Advertisement

Category: ಪುಸ್ತಕ ಸಂಪಿಗೆ

ಬದುಕೆಂದರೆ ಹೀಗೇನೆ….

ಮನೆ ಭಾಗವಾದಾಗ ಮಧ್ಯಕ್ಕೆ ಪೂರ್ತಿ ಗೋಡೆ ಕಟ್ಟದೆ ಅಟ್ಟದವರೆಗೆ ಮಾತ್ರ ಕಟ್ಟಿದ್ದರಿಂದ‌ ಅಟ್ಟ ಎಲ್ಲರಿಗೂ ಒಂದೆ ಇತ್ತು ಹಾಗಾಗಿ ಪಕ್ಕದ ಮನೆಯಲ್ಲಿ ಮಾತಾಡುವುದೆಲ್ಲ ಪಕ್ಕದಲ್ಲೆ ಮಾತಾಡಿದಷ್ಟು ಸ್ಪಷ್ಟವಾಗೆ ಕೇಳುತ್ತಿತ್ತು. ಸಾವಿ ನಿದ್ದೆ ಬಾರದೆ ಗಂಡನನ್ನು ಹೇಗಾದರು ಮಾಡಿ ಸೂಳೆ ಸಹವಾಸ ಬಿಡಿಸಿ ನನ್ನ ಕಡೆ ಸೆಳೆಯಬೇಕೆಂದು ಯೋಚಿಸುತ್ತಿದ್ದಳು. ಪಕ್ಕದ ಮನೆಯಲ್ಲಿ ಮಾವ ಅಕ್ಕಂದಿರು ತನ್ನ ಗಂಡನ ಬಗ್ಗೆ ಪಿಸುಗುಡುವುದು ಗೊತ್ತಾಗುತಿತ್ತು. ಸಾವಿತ್ರಿ ತನಗರಿವಿಲ್ಲದೆ ಶೋಕಿಸುತ್ತ ಮಗಳು ಕನಕಳನ್ನು ತಬ್ಬಿ ಕಣ್ಣು ಮಿಟುಕಿಸಿದಾಗ ಕಣ್ತುಂಬಿದ್ದ ಅಶ್ರು ದಳದಳನೆ ಇಳಿದು ಎಣ್ಣೆ ಜಿಡ್ಡು ಮೆತ್ತಿ ಕೊಳಕಾಗಿದ್ದ ತಲೆದಿಂಬು ಸಹ ಅದನ್ನು ಹೀರದೆ ಕೆಳಕ್ಕೆ ಹರಿದವು.
ನಗೋಲತೆ ಬರೆದ “ಬೆದ್ಲು ಬದ್ಕು” ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಸಿಕಾಡ- ಕೀಟಲೋಕದ ಸಂಗೀತಸಾಮ್ರಾಟ

ಸಾಮಾನ್ಯವಾಗಿ ಹಾಡುವುದು ಗಂಡು ಸಿಕಾಡಗಳೇ; ಇವು ಹಲವಾರು ಹೆಣ್ಣು ಸಿಕಾಡಗಳ ಮಧ್ಯೆ ಒಂದು ಹೆಣ್ಣು ಸಿಕಾಡವನ್ನು ಆರಿಸಿ, ಅದಕ್ಕೆ ಸಂಗಾತಿಯಾಗೆಂದು ಆಹ್ವಾನವೀಯುವಾಗ ಹಾಡುವ ಹಾಡೇ ಬೇರೆ; ಆ ಹೆಣ್ಣುಸಿಕಾಡವು ಈ ಆಹ್ವಾನವನ್ನು ಒಪ್ಪಿ ಬಳಿಬಂದರೆ ಆಗ ಗಂಡು ಸಿಕಾಡವು ಹಾಡುವ ಹಾಡೇ ಬೇರೆ, ಅಕಸ್ಮಾತ್ ಆ ಆಹ್ವಾನ ತಿರಸ್ಕೃತಗೊಂಡರೆ ಮತ್ತೊಂದು ಶೋಕರಾಗವನ್ನು ಹೊರಡಿಸುತ್ತದೆ ಗಂಡು ಸಿಕಾಡ.
ಕ್ಷಮಾ ವಿ. ಭಾನುಪ್ರಕಾಶ್‌ ಬರೆದ ವಿಜ್ಞಾನ ಲೇಖನಗಳ ಸಂಕಲನ “ಜೀವಿವಿಜ್ಞಾನ”ದಿಂದ ಆಯ್ದ ಲೇಖನ ನಿಮ್ಮ ಓದಿಗೆ

Read More

ಆ ಹೂವಿನಿಂದಲೆ ಇಷ್ಟೆಲ್ಲ ಆಯಿತು ಅನ್ನಬಹುದೆ. ಗೊತ್ತಿಲ್ಲ!

ಕೆಂಪುಹುಡಿಮಣ್ಣಿನ ಮೂರು ಸುತ್ತು ಎಡಕ್ಕೆ ಹೊರಳುವ ನಾಲ್ಕು ಸುತ್ತು ಬಲಕ್ಕೆ ಹೊರಳುವ ದಾರಿ ಮುಗಿಯಿತು. ಈಗ ಕಪ್ಪುಮಣ್ಣಿನ ಬೇರೆ ತರಹದ ಮರಗಳ ದಟ್ಟಕಾಡುದಾರಿ. ಕಾಲಿಗೋ ಪುಳಕ! ದಾರಿ ಹೊರಳಿದಂತೆ ಹೊರಳುತ್ತಾ ನಡೆದೆ. ಸಣ್ಣ ಸಣ್ಣ ತಿರುವುಗಳು. ಎಡಬಲ ಎದೆಮಟ್ಟದ ಪೊದೆಗಳು. ಸಣ್ಣಸಣ್ಣ ಕಾಡುಹೂಗಳು, ಸಣ್ಣಸಣ್ಣ ಕಾಡುಹಣ್ಣುಗಳು. ಹಾವಿನಂತೆ ಸುರುಳಿಸುರುಳಿ ಸುತ್ತಿಕೊಂಡು ಮರವನ್ನೇ ಬಗ್ಗಿಸಿದಂತೆ ಮೇಲಿಂದ ತೇಲಾಡುವ ಬಳ್ಳಿಗಳು. ದಪ್ಪನೆಯ ಕಾಂಡದ ಮರಗಳ ಮೇಲೆ ಬೇರೆ ತರಹದ ಸಣ್ಣಸಣ್ಣ ಎಲೆಯ ಸಸ್ಯಗಳು. ಜೀವವೈವಿಧ್ಯದ ಸ್ಪಷ್ಟ ಮಾದರಿ.
ಇಂದ್ರಕುಮಾರ್ ಎಚ್.ಬಿ. ಹೊಸ ಕಾದಂಬರಿ “ಎತ್ತರ”ದ ಕೆಲ ಪುಟಗಳು ನಿಮ್ಮ ಓದಿಗೆ

Read More

ವಾಸ್ತವದ ಹಂದರವನ್ನು ತೆರೆದಿಡುವ ‘ನೋಟ್ ಬುಕ್’

ಶಿವಲಿಂಗಪ್ಪ ಹಂದಿಹಾಳು ಅವರು ಮಕ್ಕಳಿಗೆ ಅಗತ್ಯವಾದ ನೈತಿಕ ಮೌಲ್ಯಗಳನ್ನು ನೇರವಾಗಿ ಹೇಳುವ ಗೋಜಿಗೆ ಹೋಗದೆ ಮಕ್ಕಳ ಮೂಲಕವೇ ನಿರೂಪಿಸುವ ಹೊಸತನವನ್ನು ಮಾಡಿರುತ್ತಾರೆ. ಇಲ್ಲಿನ ‘ಐಸ್ ಕ್ರೀಮ್’ ಕಥೆಯು ಬಡ ವಿದ್ಯಾರ್ಥಿಯೊಬ್ಬನ ಐಸ್ ಕ್ರೀಮ್ ಬಗೆಗಿನ ಚಪಲ ಅವನನ್ನು ತನ್ನ ಮನೆಯ ಬಡತನವನ್ನು ಮೀರಿ ಖಾಸಗಿ ಶಾಲೆಯೊಂದಕ್ಕೆ ದಾಖಲಾಗಿ ಕೊನೆಗೆ ಅಲ್ಲಿನ ಆರ್ಥಿಕ ಒತ್ತಡ ಸಹಿಸಲಾರದೆ ಪುನಃ ತನ್ನೂರಿನ ಸರ್ಕಾರಿ ಶಾಲೆಗೆ ಸೇರುವ ಕಥಾ ಹಂದರವನ್ನು ಹೊಂದಿದ್ದು, ಅಗತ್ಯವಿದ್ದಷ್ಟೇ ಆಸೆಪಡು ಎಂಬುದನ್ನು ಸೂಚ್ಯವಾಗಿ ಹೇಳುತ್ತದೆ.
ಡಾ.ಶಿವಲಿಂಗಪ್ಪ ಹಂದಿಹಾಳು ಅವರ ಮಕ್ಕಳ ಕಥಾ ಸಂಕಲನ “ನೋಟ್‌ಬುಕ್‌” ಕುರಿತು ಪ.ನಾ. ಹಳ್ಳಿ ಹರೀಶ್‌ ಕುಮಾರ್‌ ಬರಹ

Read More

ಹಿಂದಣ ಕಾಲಕ್ಕೆ ಎಳೆದೊಯ್ಯುವ ‘ಕಥಾಗತ’

ಕಥಾಗತವನ್ನು ಓದುತ್ತಾ ಹೋದಂತೆ ಇಂದಿನ ಕಾಲಮಾನದಿಂದ ಕೊಂಡೊಯ್ಯುವ ಕಲೆ ಡಾ. ನವೀನ್ ಅವರು ಸಿದ್ಧಿಸಿಕೊಂಡದ್ದು ವೇದ್ಯವಾ ಆಶ್ಚರ್ಯವಾಗುತ್ತದೆ. ಜೊತೆಗೆ ತಮಿಳಿನ ಕುರಿತಾದ ಭಾವನೆ ಸ್ಪುಟವಾಗುವುದು ಮಧ್ಯದಲ್ಲಿ, ಮಹಾಬಲಿಪುರವನ್ನು ಚಾಳುಕ್ಯರ ಶಿಲ್ಪಕ್ಕೆ ತಂದು ನಿಲ್ಲಿಸುವ ತುಲನೆಯ ಜೊತೆಗೆ ಒಂದು ವಿಷಾದ ಹೊರಹೊಮ್ಮುತ್ತದೆ. ಸುನಾಮಿಯ ಹೊಡೆತಕ್ಕೆ ಮುಲು ಇದು ಸಿಗಲಾರದೇನೋ ಎನ್ನುವ ಭಾವನೆ ಕೆದಕುತ್ತದೆ. ಮಗಧ ಮಹಾಜನಪದ ಇರಬಹುದು ನಾಲಂದಾ ಇರಬಹುದು, ಇವರ ಬರಹದಲ್ಲಿ ಕಾಡಿ ಕೆದಕುತ್ತದೆ.
ನವೀನ ಗಂಗೋತ್ರಿ ಕಥಾಸಂಕಲನ “ಕಥಾಗತ”ಕ್ಕೆ ಸದ್ಯೋಜಾತ ಭಟ್ಟ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ