Advertisement

Category: ದಿನದ ಪುಸ್ತಕ

ನಮ್ಮದೇ ಮನೆಯ ಕಥನವೆಂಬಂತೆ ಕಾಡುವ ಕಾದಂಬರಿ

‘ಜೀವಕೊಡಲೇ ಚಹಾ ಕುಡಿಯಲೇ..’ ಎಂಬ ಕಾದಂಬರಿಯು ಮೇಲ್ನೋಟಕ್ಕೆ  ತ್ರಿಕೋನ ಪ್ರೇಮ ಕತೆ  ಅನಿಸಿದರೂ ಇಲ್ಲಿ ಹಲವು ಆಯಾಮಗಳಿವೆ. ಕೊನೆಯವರೆಗೂ, ತನ್ನದೂ ಪ್ರೀತಿಯೇ ಎಂದು ಅರಿಯರಲಾರದೇ ತಲ್ಲಣಗೊಳ್ಳುವ ಹುಡುಗನ ಪಾಡು ಇಲ್ಲಿದೆ.  ಗಾಲಿಬ್ ಕವಿತೆ ಮೂಲಕ ತನ್ನದೇ ಭಾವ ಬೆರೆಸಿ ಶಾಯರಿ ರಚಿಸಿ ಪ್ರೀತಿ ವ್ಯಕ್ತಪಡಿಸುವ ಫಾತಿಮಾ, ಸಲಿಂಗಕಾಮ ಆಯ್ಕೆ ಮಾಡಿಕೊಳ್ಳುವ ದಿಟ್ಟೆ ಚಿತ್ರಾ, ಕೊನೆಗೂ ದಕ್ಕಿದ ಪ್ರೀತಿಯ ಸಾಕ್ಷಾತ್ಕಾರದ ಸನ್ನಿವೇಶಗಳಿವೆ. ಈ ಹಂತದಲ್ಲಿ ಕಾದಂಬರಿಯು  ವಿಭಿನ್ನ ತಿರುವು ಪಡೆದುಕೊಳ್ಳುವುದು.  ಆ ತಿರುವೇನು ಎಂಬುದನ್ನು ಓದುಗರೇ ಕಂಡುಕೊಳ್ಳಬೇಕು. ಕೊಂಕಣಿಯಿಂದ ಕನ್ನಡಕ್ಕೆ ಅನುವಾದಗೊಂಡ ಕಾದಂಬರಿಯ ಕುರಿತು ತಮ್ಮ ಅನಿಸಿಕೆ ಬರೆದಿದ್ದಾರೆ ಜ್ಯೋತಿ ಭಟ್. 

Read More

ಸುಪ್ರೀತ್ ಕೆ.ಎನ್. ಅವರ ‘ಉತ್ತರ’ ಕಾದಂಬರಿಯ ಪುಟಗಳು

ಈ ಬಾರಿಯ ಸಾಕ್ಷಾತ್ಕಾರ ಕಾರ್ಯಕ್ರಮಕ್ಕೆ ಈಗಾಗಲೇ ಅಭ್ಯರ್ಥಿಗಳು ಬಂದಾಗಿದೆ, ಹೊಸದಾಗಿ ಇನ್ಯಾರು ಬರುವುದಿದೆ ಎಂದು ಯೋಚಿಸಿದಾಗ, ಗುರುದೇವರು ಇನ್ನಿಬ್ಬರು ಬರುತ್ತಾರೆ ಎಂದು ಹೇಳಿದ್ದು ನೆನಪಾಯಿತು. ಜಯಕ್ಕನ ಸಮಾಧಿಯಿಂದ ಗುರುದೇವರ ನಿವಾಸಕ್ಕೆ ಮಾತಾಜೀಯವರು ಹೋಗಿ ತಮ್ಮ ಮನಸ್ಸಿನಲ್ಲಿದದ್ದನ್ನು ಹೇಳುವ ಮೊದಲೇ, ‘ದಕ್ಷಿಣ ಕಡೆಯಿಂದ ಒಬ್ಬ ಬರ್ತಾನೆ. ಅವನಿಗೆ ಸಾಧನೆಗಳನ್ನ ಮಾಡಿಸಿ, ಮೌನ ಕಾರ್ಯಕ್ರಮಕ್ಕೆ ತಯಾರು ಮಾಡಬೇಕು. ಅವನ ಬಗ್ಗೆ ನೀವು ವಿಶೇಷವಾಗಿ ಗಮನವಿಡಿ’ ಎಂದು ಹೇಳಿದರು.
ಸುಪ್ರೀತ್ ಕೆ.ಎನ್. ಅವರ ಹೊಸ ಕಾದಂಬರಿ ‘ಉತ್ತರ’ ಬಿಡುಗಡೆಗೆ ಸಿದ್ಧಗೊಳ್ಳುತ್ತಿದ್ದು ಅದರ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ಹೋರಾಟದ ಬದುಕಿನ ಹೆಜ್ಜೆ ಗುರುತುಗಳು…

ಗೌಡನ ಮಗ ಮನೆಗೆ ಬಂದು ‘ಬೆಲ್ಲ ಮಾಡಿದ್ದ ದುಡ್ಡು ಕೊಡ್ರಿ, ಇಲ್ಲಂದ್ರ ಅದರ ಬದಲಿಗಿ ಈ ಆಕಳ ಮತ್ತು ಕರಾ ಎಳಕೊಂಡು ಹೋಗ್ತಿನಿ’. ಎಂದೇಳುವ ಮಾತುಗಳಲ್ಲಿ ಜಮೀನ್ದಾರಿಕೆಯ ದರ್ಪದದೊಟ್ಟಿಗೆ ಜಾತಿ ಪ್ರತಿಷ್ಠೆ ಅಹಂಕಾರ ವ್ಯಕ್ತಗೊಂಡಿರುವುದನ್ನು ನೋಡಬಹುದು. ಬಲಿಷ್ಟರಲ್ಲದ ದಲಿತರು ಅನಿವಾರ್ಯವಾಗಿ ಶೋಷಣೆಗೆ ಒಳಗಾಗುತ್ತಾರೆ. ತಮ್ಮ ದುಡಿಮೆಯ ಫಲವನ್ನು ಕೂಡ ದಕ್ಕಿಸಿಕೊಳ್ಳದ ಸ್ಥಿತಿಯಲ್ಲಿ ಅಸ್ಪೃಶ್ಯ ಸಮುದಾಯ ಇದೆ. ಭಾರತೀಯ ಸಾಮಾಜಿಕ ವ್ಯವಸ್ಥೆಯಲ್ಲಿ ಅಮಾನವೀಯ ಸಂಗತಿಗಳನ್ನು ಕಾಲಾನುಕಾಲಕ್ಕೆ ಪೋಷಿಸುವ ಸಾಂಪ್ರದಾಯಿಕ ಮನಸ್ಥಿತಿಯ ಬಗೆಗೆ ಈ ಕೃತಿಯಲ್ಲಿ ಅನೇಕ ನಿದರ್ಶನಗಳಿವೆ.
ಎಚ್‌.ಟಿ. ಪೋತೆ ಬರೆದ “ಬಯಲೆಂಬೊ ಬಯಲು” ಬಯೋಪಿಕ್‌ ಕಾದಂಬರಿಯ ಕುರಿತು ಪಿ. ನಂದಕುಮಾರ್‌ ಬರಹ

Read More

ಮ.ಸು. ಕೃಷ್ಣಮೂರ್ತಿ ಅನುವಾದಿಸಿದ “ಅನಾಮದಾಸನ ಕಡತ” ಕಾದಂಬರಿಯ ಒಂದು ಅಧ್ಯಾಯ

ಅನಾಮದಾಸ ತುಂಬ ಹಿಂದಿನಿಂದ ಬರೆಯುತ್ತಾ ಬಂದಿದ್ದಾನೆ. ಆತನ ಕಡತದ ಒಂದು ಮನೋರಂಜಕ ಅಂಶ ರೈಕ್ವ ಆಖ್ಯಾನ. ಸುಮಾರು ನಲವತ್ತು ವರ್ಷಗಳ ಹಿಂದೆ ಆತ ಛಾಂದೋಗ್ಯ ಉಪನಿಷತ್ತಿನ ರೈಕ್ವ ಆಖ್ಯಾನದ ಮೇಲೆ ಒಂದು ಕಥೆ ಬರೆದಿದ್ದ. ಅದರ ಶೀರ್ಷಿಕೆ – ‘ಎಲ್ಲವೂ ಗಾಳಿ’ ಎಂದು. ಅದು ಎಲ್ಲೂ ಬೆಳಕು ಕಾಣಲಿಲ್ಲ. ಆತ ಕಥೆಯನ್ನು ತುಂಬ ಲಘು ಮನೋಭಾವದಿಂದ ಬರೆದಿದ್ದ. ಈಗ ಅದರ ಮತ್ತೊಂದು ರೂಪ ಅವನಿಗೆ ದೊರೆತಿದೆ. ತಾನು ಲಘುವಾದೆನಲ್ಲ ಎಂದು ಆತನಿಗೆ ಖೇದ. ಅದರ ಕೊನೆಗೆ ಆತ ಕೆಲವು ಹೊಸ ಪಂಕ್ತಿಗಳನ್ನು ಸೇರಿಸಿದನೆಂದು ಕಾಣುತ್ತದೆ.
ಡಾ. ಹಜಾರೀಪ್ರಸಾದ ದ್ವಿವೇದಿ ರಚಿಸಿರುವ “ಅನಾಮದಾಸನ ಕಡತ” ಕಾದಂಬರಿಯಯನ್ನು ಮ.ಸು. ಕೃಷ್ಣಮೂರ್ತಿ ಕನ್ನಡಕ್ಕೆ ಅನುವಾದಿಸಿದ್ದು ಅದರ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ಸ್ವಾನುಭವದ ಸುಂದರ ಹೆಣಿಗೆ

ಕಾವ್ಯವನ್ನು ಸ್ಮಿತಾ ಭಾವಾಭಿವ್ಯಕ್ತಿಗೆ ಮಾಧ್ಯಮವಾಗಿ ಮಾತ್ರ ಬಳಸಿಕೊಂಡಿಲ್ಲ. ಬದುಕಿನ ಎಲ್ಲ ವಿಷಮತೆಗಳ ನಡುವೆಯೂ ಜೀವಚೈತನ್ಯದ ರಸವನ್ನಾಗಿ ಉಳಿಸಿಕೊಂಡಿದ್ದಾರೆ. ಇಲ್ಲಿಯ ಬಹುತೇಕ ಕವಿತೆಗಳು ಹೆಣ್ತನದ ಸೀಮಿತ ನೆಲೆಯಲ್ಲೇ ಮೂಡಿದೆ. ಜಗತ್ತಿನ ಅರ್ಧದಷ್ಟಿರುವ ಸ್ತ್ರೀ ಸಮೂಹದ ಅನುಭವಗಳಿಗೆ ಸೀಮಿತದ ಚೌಕಟ್ಟು ಹಾಕುವುದುಂಟು.  ಆದರೆ ಸ್ತ್ರೀ ಲೋಕ  ಈ ಎಲ್ಲ ಚೌಕಟ್ಟಿಗೂ ಮೀರಿ ಬೃಹತ್ ಆಲದ ಮರದಂತೆ ಬೀಳಲು ಬಿಟ್ಟು ತನ್ನೊಡಲೊಳಗೆ ಚಿಗುರುವ ಆಶ್ರಯ ಬಯಸುವ ಚೈತನ್ಯಗಳಿಗೆ ಆವಾಸವಾಗುತ್ತದೆ. ಸ್ಮಿತಾ ಅಮೃತರಾಜ್ ಅವರ ‘ಮಾತು ಮೀಟಿ ಹೋಗುವ ಹೊತ್ತು’ ಕವನ ಸಂಕಲನದ ಕುರಿತು ನಾಗರೇಖಾ ಗಾಂವಕರ ಬರಹ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ