Advertisement

Category: ಪುಸ್ತಕ ಸಂಪಿಗೆ

“ನಿಯುಕ್ತಿ ಪುರಾಣ”…: ದೀಪಾ ಫಡ್ಕೆ ಬರಹ

`ನಿಯುಕ್ತಿ ಪುರಾಣ’ದ ಕೃತಿಕಾರ ಮೈಸೂರು ಒಡೆಯರ ಚರಿತ್ರೆಯ ಕೆಲವು ಅಂಗಗಳನ್ನು ಅಥವಾ ಮುಖ್ಯ ಅಂಶಗಳನ್ನು ಇಟ್ಟುಕೊಂಡು ಅದಕ್ಕೆ ಕಲ್ಪನೆಯಿಂದ ರಕ್ತಮಾಂಸವನ್ನು ತುಂಬಿದ್ದಾರೆ. ಹದಿನೈದು, ಹದಿನಾರು ಮತ್ತು ಹದಿನೇಳನೇ ಶತಮಾನದ ಮಹಿಷೂರಿನ ನಾಲ್ವಡಿ ಚಾಮರಾಜ ಒಡೆಯರು, ಐಮಡಿ ಚಾಮರಾಜ ಒಡೆಯರು ಮತ್ತು ರಾಜ ಒಡೆಯರ ಬದುಕನ್ನು ಬೋಳೊಡೆಯ, ಬೆಟ್ಟದೊಡೆಯ ಮತ್ತು ಮುನ್ನೊಡೆಯ ಎನ್ನುವ ಆಡು ಹೆಸರುಗಳನ್ನು ನೀಡಿ ಅವರ ಮೂಲಕ ಪುರಾಣವನ್ನು ಪೌರಾಣಿಕ, ಕಾಲ್ಪನಿಕ, ಜಾನಪದ ಮತ್ತು ಐತಿಹಾಸಿಕ ನೆಲೆಗಳಲ್ಲಿ ಪೋಣಿಸಿ ಕಥನವಾಗಿಸಿದ್ದಾರೆ.
ನಾಗರಾಜ ವಸ್ತಾರೆ ಕಾದಂಬರಿ “ನಿಯುಕ್ತಿ ಪುರಾಣ”ದ ಕುರಿತು ದೀಪಾ ಫಡ್ಕೆ ಬರಹ

Read More

ಎಗ್‌ ರೈಸ್‌ ತಿಂತೀರಿ ಸರ್ರ…?: ಗುರುಪ್ರಸಾದ ಕುರ್ತಕೋಟಿ ಕೃತಿಯ ಬರಹ

ಬಹುಶಃ ನಾನೂ ಯುವಕನಾಗಿದ್ದಾಗ ಅವನಂತೆಯೇ ಯೋಚಿದ್ದೆನೆ? ಇಲ್ಲವಲ್ಲ! ಎಲ್ಲರೂ ನಮ್ಮ ಹಾಗೆಯೇ ಯೋಚಿಸಬೇಕು ಅಂತಿಲ್ಲವಲ್ಲ! ನಾವೇನಾದರೂ ಪಟ್ಟಣದಲ್ಲಿ ಸುಖ ಇಲ್ಲ ಮಾರಾಯ ಅಂತ ಹೇಳಿದರೆ ಅಲ್ಲಿನವರು “ನಿಮ್ಮ ಹತ್ರ ರೊಕ್ಕ ಜಾಸ್ತಿ ಆಗಿ ಕೊಳಿತೈತಿ ಬಿಡ್ರಿ. ಅದಕ್ಕ ಹಿಂಗ ಮಾತಾಡತೀರಿ” ಅಂತ ಗೊಳ್ಳ ಅಂತ ನಗುತ್ತಾರೆ!
ಕೆಂಡಸಂಪಿಗೆಯಲ್ಲಿ ಪ್ರಕಟವಾದ ಗುರುಪ್ರಸಾದ ಕುರ್ತಕೋಟಿಯವರ ಅಂಕಣ ಬರಹ “ಗ್ರಾಮ ಡ್ರಾಮಾಯಣ” ಇದೀಗ ಪುಸ್ತಕ ರೂಪದಲ್ಲಿ ಅಚ್ಚಾಗುತ್ತಿದ್ದು, ಆಗಸ್ಟ್‌ ಕೊನೆಗೆ ಓದುಗರ ಕೈ ಸೇರಲಿದೆ. ಅದರ ಒಂದು ಬರಹ ನಿಮ್ಮ ಓದಿಗೆ

Read More

ಯಾವ ಭಾಷೆಯಲ್ಲೂ “ಎಲ್ಲವೂ” ಇರುವುದಿಲ್ಲ: ಡಾ. ಎಚ್.ಎಸ್.‌ ಸತ್ಯನಾರಾಯಣ ಬರಹ

“ನೀನು ಇಂಗ್ಲಿಷನ್ನು ಕನ್ನಡ ಭಾಷೆಯ ಅಕ್ಷರ ಸಂಯೋಜನೆ ಜೊತೆ ಹೋಲಿಸಿ ಬರೆಯಬೇಡ. ನೀನು ಇಂಗ್ಲಿಷನ್ನು ಚೆನ್ನಾಗಿ ಕಲಿಯಬೇಕಾಗಿರುವುದು ನಿನ್ನ ಅಗತ್ಯಕ್ಕಾಗೇ ಹೊರತು ಇಂಗ್ಲಿಷಿನವರ ಅಗತ್ಯಕ್ಕಾಗಿ ಅಲ್ಲ. ನಿನಗೆ ಅದರಲ್ಲಿರುವ ಪ್ರಪಂಚದ ಜ್ಞಾನವೆಲ್ಲಾ ಬೇಕಾದರೆ ಈ ಸಬೂಬುಗಳನ್ನೆಲ್ಲಾ ಬಿಟ್ಟು ಕಷ್ಟಪಟ್ಟು ಕಲಿ‌ ಅದು ಬಿಟ್ಟು ಕನ್ನಡದಲ್ಲೇ ಎಲ್ಲಾ ಇದೆ ಎಂದು ತಿಳಿದು ಕೂಪಮಂಡೂಕ ಆಗಬೇಡ.”
ಡಾ. ಎಚ್.ಎಸ್.‌ ಸತ್ಯನಾರಾಯಣ ಅವರ “ತೇಜಸ್ವಿ ಪ್ರಸಂಗಗಳು” ಕೃತಿಯ ಕೆಲವು ಪ್ರಸಂಗಗಳು ನಿಮ್ಮ ಓದಿಗೆ

Read More

ಕತ್ತಿಯಲಗಿನ ಮೇಲಿನ ನಡಿಗೆ ಒಂಟಿ ನಡಿಗೆ: ಲಲಿತಾ ಪವಾರ ಕಾದಂಬರಿಯ ಪುಟಗಳು

ಕಮಲಮ್ಮನವರಿಗೆ ಕಸಿವಿಸಿಯಾಯಿತು. ತನ್ನ ಮಗಳ ಸೌಂದರ್ಯದ ಬಗ್ಗೆ ಇಡೀ ಕಾಲೇಜು, ನಮ್ ಏರಿಯಾದವರು ಮಾತನಾಡುತ್ತಾರೆಂದರೆ ನಮ್ಮ ಮನೆಯ ಮೇಲೆ ಅವರ ಕಣ್ಣು ಬಿದ್ದಿದೆ ಎಂದೇ ಅರ್ಥ. ನಾನಂತು ಕೆಲಸಕ್ಕೆ ಹೋಗಿ ಬಿಡುತ್ತೇನೆ, ಇವನು ಹೊರಗೆ ಹೊರಟರೆ ಮನೆಯಲ್ಲಿ ಕಾವ್ಯ ಒಬ್ಬಳೇ ಉಳಿದು ಬಿಡುತ್ತಾಳೆ. ಇಂದು ಸಂಜೆ ಮಹಡಿ ಮೇಲಿದ್ದಾಗ ಎದುರುಗಡೆ ಮನೆಯ ಹುಡುಗ ಇಣುಕಿಣುಕಿ ತನ್ನ ಮನೆಯನ್ನು ದೃಷ್ಟಿಸುತ್ತಿದ್ದುದು ಕಂಡು ಬಂದಿತ್ತು.
ಲಲಿತಾ ಪವಾರ ಹೊಸ ಕಾದಂಬರಿ “ಒಂಟಿ ನಡಿಗೆ”ಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ನಿಜವಾದ ಸೋದರಮಾವ: ಕೆ. ಸತ್ಯನಾರಾಯಣ ಕೃತಿಯ ಬರಹ

ಬೆಂಗಳೂರಿನಿಂದ ಗೌಹಾತಿಗೆ ಹೊರಟಿದ್ದ ರೈಲಿನಲ್ಲಿ ಒಬ್ಬ ಕನ್ನಡಿಗ ಪ್ರಯಾಣಿಕರ ಪರಿಚಯವಾಯಿತು. ಸದ್ಯದಲ್ಲೇ ಅವರು ನಿವೃತ್ತರಾಗಲಿದ್ದರು. ಬೆಂಗಳೂರಿಗೆ ಬಂದು ಬಂಧು-ಮಿತ್ರರ ಜೊತೆ ಬದುಕುತ್ತಾರೆ ಎಂಬುದು ನನ್ನ ನಿರೀಕ್ಷೆ. ಆದರೆ ಅವರು ಬೆಂಗಳೂರಿನಲ್ಲಿದ್ದ ಆಸ್ತಿಯನ್ನೆಲ್ಲ ಮಾರಿ, ಗೌಹಾತಿಯಲ್ಲೇ ಖಾಯಂ ಆಗಿ ನೆಲೆಸಲು ಹೊರಟಿದ್ದರು. ಈಗ ನಾವು ಅಲ್ಲಿ ಜೀವನ ಲಯಕ್ಕೆ ಹೊಂದುಕೊಂಡುಬಿಟ್ಟಿದ್ದೇವೆ. ನಮ್ಮ ತಂದೆ-ತಾಯಿ ಇಬ್ಬರೂ ಖಾಯಿಲೆ ಬಿದ್ದಾಗ ನಮಗಾಗಿ ಬಂದವರು ನೆಂಟರಿಷ್ಟರಲ್ಲ, ನಮ್ಮ ಕಾಲೊನಿಯ ಅಸ್ಸಾಮಿ ಬಂಧುಗಳು. ಅವರಿಗೆ ಕೃತಜ್ಞತೆ ಸಲ್ಲಿಸುವುದೆಂದರೆ, ಅವರೊಡನೆಯೇ ಮುಂದೆ ಬದುಕುವುದು ಎಂದುಬಿಟ್ಟರು.
ಕತೆಗಾರ ಕೆ. ಸತ್ಯನಾರಾಯಣ ಅವರ “ನನ್ನ ಪುಸ್ತಕಗಳ ಆತ್ಮಚರಿತ್ರೆ” ಕೃತಿಯ ಒಂದು ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ