Advertisement

Category: ದಿನದ ಪುಸ್ತಕ

ಪಪ್ಪುನಾಯಿ ಮತ್ತು ದೆಯ್ಯದ ಚಪ್ಪಲಿ: ವಿಜಯಶ್ರೀ ಹಾಲಾಡಿ ಪ್ರಬಂಧ

ಮಲೆನಾಡು, ಕರಾವಳಿ ಭಾಗದ ಹಳ್ಳಿಯ ಮನೆ ಮನೆಗಳಲ್ಲಿ ನಾಯಿಗಳಿರುವುದು ಕಡ್ಡಾಯ. ಕಾಡು, ಹಾಡಿ, ಗುಡ್ಡ, ಬಯಲುಗಳ ನಡುವೆ ಫರ್ಲಾಂಗುಗಳ ಅಂತರದಲ್ಲಿ ಅವಿತುಕೊಂಡಿರುವ ಮನೆಗಳ ರಕ್ಷಣೆಗೆ, ಜೀವಂತಿಕೆಗೆ ನಾಯಿಗಳು ಅನಿವಾರ್ಯ. ಕಳ್ಳಕಾಕರು, ಜೀವಾದಿಗಳು, ದೆವ್ವ-ಭೂತ-ಪೀಡೆ-ಕುಲೆಗಳನ್ನು ಕೂಡಾ ನಾಯಿಗಳು ದೂರವಿಡುತ್ತವೆಂಬ ನಂಬಿಕೆಯಿದೆ! ಮನುಷ್ಯರ ಕಣ್ಣಿಗೆ ಕಾಣದ ದೆವ್ವ ಭೂತಗಳು ನಾಯಿಗಳಿಗೆ ಕಾಣುತ್ತವಂತೆ, ಇದರಿಂದಾಗಿಯೇ ಅವು ರಾತ್ರಿಯಿಡೀ ಬೊಗಳುವುದಂತೆ! ನಮ್ಮ ಹಳ್ಳಿಯವರ ಈ ತರದ ಕಲ್ಪನೆಗಳಿಗೆ ಯಾವುದೇ ಆಧಾರವಿಲ್ಲವಾದರೂ ಇಂತವುಗಳನ್ನು ಕೇಳುವುದು ರೋಮಾಂಚನಕಾರಿಯಾಗಿತ್ತು.
ವಿಜಯಶ್ರೀ ಹಾಲಾಡಿ ಹೊಸ ಪ್ರಬಂಧ ಸಂಕಲನ “ಕಣ್ಣ ಕಾಡಿದ ಹಾಡು” ಒಂದು ಪ್ರಬಂಧ ನಿಮ್ಮ ಓದಿಗೆ

Read More

ಭುವನೇಶ್ವರದ ಭವ್ಯ ಲಿಂಗರಾಜ ದೇವಾಲಯ: ಡಾ. ಜೆ. ಬಾಲಕೃಷ್ಣ ಬರಹ

ಭುವನೇಶ್ವರದಲ್ಲಿ 500ಕ್ಕೂ ಹೆಚ್ಚು ದೇವಾಲಯಗಳಿದ್ದರೂ ಸಹ ಅವುಗಳಲ್ಲಿ ಲಿಂಗರಾಜ ದೇವಾಲಯ ವಾಸ್ತುಶೈಲಿಯ ದೃಷ್ಟಿಯಿಂದ ಪ್ರಾಮುಖ್ಯತೆ ಪಡೆದಿದೆ. ಒರಿಸ್ಸಾದಲ್ಲಿ ನಿರ್ಮಿತವಾಗಿರುವ ಮೊಟ್ಟಮೊದಲ ಅತಿ ದೊಡ್ಡ ದೇವಾಲಯವಾಗಿರುವುದಲ್ಲದೆ, ಒರಿಸ್ಸಾದ ಶೈವ ದೇವಾಲಯಗಳಲ್ಲಿಯೇ ದೊಡ್ಡ ದೇವಾಲಯವಾಗಿರುವ ಲಿಂಗರಾಜ ದೇವಾಲಯ `ಕಳಿಂಗ ವಾಸ್ತುಶೈಲಿ’ಯ ಅತಿ ಸುಂದರ ಉದಾಹರಣೆಯಾಗಿದೆ. ಕ್ರಿ.ಶ. 6-7ನೇ ಶತಮಾನದಲ್ಲಿ ಆರಂಭವಾದ ಒರಿಸ್ಸಾ ದೇವಾಲಯಗಳ ವಾಸ್ತು ಶಿಲ್ಪ ನಿರ್ಮಾಣ 11ನೇ ಶತಮಾನದಲ್ಲಿ ಲಿಂಗರಾಜ ದೇವಾಲಯದ ನಿರ್ಮಾಣದ ಹೊತ್ತಿಗೆ ಉತ್ತುಂಗಕ್ಕೇರಿತ್ತು. ಆ ವಾಸ್ತು ನಿರ್ಮಾಣ 13ನೇ ಶತಮಾನದ ನಂತರ ಕ್ರಮೇಣ ಕಡಿಮೆಯಾಯಿತು.
ಡಾ. ಜೆ. ಬಾಲಕೃಷ್ಣ ಅವರ ಹೊಸ ಕೃತಿ “ನಡೆದಷ್ಟು ದೂರ” ಪ್ರವಾಸ ಕಥನದ ಮತ್ತೊಂದು ಬರಹ ನಿಮ್ಮ ಓದಿಗೆ

Read More

‘ಮೋಹಿತ’ನ ಮೋಹಕ ಕವಿತೆಗಳು: ಅಬ್ದುಲ್‌ ರಶೀದ್‌ ಕವನ ಸಂಕಲನಕ್ಕೆ ಎಸ್‌. ಮಂಜುನಾಥ್‌ ಮುನ್ನುಡಿ

ಕರಗಿ-ಹರಿಯುವ- ಈ ಶಬ್ದಗಳನ್ನು ಬಳಸಬೇಕಾಗುವುದರಿಂದ ರಶೀದರದ್ದು ಒಂದು ‘ದ್ರವ ಪ್ರತಿಭೆ’! ತನ್ನನ್ನು ಪೂರಾ ಬಿಟ್ಟುಕೊಟ್ಟೇ ಹರಿದುಹೋಗುವಂತಿರುವುದು ನದಿಯ ಜೀವಂತಿಕೆ ತಾನೇ? ಇಷ್ಟು ಹೇಳಿದರೆ ರಶೀದರ ಕವಿತೆಯ ಗುಣವನ್ನು ಪೂರ್ತಿ ಹೇಳಿದಂತಾಗುವುದಿಲ್ಲ. ಅಷ್ಟು ವೈಚಿತ್ರ್ಯಗಳನ್ನು ಒಳಗೊಂಡುದು ಅದು. ಮಾತಿನಲ್ಲಿ ಪ್ರತಿಮೆಯಲ್ಲಿ ಚಿಂತನೆಯಲ್ಲಿ ಭಾವನೆಯಲ್ಲಿ ಹಾಗೆ ವಿಚಿತ್ರವಾದುದು. ಒಂದು ಕಾರಣ: ಇದು ಕವಿತೆಗೆ ಸೇರುವುದು. ಇದು ಸೇರಲಾರದ್ದು ಎಂಬ ಭೇದವಿರದೆ ಏನೆಲ್ಲವನ್ನು ಬೇಕಾದರೂ ಒಳಗೊಳ್ಳುವಂಥದು. ಹಾಗಿದ್ದೂ ಅಂತಿಮವಾಗಿ ಸಹಜತೆಯೇ ಹೆಗ್ಗುರುತಾದ್ದು.
ಅಬ್ದುಲ್‌ ರಶೀದ್‌ ಕವನ ಸಂಕಲನ “ನರಕದ ಕೆನ್ನಾಲಿಗೆಯಂಥ ನಿನ್ನ ಬೆನ್ನ ಹುರಿ”ಗೆ ಎಸ್‌. ಮಂಜುನಾಥ್‌ ಬರೆದ ಮುನ್ನುಡಿ

Read More

ಒರಿಸ್ಸಾ ವಾಸ್ತುಕಲೆ: ಡಾ. ಜೆ. ಬಾಲಕೃಷ್ಣ ಬರಹ…..

ಒರಿಸ್ಸಾದ ವಾಸ್ತು ಶಿಲ್ಪಿಗಳು ದೇಗುಲಗಳನ್ನು ದೇವರ ಅಥವಾ ಮಾನವನ ದೇಹಕ್ಕೆ ಹೋಲಿಸಿದ್ದರು. ಆದುದರಿಂದಲೇ ದೇಗುಲದ ವಿವಿಧ ಭಾಗಗಳಿಗೆ ದೇಹದ ಅಂಗಗಳ ಹೆಸರುಗಳನ್ನೇ ನೀಡಿದ್ದಾರೆ: ಪಾಭಗ (ಪಾದ), ಜಂಘ (ಮೊಣಕಾಲು), ಗಂಡಿ, ಮಸ್ತಕ ಮುಂತಾದವು. ಮುಖ್ಯ ಶಿಖರವುಳ್ಳ ದೇಗುಲವನ್ನು ಗಂಡು ಅಥವಾ ಮದುಮಗನೆಂದೂ ಹಾಗೂ ಜಗಮೋಹನ ದೇಗುಲವನ್ನು ಹೆಣ್ಣು ಅಥವಾ ಮದುಮಗಳೆಂದೂ ಭಾವಿಸಲಾಗುತ್ತಿತ್ತು. ಒರಿಸ್ಸಾದ ದೇಗುಲಗಳಲ್ಲಿ ವಾಸ್ತು ಕಲೆ ಹಾಗೂ ಶಿಲ್ಪಕಲೆಯನ್ನು ಪ್ರತ್ಯೇಕವಾಗಿ ನೋಡುವುದು ಸಾಧ್ಯವೇ ಇಲ್ಲ. ಆದುದರಿಂದಲೇ ಕಲಾ ಸಂಶೋಧಕಿ ಡಾ.ಸ್ಟೆಲ್ಲಾ ಕ್ರಮರೀಷ್ `ಒರಿಸ್ಸಾದ ವಾಸ್ತುಕಲೆ ದೈತ್ಯಾಕಾರದ ಶಿಲ್ಪಕಲೆ’ ಎಂದಿದ್ದಾರೆ.
ಡಾ. ಜೆ. ಬಾಲಕೃಷ್ಣ ಅವರ ಹೊಸ ಕೃತಿ “ನಡೆದಷ್ಟು ದೂರ” ಪ್ರವಾಸ ಕಥನದ ಮತ್ತೊಂದು ಬರಹ ನಿಮ್ಮ ಓದಿಗೆ

Read More

ಅಪ್ಪನ ಗೋರಿಯಲ್ಲಿ ಕನಸುಗಳ ಬಿಕ್ಕಳಿಕೆ: ಸಂಗೀತ ರವಿರಾಜ್ ಬರಹ

ಇಲ್ಲಿನ ಕವಿತೆಗಳಲ್ಲಿ ಅತಿರಂಜಿತ ಕಲ್ಪನೆಗಳಿಗಿಂತ ತನ್ನ ನಡುವಿನ ಬದುಕನ್ನೇ ಭಿನ್ನವಾಗಿ ಅವಲೋಕಿಸುತ್ತ, ಆ ಮೂಲಕವೇ ತನ್ನ ಭಾವನೆಗಳನ್ನು ಮಿಳಿತಗೊಳಿಸಿ ಕವಿತೆಯಲ್ಲಿ ಸ್ಪುರಿಸುತ್ತಾರೆ. ಕಾವ್ಯದಿಂದಲೇ ಏನನ್ನೋ ಗೆಲ್ಲಬಯಸುತ್ತೇನೆ ಎಂಬ ಸಣ್ಣ ಆಸೆಯಿಂದ, ಜೊತೆಗೆ ಆಸ್ಥೆಯಿಂದ ಹೇಳುವಂಥದನ್ನು ಹೇಳಿಕೊಂಡಿದ್ದಾರೆ. ಮಾತಿಗಿಂತ ಕಾವ್ಯವೇ ತನ್ನ ಅಭಿವ್ಯಕ್ತಿ ಮಾಧ್ಯಮ ಎನಿಸುವಂತಹ ಜೀವಂತಿಕೆಯ ಸಾಲುಗಳು ಕವಿತೆಗಳಲ್ಲಿವೆ.
ಜಗದೀಶ್‌ ಜೋಡುಬೀಟಿ ಕವನ ಸಂಕಲನ “ಅಪ್ಪನ ಗೋರಿಯಲ್ಲಿ ಕನಸುಗಳ ಬಿಕ್ಕಳಿಕೆ” ಕುರಿತು ಸಂಗೀತ ರವಿರಾಜ್‌, ಚೆಂಬು ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ