Advertisement

Category: ಪ್ರವಾಸ

ಚಂಬಲ್‌ನ ಡಕಾಯಿತರು ಕಾಪಾಡಿದ ವಿಗ್ರಹಗಳು

ನಮ್ಮ ದೇಶವನ್ನು ನೋಡಲು ಸರಿಯಾಗಿ ಒಂದು ಜನ್ಮ ಸಾಕಾಗಲ್ಲ. ಅಲೆದಾಡಲು ಇನ್ನೂ ಅದೆಷ್ಟು ಜನ್ಮಗಳು ಬೇಕೋ. ಅದರಲ್ಲೂ ಈ ಮಧ್ಯಪ್ರದೇಶ ರಾಜ್ಯವನ್ನು ನೋಡಲು ಅರ್ಧ ಜನ್ಮವೇ ಬೇಕೇನೋ. ಪ್ರಸ್ತುತ ನಾನು ಗ್ವಾಲಿಯರ್‌ನಿಂದ ೨೫ ಕಿ. ಮೀ ದೂರದಲ್ಲಿರುವ ಮೊರೇನಾ ಅನ್ನೋ ಜಿಲ್ಲೆಗೆ ಸೇರಿದ ಬಟೇಶ್ವರ ಗುಡಿಗಳು ಜೀವ ತಳೆದ ಕಥೆಯ ಬಗ್ಗೆ ಹೇಳಬೇಕು.  ಇವು ೮ ರಿಂದ ೧೦ ನೇ ಶತಮಾನದಲ್ಲಿ ನಿರ್ಮಾಣ ಆಗಿರಬಹುದು ಎನ್ನುತ್ತಾರೆ ಪುರಾತತ್ವಜ್ಞರು. ಆದರೆ ಇದು ಬೆಳಕಿಗೆ ಬಂದಿದ್ದು ೨೦೦೫ ರಿಂದ ಈಚೆಗೆ. ಅಲ್ಲೀ ತನಕ ಏನಾಗಿತ್ತು? ಯಾಕೆ ಯಾರೂ ಇಲ್ಲಿರುವ ವಿಗ್ರಹಗಳನ್ನು ಕಳುವು ಮಾಡಲಿಲ್ಲ? ಅವುಗಳನ್ನು ಚಂಬಲ್‌ ನ ಡಕಾಯಿತರು  ಪರೋಕ್ಷವಾಗಿ ಕಾಯುತ್ತಿದ್ದರು ಎಂದು ಬರೆಯುತ್ತಾರೆ ಗಿರಿಜಾ ರೈಕ್ವ.  ದೇವಸನ್ನಿಧಿ ಅಂಕಣದಲ್ಲಿ ಅವರ ಹೊಸ ಬರಹ ಇಲ್ಲಿದೆ.

Read More

ಸವಾರಿ ಹೊರಡುವ ಮುನ್ನ ಕೇಳಿರಿ ಸಲಹೆಗಳನ್ನ

ಸ್ಥಳೀಯರ ಜೊತೆಗಿನ ಮಾತು ಪ್ರವಾಸದ ಹೊರಹನ್ನು ಮತ್ತಷ್ಟು ಹೆಚ್ಚಿಸಿ, ಮಾಹಿತಿಯೊದಗಿಸಿ ಅರ್ಥಪೂರ್ಣವೆನಿಸುತ್ತದೆ. ಹಾಗೆ ಮಾತನಾಡುವಾಗ ವೈಯಕ್ತಿಕ ಮಾಹಿತಿ ಕೊಡುವುದರಿಂದ ದೂರ ಉಳಿಯುವುದು ಮತ್ತು ಧಾರ್ಮಿಕ ಹಾಗು ಆಹಾರದಂತಹ ಸೂಕ್ಷ್ಮ ವಿಚಾರಗಳ ಬಗ್ಗೆ ವೈಯಕ್ತಿಕ ಅಭಿಪ್ರಾಯಗಳನ್ನು ಹೇಳದಿರುವುದು ಸ್ವಾಗತಾರ್ಹ. ಅರೆಬರೆ ರಾಜಕೀಯ ಜ್ಞಾನದಿಂದ ನಮ್ಮ ದೇಶದ ಬಗ್ಗೆ ಚೀಳು ಅಭಿಪ್ರಾಯ ಬರದಂತೆ ಮಾತನಾಡುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿ. ಬೇರೆಯವರ ಮಕ್ಕಳನ್ನು ಹಿರಿಯರ ಅನುಮತಿಯಿಲ್ಲದೆ ಮುದ್ದು ಮಾಡುವ ಬಗ್ಗೆ ಎಚ್ಚರಿಕೆ ಇರಬೇಕು. ಕಂಡಷ್ಟೂ ಪ್ರಪಂಚ ಪ್ರವಾಸ ಅಂಕಣದಲ್ಲಿ ಅಂಜಲಿ ರಾಮಣ್ಣ  ಪ್ರವಾಸಕ್ಕೆ ಬೇಕಾದ ಸಲಹೆಗಳನ್ನು ನೀಡಿದ್ದಾರೆ. 

Read More

`ಜಗದ ಜಗಲಿಯಲಿ ನಿಂತು’: ವೈಶಾಲಿ ಪ್ರವಾಸ ಲೇಖನ ಮಾಲೆ ಆರಂಭ

ಮಾಯಾ ಜನರ ಈ ಖಗೋಳಶಾಸ್ತ್ರದ ನಂಬಿಕೆ ಮತ್ತು ಅವಲಂಬನೆ ಎಷ್ಟರ ಮಟ್ಟಿಗಿತ್ತೆಂದರೆ ಅದು ಅವರ ಜೀವನದ ಪ್ರತಿ ನಡೆಯಲ್ಲೂ ಹಾಸುಹೊಕ್ಕಾಗಿತ್ತು. ಜಗತ್ಪ್ರಸಿದ್ದ ಮಾಯನ್ ಪಿರಾಮಿಡ್ “ಚಿಚೆನ್ ಇಟ್-ಸಾ” ಇದಕ್ಕೊಂದು ನಿದರ್ಶನ. ಇದು ಅವರ ಸರ್ಪದೇವತೆ ಕುಕುಲ್ಕಾನ್ ಮಂದಿರ. ಇಂದಿಗೂ ಇಕ್ವಿನಾಕ್ಸ್ ದಿನ ನಡುಮಧ್ಯಾಹ್ನ, ಸೂರ್ಯನ ನೆರಳು ಪಿರಮಿಡ್ಡಿನ ಮೇಲೆ ಹೇಗೆ ಬೀಳುತ್ತದೆಂದರೆ, ಸರ್ಪವೊಂದು ಮೇಲಿಂದ ಕೆಳಗೆ ಹರಿದಂತೆ ಕಾಣುತ್ತದೆ. ಆ ದೃಶ್ಯ ನೋಡಲು ಪ್ರತಿವರ್ಷ ಸಾವಿರಾರು ಜನ ಸೇರುತ್ತಾರೆ. ವೈಶಾಲಿ ಹೆಗಡೆ ಬರೆಯುವ ʻಜಗದ ಜಗಲಿಯಲಿ ನಿಂತುʼ ಅಂಕಣದ ಮೊದಲ ಬರಹ ಇಲ್ಲಿದೆ

Read More

ಸಾಟಿಯಿಲ್ಲದ ಸ್ಲೊವೇನಿಯಾ: ಪೋಸ್ಟೋಯ್ನಾ ಗುಹೆಗಳು

ಕಾರಿನಲ್ಲಿ ಸ್ಲೊವೇನಿಯಾದ ಯಾವುದೇ ಒಂದು ಮೂಲೆಯಿಂದ ಇನ್ನೊಂದು ಮೂಲೆಗೆ ಎರಡು ತಾಸಿನಲ್ಲಿ ಪ್ರಯಾಣಿಸಬಹುದು. ಅಷ್ಟು ಪುಟ್ಟ ದೇಶ. ಪುಟ್ಟ ರಾಷ್ಟ್ರವಾದರೂ ವೈವಿಧ್ಯಮಯ ಪ್ರವಾಸಿ ಆಕರ್ಷಣೆಗಳನ್ನೊಳಗೊಂಡಿದೆ. ಪ್ರವಾಸಿಗಳಿಗೆ ಹೇರಳ ಅವಕಾಶಗಳನ್ನು ತೆರೆದಿಟ್ಟಿರುವ ಸ್ಲೊವೇನಿಯಾ ಪ್ರಕೃತಿ ಪ್ರೇಮಿಗಳನ್ನು ಎಲ್ಲ ಋತುಗಳಲ್ಲೂ ಕೈಬೀಸಿ ಕರೆಯುತ್ತದೆ. ಸ್ಲೊವೇನಿಯಾದ ಶುಭ್ರ ಸ್ಪಟಿಕದಂತಹ ಸ್ವಚ್ಚ ನದಿಗಳು ನನ್ನ ಅಚ್ಚುಮೆಚ್ಚು. ಪ್ರಪಂಚದ ಅತ್ಯಂತ ಸುಂದರ ಸರೋವರಗಳಲ್ಲಿ ಒಂದಾದ “ಲೇಕ್ ಬ್ಲೆಡ್” ಕೂಡ ಸ್ಲೊವೇನಿಯಾದಲ್ಲಿದೆ. ನಾನು ಗಮನಿಸಿದಂತೆ ಕನ್ನಡದ ಹಲವಾರು ಚಲನಚಿತ್ರಗಳ ಹಾಡುಗಳು ಸ್ಲೊವೇನಿಯಾದಲ್ಲಿ ಚಿತ್ರೀಕರಣಗೊಂಡಿವೆ.
“ದೂರದ ಹಸಿರು” ಸರಣಿಯಲ್ಲಿ ಗುರುದತ್ ಅಮೃತಾಪುರ ಬರಹ

Read More

ಕಾಮಾಕ್ಯದಲ್ಲಿ ದೊರೆತ ಅನಿರೀಕ್ಷಿತ ಆಶೀರ್ವಾದ

ಪುರಾಣಗಳಲ್ಲಿ ಉಲ್ಲೇಖಗೊಂಡಿರುವ 51 ಶಕ್ತಿಪೀಠಗಳ ಪೈಕಿ ಕಾಮಾಕ್ಯ ದೇವಿಯ ಈ ದೇವಸ್ಥಾನವೂ ಒಂದು ಎಂದು ಹೇಳಲಾಗುತ್ತದೆ. ಭುವನೇಶ್ವರಿ, ಬಾಗಲಮುಖಿ, ಚಿನ್ನಮಸ್ತ, ತಾರಾ, ಕಾಳಿ, ಭೈರವಿ, ಧೂಮಮತಿ ಎನ್ನುವ ಹೆಸರುಗಳಲ್ಲಿ ಇಲ್ಲಿ ದೇವಿಯನ್ನು ಆರಾಧಿಸುತ್ತಾರೆ. ಮುಖ್ಯ ಗೋಪುರದಲ್ಲಿ ಅವಳನ್ನು ಮಾತಂಗಿ, ತ್ರಿಪುರ ಸುಂದರಿ ಮತ್ತು ಕಮಲ ಎನ್ನುವ ಹೆಸರುಗಳಲ್ಲಿ ವಿಗ್ರಹಗಳನ್ನು ಸ್ಥಾಪಿಸಿ ತಾಂತ್ರಿಕ ಶೈಲಿಯಲ್ಲಿ ಆರಾಧಿಸಲಾಗುತ್ತದೆ. ಎಲ್ಲಾ ದೇವಿಯರ ಗರ್ಭಗುಡಿಯಲ್ಲಿಯೂ ಹತ್ತು ಇಂಚು ಆಳದ ಯೋನಿಯಾಕಾರದ ಕಪ್ಪುಶಿಲೆಯೊಳಗಿನಿಂದ ಸದಾಕಾಲವೂ ನೀರಿನ ಬುಗ್ಗೆ ಉಕ್ಕುತ್ತಿರುತ್ತದೆ. ಕಂಡಷ್ಟೂ ಪ್ರಪಂಚ ಅಂಕಣದಲ್ಲಿ ಅಂಜಲಿ ರಾಮಣ್ಣ ಅವರ ಲೇಖನ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ