Advertisement

Category: ಪುಸ್ತಕ ಸಂಪಿಗೆ

ಮೀನು ಕುಡಿದ ಕಡಲಿನ ವಿಷಯ

ಲೋಕವನ್ನು ಕವಿತೆಯ ಮೂಲಕ ಅಸಾಮಾನ್ಯವಾಗಿ ಮರು ರೂಪಿಸುವ ಸೂರ್ಯಕೀರ್ತಿಯವರು, ಅದೇ ಹೊತ್ತಲ್ಲಿ ಸಾಂಪ್ರದಾಯಕ ಸಂಕೇತಗಳನ್ನು ನಿರ್ದಯವಾಗಿ ನಾಶಗೊಳಿಸುತ್ತಾರೆ. ಅವರು ಕಾಣುವ ಹಸಿವಿನ ಅನ್ನದ ಮುಂದೆ ಶಿವನ ಧ್ಯಾನ, ಮುದ್ರಿಕೆ, ನಾಥ ಪಟ್ಟಗಳೂ ಶೂನ್ಯವಾಗುತ್ತವೆ. ದೈವ ಕಲ್ಪನೆಯೇ ವ್ಯರ್ಥವಾಗುತ್ತದೆ. ಗಾಂಧಿಯ ಕನ್ನಡಕವು ಕೂಡಾ ಪಾಚಿಗಟ್ಟಿದ ಕಣ್ಣುಗಳಲ್ಲಿ ಮರೆಯಾಗುತ್ತದೆ. ಬಾಗಿಲ ಸಂದುಗೊಂದುಗಳಲ್ಲಿ ಚಂದ್ರಮತಿಯರು ನಡುಗುತ್ತಾರೆ, ಜನ್ನನ ಸುನಂದೆ, ಅಮೃತಮತಿಯರು ಪಿಸುಗುಡುತ್ತಾ ನರಳುತ್ತಾರೆ.
ಸೂರ್ಯಕೀರ್ತಿ ಬರೆದ “ಮೀನು ಕುಡಿದ ಕಡಲು” ಕವನ ಸಂಕಲನಕ್ಕೆ ಪ್ರೊ. ಪುರುಷೋತ್ತಮ ಬಿಳಿಮಲೆ ಬರೆದ ಮಾತುಗಳು

Read More

‘ಮುಖ್ಯಮಂತ್ರಿ’ಯ ಬದುಕಿನ ಪುಟಗಳು….

ಆಗ ಮುಖ್ಯಮಂತ್ರಿ ಪಾತ್ರದ ಕುರಿತು ಚರ್ಚೆ ಶುರುವಾಗಿ, ರಾಜಾರಾಂ ಅವರನ್ನು ಮುಖ್ಯಮಂತ್ರಿ ಪಾತ್ರ ಮಾಡಲು ಒತ್ತಾಯಿಸಿದಾಗ ಅವರು ಒಪ್ಪಲಿಲ್ಲ. ಬೇರೆ ತಂಡಗಳ ಪ್ರಮುಖ ಕಲಾವಿದರ ಕುರಿತು ಚರ್ಚಿಸಿದರೂ ಪ್ರಯೋಜನವಾಗಲಿಲ್ಲ. ಅಂತಿಮವಾಗಿ ನನ್ನ ತಲೆಗೇ ಬಂತು. ನಾಟಕ ಕೆಟ್ಟರೂ ಚಿಂತೆಯಿಲ್ಲ, ಪ್ರದರ್ಶನ ನಿಲ್ಲಿಸುವುದು ಬೇಡವೆಂದಾಯಿತು. ಭಂಡ ಧೈರ್ಯ ನನಗಿದ್ದುದರಿಂದ ಒಪ್ಪಿದೆ. ಆದರೆ ನಿರ್ದೇಶನಕ್ಕೆ ಒಪ್ಪಲಿಲ್ಲ. ರಾಜಾರಾಂ ಅವರು ಇಬ್ಬರೂ ಸೇರಿ ನಿರ್ದೇಶಿಸೋಣವೆಂದರೂ ಬೇಡವೆಂದೆ. ಎಂಟತ್ತು ದಿನಗಳಲ್ಲಿ ನಾಟಕ ಪ್ರದರ್ಶನ ಇರುವುದರಿಂದ ನಾನು ಒಪ್ಪಲಿಲ್ಲ. ಆದರೆ ಕರಾರೊಂದು ಹಾಕಿದೆ.
ನಟ ಮುಖ್ಯಮಂತ್ರಿ ಚಂದ್ರು ಬರೆದ “ರಂಗವನದ ಚಂದ್ರತಾರೆ” ಆತ್ಮಕಥನದ ಕೆಲವು ಪುಟಗಳು ನಿಮ್ಮ ಓದಿಗೆ

Read More

’ಆವರ್ತ’ ಕಾದಂಬರಿ ಸ್ವಯಂ ಸುಂದರ

‘ಆವರ್ತ’ ಈ ಬಗೆಯ ಆಕರ್ಷಕ ಶೈಲಿಯಲ್ಲಿದ್ದರೂ, ಇದೊಂದು ಸಾಂಕೇತಿಕ ಕಾದಂಬರಿ. ಮುಖ್ಯವಾಗಿ, ಮಾನವಾಂತರ್ಗತ ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರಗಳೆಂಬ ಪ್ರವೃತ್ತಿಗಳೇ ಇಲ್ಲಿ ಮಾನವರೂಪಿ ಪಾತ್ರಗಳಾಗಿ ಇಡೀ ಕಾದಂಬರಿಗೆ ಸಂತತ ಚಾಲನೆ ಕೊಡುತ್ತವೆ. ಆದರೆ ಇವುಗಳ ಸುಳಿಯಲ್ಲಿ ಸಿಕ್ಕಿಕೊಂಡು ತೊಳಲಾಡುವ, ಬಿಡಿಸಿಕೊಳ್ಳಲು ಯತ್ನಿಸುವ, ಕಡೆಗೆ ಒಳಗಿದ್ದೂ ಇರದ ಹದವನ್ನು ಕಂಡುಕೊಳ್ಳುವ ಪ್ರತಿಯೊಬ್ಬ ವ್ಯಕ್ತಿಯ ಬದುಕಿನ ಚಿತ್ರಣ ಈ ಕಾದಂಬರಿಯ ಮೂಲಭೂತ ವಸ್ತು. ಪ್ರಸ್ತುತದಲ್ಲಿ ಪ್ರತೀಪನ ಬಾಳಿನಲ್ಲಿ ಈ ಆರು ಚಿತ್ರವೃತ್ತಿ ವಿಶೇಷಗಳೇ ಆರು ಮಂದಿ ಸ್ತ್ರೀಯರಾಗಿ ಪ್ರವೇಶಿಸಿ, ಒಬ್ಬೊಬ್ಬರೂ ಅವನಲ್ಲಿ ಒಂದೊಂದು ಭಾವವನ್ನು ಉದ್ದೀಪನಗೊಳಿಸುತ್ತಾರೆ.
ಆಶಾ ರಘು ಬರೆದ “ಆವರ್ತ” ಕಾದಂಬರಿಯ ಕುರಿತು ಡಾ. ಸಾ.ಶಿ. ಮರುಳಯ್ಯನವರ ಬರಹ

Read More

ಆಂತರ್ಯದ ಬೆಳಗಿನಿಂದ ಹೊರಹೊಮ್ಮಿದ ಭಾವ ಕಿರಣ..

ಬದುಕಿನ ಸಂಕಷ್ಟದಲ್ಲಿ ಹೆಬ್ಬಂಡೆಯಾಗಿ ಕಷ್ಟಕಾರ್ಪಣ್ಯಗಳನ್ನು ಹಿಮ್ಮೆಟ್ಟಿಸುವ ಶಕ್ತಿಯೇ ಭರವಸೆ. ಭರವಸೆ ಎಂತಹ ಹೋರಾಡುವ ಶಕ್ತಿ ತುಂಬುತ್ತದೆಯಂದರೆ ಫೇಸ್ಬುಕ್ಕಿನ ಒಂದು ಸಂದೇಶದಂತೆ ಎಷ್ಟೇ ಸೋತರೂ ಕುಸಿಯುವುದಿಲ್ಲ. ಹೆದರಿ ಓಡುವುದಿಲ್ಲ ಏಕೆಂದರೆ ನಾನು ನೂರು ಬಾರಿ ಗೆದ್ದವನಲ್ಲ, ಸಾವಿರ ಬಾರಿ ಸೋತವನು ಈ ರೀತಿಯಾಗಿ ಸಕಾರಾತ್ಮಕ ಚಿಂತನೆಯ ಓಂಕಾರದ ದ್ಯೋತಕವಾಗಿರುವ ಕಾರಣದಿಂದ ಇನ್ನೇನು ಬದುಕು ಮುಗಿಯಿತು ಎಂದು. ಸುಳಿಗಾಳಿಗೆ ಸಿಕ್ಕು ತರೆಗೆಲೆಯಂತೆ ಕಷ್ಟದ ಕುಲುಮೆಯಲ್ಲಿ ಬೆಂದು ಬಸವಳಿದವರಿಗೆ ಫಿನಿಕ್ಸ್‌ನಂತೆ. ಆಕಾಶದೆತ್ತರಕೆ ಮೇಲೆರುವ ತಾಕತ್ತೆ ಭರವಸೆ.
ಶಿವನಗೌಡ ಪೊಲೀಸ್ ಪಾಟೀಲ್ ಅವರ ಕವನ ಸಂಕಲನಕ್ಕೆ ಶರಣಬಸಪ್ಪ ಬಿಳೆಯಲಿ ಬರೆದ ಮುನ್ನುಡಿ

Read More

ವ್ಯಾಸರಾವ್‌ ನಿಂಜೂರ್‌ ಆತ್ಮಕಥನದ ಪುಟಗಳು

ಕೊಡವೂರಿನಲ್ಲಿ ಎಂಟನೆಯ ದರ್ಜೆ ತೇರ್ಗಡೆಯಾದ ಬಳಿಕ, ನನ್ನ ಅಣ್ಣ ರಾಮಚಂದ್ರ ಕಲಿಯುತ್ತಿದ್ದ ಮಲ್ಪೆಯ ಫಿಶರೀಸ್ ಹೈಸ್ಕೂಲಿಗೆ ಸೇರಿಕೊಳ್ಳುವುದು ಎಂದು ಮನೆಮಂದಿಯ ಲೆಕ್ಕಾಚಾರವಿತ್ತು. ಅಲ್ಲಿ ಫೀಸಿನಲ್ಲೂ ರಿಯಾಯಿತಿ ಪಡೆಯುವ ಸಂಭವವಿತ್ತು. ಆದರೆ ಅಪ್ಪಯ್ಯನ ತರ್ಕವೇ ಬೇರೆ. `ದೂರ ನಡೆದುಕೊಂಡು ಹೋದರೆ ವಿದ್ಯೆ ತಲೆಗೆ ಹತ್ತುತ್ತದೆ. ಆದ್ದರಿಂದ ಕಲ್ಯಾಣಪುರದ ಮಿಲಾಗ್ರಿಸ್ ಹೈಸ್ಕೂಲೇ ಸಮ’ ಎಂದುಬಿಟ್ಟರು. ಅವರ ಮಾತಿಗೆ ಅಪೀಲೇ ಇಲ್ಲ. ಬರಿಗಾಲಲ್ಲಿ ಕಲ್ಬಂಡೆ, ಅರ್ಕಾಳಬೆಟ್ಟು, ನೇಜಾರು ಮಾರ್ಗವಾಗಿ ಕಲ್ಯಾಣಪುರ ಮುಟ್ಟಲು ಕನಿಷ್ಠ ಒಂದು ಗಂಟೆಯಾದರೂ ಬೇಕು.
ವ್ಯಾಸರಾವ್‌ ನಿಂಜೂರ್‌ ಅವರ ಆತ್ಮಕಥನ “ಎಳೆದ ತೇರು” ಕೃತಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ