Advertisement

Category: ಪುಸ್ತಕ ಸಂಪಿಗೆ

ಗಾಂಧೀಜಿ ಬದುಕಿನ ಹರಿವುಗಳ ಒಳಾರ್ಥವನ್ನು ತೆರೆದಿಟ್ಟ ಕೃತಿ

ಗಾಂಧೀಜಿಯವರ ಕುರಿತು ಆಕ್ಷೇಪಗಳು ಬಂದಾಗ ಇದರಲ್ಲಿ ಅವರ ನಡೆ ಆ ಕಾಲದಲ್ಲಿ ಎಷ್ಟು ಸೂಕ್ತವಾಗಿತ್ತು ಎನ್ನುವದನ್ನು ಇಲ್ಲಿ ವಿವರಿಸಲಾಗಿದೆ. ಖಿಲಾಪತ್ ಚಳುವಳಿಯನ್ನು ಗಾಂಧಿ ಸಂಪೂರ್ಣವಾಗಿ ಒಪ್ಪಿಲ್ಲ; ಆದರೆ ಆ ಧರ್ಮದ ಬಗೆಗೆ ಅವರಿಗಿರುವ ಆಳ ದೃಷ್ಟಿಕೋನದಿಂದ ಮುಸಲ್ಮಾನರ ಭಾವನೆಗಳನ್ನು ಗಾಂಧಿ ಅರ್ಥಮಾಡಿಕೊಂಡಿದ್ದರು ಎನ್ನುತ್ತಾರೆ. ಹಾಗೇ ನೋಡಿದರೆ ಖಿಲಾಪತ್ ಚಳುವಳಿಯನ್ನು ಗಾಂಧಿ ಬೆಂಬಲಿಸಿದ ಕಾರಣದಿಂದಲೇ ಗಾಂಧಿ ರಾಷ್ಟ್ರೀಯ ನಾಯಕರಾಗಿ ಹೊಮ್ಮಿದ್ದು ಮತ್ತು 1920ರ ನಾಗಪುರ ಅಧಿವೇಶನದ ನಂತರ ತೀವ್ರವಾದಿಗಳನ್ನು ಬದಿಗೆ ಸರಿಸಿ ಅನಭಿಷಕ್ತ ನಾಯಕರಾಗಿರುವುದು.
ರಾಮಚಂದ್ರ ಹಬ್ಬು ಅನುವಾದಿಸಿರುವ “ಮಹಾತ್ಮ ಗಾಂಧಿ ಜೀವನ ಚರಿತೆ” ಕೃತಿಯ ಕುರಿತು ನಾರಾಯಣ ಯಾಜಿ ವಿಶ್ಲೇಷಣೆ

Read More

ಹೃದಯದ ಕಲ್ಲು ಮತ್ತು ನದಿಯೊಂದು ನಿದ್ರಿಸಿದಾಗ

ನಿದ್ರಿಸುವ ನದಿಯೆಡೆಗೆ ಹೋಗುವವರ ಎದೆಯಲ್ಲಿ ಎಳ್ಳಷ್ಟೂ ಭಯ ಇರಬಾರದು. ಅಕಸ್ಮಾತ್ ನಿನ್ನ ಮನಸ್ಸಿನಲ್ಲಿ ಒಂದೇ ಒಂದು ಕ್ಷಣ ಭಯ ಹೊಕ್ಕರೆ ನೀನು ಸತ್ತಂತೆ ಸರಿ, ನಿನ್ನ ಆತ್ಮಕ್ಕೆ ಅವುಗಳನ್ನು ಎದುರಿಸಲು ಆಗುವುದಿಲ್ಲ. ನೀನು ಪಾಪದ ಕೆಲಸ ಮಾಡಿದ್ದರೆ ಆ ಆತ್ಮಗಳು ನಿನ್ನನ್ನು ಸುಲಭವಾಗಿ ಮುಗಿಸಿಬಿಡುತ್ತವೆ. ಭಯಾನಕ ಅಂತ್ಯ ನಿನ್ನದಾಗುತ್ತದೆ. ಶುದ್ಧ ಮನಸ್ಸು ಮತ್ತು ಒಳ್ಳೆಯ ಹೃದಯ ನಿನ್ನ ರಕ್ಷಣೆ, ನಿದ್ರಿಸುವ ನದಿಯೆಡೆಗೆ ಹೋಗುವಾಗ ಯಾರೊಡನೆಯೂ ದ್ವೇಷ ಹೊಂದಿರಬಾರದು. ಮನಸ್ಸಿನಲ್ಲಿ ಕೆಡುಕು, ದುಷ್ಟತನ ಇರಬಾರದು.
ರವಿಕುಮಾರ್ ಹಂಪಿ ಅನುವಾದಿತ “ನದಿಯೊಂದು ನಿದ್ರಿಸಿದಾಗ” ಕಾದಂಬರಿಯ ಕುರಿತು ಸುಮಿತ್‌ ಮೇತ್ರಿ ಬರಹ

Read More

ಕಂದಹಾರ್ ಏರ್‌ಬೇಸಿನ ಅಪಾಯಕಾರಿ ಉಪಕ್ಯಾಂಪುಗಳು

ಕಚೇರಿಗೆ ಬಂದಾಗ ಡಾಕ್ಟರ್ ಕಿರ್ಕಿಗೆ ಕರೆ ಬಂದು ಅಗತ್ಯ ವೈದ್ಯಕೀಯ ನೆರವಿಗಾಗಿ ಅವಘಡ ನಡೆದ ಜಾಗಕ್ಕೆ ಹೋದನೆಂದು ಗೊತ್ತಾಯ್ತು. ಇಂತಹ ಪ್ರಮುಖ ಅವಘಡಗಳಾದಾಗ ಕ್ಯಾಂಪಿನಲ್ಲಿನ ಇಂತಹ ಖಾಸಗಿ ವೈದ್ಯರನ್ನು ಘಟನೆಯ ಜಾಗಕ್ಕೆ ನೆರವಿಗಾಗಿ ಕರೆಸಲಾಗುತ್ತದೆ. ನಾನು ನೋಡಿದ ವಿವರಗಳನ್ನು ಆಂಟೋನಿಯೋ ಮತ್ತು ಅಲ್ಲಿದ್ದ ಇತರೆ ಆಲ್ಬೇನಿಯನ್ ಜನರಿಗೆ ವಿವರಿಸಿದೆ. ಎಲ್ಲರೂ ಆಘಾತಕ್ಕೊಳಗಾದಂತೆ ದೊಡ್ಡ ನಿಟ್ಟುಸಿರುಬಿಟ್ಟರು. ಆಂಟೋನಿಯೋ ಮಾತ್ರ ತುಂಬಾ ಕಂಗಾಲಾದವನಂತೆ ತಲೆಮೇಲೆ ಕೈಹೊತ್ತು ಏನೇನೋ ಮನಸ್ಸಿಗೆ ಬಂದಂತೆ ಅವನ ಭಾಷೆಯಲ್ಲಿ ಗೊಣಗಲು ಶುರುಮಾಡಿದ.
ಮಂಜುನಾಥ್‌ ಕುಣಿಗಲ್‌ ಬರೆದ “ಕುಣಿಗಲ್‌ ಟು ಕಂದಹಾರ್” ಕೃತಿಯಿಂದ ಆಯ್ದ ಲೇಖನ ನಿಮ್ಮ ಓದಿಗೆ

Read More

‘ಒಳ್ಳೆಯ ದೆವ್ವ’ ಕಾದಂಬರಿ: ಮಕ್ಕಳ ಮನಸ್ಸಿನ ವೈದ್ಯ

ಮಂಜುನಾಥ ಶಾಲೆಗೆ ಹೋಗುವಾಗ ದಿನಾಲೂ ಅವನ ತಾಯಿಯನ್ನು ತಬ್ಬಿ ಮುದ್ದಾಡುತ್ತಿದ್ದ. ಅಷ್ಟೊಂದು ಪ್ರೀತಿ ವಾತ್ಸಲ್ಯ ಇಬ್ಬರಲ್ಲೂ ತುಂಬಿತ್ತು. ‘ತಾಯಿ ವಾತ್ಸಲ್ಯ ಮತ್ತು ಮಗನ ಮಂದಹಾಸ ಇದಕ್ಕಿಂತ ಉತ್ತಮವಾಗಿರಲು ಸಾಧ್ಯವಿಲ್ಲ’ ಎನ್ನುವ ಶಿರ್ಷಿಕೆಯೊಂದಿಗೆ ಅದು ಪತ್ರಿಕೆಯ ಮುಖಪುಟದಲ್ಲಿ ಅಚ್ಚಾಗಿತ್ತು. ಅಷ್ಟೊಂದು ಅಮೋಘವಾದ ಪ್ರೀತಿ ಇವರದಾಗಿತ್ತು. ಅದನ್ನು ನೋಡಿ ಮಗ ಫೋಟೋದಂತೆ ಕಟ್ಟು ಹಾಕಿಸಲು ತಾಯಿಗೆ ಹೇಳಿದ. ಬಾಲ್ಯದ ಆ ಅಮೂಲ್ಯ ನೆನಪನ್ನು ಗೆಳೆಯರಾದ ಪಲ್ಲವಿ, ಪವನ, ಆಕಾಶ ನೆನಪಿಸಿಕೊಳ್ಳುತ್ತಾರೆ.
ಡಾ. ಬಸು ಬೇವಿನಗಿಡದ ಬರೆದ “ಒಳ್ಳೆಯ ದೆವ್ವ” ಮಕ್ಕಳ ಕಾದಂಬರಿಯ ಕುರಿತು ನಾಗರಾಜ ಎಂ ಹುಡೇದ ಬರಹ

Read More

ಇಸ್ಕೂಲಿನ ಬಿಡುಗಡೆ ಮತ್ತು ಗಣರಾಜ್ಯ ದಿನದ ಸಂಭ್ರಮ

ಆರನೆಯ ವರ್ಗದ ಕನ್ನಡ ವಿಷಯದಲ್ಲಿ ಇರುವ `ಮಲ್ಲಜ್ಜನ ಮಳಿಗೆ’ ಎಂಬ ಪಾಠದ ರೀತಿಯಲ್ಲಿ ಇರುವ ಅಂಗಡಿಯಂತೆ ಒಂದೇ ಒಂದು ಅಂಗಡಿ ಅಣಶಿಯಲ್ಲಿಯೂ ಇದೆ. ಅಲ್ಲಿ ತೋರಣ ಕಟ್ಟಲು ಬೇಕಾದ ಸುತ್ಲಿ ಬಳ್ಳಿಯೂ ಸಿಗುತ್ತದೆ. ಬಣ್ಣದ ಕಾಗದಗಳು ಸಿಗುತ್ತವೆ. ಎಲ್ಲ ಒಂದೇ ಅಂಗಡಿಯಲ್ಲಿ ಲಭ್ಯ. ಆ ರಾಮಚಂದ್ರ ಕಾಜೂಗಾರನ ಅಂಗಡಿ ಅಣಶಿಯಲ್ಲಿಯೇ ಫೇಮಸ್. ಅಲ್ಲಿ ಸಿಗುವ ಬಣ್ಣದ ಕಾಗದಗಳು ಕೂಡ ಮೂರೇ ಬಣ್ಣದಲ್ಲಿ ಸಿಕ್ಕಿ ಸುತ್ತಲೂ ಪರಪರೆ ಹಚ್ಚಲು ಸಾಕಾಗದೆ ಚೂರು ಬೇಜಾರಾಗಿದೆ. ಮಕ್ಕಳ ಬೇಜಾರಿಗೆ ರಾಧಕ್ಕೋರು ಒಂದು ಪರಿಹಾರ ಸೂಚಿಸಿದ್ದಾರೆ.
ನಾಳೆ ಅಕ್ಷತಾ ಕೃಷ್ಣಮೂರ್ತಿಯವರ “ಇಸ್ಕೂಲು” ಅಂಕಣ ಬರಹಗಳ ಸಂಕಲನ ಬಿಡುಗಡೆಯಾಗುತ್ತಿದೆ. ಈ ಹೊತ್ತಿನಲ್ಲಿ ಇಸ್ಕೂಲಿನ ಕುರಿತ ಅವರ ಮಾತುಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ