Advertisement

Category: ದಿನದ ಪುಸ್ತಕ

ಕುಂಬಳೆಯೆಂಬ ನಿಲ್ದಾಣದಲ್ಲಿ ತಿರುಮಲೇಶರು: ಸುಮಾವೀಣಾ ಬರಹ

‘ಕುಂಬಳೆಯೆಂಬ ನಿಲ್ದಾಣ ಅದು ಬಹಳ ದೊಡ್ಡದೇನಲ್ಲ’ ಎನ್ನುವ ಮೂಲಕ ಕಾಲ ನಿರಂತತೆಯಿಂದ ಕೂಡಿರುತ್ತದೆ. ಆದರೆ ಕಾಲದ ತೆಕ್ಕೆಯಲ್ಲಿ ಜೀವಿಸುವ ಜೀವಿ ನಿರಂತರವಾಗಿ ಇರಲು ಸಾಧ್ಯವಿಲ್ಲ. ಆತ ಅಲ್ಪ ಎನ್ನುತ್ತಾರೆ. ‘ಕಾಲ’ ಎನ್ನುವುದೇ ನಿಲ್ದಾಣವಾದರೆ ಅಲ್ಲಿ ಚರಿತ್ರೆ, ಸಂಸ್ಕೃತಿ, ನಾಗರಿಕತೆ ಇತ್ಯಾದಿಗಳು ಬಂದು ಹೋಗುತ್ತಿರುತ್ತವೆ. ಹೇಗೆ ಕುಂಬಳೆಯ ರೈಲು ನಿಲ್ದಾಣದಲ್ಲಿ ಮದರಾಸು ಮೇಲ್, ಜನತಾ, ಜಯಂತಿ ಮೊದಲಾದ ವೇಗಧೂತ ರೈಲುಗಳು ನಿಲ್ಲುವುದಿಲ್ಲವೋ ಹಾಗೆ ಅನುಸರಿಸಲಾಗದ, ಹೊಂದಿಕೊಳ್ಳಲಾರದವು ಸರ್ರನೆ ಸರಿದು ಹೋಗುತ್ತವೆ.
ಇಂದು ಕೆ.ವಿ. ತಿರುಮಲೇಶರ ಹುಟ್ಟುಹಬ್ಬ. ಕಳೆದ ವರ್ಷ ತೀರಿಹೋದ ಅವರ ನೆನಪಿಗೆ ಅವರ ‘ಅವಧ’ ಕವನ ಸಂಕಲನದ ಕುರಿತ ಸುಮಾವೀಣಾ ಬರಹ ಇಲ್ಲಿದೆ

Read More

ಚಕ್ರವ್ಯೂಹದೊಳಗಿನ ಮಾಯಾಲೋಕ…: ಗೊರೂರು ಶಿವೇಶ್‌ ಬರಹ

ಕಾದಂಬರಿಯ ಕೊನೆಯಲ್ಲಿ ಆ ಕಡತ ಮುಸುಕುಧಾರಿಗಳ ಕೈಗೆಸಿಕ್ಕು ಅದರ ಮಹತ್ವ ತಿಳಿಯದ ಅವರು ನದಿನೀರಿಗೆ ಎಸೆದು ಅದು ಬಿಡಿಬಿಡಿಯಾಗಿ ಬಿದ್ದು ನೀರುಪಾಲಾಗುತ್ತದೆ. ಇದ್ದ ಒಂದು ಪ್ರತಿಯೂ ಮಾಯವಾದರೂ ಎಲ್ಲಿಯಾದರೂ ಮತ್ತೊಂದು ಪ್ರತಿಯನ್ನು ಹುಡುಕಿಯೆ ತೀರುತ್ತೇನೆ ಮತ್ತು ಅದರ ಸಹಾಯದಿಂದ ರತ್ನಮಾಲಾ ವಜ್ರವನ್ನು ಪಡೆದೆ ತೀರಬೇಕೆಂದು, ಮುಂದೆ ಅದನ್ನು ಹಂಚಿಕೊಳ್ಳಬಹುದೆಂದು ರಾಜಪ್ಪ ತಿಳಿಸಿ, ಅದಕ್ಕೆ ಮೂವರು ಒಪ್ಪಿ ಜುಗಾರಿಕ್ರಾಸ್‍ನ ಬಸ್ ಹತ್ತುವುದರೊಂದಿಗೆ ಕಾದಂಬರಿ ಮುಕ್ತಾಯವಾಗುತ್ತದೆ.
ನೆನ್ನೆ ಪೂರ್ಣಚಂದ್ರ ತೇಜಸ್ವಿಯವರ ಜನ್ಮದಿನ, ಅದರ ನಿಮಿತ್ತ ತೇಜಸ್ವಿಯವರ “ಜುಗಾರಿ ಕ್ರಾಸ್” ಕೃತಿಯ ಕುರಿತು ಗೊರೂರು ಶಿವೇಶ್‌ ಬರಹ

Read More

ಶಾಪ ವಿಮೋಚನೆಯ ಹಂಬಲದ ಮಹತ್ವಾಕಾಂಕ್ಷಿ ಕಥನಗಳು: ಗೋವಿಂದರಾಜು ಕಥಾಸಂಕಲನದ ಮುನ್ನುಡಿ

‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಸಂಕಲನದ ಕಥೆಗಳು ತಮ್ಮ ಆಶಯ ಮತ್ತು ಭಿನ್ನ ದೇಹದ ಮೂಲಕ ಗಮನಸೆಳೆಯುತ್ತವೆ ಹಾಗೂ ಕಥೆಗಾರನ ಪ್ರಯೋಗಶೀಲತೆಯ ಬಗ್ಗೆ ಮೆಚ್ಚುಗೆ ಹುಟ್ಟಿಸುತ್ತವೆ. ಭಾವಾವೇಶಕ್ಕೆ ಒಳಗಾಗದೆ ಒಡಲ ಸಂಕಟವನ್ನು ಕಲೆಯಾಗಿಸುವುದು ಸಾಧ್ಯವಾಗಿರುವುದರಿಂದಲೇ, ಈ ಕಥೆಗಳು ಓದುಗರೊಳಗೆ ತಮ್ಮ ಕಂಪನಗಳನ್ನು ವಿಸ್ತರಿಸಿಕೊಳ್ಳುವ ಕಸುವು ಹೊಂದಿವೆ.
ಗೋವಿಂದರಾಜು ಎಂ ಕಲ್ಲೂರು ಕಥಾ ಸಂಕಲನ ‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ಕ್ಕೆ ರಘುನಾಥ ಚ.ಹ. ಬರೆದ ಮುನ್ನುಡಿ

Read More

“ನಿಯುಕ್ತಿ ಪುರಾಣ”…: ದೀಪಾ ಫಡ್ಕೆ ಬರಹ

`ನಿಯುಕ್ತಿ ಪುರಾಣ’ದ ಕೃತಿಕಾರ ಮೈಸೂರು ಒಡೆಯರ ಚರಿತ್ರೆಯ ಕೆಲವು ಅಂಗಗಳನ್ನು ಅಥವಾ ಮುಖ್ಯ ಅಂಶಗಳನ್ನು ಇಟ್ಟುಕೊಂಡು ಅದಕ್ಕೆ ಕಲ್ಪನೆಯಿಂದ ರಕ್ತಮಾಂಸವನ್ನು ತುಂಬಿದ್ದಾರೆ. ಹದಿನೈದು, ಹದಿನಾರು ಮತ್ತು ಹದಿನೇಳನೇ ಶತಮಾನದ ಮಹಿಷೂರಿನ ನಾಲ್ವಡಿ ಚಾಮರಾಜ ಒಡೆಯರು, ಐಮಡಿ ಚಾಮರಾಜ ಒಡೆಯರು ಮತ್ತು ರಾಜ ಒಡೆಯರ ಬದುಕನ್ನು ಬೋಳೊಡೆಯ, ಬೆಟ್ಟದೊಡೆಯ ಮತ್ತು ಮುನ್ನೊಡೆಯ ಎನ್ನುವ ಆಡು ಹೆಸರುಗಳನ್ನು ನೀಡಿ ಅವರ ಮೂಲಕ ಪುರಾಣವನ್ನು ಪೌರಾಣಿಕ, ಕಾಲ್ಪನಿಕ, ಜಾನಪದ ಮತ್ತು ಐತಿಹಾಸಿಕ ನೆಲೆಗಳಲ್ಲಿ ಪೋಣಿಸಿ ಕಥನವಾಗಿಸಿದ್ದಾರೆ.
ನಾಗರಾಜ ವಸ್ತಾರೆ ಕಾದಂಬರಿ “ನಿಯುಕ್ತಿ ಪುರಾಣ”ದ ಕುರಿತು ದೀಪಾ ಫಡ್ಕೆ ಬರಹ

Read More

ಎಗ್‌ ರೈಸ್‌ ತಿಂತೀರಿ ಸರ್ರ…?: ಗುರುಪ್ರಸಾದ ಕುರ್ತಕೋಟಿ ಕೃತಿಯ ಬರಹ

ಬಹುಶಃ ನಾನೂ ಯುವಕನಾಗಿದ್ದಾಗ ಅವನಂತೆಯೇ ಯೋಚಿದ್ದೆನೆ? ಇಲ್ಲವಲ್ಲ! ಎಲ್ಲರೂ ನಮ್ಮ ಹಾಗೆಯೇ ಯೋಚಿಸಬೇಕು ಅಂತಿಲ್ಲವಲ್ಲ! ನಾವೇನಾದರೂ ಪಟ್ಟಣದಲ್ಲಿ ಸುಖ ಇಲ್ಲ ಮಾರಾಯ ಅಂತ ಹೇಳಿದರೆ ಅಲ್ಲಿನವರು “ನಿಮ್ಮ ಹತ್ರ ರೊಕ್ಕ ಜಾಸ್ತಿ ಆಗಿ ಕೊಳಿತೈತಿ ಬಿಡ್ರಿ. ಅದಕ್ಕ ಹಿಂಗ ಮಾತಾಡತೀರಿ” ಅಂತ ಗೊಳ್ಳ ಅಂತ ನಗುತ್ತಾರೆ!
ಕೆಂಡಸಂಪಿಗೆಯಲ್ಲಿ ಪ್ರಕಟವಾದ ಗುರುಪ್ರಸಾದ ಕುರ್ತಕೋಟಿಯವರ ಅಂಕಣ ಬರಹ “ಗ್ರಾಮ ಡ್ರಾಮಾಯಣ” ಇದೀಗ ಪುಸ್ತಕ ರೂಪದಲ್ಲಿ ಅಚ್ಚಾಗುತ್ತಿದ್ದು, ಆಗಸ್ಟ್‌ ಕೊನೆಗೆ ಓದುಗರ ಕೈ ಸೇರಲಿದೆ. ಅದರ ಒಂದು ಬರಹ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ