Advertisement

Category: ಪ್ರವಾಸ

ದೇವಾಲಯಗಳ ಕಣಿವೆಯಲ್ಲಿ ಈಗ ಹಸಿರು ಚಿತ್ರಗಳು

ನಾನು ನೆಲೆಸಿರುವ ಜರ್ಮನಿ ಹಾಗೂ ಸುತ್ತಲಿನ ದೇಶಗಳ ಇತಿಹಾಸ ಬಹಳ ಸಪ್ಪೆ ಎನ್ನಿಸುತ್ತದೆ. ಇವರು ಅರಮನೆ ಎಂದು ಕರೆಯುವ ಕಟ್ಟಡಗಳನ್ನು ಮೀರಿಸುವ ಮನೆಗಳನ್ನು ನಮ್ಮ ದೇಶದಲ್ಲಿ ಈಗಿನ ರಾಜಕಾರಣಿಗಳು, ಉದ್ಯಮಿಗಳು ಹೊಂದಿದ್ದಾರೆ. ಇಷ್ಟು ವರ್ಷಗಳ ಪ್ರವಾಸದಲ್ಲಿ ನಮ್ಮ ಮೈಸೂರಿನ ಭವ್ಯ ಅರಮನೆಯಂತಹ ಮತ್ತೊಂದನ್ನು ಇಲ್ಲಿ ನೋಡಲಿಲ್ಲ. ಸಾವಿರಾರು ವರ್ಷಗಳ ಹಿಂದಿನ, ಗತ-ವೈಭವಗಳಿಂದ ಕೂಡಿದ ಇತಿಹಾಸ ಅತಿ ವಿರಳ. ಆದರೆ ಯೂರೋಪಿನ ದಕ್ಷಿಣಕ್ಕೆ ಚಲಿಸಿದಂತೆ ಗ್ರೀಕ್, ರೋಮನ್ ಸಾಮ್ರಾಜ್ಯಗಳ ಕುರುಹುಗಳು ಕಾಣುತ್ತಿದ್ದಂತೆ ಕಣ್ಣು, ಕಿವಿ ಅರಳಿಬಿಡುತ್ತದೆ. ಗುರುದತ್ ಅಮೃತಾಪುರ ಬರಹ

Read More

ಪ್ರಾರ್ಥನೆಯೊಂದೇ ಆಯ್ಕೆಯಾಗಿ ಉಳಿದಾಗ…

ಆ ದಿನ ಅಲ್ಲಿ ಹಾಗೆ ಆದಾಗ ಆಕೆಗೆ ಒಳಿತಾಗಲಿ ಎಂದು ಬಯಸಿದ್ದು ಅಲ್ಲಿದ್ದ ನೂರಾರು ಮನಸ್ಸುಗಳು. ಅನುಮಾನವೇ ಇಲ್ಲ. ಆದರೆ ನನ್ನ ಗಮನ ಆಕೆಯ ಇಬ್ಬರು ಹರೆಯದ ಹೆಣ್ಣುಮಕ್ಕಳಾದ ಶ್ರದ್ಧಾ ಮತ್ತು ಪೂಜಾರೆಡೆಗೆ ಇದ್ದದ್ದೂ ಸುಳ್ಳಲ್ಲ. ಇಡೀ ಗುಂಪಿನಲ್ಲಿ ಅವರಿಬ್ಬರಿಗೇ ಇಂಗ್ಲಿಷ್ ಬರುತ್ತಿದ್ದದ್ದು. ಸ್ವಂತ ತಾಯಿ ಕುಸಿದು ಬಿದ್ದಿದ್ದಾಳೆ. ಅಪ್ಪನಿಗೆ ದಿಗ್ಭ್ರಮೆಯಾಗಿದೆ. ಪುಟ್ಟ ತಮ್ಮ ಅಳುತ್ತಿದ್ದಾನೆ. ವಯಸ್ಸಾದ ನೆಂಟರಿಷ್ಟರೆಲ್ಲಾ ಆತಂಕಗೊಂಡಿದ್ದಾರೆ. ಡಾಕ್ಟರ್‌ಗಳು ಹತ್ತು ಪ್ರಶ್ನೆಗಳನ್ನು ಕೇಳುತ್ತಿದ್ದಾರೆ.
“ಕಂಡಷ್ಟೂ ಪ್ರಪಂಚ” ಪ್ರವಾಸ ಅಂಕಣದಲ್ಲಿ ವಿಮಾನ ಪ್ರಯಾಣದ ಒಂದು ಭಿನ್ನ ಅನುಭವವನ್ನು ಹಂಚಿಕೊಂಡಿದ್ದಾರೆ ಅಂಜಲಿ ರಾಮಣ್ಣ

Read More

ಗಾಂಧಿತಾತನ ಜೊತೆಗೆ ಒಲಿವಿಯಾಳೂ ಸಿಕ್ಕಳು

ವಿದ್ಯಾರ್ಥಿಗಳು, ಕಲಾವಿದರು ತಮ್ಮ ಖರ್ಚು ಸರಿದೂಗಿಸಿಕೊಳ್ಳಲು ಹೀಗೆ ಸ್ವಯಂಸೇವೆ ಮಾಡುತ್ತಾರೆ ಮತ್ತು ಪಗಾರ ಪಡೆಯುತ್ತಾರೆ. ಬಹಳಷ್ಟು ಸ್ಮಶಾನಗಳಿಗೆ ಭೇಟಿ ನೀಡಿದ್ದೇನೆ. ಅವುಗಳು ಪಾರ್ಕ್‌ನಂತೆ ಬಳಸಲ್ಪಡುತ್ತವೆ. ಸ್ವಚ್ಛತೆ ಮತ್ತು ಮೌನವು ಮಾರ್ದನಿಸುತ್ತಿರುತ್ತವೆ. ಕೆಲವು ಕಡೆ ಸಮಯ ನಿಗಧಿಯಾಗಿರುತ್ತದೆ, ಆದರೆ ಬಹುಪಾಲು ಸ್ಮಶಾನಗಳಿಗೆ ಸಾರ್ವಜನಿಕರು ದಿನದ ಯಾವ ಸಮಯದಲ್ಲಿಯಾದರೂ ಹೋಗಬಹುದು, ಅಲ್ಲಿ ಕುಳಿತು ಸಮಯ ಕಳೆಯಬಹುದಾಗಿರುತ್ತದೆ.
ಅಂಜಲಿ ರಾಮಣ್ಣ ಬರಹ

Read More

ಗಗನಚುಂಬಿ ಬೆಟ್ಟಗಳ ಸಂದಿಯಲ್ಲಿ ಬುದ್ಧಗಂಟೆಯ ಸದ್ದು

ನದಿ, ಜಲಪಾತಗಳೆಲ್ಲಾ ಹೆಪ್ಪುಗಟ್ಟಿದ್ದ ಚಳಿಗಾಲದಲ್ಲೊಮ್ಮೆ ನಾನು ಚೀನಾದ ದಟಾಂಗ್ ಎನ್ನುವ ಊರಿನಲ್ಲಿದ್ದೆ. ಇದು ಉತ್ತರ ಚೀನಾದ ಶಾಂಕ್ಷಿ ಪ್ರಾಂತ್ಯದಲ್ಲಿದೆ, ಇದರ ಸುತ್ತಮುತ್ತ ಯುನೆಸ್ಕೋ ತಾಣಗಳೂ ಸೇರಿದಂತೆ ಅನೇಕ ಪ್ರಾಚೀನ ಬೌದ್ಧತಾಣಗಳಿವೆ. ಅಲ್ಲೊಂದು ಹಳೆಯ ಬೌದ್ಧವಿಹಾರ. ಬೋಳುಬೆಟ್ಟಗಳ ಜೊತೆ ತಾನೂ ಒಂದಾಗಿರುವಂತೆ ತೋರುವ ಆ ವಿಹಾರ ನೆಲದಿಂದ ೭೫ ಮೀ ಎತ್ತರದಲ್ಲಿ ಬೆಟ್ಟದ ಮೇಲ್ಮೈನಲ್ಲಿ ೧೫೦೦ ವರ್ಷಗಳಿಂದ ಬೀಳದೆ, ಅಲ್ಲಾಡದೆ, ಮಳೆಗೆ ಜಗ್ಗದೆ, ಬಿಸಿಲಿಗೆ ಕುಗ್ಗದೆ, ಹಿಮಕ್ಕೆ ಕರಗದೆ, ಗಾಳಿಗೆ ಹಾರಿ ಹೋಗದೆ ಹಾಗೇ ಉಳಿದುಕೊಂಡು ನಮ್ಮಂತಹ ನೋಡುವ ಕಣ್ಣಿಗೆ ವಿಸ್ಮಯವಾಗಿ ಉಳಿದುಬಿಟ್ಟಿದೆ.
‘ದೇವ ಸನ್ನಿಧಿ’ ಅಂಕಣದಲ್ಲಿ ಗಿರಿಜಾ ರೈಕ್ವ ಬರಹ

Read More

ನೈನಿತಾಲ್ ಟ್ರಿಪ್ ನಲ್ಲಿ ಭೇಟಿಯಾದ ಭಗಿನಿ ಮತ್ತು ಕವಿ

1929ರಲ್ಲಿ ಗಾಂಧೀಜಿ ಕೌಸಾನಿಗೆ ಬಂದು, ಒಂದು ಅತಿಥಿ ಗೃಹದಲ್ಲಿ 3 ತಿಂಗಳು ತಂಗಿದ್ದರು. ಅಲ್ಲಿ ಅವರು “ ಅನಾಸಕ್ತಿ ಯೋಗ” ದ ಬಗ್ಗೆ ಬರೆದ್ದದ್ದರಿಂದ ಆ ಗೆಸ್ಟ್ ಹೌಸ್ ಈಗ ಅನಾಸಕ್ತಿ ಆಶ್ರಮ ಎಂದು ಕರೆಸಿಕೊಳ್ಳುತ್ತಿದೆ. ಗಾಂಧಿ ಆಗ ಕೌಸಾನಿಯನ್ನು ‘ಸ್ವಿಟ್ಸರ್ ಲ್ಯಾಂಡ್’ ಎಂದು ಕರೆದಿದ್ದರಂತೆ. ಈಗ ಅನಾಸಕ್ತಿ ಆಶ್ರಮದಲ್ಲಿ ಮ್ಯೂಸಿಯಮ್, ಪುಸ್ತಗಳ ಸಂಗ್ರಹಾಲಯ ಮಾಡಲಾಗಿದೆ. ಸರ್ಕಾರದ ದೇಖ್‍ರೇಕಿಯಲ್ಲಿ ಇನ್ನೂ ಮೌನ ಮತ್ತು ಕಳಚಿಕೊಳ್ಳುವುದರ ಬಗ್ಗೆ ಆಸಕ್ತಿ ಹುಟ್ಟಿಸುತ್ತಾ ಸದ್ದು ಮಾಡದೆ ನಿಂತಿದೆ ಅನಾಸಕ್ತಿ ಆಶ್ರಮ.
ಕಂಡಷ್ಟೂ ಪ್ರಪಂಚ ಪ್ರವಾಸ ಅಂಕಣದಲ್ಲಿ  ಅಂಜಲಿ ರಾಮಣ್ಣ ಬರಹ ಇಂದಿನ ಓದಿಗಾಗಿ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ