ಒಲೆ ಬದಲಾದರೂ ಉರಿ ಬದಲಾಗದು!
ಇದು ಅವಳ ಒಬ್ಬಳ ಕತೆಯಲ್ಲ ಮನೆ ಮನೆ ಕತೆ. ಹೊರಗೆ ಹೋಗಬೇಕಾದರೆ ಹೆಚ್ಚಿನ ಎಲ್ಲ ಹೆಂಗಸರಿಗೂ ಈ ಜವಾಬ್ದಾರಿ ಹೆಗಲಿಗೇರಿರುತ್ತದೆ. ನನ್ನಂಥ ಜಮೀನ್ದಾರ ಮಹಿಳೆಯರಿಗೆ ಇನ್ನೂ ಕಷ್ಟ. ಅವಳಿಗೆ ಗಂಡ, ಮಕ್ಕಳಿಗೆ ಮಾತ್ರ ಅಲ್ಲ ತೋಟದ ಕೆಲಸಕ್ಕೆ ಬರುವ ಕಾರ್ಮಿಕರಿಗೂ ಅಡುಗೆ ಮಾಡಬೇಕಾದ ಪರಿಸ್ಥಿತಿ. ನಾನು ನಾಳೆ ಹೊರಗೆ ಹೋಗಲು ಇದೆಯೆಂದಾದರೆ ಇಂದೇ ರಾತ್ರಿ ಉಗಿಯಲ್ಲಿ ಬೇಯಿಸಿ ಮಾಡುವ ಪುಂಡಿ, ಕಡುಬು, ಪತ್ರೊಡೆಯಂತಹ ತಿಂಡಿಯನ್ನು ಮಾಡಿ ಇಡುತ್ತೇನೆ. ಯಾಕೆ ಹೀಗೆ? ಒಂದು ದಿನದ ಮಟ್ಟಿಗಾದರೂ ಅಡುಗೆ ಮನೆ ಹೊಣೆಯನ್ನು ಗಂಡಿಗೆ ಹೊತ್ತುಕೊಳ್ಳಲು ಆಗುವುದಿಲ್ಲವಾ?
ಸಹನಾ ಕಾಂತಬೈಲು ಅವರು ಬರೆದ ‘ಆನೆ ಸಾಕಲು ಹೊರಟವಳು’ ಪುಸ್ತಕದ ಮತ್ತೊಂದು ಅಧ್ಯಾಯ ಇಲ್ಲಿದೆ.

