Advertisement

Category: ದಿನದ ಪುಸ್ತಕ

ಅಶೋಕ್ ಕುಮಾರ್ ಅನುವಾದಿಸಿದ ಸುಭಾಷ್ ಚಂದ್ರನ್ ಅವರ ಕಾದಂಬರಿಯ ಒಂದು ಭಾಗ

“ಮಳೆ ಜೋರಾಗಿ ಮರವನ್ನೇ ಮುಳುಗಿಸುವಂತೆ ಸುರಿಯತೊಡಗಿದಾಗ ರಣಹದ್ದಿನ ಪುಕ್ಕಗಳು ತೊಯ್ದು ತೊಪ್ಪೆಯಾಗುವುದನ್ನು ತನ್ನ ಕಡೆಗಣ್ಣಿಂದ ನೋಡುವುದು ಅಯ್ಯಾಪಿಳ್ಳೆಗೆ ಸಾಧ್ಯವಾಯಿತು. ಪಂಜರಕ್ಕೆ ಒತ್ತಿಕೊಂಡಂತಿದ್ದ ಜುಟ್ಟಿನ ಗಂಟು ಕಳಚಿಕೊಂಡು ಹಿಂದಕ್ಕೆ ಚದುರಿದ್ದ ಕೂದಲಿಗೆ ಕುತ್ತಿಗೆಯನ್ನೊತ್ತಿ ಅಯ್ಯಾಪಿಳ್ಳೆ ತಲೆಯನ್ನು ಹೊರಳಿಸಲು ನೋಡಿದನಾದರೂ ಸಾಧ್ಯವಾಗಲಿಲ್ಲ. ಭೋರ್ಗರೆದು ಸುರಿಯುತ್ತಿರುವ ಮಳೆಯಲ್ಲಿ ಆತ ಬಾಯಾರಿ ತಹತಹಿಸಿದ.”

Read More

ಫಿಯಟ್ ಲಕ್ಸ್…. ಬೆಳಕಾಗಲಿ: ಕೆ.ವಿ. ತಿರುಮಲೇಶ್ ಲೇಖನ

“ಈಗ ಈ ಚಿಮಿಣಿ ಕೈದೀಪಕ್ಕೆ ಬಂದರೆ, ಇದು ಬಹೂಪಯೋಗಿಯಾಗಿದ್ದರೂ, ಇದಕ್ಕೆ ಕೆಲವು ಮಿತಿಗಳೂ ಇದ್ದುವು. ಇದು ಗಾಳಿಗೆ ನಿಲ್ಲುವುದಿಲ್ಲವಾದ ಕಾರಣ, ಮನೆಯ ಹೊರಗೆ ಉಪಯೋಗವಿಲ್ಲ; ಮನೆಯೊಳಗೂ ಗಾಳಿ ಹೆಚ್ಚು ಬಂದರೆ ಇದು ಇದೀಗ ನಂದೀತು ಎನ್ನುವ ಆತಂಕ ಉಂಟುಮಾಡುತ್ತ ಇರುತ್ತದೆ. ಹತ್ತಿರ ಇರಿಸಿ ಪುಸ್ತಕ ಓದಲು ಪರವಾಯಿಲ್ಲ. ರಾತ್ರಿ ಊಟದ ಸಮಯ ನಾವು ಚಿಮಿಣಿಯ ತೂಗುದೀಪವನ್ನು ಉಪಯೋಗಿಸುತ್ತಿದ್ದೆವು.”

Read More

ಶೂದ್ರ ಶ್ರೀನಿವಾಸ್ ಪುಸ್ತಕದ ಕುರಿತು ಎಚ್.ಆರ್. ರಮೇಶ್ ಬರಹ

“ಲಂಕೇಶರ ಜೊತೆಯ ತಮ್ಮ ಸುದೀರ್ಘ ಪಯಣದಲ್ಲಿ ನಿಷ್ಠುರತೆಯನ್ನು ಕಾಪಾಡಿಕೊಂಡು ಹೋಗುತ್ತಲೇ ಅವರಿಂದ ಸಾರಾಸಗಟಾಗಿ ಬಿಡಿಸಿಕೊಂಡು ಹೋಗದೆ ಮುನಿಸು, ಜಗಳ, ಟೀಕೆಗಳನ್ನು ಸಹಜವಾಗಿಯೇ ಸ್ವೀಕರಿಸಿ ಕೇವಲ ಸ್ವಚ್ಛಂದ ಪ್ರೀತಿ-ಸ್ನೇಹಗಳನ್ನಷ್ಟೇ ನೆಚ್ಚಿ ಮುನ್ನಡೆದುದರಲ್ಲಿ ಅವರ ತಾಳ್ಮೆ ಹಾಗೂ ಝೆನ್ ತತ್ವದಲ್ಲಿ ಕಾಣುವಂತಹ ಸುಮ್ಮನೆ ಬದುಕುತ್ತ ಇರುತ್ತ ಹೋಗುವ ಕ್ರಮ ಗಮನಸೆಳೆಯುತ್ತದೆ.”

Read More

ಕಪಿಲ ಕಾದಂಬರಿಗೆ ಬಾಳಾಸಾಹೇಬ ಲೋಕಾಪೂರ ಮತ್ತು ಕೇಶವ ಮಳಗಿ ಮಾತುಗಳು

“`ಹಾಣಾದಿ’ ಕಾದಂಬರಿ ತನ್ನ ಕಥಾವಸ್ತು, ನಿರೂಪಣಾ ವಿಧಾನ ಮತ್ತು ಲೇಖಕ ಹೀಗೆ ಹಲವು ಕಾರಣಗಳಿಂದ ಗಮನ ಸೆಳೆಯುವ ಕೃತಿ. ವರ್ತಮಾನ ಮತ್ತು ಭೂತಕಾಲ ಜತೆಜತೆಗೆ ಸಾಗುವ, ನೆನಪುಗಳ ಸಿಕ್ಕುಗಳಲ್ಲಿ ಓದುಗನನ್ನು ಸಿಲುಕಿಸುವ ಕಾದಂಬರಿ. `ಗಾರುಡಿ ವಾಸ್ತವತೆ’ಯ ತಂತ್ರವನ್ನು ಬಳಸುತ್ತದೆ. ಕಥೆಯೊಳಗೆ ಕಥೆ, ಅದರೊಳಿನ್ನೊಂದು ಕಥೆ ಎಂಬಂತೆ ಇದರ ನಿರೂಪಣೆ. ಕಾದಂಬರಿಯಲ್ಲಿ…”

Read More

ಸೀರೆಯುಡುವ ಗೋಧಾಳ ಮಗ: ಕೆ.ಸತ್ಯನಾರಾಯಣ ಕಾದಂಬರಿ “ಲೈಂಗಿಕ ಜಾತಕ”ದ ಆಯ್ದ ಭಾಗ

“ಗೋದಾ ಸಾಯುವ ಹಿಂದಿನ ವರ್ಷ ಮಗ-ಸೊಸೆ ಬಂದಿದ್ದಾಗ ದೊಡ್ಡ ರಾದ್ಧಾಂತವೇ ಆಗಿಹೋಯಿತು. ಒಂದು ದಿನ ಸೊಸೆ ಗೊಲೇಚಾ ಮಧ್ಯಾಹ್ನ ನಾಲ್ಕು- ನಾಲ್ಕೂವರೆ ಘಂಟೆ ಹೊತ್ತಿನಲ್ಲಿ ರೂಮಿಂದ ಈಚೆಗೆ ಬಂದ(ಳು). ಸಾಲಂಕೃತ ವಧು. ನೋಡಿದರೆ ಕಣ್ಣು ತುಂಬಿ ಬರುವ ಹಾಗೆ. ನಮ್ಮ ಶ್ರೀ ವೈಷ್ಣವ ಹುಡುಗಿಯರ ರೀತಿಯೇ. ಕೆಂಪಂಚು ಇರುವ ಹಸಿರು ಸೀರೆ, ಬಿಳಿ ಬಣ್ಣದ ತುಂಬು ತೋಳಿನ ರವಿಕೆ, ಲೋಲಾಕು, ದೊಡ್ಡ ಹೆರಳು, ಹೀಗೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ