Advertisement

Category: ಪುಸ್ತಕ ಸಂಪಿಗೆ

ಬಿಸಿಲಿನ ತುಣುಕುಗಳಿಗೆ ಒಂದ್ ಪತ್ರ ಬರೆದು…..: ದೇವರಾಜ್‌ ಹುಣಸಿಕಟ್ಟಿ ಬರಹ

ಈ ಲೋಕದ ಹಂಗುಗಳು, ದರ್ದುಗಳು ಇರ್ಶೆಯನ್ನೇ ಹಾಸಿ ಹೊದ್ದು ಮಲಗಿವೆ. ಪ್ರೇಮಿಗಳ ಲೆಕ್ಕದಲ್ಲಂತು ಥೇಟ್ ರಾಕ್ಷಸಿ ಸೊರೂಪ… ಇಡೀ ಇತಿಹಾಸದುದ್ದಕ್ಕೂ ಇದು ದಿಟವಾಗಿದೆ… ಇಲ್ಲಾ ಅಂದ್ರೆ ರೋಮಿಯೋ ಜೂಲಿಯಟ್, ಮಮತಾಜ್ ಷಹ ಜಹಾನ್ ಇನ್ನೂ ಅದೆಷ್ಟೋ ಕಥನಗಳು ರೂಪ ಪಡೆದಿರುತ್ತಿರಲಿಲ್ಲ…
ಅಮೃತಾ ಪ್ರೀತಮ್ ಒಂದಷ್ಟು ಕವಿತೆಗಳನ್ನು “ಬಿಸಿಲಿನ ಅದೆಷ್ಟೋ ತುಣುಕುಗಳು” ಎಂಬ ಸಂಕಲನದಡಿ ರಶ್ಮಿ ಎಸ್ ಕನ್ನಡಕ್ಕೆ ಅನುವಾದಿಸಿದ್ದು, ಈ ಸಂಕಲನದ ಕುರಿತು ದೇವರಾಜ್ ಹುಣಸಿಕಟ್ಟಿ ಬರಹ

Read More

ಕರ್ವಾಲೋ ಮರು ಓದು, ಒಂದು ಧ್ಯಾನ: ದೇವಿಕಾ ನಾಗೇಶ್‌ ಬರಹ

ಇರುವೆಯಿಂದ ರಕ್ಷಿಸಿಕೊಳ್ಳಲು ಆ ಪ್ರಾಣಿ ಇದ್ದಕ್ಕಿದ್ದಂತೆ ಪಕ್ಕದ ದೊಡ್ಡ ಮರಕ್ಕೆ ಹಾರಿ ಮರ ಕೂತು ತನ್ನ ದೇಹಕ್ಕೆ ಅಂಟಿಕೊಂಡಿದ್ದ ಕೆಂಪಿರುವೆಗಳನ್ನು ತಿನ್ನತೊಡಗಿತು. ಇದು ಕಂಡು ಆಶ್ಚರ್ಯ ಚಕಿತರಾದ ಲೇಖಕರು ಹಾರೋ ಓತಿಕ್ಯಾತ ಇದು ಎಂದು ಖಾತ್ರಿಯಾದ ಖುಷಿಯಲ್ಲಿ ತನ್ನ ತಂಡದವರನ್ನು ಕೂಗಿ ಕರೆದರು. ಆದರೆ ಹಾರುವ ಓತಿಕ್ಯಾತ ಇದ್ದಲ್ಲಿ ನಿಲ್ಲುತ್ತದೆಯೇ? ಲೇಖಕರು ಅದನ್ನೇ ತದೇಕ ಚಿತ್ತರಾಗಿ ಕಣ್ಣಲ್ಲೇ ಹಿಂಬಾಲಿಸುತ್ತ ತಾವು ಕಂಡ ಈ ಅದ್ಭುತ ಸರೀಸೃಪವನ್ನು ತನ್ನ ತಂಡದವರಿಗೆ ಪರಿಚಯಿಸುವ ಆತುರದಲ್ಲಿದ್ದರು…
ಪೂರ್ಣಚಂದ್ರ ತೇಜಸ್ವಿಯವರ ಪ್ರಮುಖ ಕಾದಂಬರಿ “ಕರ್ವಾಲೋ”ದ ಮರು ಓದು, ದೇವಿಕಾ ನಾಗೇಶ್ ಬರಹ

Read More

ಅರಳುವ ಭಾವಲೋಕ: ದೀಪಾ ಗೋನಾಳ ಕವನ ಸಂಕಲನಕ್ಕೆ ಓ.ಎಲ್. ನಾಗಭೂಷಣ ಸ್ವಾಮಿ ಮಾತುಗಳು

ಪ್ರೇಮವೇ ಗೆಲುವುದು ಅನ್ನುವ ಶೀರ್ಷಿಕೆಯನ್ನೇ ನೋಡಿ. ಪ್ರೇಮ ಗೆಲ್ಲುವುದು ʻನಾನುʼ ನೋತಾಗ ಅಲ್ಲವೇ!. ಪ್ರೇಮ ಗೆದ್ದಿತು ಅನ್ನುವುದು ಬರಿಯ ಒಬ್ಬರ, ಪುಣ್ಯವಿದ್ದರೆ ಪಾಲ್ಗೊಂಡ ಇಬ್ಬರ ಮೈಮನಸುಗಳಿಗೆ ಮಾತ್ರ ಗೊತ್ತಿರುವ ಸಂಗತಿಯಾಗಬಹುದು, ಭಾಷೆಯನ್ನು ಬಲ್ಲ ಎಲ್ಲರಿಗೂ ಇದನ್ನು ಮನದಟ್ಟು ಮಾಡಿಸುವುದು ಎಷ್ಟು ಕಷ್ಟ. ಪ್ರೀತಿ ಶೃಂಗಾರದ ಬಯಕೆ, ತವಕ, ನೆನಪು, ಅವನ್ನೆಲ್ಲ ನುಡಿಯಾಗಿ ಕಾಣುವ ಹಂಬಲ ಇವೆಲ್ಲವೂ ಓದುಗರಲ್ಲೂ ಇರಬೇಕು. ಅಂದರೆ ಪ್ರೇಮವನ್ನು ಬಯಸುವ ಓದುಗ ಮನಸೂ ಬೇಕು.
ದೀಪಾ ಗೋನಾಳ ಕವನ ಸಂಕಲನ “ನಿನ್ನ ನೆನಪ ಕುಡಿದವಳು” ಕುರಿತು ಓ.ಎಲ್.‌ ನಾಗಭೂಷಣ ಸ್ವಾಮಿ ಬರಹ

Read More

ನಾಯಿಕುರ್ಕನ ನೆರಳಿನಲ್ಲಿ: ವಿಜಯಶ್ರೀ ಹಾಲಾಡಿ ಕೃತಿಯ ಒಂದು ಪ್ರಬಂಧ

ಎಲ್ಲರೂ ಒಟ್ಟಾಗಿ ಅನ್ನ, ತಿಂಡಿ ತಿನ್ನುವಾಗ ಕರಿಯನ ಗಲಾಟೆಯೇ ಗಲಾಟೆ. ಯಾರಿಗೂ ತಿನ್ನಲು ಬಿಡದೆ ತಾನೇ ಎಲ್ಲವನ್ನೂ ಮುಕ್ಕಬೇಕೆನ್ನುವುದು ಅವಳ ಆಸೆ. ಎಂಥಾ ಬೊಬ್ಬೆ! ನನಗೆ ಏನು ಮಾಡಬೇಕೆಂಬುದೇ ತಿಳಿಯುತ್ತಿರಲಿಲ್ಲ. ಒಬ್ಬೊಬ್ಬರಿಗೆ ಒಂದೊಂದು ಕಡೆ ಊಟ ಹಾಕುವ ವ್ಯವಸ್ಥೆ ಮಾಡಿಕೊಂಡೆ. ಆದರೆ ಎಲ್ಲ ಕಡೆಯೂ ಹೋಗಿ ತಾನೇ ಬಾಯಿಹಾಕಿ ಯಾರಿಗೂ ಸರಿಯಾಗಿ ತಿನ್ನಲು ಬಿಡದೆ, ಕರಿಯ ಅವಸ್ಥೆ ಕೊಡುತ್ತಿದ್ದಳು. ಕೊನೆಕೊನೆಗೆ ಕೋಲು ಹಿಡಿದು ಊಟ ಹಾಕುವ ಪರಿಸ್ಥಿತಿ ಬಂದಿತು. ಈ ನಡುವೆ ಪಾಪದ್ದು ದಾಸುಮರಿ ತುಂಬಾ ಕಷ್ಟ ಅನುಭವಿಸಿತು. ಅದಕ್ಕೆ ಬೇಗ ಬೇಗ ತಿನ್ನಲು ಆಗುತ್ತಿರಲಿಲ್ಲ. ಎಲ್ಲವನ್ನೂ ಕರಿಯನೇ ತಿಂದುಹಾಕುತ್ತಿತ್ತು. ಇಷ್ಟೇ ಆಗಿದ್ದರೆ ಹೋಗಲಿ ಅನ್ನಬಹುದಿತ್ತು.
ವಿಜಯಶ್ರೀ ಹಾಲಾಡಿ ಪ್ರಬಂಧಗಳ ಸಂಕಲನ “ಕಾಡಿನ ಸಂಗೀತ” ಕೃತಿಯ ಒಂದು ಪ್ರಬಂಧ ನಿಮ್ಮ ಓದಿಗೆ

Read More

ಮಧು ವೈ.ಎನ್.‌ ಹೊಸ ಕಾದಂಬರಿ “ಇಂತಿ, ಪೂರ್ವಿ”ಯ ಕೆಲವು ಪುಟಗಳು

ಆ ಪದ ಕಿವಿಗೆ ಬೀಳುತ್ತಿದ್ದಂತೆ ಸೈಫೈ ಸಿನಿಮಾಗಳಲ್ಲಿ ರೋಬೋಗಳು ಬ್ಯಾಟರಿ ಡೌನಾಗಿ ತಾನಾಗೆ ಕುಸಿದಂತೆ ಶರತ್ ಕುಸಿದ. ಅವಳು ಹಂಗೇ, ಹಿಂದೆ ಮುಂದೆ ನೋಡದೇ ಅಂದುಬಿಡ್ತಿದ್ದಳು. ಜ್ಯಾಮಿಟ್ರಿ ಬಾಕ್ಸ್‌ ಮುಚ್ಚಳವನ್ನು ಹಲ್ಲುಗಳನ್ನೆಟ್ಟಿ ತೆಗೆಯುತ್ತಿದ್ದಳು. ಅಸೆಂಬ್ಲಿನಲ್ಲಿ ಆಕಳಿಸುವಾಗ ತುಟಿ ಹರಿಯುವಷ್ಟು ಅಗಲ ಬಾಯಿ ತೆರೆಯುತ್ತಿದ್ದಳು. ಕಿರುನಾಲಗೆಯಿಂದ ಎಂಜಲನ್ನು ಮೋಟಾರಿನಂತೆ ಹಾರಿಸುತ್ತಿದ್ದಳು. ಇಡೀ ಕ್ಲಾಸಿಗೆ ರಾಣಿ, ರೌಡಿ ಎರಡೂ ಆಗಿದ್ದಳು. ಶರತ್‌ಗೆ ಆಳದಲ್ಲಿ ಅವಳೆಂದರೆ ಭಯ. ತಾನು ಸುಮ್ಮನಿದ್ದರೂ ಆಗಿತ್ತು; ಇಂಥಾ ಬಜಾರ್‌ಗಿತ್ತಿಯನ್ನು ಕೆಣಕಿ ʼಕಳ್ಳʼ ಅನ್ನಿಸ್ಕೊಳಂಗಾಯ್ತಲ್ಲ ಎಂದು ಕೈಹಿಸುಕಿಕೊಂಡ.
ಮಧು ವೈ.ಎನ್.‌ ಹೊಸ ಕಾದಂಬರಿ “ಇಂತಿ, ಪೂರ್ವಿ”ಯ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ