Advertisement

Category: ಪುಸ್ತಕ ಸಂಪಿಗೆ

ನಮ್ಮದೇ ಎನ್ನಿಸುವ ಕತೆಗಳು…

ವಿಹಾರ’ಕ್ಕಿಂತ ‘ಹದ್ದು ಹಾರುವ ಹೊತ್ತು’ ಇನ್ನೂ ವಿಸ್ತಾರವಾದ ಕ್ಯಾನ್ವಾಸ್ ಹೊಂದಿರುವ ಕತೆ. ಊರಿಗೆ ಹೊಸತಾಗಿ ಬಂದು ಹೊರವಲಯದಲ್ಲಿ ಬಾಡಿಗೆ ಮನೆ ಮಾಡಿರುವ ಈ ಕತೆಯ ನಿರೂಪಕನು ಬಡಾವಣೆಯ ಪರಿಸರವನ್ನು ತಿಳಿದುಕೊಳ್ಳುವ ಹವಣಿಕೆಯಲ್ಲಿ ಕೇಳಿಸಿಕೊಂಡಿದ್ದೆಲ್ಲ ಕತೆಯ ಪ್ರಥಮಾರ್ಧವಾದರೆ ಉತ್ತರಾರ್ಧದ ಘಟನೆಗಳಿಗೆ ಆತ ಸಾಕ್ಷಿಯಾಗುತ್ತಾನೆ. ಹೀಗೆ ಹೊರಗಿನವನಾದ, ಆದರೆ ಒಂದು ಮಟ್ಟದಲ್ಲಿ ಭಾಗಿಯೂ ಆಗಿರುವ ನಿರೂಪಕನಿಗೆ ಎಲ್ಲಾ ಪಾತ್ರ ಮತ್ತು ಘಟನೆಗಳನ್ನು ಸನಿಹದಿಂದ, ಆದರೆ ವಸ್ತುನಿಷ್ಠವಾಗಿ, ನಿರೀಕ್ಷಿಸುವ ಅನುಕೂಲತೆ ಇದೆ.
ಎ.ಎನ್. ಪ್ರಸನ್ನ ಕಥಾ ಸಂಕಲನ “ದಾಸವಾಳ”ಕ್ಕೆ ಎಂ. ಜಿ. ಹೆಗಡೆ ಬರೆದ ಮುನ್ನುಡಿ

Read More

ವಿಜ್ಞಾನದೊಂದಿಗೆ ಅಧ್ಯಾತ್ಮವೂ ಮಿಳಿತವಾಗುವ ಹೊತ್ತು…

ಕ್ಯಾನ್ಸರ್ ಸುʼನ ದೇಹವನ್ನು ತಿಂದುಹಾಕುವಾಗ ಬಹಳಷ್ಟು ಕೃಶನಾಗುವುದಲ್ಲದೇ ಅಂತಹ ತೀವ್ರ ಗಂಭೀರ ಸ್ಥಿತಿಯಲ್ಲೂ ಸಹಾ “ತಾನು ಯಾರು? ಇಲ್ಲಿ ಯಾಕಿದ್ದೇನೆ?” ಎಂಬ ಆತ್ಮವಿಮರ್ಶೆಗೆ ತೊಡಗಿಕೊಂಡು ಕೊನೆಗೆ ತಾನು ಇಡೀ ವಿಶ್ವಕ್ಕೆ ಸೇರಿದವ, ಬ್ರಹ್ಮಾಂಡದ ಅವಿಭಾಜ್ಯ ಅಂಗ. ಬ್ರಹ್ಮಾಂಡವನ್ನು ನಿಯಂತ್ರಿಸುವ ಶಕ್ತಿಯೇ ನನ್ನನ್ನೂ ನಿಯಂತ್ರಿಸುತ್ತಿದೆ ಎಂಬಂತಹ ಆಲೋಚನೆಗಳು ಉಪನಿಷತ್ತಿನಲ್ಲಿ ಬರುವ “ಯಾವ ಒಂದೇ ದಾರದ ಎಳೆಗಳಿಂದ ಬಟ್ಟೆಗಳು ತಯಾರಾಗುತ್ತದೋ ಅದೇ ತರಹ ಒಂದೇ ಶಕ್ತಿ ಇಡೀ ಸೃಷ್ಟಿಯ ಚರಾಚರದಲ್ಲೂ ಇದೆ” ಎಂಬಂತಹ ಬೌದ್ಧಿಕ ಸ್ತರದಲ್ಲಿ ತನ್ನಾತ್ಮವನ್ನು ವಿಶ್ವಾತ್ಮದೊಂದಿಗೆ ಬೆಸೆದುಕೊಳ್ಳುವ ಚಿಂತನೆಗಳು ಅವನನ್ನು ದಾರ್ಶನಿಕನೆನಿಸುತ್ತದೆ.
ಡಾ. ಪ್ರಸನ್ನ ಸಂತೇಕಡೂರು ಕಾದಂಬರಿ “ಸು” ಕುರಿತು ಕೆ.ಎನ್. ಲಾವಣ್ಯ ಪ್ರಭಾ ಬರಹ

Read More

ನಡು ಮಧ್ಯಾಹ್ನದ ಕಣ್ಣಿನ ಹೊಳಪು…

ಸ್ತ್ರೀ ಬದುಕಿನ ಅಗಾಧತೆ ಮತ್ತು ಸ್ತ್ರೀಯ ಇತಿಮಿತಿಯೊಳಗಿನ ಬದುಕು ಅನಾವರಣಗೊಳ್ಳುವ ಕವಿತೆಗಳಾದ ಹೂವಿಡುವಷ್ಟೆ ನಿಧಾನವಾಗಿ, ನಾವು ಸ್ವಲ್ಪ ಹೀಗೆ, ಆಸೀಫಾ, ಅವಳು, ಅಡುಗೆಯಾಟದ ಹುಡುಗಿ ಮುಂತಾದ ಕವಿತೆಗಳು ಮಹಿಳೆಯ ಅಂತರಂಗವನ್ನು ಬಿಂಬಿಸುತ್ತವೆ. ಕವಯತ್ರಿ ಆಶಾ ಅಭಿಮಾನದಿಂದ ಅಭಿವ್ಯಕ್ತಿ ಪಡಿಸಿದ ಸ್ತ್ರೀಯ ಬಗೆಗಿನ ಈ ಸಾಲು ಪ್ರತಿ ಹೆಂಗಳೆಯರ ಹೆಮ್ಮೆ. “ಹೋಗಲಿ ಬಿಡಿ ನೀವವಳನ್ನು ಆಪಾದ ಮಸ್ತಕವೇ/ ನೋಡಿದುದು ಸರಿಯೇ ಏಕೆಂದರೆ/ ದೇವತೆಯನ್ನು ಹಾಗೆಯೇ ನೋಡಬೇಕಂತೆ”
ಆಶಾ ಜಗದೀಶ್‌ ಕವನ ಸಂಕಲನ “ನಡು ಮಧ್ಯಾಹ್ನದ ಕಣ್ಣು” ಕುರಿತು ಸಂಗೀತ ರವಿರಾಜ್‌ ಚೆಂಬು ಬರಹ

Read More

ಎಲ್ಲ ಆಯಾಮಗಳಲ್ಲೂ ಸಮೃದ್ಧವಾದ “ಎತ್ತರ”

ಇವರೆಲ್ಲರೂ ಹಳೆಕಾಲದ ಟ್ರಂಕಿನೊಳಗೆ ಘಾತುಕ ರಹಸ್ಯವನ್ನು ತಣ್ಣಗೆ ಮಡಚಿಡಬಲ್ಲರು. ಹಾಗೆಯೇ ಮಡಿಲಿನಲ್ಲಿ ಮಲಗಿರುವ ಬೆಕ್ಕಿನ ಮರಿಯನ್ನು ಅತಿ ಅನೌಪಚಾರಿಕವಾಗಿ ಕೆಳಗಿಳಿಸುವಂತೆ ಗುಟ್ಟು ಬಿಟ್ಟುಕೊಡಬಲ್ಲವರು. ರಾಜಕಿಶೋರ, ಸರಳ, ಸುಗುಣೇಶ, ಮಾಧವ ಎಂಬ ಚುಕ್ಕಿಪಾತ್ರಗಳೆಲ್ಲ ಇವನನ್ನು ಸುಳಿಯ ಇನ್ನಷ್ಟು ಒಳಗೆ ಸೆಳೆಯಬಲ್ಲವರು. ಇವರೆಲ್ಲರಿಂದ ಸುತ್ತುವರೆದಿರುವ ಕಥಾನಾಯಕನಿಗೆ ಸಾವಯವ ಸಂಬಂಧದ ತಾದ್ಯಾತ್ಮ ಸಾಧ್ಯವಾಗುವುದು ‘ಒಂದು ಸುತ್ತು ಕಡಿಮೆ’ ಇರುವ ವಿಮಲಾಳೊಂದಿಗೆ. ನಾಣ್ಯ ಅವರ ನಡುವಿನ ಸಂವಾದದ ಭಾಷೆ.
ಇಂದ್ರಕುಮಾರ್ ಎಚ್.ಬಿ. ಯವರ “ಎತ್ತರ” ಕಾದಂಬರಿಯ ಕುರಿತು ಮಮತಾ ಆರ್. ಬರಹ

Read More

ಹೆಣ್ತನದ ಒಳಬೇಗುದಿಯನ್ನು ಬಿಂಬಿಸುವ ಪುಟ್ಟಮ್ಮಯ್ಯ

ಬಾಲಕಿಯಾಗಿ ಏನೊಂದನ್ನೂ ಅರಿಯುವ ಮುನ್ನವೇ ಚಿಕ್ಕಾವಲ್ಲಪ್ಪನನ್ನು ಮದುವೆಯಾಗಿ ಸ್ವಂತ ಅತ್ತೆಯ ಮನೆಗೆ ಬರುವ ಪುಟ್ಟಮ್ಮ ಮನೆ ಹಾಗೂ ಹೊಲದ ಕೆಲಸಗಳ ಜವಾಬ್ದಾರಿಯನ್ನು ನಿರ್ವಹಿಸುತ್ತ ಮುಂದೆ ಕನ್ಯೆಯಾಗಿಯೂ ಗಂಡನೊಂದಿಗೆ ಸೇರಲು ಅವಕಾಶವಿರದೆ ವಯೋಸಹಜ ಕಾಮನೆಗಳನ್ನು ಹತ್ತಿಕ್ಕಿಕೊಂಡು ಸುಮಾರು ಎರೆಡು ದಶಕಗಳ ಕಾಲ ಬಂಜೆ ಎಂಬ ಹಣೆಪಟ್ಟಿ ಹೊತ್ತು ಮುಂದೊಮ್ಮೆ ತಾಯಿಯಾಗುವುದು, ಕೆಳಜಾತಿಯ ಕೆಲಸಗಾರರೊಂದಿಗೆ ಸಲುಗೆಯಿಂದ ಬೆರೆತು ಅಂದಿನ ಆಚರಣೆಯಾದ ವರ್ಣಸಂಘರ್ಷವನ್ನು ನೈತಿಕವಾಗಿ ವಿರೋಧಿಸುವುದು. ಜವಾಬ್ದಾರಿಯುತ ಸೋದರಿಯಾಗಿ ತಮ್ಮನನ್ನು ವಿದ್ಯಾವಂತನನ್ನಾಗಿ ಮಾಡುವುದು.
ಪ್ರೊ. ಕಟಾವೀರನಹಳ್ಳಿ ನಾಗರಾಜು ಬರೆದ ಕಾದಂಬರಿ “ಪುಟ್ಟಮ್ಮಯ್ಯ” ಕುರಿತು ಪ.ನಾ. ಹಳ್ಳಿ ಹರೀಶ್‌ ಕುಮಾರ್‌ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ