Advertisement

Category: ದಿನದ ಪುಸ್ತಕ

ಮಹಿಳಾ ಜನಪದ ಸಾಹಿತ್ಯ: ಚರಿತ್ರೀಕರಣದ ಸವಾಲು

ಜನಪದ ಸಾಹಿತ್ಯ ಅಧ್ಯಯನಗಳು ನಡೆದದ್ದು ಮೌಖಿಕ ಮೂಲದಲ್ಲಿದ್ದ ಜನಪದ ಸಾಹಿತ್ಯ ಬರವಣಿಗೆಯಲ್ಲಿ ಘನೀಕರಿಸಿದಾಗಿನಿಂದ, ಜನಪದ ಸಾಹಿತ್ಯವು ಹೀಗೆ ಬರವಣಿಗೆಯಲ್ಲಿ ಘನೀಕರಿಸುವಾಗ ಅದು ಅನೇಕ ಮಾರ್ಪಾಡುಗಳಿಗೆ ಒಳಗಾಗುತ್ತದೆ. ಜನಪದ ಸಾಹಿತ್ಯದಲ್ಲಿ ಉಂಟಾಗುವ ಇಂತಹ ಮಾರ್ಪಾಡುಗಳನ್ನು ನಾರಾಯಣ ಕೆ.ವಿ. ಅವರು ನಾಲ್ಕು ಮಾದರಿಗಳಲ್ಲಿ ಗುರುತಿಸುತ್ತಾರೆ. ಅವುಗಳಲ್ಲಿ ಮೊದಲನೆಯದು “ಇಲ್ಲದ ಮೌಖಿಕ ಸಂಕಥನವನ್ನು ಇದೆ ಎಂದು ಭ್ರಮೆ ಹುಟ್ಟಿಸುವ ರೀತಿಯಲ್ಲಿ ರಚಿಸಿಕೊಟ್ಟ ದಾಖಲೆಗಳು ನಮಗೆ ಸಿಗುತ್ತವೆ.
ಡಾ.ಶೈಲಜ ಇಂ.ಹಿರೇಮಠ ಬರೆದ “ನಿರೂಪಣೆಯಾಚೆಗೆ (ಜನಪದ ಸಾಹಿತ್ಯ ಮತ್ತು ಮಹಿಳೆ)” ಪುಸ್ತಕದ ಒಂದು ಬರಹ ನಿಮ್ಮ ಓದಿಗೆ

Read More

ಈ ಮಳೆಗಾಲ ನಮ್ಮದಲ್ಲ…

ಚಲಂ ಕವಿತೆಗಳ ಸಾಂಗತ್ಯ  ಕಡಲ ಮೇಲಿನ ಹಾದಿ. ಅನುಭಾವವನ್ನು ಹುಟ್ಟುಹಾಕುವ ನೀರ ಮೇಲಿನ ಪಯಣ. ಒಮ್ಮೆ ಇದು ಆರಂಭವಾದರೆ ದಿಕ್ಸೂಚಿಯಿಂದ ದಿಕ್ಕನ್ನು ತಿಳಿಯಬೇಕೆ ಹೊರತು ಕಣ್ಣಳತೆಗೆ ನಮಗೆ ಯಾವ ಮಾಹಿತಿಯೂ ದಕ್ಕುವುದಿಲ್ಲ. ಸ್ವಭಾವತಃ ವಾಚಾಳಿಯಲ್ಲದ ಚಲಂ ಅಷ್ಟೇನೂ ಔಟ್ಗೋಯಿಂಗ್ ಅಲ್ಲದ ಅಂತರ್ಮುಖಿ‌. ಅಂತೆಯೇ ಅವರ ಕವಿತೆಗಳೂ.ಕಡಲು ದಡಕ್ಕನೆ ತಂದು ಅಪ್ಪಳಿಸಿದ ಕಪ್ಪೆಚಿಪ್ಪುಗಳಲ್ಲ ಇಲ್ಲಿನ ಕವಿತೆಗಳು. ತಣ್ಣಗೆ ಹರಿವ ನದಿಯೊಳಗೆ ನುರಿದು ಅವಾಗೇ ನುಣ್ಣಗಾದ ನಯಸ್ಸು ಕಲ್ಲಿನಂತವು.
ಚಲಂ ಹಾಡ್ಲಹಳ್ಳಿಯವರ “ಈ ಮಳೆಗಾಲ ನಮ್ಮದಲ್ಲ” ಕವನ ಸಂಕಲನದ ಕುರಿತು ದಯಾ ಗಂಗನಘಟ್ಟ ಬರಹ

Read More

ನೋವಿನ ಕತೆಗಳ ವೈಚಾರಿಕ ನಿರೂಪಣೆ

ವೇಶ್ಯಾವಟಿಕೆ ಎಂಬ ನೋವಿನ ಲೋಕದ ಕತೆಗಳನ್ನು ಹೇಳಿದಷ್ಟೂ ಮುಗಿಯದು. ಕಂಡಷ್ಟೂ ಮುಗಿಯದು. ಅಂತಹ ಲೋಕದಲ್ಲಿ ಒಂದಿಷ್ಟು ಸಂಚರಿಸಿ ದೀರ್ಘವಾದ ಕ್ಷೇತ್ರಕಾರ್ಯವನ್ನು ಮಾಡಿದ ಹಿರಿಯ ಲೇಖಕಿ ಬಿ.ಎಂ. ರೋಹಿಣಿಯವರು ಇತ್ತೀಚೆಗೆ ಪ್ರಕಟಿಸಿದ ಪುಸ್ತಕ ‘ವೇಶ್ಯಾವಟಿಕೆಯ ಕಥೆ-ವ್ಯಥೆ’. ವೇಶ್ಯೆಯರ ಪರಿಸ್ಥಿತಿಗಳಿಗೆ ಕಾರಣವಾಗುವ ಪುರುಷವರ್ಗದೆಡೆಗೆ ಪ್ರಖರವಾದ ಸಿಟ್ಟನ್ನು ಒಡಲಿನಲ್ಲಿಟ್ಟುಕೊಂಡು ಅವರು ಈ ಪುಸ್ತಕವನ್ನು ಸಣ್ಣದೊಂದು ವಿಸ್ಮಯ ಮತ್ತು ತುಂಬಾ ಆತಂಕದೊಂದಿಗೆ ಬರೆದಿದ್ದಾರೆ. ಈ ಪುಸ್ತಕದ ಕುರಿತು ತಮ್ಮ ಅನಿಸಿಕೆಯನ್ನು ಇಲ್ಲಿಬರೆದಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ.

Read More

ಚತುರೋಕ್ತಿಯಿಂದ ಸಹೃದಯತೆಯ ಒಡಲನ್ನು ತೆರೆದಿಟ್ಟ ವ್ಯಕ್ತಿಚಿತ್ರಣ

ಎಮ್ ಎ ಹೆಗಡೆಯವರೆಂದೇ ಸಮಾಜದಲ್ಲಿ ಪ್ರಸಿದ್ಧರಾದ ಹೆಗಡೆಯವರಲ್ಲಿ ಮಹಾಬಲನೋರ್ವ ಇದ್ದಾನೆ ಎನ್ನುವದನ್ನು ಈ ಪುಸ್ತಕದಲ್ಲಿ ರಾಜಶೇಖರ ಹೆಗಡೆಯವರು ಗುರುತಿಸುತ್ತಾರೆ. ಜೀವನದಲ್ಲಿಯೂ ಹಾಗೇ ಅಪರಿಚಿತರಂತೇ ಕಾಣುತ್ತಾರೆ. ನಾಸ್ತಿಕರಂತೆ ತೋರುತ್ತಾರೆ. ಆದರೆ ಗರುಡ ಪುರಾಣವನ್ನು ವಾಚಿಸಿ ತಾಯಿಯ ಔರ್ಧದೈಹಿಕ ಕ್ರಿಯೆಗಳನ್ನು ನೆರವೇರಿಸುತ್ತಾರೆ. ಕುಟುಂಬ ಸಮೇತ ಕಾಶಿಯಾತ್ರೆಗೆ ಹೋಗುತ್ತಾರೆ. ಸಂಕೀರ್ಣವೆನಿಸಿಕೊಂಡ ವ್ಯಕ್ತಿತ್ವದೊಳಗೆ ತಮ್ಮವರೆನ್ನುವ ಭಾವನೆಯಿದೆ.
ರಾಜಶೇಖರ ಹೆಗಡೆ ಜೋಗಿನ್ಮನೆಯವರು ಬರೆದ “ಅಣ್ಣ ಮಹಾಬಲ – ಎಂ ಎ ಹೆಗಡೆಯವರ ಜೀವನ ಭಾವನ ಸಾಧನ” ಕೃತಿಯ ಕುರಿತು ನಾರಾಯಣ ಯಾಜಿ ಬರಹ

Read More

ಹೂ ನೋಡಿ ಗಿಡದ ಪರೀಕ್ಷೆ

ಹಕ್ಕಿ ಗರಿಗಳ ರಮ್ಯಲೋಕವನ್ನು ಚಿತ್ರಿಸುವ ‘ಹಕ್ಕಿಪುಚ್ಚವೆನ್ನುವ ಬೆಚ್ಚಾನೆ ತಾವು’ ಪ್ರಬಂಧ ಹಕ್ಕಿಪುಕ್ಕವೊಂದು ಹಾರಿಬಂದು, ಪ್ರಾರ್ಥನೆಗೆ ನಿಂತಿರುವ ಮಗುವಿನ ಕೈ ಸೇರಿ, ಆ ಮಗುವಿನ ಮುಖದಲ್ಲಿ ಮಂದಹಾಸ ಮೂಡಿಸುವ ಪ್ರಸನ್ನಚಿತ್ರದೊಂದಿಗೆ ಆರಂಭವಾಗುತ್ತದೆ. ಪುಕ್ಕ ಹಿಡಿದ ನಗುಮುಖದ ಮಗುವಿನ ಚಿತ್ರದೊಂದಿಗೆ ದ.ರಾ. ಬೇಂದ್ರೆ ಅವರ ‘ಗರಿ’ ಕವಿತೆಯನ್ನು ನೆನಪಿಸಿಕೊಳ್ಳಬೇಕು. ‘ಹಾರಲೆಂದು ಹುಟ್ಟಿದ ಹಕ್ಕಿ ಮೈಯ ಬದುಕು’ ಎಂದು ಕವಿ ಉದ್ಗರಿಸುವ, ಪುಕ್ಕದ ಮೂಲಕ ಹಕ್ಕಿಯ ಬದುಕಿನ ಘನತೆಯನ್ನು ಸೂಚಿಸುವ ‘ಗರಿ’ ಬೇಂದ್ರೆಯವರ ಅದ್ಭುತ ಕವಿತೆಗಳಲ್ಲೊಂದು. ಆ ಕವಿತೆ ಕಾಣಿಸುವ ಹಕ್ಕಿಯ ಬದುಕಿನ ಘನತೆ, ಆಶಾ ಅವರ ಪ್ರಬಂಧದಲ್ಲಿ ಹಲವು ರೂಪಗಳಲ್ಲಿ ಚಿತ್ರಣಗೊಳ್ಳುತ್ತದೆ.
ಆಶಾ ಜಗದೀಶ್‌ ಹೊಸ ಪುಸ್ತಕ “ಕಾಣೆಯಾದವರು” ಪ್ರಬಂಧಗಳ ಸಂಕಲನಕ್ಕೆ ರಘುನಾಥ ಚ.ಹ. ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ