್ತಿಯಿರುವ ಮಿಕ್‌ಳಿಗೆ ರೆಕಾರ್ಡ್ ಪ್ಲೇಟುಗಳನ್ನು ಉಡುಗೊರೆಯಾಗಿ ಕೊಡುತ್ತಾನೆ ಸಿಂಗರ್. ಆದರೆ ತನ್ನ ಸುತ್ತಲಿನ ಲೋಕದೊಂದಿಗೆ ಈತನ ಸಂವಹನವೇನಿದ್ದರೂ ಏಕ ಮುಖವಾದುದು. ಇವನ ಮನಸ್ಸು ಉಳಿದವರಿಗೆಲ್ಲ ಮುಚ್ಚಿದ ಬಾಗಿಲು. ಯಾರೇ ಮಾತನಾಡಬೇಕಿದ್ದರೂ, ಅವರ ತುಟಿಯ ಚಲನೆ ನೋಡಿದರೆ ಸಾಕು ಅವರು ಏನನ್ನು ಹೇಳುತ್ತಿದ್ದಾರೆ ಅನ್ನುವುದು ಸಿಂಗರ್‌ನಿಗೆ ತಿಳಿದು ಹೋಗುತ್ತದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ