Advertisement

Category: ದಿನದ ಪುಸ್ತಕ

ಕನ್ನಡಕ್ಕೆ ಬಂದ ತೆಲುಗಿನ ಕತೆಗಳ ಮುನ್ನುಡಿಯಿದು

ಜಾಗತಿಕ ಮುಕ್ತ ಮಾರುಕಟ್ಟೆಯ ಕಬಂಧ ಬಾಹುಗಳು ದೇಶದ ಅಧಿಕಾರಶಾಹಿಗಳ ಸ್ವಾರ್ಥ ರಾಜಕಾರಣದ ಬೆಂಬಲದೊಂದಿಗೆ ಚಾಚಿಕೊಂಡದ್ದರಿಂದಾಗಿ ರೈತರ ಬದುಕು ಮೂರಾಬಟ್ಟೆಯಾದ ಕಥೆಯನ್ನು ಹೇಳುವ ‘ಕೈಗೊಂಬೆ’, ಬೆವರು ಸುರಿಸಿ ಪ್ರಾಮಾಣಿಕವಾಗಿ ದುಡಿಯುವ ಶ್ರಮಜೀವಿಗಳ ಕಷ್ಟದ ದುಡಿಮೆಯನ್ನು ಸೊಳ್ಳೆಗಳು ರಕ್ತ ಹೀರುವಂತೆ ದರೋಡೆಗೈದು ಅವರ ಬದುಕನ್ನು ನರಕಸದೃಶವಾಗಿಸುವ ಭ್ರಷ್ಟಾಚಾರಿ ಅಧಿಕಾರಿವರ್ಗದವರ ಅನ್ಯಾಯದ ಜಾಲವನ್ನೂ ಅಲ್ಲಿ ಸೃಷ್ಟಿಯಾಗುವ ಹೃದಯವಿದ್ರಾವಕ ಸನ್ನಿವೇಶಗಳನ್ನೂ ಕಣ್ಣಿಗೆ ಕಟ್ಟುವಂತೆ ಚಿತ್ರಿಸುವ ಕಥೆ ‘ನಿಗೂಢ ಹಸ್ತಗಳು’.
ತೆಲುಗು ಕತೆಗಾರ ಪೆದ್ದಿಂಟಿ ಅಶೋಕ್‌ ಕುಮಾರ್‌ ಅವರ ಒಂದಷ್ಟು ಕತೆಗಳನ್ನು “ಜಾಲ” ಎಂಬ ಸಂಕಲನದ ಮೂಲಕ ಎಂ.ಜಿ. ಶುಭಮಂಗಳ ಕನ್ನಡಕ್ಕೆ ತಂದಿದ್ದು, ಅದಕ್ಕೆ ಡಾ. ಪಾರ್ವತಿ ಜಿ. ಐತಾಳರು ಬರೆದ ಮುನ್ನುಡಿ ಇಲ್ಲಿದೆ.

Read More

ಸುಮ್ಮನಿರುವುದು ಸಾಧ್ಯವಿಲ್ಲ ಎನ್ನುವ ಮಹಾಭಾರತ ಕತೆ

ಮನುಷ್ಯರು ಒಳ್ಳೆಯ ವಿಚಾರಗಳನ್ನೇ ಆಯ್ಕೆ ಮಾಡಿ ಅದೇ ದಾರಿಯಲ್ಲಿ ನಡೆಯಲು ಸಾಯುಜ್ಯ, ಮೋಕ್ಷ ಎಂಬ ಪರಿಕಲ್ಪನೆಗಳನ್ನು ಹಿರಿಯರು ಪ್ರತಿಪಾದಿಸಿದ್ದಾರೆ. ದೇವರು ಎಂಬ ಪರಿಕಲ್ಪನೆಯೂ ಇದೇ ಮಾದರಿಯದು ಎಂದೇ ಇಟ್ಟುಕೊಳ್ಳುವುದಾರೆ, ದೇವರನ್ನು ತಲುಪಲು ಎರಡು ದಾರಿಗಳನ್ನು ಆಯ್ಕೆ ಮಾಡಿಕೊಂಡಿರುವುದು ಪ್ರಧಾನವಾಗಿ ತೋರುತ್ತದೆ. ತಪಸ್ಸು, ಅಧ್ಯಯನ ಅನುಶಾಸನದಂತಹ ವಿಧಾನಗಳು ಒಂದು ದಾರಿ. ಹಾಡು, ನೃತ್ಯ, ಚಿತ್ರ ಮುಂತಾದ ಲಲಿತಕಲೆಗಳ ಮೂಲಕ ನಡೆಯುವ ದೇವರ ಆರಾಧನೆಯು ಇನ್ನೊಂದು ದಾರಿ. ಎರಡೂ ದಾರಿಯನ್ನು ಸದೃಢಗೊಳಿಸಲು ಆಧಾರವಾಗಿ ನಿಲ್ಲುವುದು ಭಾರತ ಕತೆ. ಅದು ಸರಳವಾದ ಓದಿಗೆ ದಕ್ಕುವುದು ವಚನ ಭಾರತ ವೆಂಬ ಕೃತಿಯಲ್ಲಿ. ‘ವಚನ ಭಾರತ’ ಪುಸ್ತಕದ ಓದಿನ ನೆನಪುಗಳನ್ನು ಉಲ್ಲೇಖಿಸಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ

Read More

ಚಲಂ ಆತ್ಮಕತೆಯ ಒಂದಿಷ್ಟು ಪುಟಗಳು

ಬಂದಾಗಿನಿಂದ ಸತ್ಯವತಿ, ರತ್ನಮ್ಮ ನನ್ನನ್ನು ಹಿಡಿದುಕೊಂಡು ನೇತಾಡುತ್ತಿದ್ದಾರೆ. ಮದ್ರಾಸ್‍ನಲ್ಲಿರುವ ವೊಯ್ಯಿಯನ್ನು ನೆನಪಿಸಿಕೊಂಡ ಮಾತ್ರಕ್ಕೆ ನನ್ನ ಮನಸು ಪರವಶ ವಾಗುತ್ತಿತ್ತು. ನಾನು ದೈವವನ್ನು ಕಾಂಕ್ಷೆ ಮಾಡಿದಷ್ಟೂ ಕಾಲ, ಎಲ್ಲದಕ್ಕಿಂತ ಆತನೇ ವಾಂಚನಿಯ ನನಗೆ ಆತನೇ ಶರಣ್ಯ. ಆ ಈಶ್ವರನ ಕುರಿತು ಯಾವಾಗ ಅನುಮಾನಗಳು ಮೂಡಿದವೊ, ಅಂದಿನಿಂದ ಸ್ತ್ರೀಯೇ ನನ್ನ ದೈವವಾಯಿತು. ಆಕೆಯಲ್ಲಿಯೆ ನನ್ನ ಜೀವನಕ್ಕೆ ಸಾಫಲ್ಯ. ಅದಕ್ಕಿಂತ ಈ ಲೋಕದಲ್ಲಿ ಬಯಸುವಂತಹದು ಏನೂ ಇಲ್ಲ. ಇದಕ್ಕಿಂತ ಯಾವುದೂ ತೃಪ್ತಿ ಕೊಡುವುದಿಲ್ಲ.
ತೆಲುಗು ಬರಹಗಾರ “ಚಲಂ” ಅವರ ಆತ್ಮಕತೆಯನ್ನು ಕನ್ನಡದ ಕವಿ ಲಕ್ಕೂರು ಆನಂದ್‌ ಕನ್ನಡಕ್ಕೆ ತಂದಿದ್ದು ಅದರ ಕೆಲವು ಪುಟಗಳು ನಿಮ್ಮ ಓದಿಗೆ ಇಲ್ಲಿವೆ. 

Read More

ಓ ಲಕ್ಷ್ಮಣಾ… ಓ ಲಕ್ಷ್ಮಣಾ…

ಇದು ಮಾಯೆ, ಇದಕ್ಕೆ ಬಲಿಬೀಳಬಾರದು ಅನ್ನುವ ಎಚ್ಚರದಲ್ಲಿ ಲಕ್ಷ್ಮಣ ಇದ್ದ. ಹೇಳಿಯೂ ಹೇಳಿದ. ಆದರೆ ಸೀತೆಯನ್ನು ಆಗಲೇ ಮಾಯೆ ಮುಸುಕಿತ್ತು. ಸತ್ಯಾಸತ್ಯದ ವಿವೇಕ ಮರೆಯಾಗಿತ್ತು. ರಾಮನನ್ನು ಕಳುಹಿಸಿದಳು. ಇಬ್ಬರು ಮಾಯೆಯ ಪ್ರಭಾವಕ್ಕೆ ಒಳಗಾದ ವ್ಯಕ್ತಿಗಳ ನಡುವೆ ಅದರಿಂದ ಹೊರತಾಗಿ ಉಳಿದ ಲಕ್ಷ್ಮಣ ಅಸಹಾಯಕತೆ, ಆರ್ತತೆ, ಬಳಲಿಕೆಯನ್ನು ತೋರ್ಪಡಿಸುವ ಒಂದು ಪ್ರತಿಮೆಯಾಗಿ ಅದ್ಭುತ ಪದವಾಗಿ, ಓ ಲಕ್ಷ್ಮಣಾ ಓ ಲಕ್ಷ್ಮಣಾ ಅನ್ನುವ ಒಂದು ಕೂಗು ಈ ಇಡೀ ಪ್ರಸಂಗದಲ್ಲಿ ಮತ್ತೆ ಮತ್ತೆ ಅನುರಣಿಸುತ್ತದೆ. ಕಾಡುತ್ತದೆ.
ಕುವೆಂಪುರವರ ಶ್ರೀ ರಾಮಾಯಣ ದರ್ಶನಂ ಕೃತಿಯ ಒಂದು ಭಾಗದ ಕುರಿತು ಬರೆದಿದ್ದಾರೆ ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು

Read More

ಮೌನಸಾಕ್ಷಿಗೊಂದು ಮಾತು

ಕನಸಿನ ರೆಕ್ಕೆಗಳನ್ನು ಹಚ್ಚಿಕೊಂಡು ಅಮೆರಿಕಕ್ಕೆ ಹಾರುವ ಭಾರತೀಯರು ಅಲ್ಲಿನ ಅಪರಿಚಿತ ಸಮಾಜವನ್ನು ಬೆರಗುಗಣ್ಣಿನಿಂದ ನೋಡುತ್ತಲೇ ತಾವು ಹೊಸ ಬದುಕನ್ನು ಕಟ್ಟಿಕೊಳ್ಳುವುದರ ಜೊತೆಗೆ ಅನಿವಾರ್ಯವಾಗಿ ರೂಢಿಸಿಕೊಂಡಿರುವ ಆಡಂಬರ, ಒಣಪ್ರತಿಷ್ಠೆಗಳ ಜೀವನಶೈಲಿ ಹಾಗೂ ಅವರ ಮಾನಸಿಕ ತುಮುಲಗಳನ್ನುಕಥೆಗಾರರು   ಸೆರೆಹಿಡಿದಿದ್ದಾರೆ. ಇತ್ತ ಭಾರತದ ತೆಲಂಗಾಣದಲ್ಲಿ ಕಂಡ ಸಾಮಾಜಿಕ ಬದುಕಿನ ಅನುಭವಗಳನ್ನು ಕಟ್ಟಿಕೊಟ್ಟಿದ್ದಾರೆ. ಅವುಗಳನ್ನು ನಮ್ಮ ನಾಡಿನ ಜನರ ಕಥೆಗಳೆಂಬಂತೆ ಶುಭಮಂಗಳ ಅವರು ಕನ್ನಡೀಕರಿಸಿದ್ದಾರೆ.
ತೆಲುಗಿನ ಕಥೆಗಾರ ನಕ್ಷತ್ರಂ ವೇಣುಗೋಪಾಲ್‌ ಬರೆದ “ಮೌನಸಾಕ್ಷಿ” ಕಥಾಸಂಕಲನದ ಹನ್ನೊಂದು ಕತೆಗಳನ್ನು ಎಂ.ಜಿ. ಶುಭಮಂಗಳ ಕನ್ನಡಕ್ಕೆ ತಂದಿದ್ದು, ಈ ಸಂಕಲನಕ್ಕೆ ರೂಪದರ್ಶಿ ಜಿ. ವೆಂಕಟೇಶ್‌ ಬರೆದ ಮುನ್ನುಡಿ ಇಲ್ಲಿದೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ