Advertisement

Category: ದಿನದ ಪುಸ್ತಕ

“ಚಾಂಡಾಳನೊಬ್ಬನ ಆತ್ಮ ವಿಮರ್ಶೆ”: ದೇವಿಕಾ ನಾಗೇಶ್‌ ಬರಹ

ಬಂಗಾಳದ ರಕ್ತ ಚರಿತ್ರೆಯನ್ನು ಲಕ್ಷಾಂತರ ಜನರ ನಿತ್ಯ ನರಕವನ್ನು ಪ್ರಭುತ್ವಗಳ ನಾಚಿಕೆಗೇಡಿನ ಹುಸಿತನವನ್ನು ಯಾವುದೇ ಮುಚ್ಚುಮರೆಯಿಲ್ಲದೆ ಈ ಕೃತಿ ತೆರೆದಿಡುತ್ತದೆ. ಹಳೆಯ ಕಳೆದ ಶತಮಾನದ ಕೊನೆಯಲ್ಲಿ ನಮ್ಮ ದೇಶದಲ್ಲಿ ಹಲವು ಹೆಸರಾಂತ ರಾಜಕಾರಣಿಗಳು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ನಡೆಸಿದ ತಂತ್ರಗಾರಿಕೆಯನ್ನು ಅವರ ಅಸಲಿ ಮುಖವನ್ನು ತೆರೆದಿಡುತ್ತದೆ. “ವಿರೋಧಿಗಳು ನನಗೆ ಪ್ರೀತಿ ತೋರಿಸಿದಾಗ ಸಾಧ್ಯವಾಗದ್ದು, ಕೋಪ ತೋರಿಸಿದಾಗ ಸಾಧ್ಯವಾಗಿದೆ. ನನ್ನ ಕೋಪವನ್ನು ಅವರು ಜೀವಂತವಾಗಿಟ್ಟಿದ್ದಾರೆ. ಅವರ ಕೋಪದ ಫಲ ಶ್ರುತಿಯೇ ನನ್ನ ಪುಸ್ತಕ.” ಬ್ಯಾಪಾರಿಯವರ ಮಾತಿದು.
ಮನೋರಂಜನ್‌ ಬ್ಯಾಪಾರಿಯವರ ಆತ್ಮಕತೆಯನ್ನು ಡಾ. ಎಚ್. ಎಸ್.ನಾಗಭೂಷಣ “ಚಾಂಡಾಳನೊಬ್ಬನ ಆತ್ಮ ವಿಮರ್ಶೆ” ಹೆಸರಿನಲ್ಲಿ ಕನ್ನಡಕ್ಕೆ ತಂದಿದ್ದು ಇದರ ಕುರಿತು ದೇವಿಕಾ ನಾಗೇಶ್‌ ಬರಹ ನಿಮ್ಮ ಓದಿಗೆ

Read More

ಭಾವ ಬಿಡುಗಡೆಯ ನಿರುಮ್ಮಳ ಕಥೆಗಳು: ಪೂರ್ಣಿಮಾ ಭಟ್ಟ ಸಣ್ಣಕೇರಿ ಕಥಾಸಂಕಲನಕ್ಕೆ ಅಬ್ದುಲ್ ರಶೀದ್ ಮುನ್ನುಡಿ

ಪೂರ್ಣಿಮಾ ಅವರದು ಅವರೇ ತಮ್ಮ ಮಾತಿನಲ್ಲಿ ಹೇಳುವ ಹಾಗೆ ‘ಕತೆಗಾತಿಯ ವೇಷ’. ಕಥೆಯ ನಿರುದ್ವಿಗ್ನತೆ ಮತ್ತು ನೆಮ್ಮದಿಯ ದೃಷ್ಟಿಯಿಂದ ಈ ವೇಷ ಅಗತ್ಯ ಎಂದು ನನಗೆ ಇಷ್ಟೆಲ್ಲ ಬರೆದಾದ ಮೇಲೆ ಈಗ ಅನ್ನಿಸುತ್ತದೆ. ಬರೆಯುವವರು ತಮ್ಮದೇ ಕಥೆಯಲ್ಲಿ ಕಳೆದುಹೋಗುವ ಅಪಾಯದಿಂದ ಬಿಡುಗಡೆಗೊಳ್ಳುವ ದಾರಿ ಇದು. ಇದು ಬಹು ದೊಡ್ಡ ಸವಾಲಿನ ದಾರಿಯೂ ಹೌದು. ಬರೆಯುವವರಿಗೆ ಈ ದಾರಿಯಲ್ಲಿ ಕ್ರಮಿಸಲು ಬಹಳ ಲೋಕಜ್ಞಾನ ಇರಬೇಕಾಗುತ್ತದೆ. ಸಕಲ ಜೀವ ವ್ಯಾಪಾರಗಳ ಕುರಿತು ಒಂದು ಸಮತೂಕದ ನಿರ್ಲಿಪ್ತತೆ ಬೇಕಾಗುತ್ತದೆ.
ಪೂರ್ಣಿಮಾ ಭಟ್ಟ ಸಣ್ಣಕೇರಿ ಕಥಾಸಂಕಲನ “ಕತೆ ಜಾರಿಯಲ್ಲಿರಲಿ” ಕೃತಿಗೆ ಅಬ್ದುಲ್‌ ರಶೀದ್‌ ಬರೆದ ಮುನ್ನುಡಿ

Read More

`ಅಂತರಿಕ್ಷದಲ್ಲಿ ವಿಹಾ’ ಮಕ್ಕಳ ವೈಜ್ಞಾನಿಕ ಫ್ಯಾಂಟಸಿಯ ಲೋಕ: ಮಂಡಲಗಿರಿ ಪ್ರಸನ್ನ ಬರಹ

ವಿಹಾ ಮತ್ತು ಆಕೆಯ ಗೆಳೆಯ ಚಿಂಟು ಅವರ ಕೆಲ ವೈಜ್ಞಾನಿಕ ಸಂಭಾಷಣೆಗಳು ಆಸಕ್ತಿದಾಯಕ. ನಿದ್ದೆಯಲ್ಲೂ ಅಂತರಿಕ್ಷ, ರಾಕೇಟ್, ಪ್ಯಾರಾಚೂಟ್….. ಎಂದೆಲ್ಲ ಬಡಬಡಿಸುವ ವಿಹಾ, ಸ್ವೀಟೋ ಏಲಿಯನ್ಸ್ ಜೊತೆ ನಡೆಸುವ ಸಂಭಾಷಣೆ ಮಕ್ಕಳ ಯೋಚನಾ ಲಹರಿಯ ವಿಸ್ತಾರಕ್ಕೆ ಇಂಬುಕೊಟ್ಟಂತಿದೆ. ವಿಹಾಳ ಕನಸು, ಸ್ವೀಟೋ ಬಂದ ದಿನ, ಫ್ಲೈಯಿಂಗ್ ಸಾಸರ್‌ನಲ್ಲಿ ಏಲಿಯನ್ಸ್, ಅಂತರಿಕ್ಷದಲ್ಲಿ ವಿಹಾ, ಮೊದಲಾದ ಅಧ್ಯಾಯಗಳಲ್ಲಿ ವಿಹಾಳ ಸಾಹಸ, ಆಕೆಯ ಕಲ್ಪನಾ ಶಕ್ತಿ, ಧೈರ್ಯ, ಹೊಸತನ್ನು ಕಲಿಯಬೇಕು, ಮಾಡಬೇಕೆನ್ನುವ ಹಂಬಲದ ತುಡಿತವಿದೆ.
ವಸು ವತ್ಸಲೆ ಬರೆದ `ಅಂತರಿಕ್ಷಾದಲ್ಲಿ ವಿಹಾʼ ಮಕ್ಕಳ ಕೃತಿಯ ಕುರಿತು ಮಂಡಲಗಿರಿ ಪ್ರಸನ್ನ ಬರಹ

Read More

ಸಂಬಂಧ ಸೂಕ್ಷ್ಮಗಳ ಗಾಢ ಸ್ಪಂದನೆಯ ‘ನೀಲಿ ನಕ್ಷೆ’: ಸುನಂದಾ ಕಡಮೆ ಬರಹ

ದಿಕ್ಕನ್ನು ನೆನಪಿನಲ್ಲಿಟ್ಟುಕೊಳ್ಳುವಂತಿದ್ದ ಬೋರ್ಗರೆವ ನೀಲಿ ಕಡಲಿನ ಬಾಲ್ಯದ ಸಂಗಾತಿ ಸರಯೂ ನಂತರ ಹೋಗಿ ಸೇರಿದ ಮುಂಬೈ ನಗರದ ಮೂರೂ ಕಡೆಗಳಲ್ಲಿ ಸಮುದ್ರ ಕಂಡು ದಿಕ್ಕು ಗುರುತಿಸಲು ಬಾರದೇ ಗಲಿಬಿಲಿಗೊಂಡವಳು. ಮೊದಲನೇ ತರಗತಿಯಲ್ಲೇ ಮೂರನೇ ರ‍್ಯಾಂಕ್ ಬಂದಾಗ ಊರಿಗೆಲ್ಲ ಪೇಡೆ ಹಂಚಿ ಅಪ್ಪನಿಂದ ಹೊಡೆಸಿಕೊಂಡ ಅಮ್ಮನನ್ನು ಕಾಣುತ್ತ ಬೆಳೆದ ಸರಯೂ ಸದಾ ತನ್ನಪ್ಪ ತನ್ನನ್ನು ಕಡೆಗಣಿಸುತ್ತಿದ್ದಾನೆಯೇ ಎಂದು ವಾರಗಣ್ಣಲ್ಲೇ ಗಮನಿಸುತ್ತ ಬಂದವಳು.
ಅಮಿತಾ ಭಾಗವತ್‌ ಕಾದಂಬರಿ ‘ನೀಲಿ ನಕ್ಷೆ’ಯ ಕುರಿತು ಸುನಂದಾ ಕಡಮೆ ಬರಹ ನಿಮ್ಮ ಓದಿಗೆ

Read More

‘ಅಮ್ಮನ್ ಮನೆ ಅಪೀ. ಹೆದರ್ಕ್ಯಳಡʼ…: ಜಯರಾಮ ಹೆಗಡೆ ಜೀವನ ಕಥನದ ಆಯ್ದ ಭಾಗ

ಜಯರಾಮ ಹೊರಗೆ ಬಂದು ಮಡಿ ಬಿಚ್ಚಿ ಅಂಗಿ ಚಡ್ಡಿ ಹಾಕಿಕೊಳ್ಳುವಾಗಲೂ ಕೈ ಕಾಲು ನಡುಕ ಹೋಗಿಲ್ಲ. ಹೊರಬಂದ ಮೇಲೆ ಹೊರಾಂಗಣದಿಂದಲೇ ಒಂದು ಸುತ್ತು ಪ್ರದಕ್ಷಿಣಿ ಹಾಕಿ ದೇವರಿಗೆ ಒಂದು ಸಲ ಕೈಮುಗಿದು ಹೋಗುವುದು ರೂಢಿ. ಹಾಗೇ ಇವನೂ ಆಚೀಚೆ ನೋಡದೆ ಸುತ್ತು ಪ್ರದಕ್ಷಿಣೆ ಬರುತ್ತಿದ್ದಾನೆ. ಏಕಾಏಕಿ ದೇವಾಲಯದ ಮೇಲ್ಛಾವಣಿಯ ಕಡೆ ದೃಷ್ಟಿ ಹೋದಾಗ ಏನನ್ನು ಕಾಣುತ್ತಾನೆ? ನಾನಾ ವಿಧದ ಹಾವುಗಳು ನೇತಾಡುತ್ತಿವೆ. ಅವವುಗಳೇ ಜೊತೆಯಾಟ ಆಡುತ್ತಿವೆ.
ಜಯರಾಮ ಹೆಗಡೆ ಜೀವನ ಕಥನ ‘ಬೀದಿಯ ಬದುಕು’ ಕೃತಿಯ ಆಯ್ದ ಭಾಗ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ