Advertisement

Category: ದಿನದ ಪುಸ್ತಕ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ ಕಲ್ಲು ಮರಳಾಗಿ ರೂಪಾಂತರ ಹೊಂದುವ ಜಗತ್ತಿನ ವಿಸ್ಮಯದ ನಡೆಯಲ್ಲಿ ಮರಳೂ, ಕಲ್ಲೂ ದೈವವಾಗುವುದರಲ್ಲಿ ಏನು ವಿಶೇಷವಿದೆ! ಪುತಿನ ಅವರಿಲ್ಲಿ ಮೂರ್ತಿಯನ್ನೂ ದೇವರಾಗಿ ನೋಡುತ್ತಿಲ್ಲ, ದೇವರಾಗಲು ಹೊರಟಿರುವ ಕಲ್ಲು ಅವರಿಗೆ ಅಚ್ಚರಿಯಾಗಿ ಕಾಣುತ್ತದೆ.
ಜ. ನಾ. ತೇಜಶ್ರೀ ಬರೆದ `ಅರಿವು-ಇರವುಗಳ ಸನ್ನೆಗೈ ಪುತಿನ ಮಲೆದೇಗುಲ’ ಕೃತಿಯ ಕುರಿತು ದೀಪಾ ಫಡ್ಕೆ ಬರಹ

Read More

ಚಿತ್ರಾಕ್ಷರ: ಕೆ ವಿ ಸುಬ್ರಮಣ್ಯಂ ಕಲೆ ಮತ್ತು ಬರಹಗಳ ಬಿಂಬ

ಯಾವುದೇ ಒಬ್ಬ ಕಲಾವಿದ ಕಲಾಕೃತಿಗಳನ್ನು ತನ್ನ ಸ್ವಂತ ಅಭಿರುಚಿಯಂತೆ ಮಾಡುವುದನ್ನು ಕಲಿಯುವ ಮೊದಲು ನಕಲು ಮಾಡುವುದರಿಂದ ಪ್ರಾರಂಭಿಸುವಂತೆ ಇವರು ಕೂಡ ಮೊದಲು ನಕಲು ಮಾಡಿಯೇ ಪ್ರಾರಂಭಿಸಿದ್ದು. ನೋಡಿದ್ದನ್ನು ಹಾಗೆ ಚಿತ್ರಿಸಲು ಪ್ರಯತ್ನಿಸುವುದು, ಚಂದಮಾಮ ಪತ್ರಿಕೆಯ ಚಿತ್ರಗಳನ್ನು ಚಿತ್ರಿಸುವುದು, ಪತ್ರಿಕೆಗಳಲ್ಲಿ ಬರುವ ಗಾಂಧಿ, ಶ್ರವಣಬೆಳಗೊಳದ ಬಾಹುಬಲಿ ಮೊದಲಾದ ಚಿತ್ರಗಳನ್ನು ನೋಡಿ ನಕಲು ಮಾಡಿ ಚಿತ್ರಿಸುವುದರ ಮೂಲಕ ನಡೆದಬಂದರು. ಕೆ. ವಿ. ಸುಬ್ರಹ್ಮಣ್ಯಂರವರಿಗೆ ಈ ಆಸಕ್ತಿ 7-8ನೇ ತರಗತಿಗಳಲ್ಲಿ ಶುರುವಾಗಿತ್ತು.
ಕಲಾ ವಿಮರ್ಶಕ ಕೆ.ವಿ. ಸುಬ್ರಮಣ್ಯಂ ಅವರ ಕುರಿತು ಹರಿಶ್ರೀ ವೈ.ಜೆ. ಬರೆದ “ಚಿತ್ರಾಕ್ಷರ” ಕೃತಿಯ ಕೆಲವು ಪುಟಗಳು ನಿಮ್ಮ ಓದಿಗ

Read More

ನೀರಿಗೊಡ್ಡಿದ ಗಾಳಿ-ಬೆಳಕು: ಆಲೂರು ದೊಡ್ಡನಿಂಗಪ್ಪ ಕಾದಂಬರಿಗೆ ರಘುನಾಥ ಚ.ಹ. ಮುನ್ನುಡಿ

ಮಹಾನ್ ಬಲಶಾಲಿ ಹಾಗೂ ಅಪ್ರತಿಮ ಸುಂದರಿಯ ಪ್ರೇಮ ಊರ ಕಣ್ಣಿಗೆ ದೈವಿಕವಾಗಿ ಕಾಣಿಸುತ್ತದೆ. ವಿವಾಹಬಾಹಿರ ಸಂಬಂಧ ಊರಕಣ್ಣಿಗೆ ಸ್ವೀಕಾರಾರ್ಹ ಅಚ್ಚರಿಯಾಗಿ ಕಾಣಿಸಲಿಕ್ಕೆ, ಪ್ರೇಮಿಗಳ ವ್ಯಕ್ತಿತ್ವವಷ್ಟೇ ಕಾರಣವಲ್ಲ; ಮಲ್ಲನ ಕೇಡಿಗತನದ ಬಗ್ಗೆ ಊರಿಗಿರುವ ಅಸಹನೆಯೂ ಕಾರಣ. ಆ ಅಸಹನೆ ಅಸಹಾಯಕತೆಯಾಗಿರುವಾಗ, ತಮ್ಮ ಸಿಟ್ಟನ್ನು ಕೊಂಚವಾದರೂ ಸಮಾಧಾನಗೊಳಿಸುವ ರೂಪದಲ್ಲಿ ಪ್ರೇಮಪ್ರಕರಣ ಅವರಿಗೆ ಒದಗಿಬಂದಿದೆ. ಈ ಪ್ರೇಮಪ್ರಕರಣ ಜಾತೀಯತೆಯನ್ನು ವಿರೋಧಿಸುವ ಪ್ರತಿಭಟನೆಯ ರೂಪದಂತೆಯೂ ಕಾದಂಬರಿ ಚಿತ್ರಿಸುತ್ತದೆ.
ಆಲೂರು ದೊಡ್ಡನಿಂಗಪ್ಪ ಕಾದಂಬರಿ “ಚಂದ್ರನ ಚೂರು” ಗೆ ರಘುನಾಥ ಚ.ಹ. ಮುನ್ನುಡಿ

Read More

ದುಪಡಿ; ಬಂಧುತ್ವದ ಹೆಣಿಗೆ: ಡಾ. ಗೀತಾ ವಸಂತ ಮುನ್ನುಡಿ

ಅಚ್ಚಿಯ ಬನವಾಸಿ ಅಕ್ಕಯ್ಯ ನಾಗವೇಣಿಯ ಬದುಕು ಬಂಜೆಯೆಂಬ ಕಾರಣಕ್ಕೆ ಭಗ್ನವಾದ ರೀತಿ ಹೆಣ್ಣಿನ ಅಸ್ತಿತ್ವದ ಕುರಿತು ಹಲವು ಪ್ರಶ್ನೆಗಳನ್ನೆಬ್ಬಿಸುತ್ತದೆ. ಹೆಣ್ಣು ಅಂದರೆ ತಾಯಿ. ಅದೇ ಅಸ್ತಿತ್ವ. ತಾಯಿಯಾಗದ ನಾಗವೇಣಿ ತನ್ನೊಳಗೇ ತಾನು ಖಾಲಿಯಾಗುತ್ತ ಹೋಗುವುದು, ಹಾಗೆಯೇ ಇಡೀ ಕುಟುಂಬ ಅವಳನ್ನು ಕಡೆಗಣಿಸುವುದು, ಅವಳ ಖಿನ್ನತೆ ಉನ್ಮಾದಕ್ಕೆ ತಿರುಗುವುದು ಇದೆಲ್ಲ ಅವಳ ಮನೋಲೋಕಕಕ್ಕೆ ಪಾತಾಳಗರಡಿ ಹಾಕಿದಂತಿದೆ.
ಡಾ. ಚಂದ್ರಮತಿ ಸೋಂದಾ ಕಾದಂಬರಿ “ದುಪಡಿ”ಗೆ ಡಾ. ಗೀತಾ ವಸಂತ ಬರೆದ ಮುನ್ನುಡಿ

Read More

ಮಾನಸಿಕ ಹಿಂಸೆಯೂ ಕ್ರೌರ್ಯವೇ: ಗಿರೀಶ್‌ ಕಾಸರವಳ್ಳಿ ಕೃತಿಯ ಆಯ್ದ ಭಾಗ

ಕಾರಂತರದ್ದು ಸದಾ ಕ್ರಿಯಾಶೀಲವಾಗಿರುವ ಮನಸ್ಸು. ಅವರಿಗೇ ‘ತಾನು ಖಾಲಿಯಾದೆ’ ಅಂತನ್ನಿಸಬೇಕಾದರೆ ಆ ಭೂಪಾಲ್ ಘಟನೆ ಎಂತಹ ಆಘಾತ ತಂದಿರಬೇಕು. ಅವರ ಮನಸ್ಸು ಮುದುಡುವಂತೆ ಮಾಡಿ, ತಮ್ಮಿಂದ ಇನ್ನು ಸೃಜನಾತ್ಮಕವಾಗಿ ಏನನ್ನೂ ಮಾಡಲು ಸಾಧ್ಯವಿಲ್ಲ ಅನ್ನಿಸುವಂತೆ ಮಾಡಿದರಲ್ಲಾ, ಅದುವೇ ಕ್ರೌರ್ಯ. ಭೂಪಾಲ್‌ನ ಆ ಘಟನೆ ನಿಜವಾಗಿಯೂ ನಡೆದದ್ದೋ ಅಲ್ಲವೋ ನನಗೆ ತಿಳಿಯದು. ಅಲ್ಲಿನ ರಾಜಕೀಯ ರಂಗಮಂಡಲದ ಮುಖ್ಯಸ್ಥರಾಗಿದ್ದ ಕಾರಂತರನ್ನು ಬಲಿಪಶು ಮಾಡಿದರು ಎಂದು ಅವರ ಕೆಲವು ಸ್ನೇಹಿತರು ಹೇಳಿದ್ದನ್ನು ನಾನು ಕೇಳಿದ್ದೇನೆ.
ಖ್ಯಾತ ಸಿನಿಮಾ ನಿರ್ದೇಶಕ ಗಿರೀಶ್‌ ಕಾಸರವಳ್ಳಿ ಅವರ ಚಲನಚಿತ್ರಗಳ ಸಂಕಥನ “ಬಿಂಬ ಬಿಂಬನ” ದಿಂದ “ಕ್ರೌರ್ಯ” ಚಿತ್ರದ ಕುರಿತ ಮಾತುಕತೆ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ