Advertisement

Category: ವ್ಯಕ್ತಿ ವಿಶೇಷ

ಸಮೃದ್ಧ ಜೀವನಾನುಭವವೇ ಸಾಹಿತ್ಯದ ಜೀವ: ನಾ. ಮೊಗಸಾಲೆ

ತಲೆಮಾರು ಎನ್ನುವುದು ಮುಂದುವರಿಯುತ್ತಾ ಹೋದ ಹಾಗೆ ಕೌಶಲ್ಯ ಎನ್ನುವುದು ಹಿಂದಿಗಿಂತ ಹೆಚ್ಚು ಶಕ್ತ ಅಥವಾ ಹೆಚ್ಚೋ ಎಂಬಂತೆ ಮುಂದುವರಿಯುವುದು ನಮ್ಮ ಅನುಭವ ಅಥವಾ ಪ್ರಕೃತಿ ನಿಯಮ. ಪ್ರತಿಭೆ, ಕೌಶಲ್ಯ, ಮತ್ತು ಚಿಂತನೆಗಳಲ್ಲಿ ನಾವು ನಮ್ಮ ಹಿರಿಯರಿಗಿಂತ ಮುಂದುವರಿದಿದ್ದೇವೆ ಎನ್ನುವುದನ್ನು ನಾನೂ ನೀವೂ ಒಪ್ಪಿಕೊಳ್ಳುವುದಾದರೆ ನಮ್ಮ ಮುಂದಿನ ಪೀಳಿಗೆಯೂ ಖಂಡಿತ ನಮಗಿಂತ ಮುಂದಿರುತ್ತದೆ ಎನ್ನುವುದನ್ನು ಒಪ್ಪಬೇಕು.
ಡಾ. ನಾ. ಮೊಗಸಾಲೆಯವರೊಟ್ಟಿಗೆ ನಡೆಸಿದ ಮಾತುಕತೆಯನ್ನು ಹಂಚಿಕೊಂಡಿದ್ದಾರೆ ಡಾ. ಸುಭಾಷ್ ಪಟ್ಟಾಜೆ

Read More

ಆಚೆ ಕೇರಿಯ ಭಾಗ್ಯಮ್ಮ ಮತ್ತು ಈಚೆ ಕೇರಿಯ ದೇವಮ್ಮ

ಮಾರ್ಗೋಡನಹಳ್ಳಿಯ ಒಕ್ಕಲುಗೇರಿಯ ಭಾಗ್ಯಮ್ಮ ಬನ್ನೂರು ಬಸ್ಟಾಂಡಿನ ಬಳಿ ಸೊಪ್ಪು ಮಾರುತ್ತಿದ್ದವರು. ಸಮಯ ಸಿಕ್ಕಾಗ ದನದ ದಲ್ಲಾಳಿ ಕೆಲಸ, ಹೆಣ್ಣು ತೋರೋದು, ನಾಟಿ ಕೀಳೋದೂ ಇತ್ಯಾದಿಗಳನ್ನೂ ಮಾಡುತ್ತಿದ್ದರು. ಇವರ ಗೆಳತಿ ದಲಿತರ ಕೇರಿಯ ದೇವಮ್ಮನದು ಕೂಲಿಯ ಕೆಲಸ. ಸಮಯ ಒದಗಿ ಬಂದಾಗ ಭಾಗ್ಯಮ್ಮನ ಜೊತೆ ಸೊಲ್ಲು ಹೇಳಲು ಹೋಗುತ್ತಾರೆ. ಇವರಿಬ್ಬರು ಸೊಲ್ಲೆತ್ತಿ ಹಾಡಲು ತೊಡಗಿದರೆ ಇಬ್ಬರಲ್ಲಿ ಯಾರು ಹಿಂದು ಯಾರು ಮುಂದು, ಯಾರು ಜಾಣೆ ಯಾರು ಮುಗ್ಧೆ ಎಂಬುದು ಗೊತ್ತಾಗುವುದಿಲ್ಲ. ಕಳೆದ ಮಂಗಳವಾರ ಇರುಳು ತೀರಿಹೋದ ಭಾಗ್ಯಮ್ಮನವರ ನೆನಪಿನಲ್ಲಿ ಸೂರ್ಯಪುತ್ರ ಈ ಹಿಂದೆ ಬರೆದಿದ್ದ ಬರಹ

Read More

ಮೂವತ್ತು ವರ್ಷಗಳ ಹಿಂದೆ ಸಾರಾ ಉಮ್ಮಾ ಜೊತೆಗೆ

ನಾಲ್ಕು ದಶಕಗಳ ಹಿಂದೆ ತನ್ನ ನಲವತ್ತೆರಡನೆಯ ವಯಸ್ಸಿನಲ್ಲಿ ಬರೆಯಲು ಶುರು ಮಾಡಿದ ಸಾರಾ ಅಬೂಬಕ್ಕರ್ ಕನ್ನಡಕ್ಕೆ ಸಂಭವಿಸಿದ ಒಂದು ಅಚ್ಚರಿ. ಬಹುಶಃ ಕನ್ನಡಕ್ಕೆ ಸಂಭವಿಸಿದ ಇನ್ನೊಂದು ಅಚ್ಚರಿಯಾದ ಪಿ. ಲಂಕೇಶರು ಇಲ್ಲದಿದ್ದರೆ ಸಾರಾ ಕನ್ನಡದಲ್ಲಿ ಬರೆಯುತ್ತಲೇ ಇರಲಿಲ್ಲವೇನೋ.ಸುಮಾರು ಮೂವತ್ತು  ವರ್ಷಗಳ ಹಿಂದೆ ಆಗ ಇನ್ನೂ ಮೂವತ್ತರ ಹರೆಯದ ತರುಣನಾಗಿದ್ದ ಕನ್ನಡದ ಕಥೆಗಾರ ಅಬ್ದುಲ್ ರಶೀದ್ ಲಂಕೇಶ್ ಪತ್ರಿಕೆಗಾಗಿ ಸಾರಾ ಅವರೊಡನೆ ನಡೆಸಿದ್ದ ಮಾತುಕತೆಯ ಪಠ್ಯ ಇಲ್ಲಿದೆ

Read More

ಸಾರಾ ಉಮ್ಮಾ ತೀರಿಕೊಂಡರು…

ಕನ್ನಡ ಸಾಹಿತ್ಯ ಲೋಕದ ಹಿರಿಯ ಲೇಖಕಿ ಸಾರಾ ಅಬೂಬಕ್ಕರ್ ಮಂಗಳವಾರ ಮಧ್ಯಾಹ್ನ ತೀರಿಕೊಂಡರು. ಚಂದ್ರಗಿರಿಯ ತೀರದಲ್ಲಿ ಕಾದಂಬರಿಯ ಮೂಲಕ ಕನ್ನಡ ಸಾಹಿತ್ಯ ಲೋಕವನ್ನು ಪ್ರವೇಶಿಸಿದ ಸಾರಾ, ಲೇಖಕಿಯಾಗಿಯಷ್ಟೇ ಅಲ್ಲ, ಉದಾರವಾದಿ ಚಿಂತಕಿಯಾಗಿಯೂ ಗುರುತಿಸಿಕೊಂಡರು. ಅವರ ಕುರಿತು ಕಳೆದ ವರ್ಷ ಕೆಂಡಸಂಪಿಗೆಯಲ್ಲಿ ಪ್ರಕಟವಾದ ಬರಹವೊಂದು ಇಲ್ಲಿದೆ.

Read More

ಕೋಲಾರದಲ್ಲಿ ಕಂಡ ‘ಕಾಮರೂಪಿ

‘ಅಯ್ಯೋ ನನ್ನ ಇಂಟರ್ನೆಟ್ ಹಾಳಾಗಿ ಹೋಗಿದೆ. ನಿನ್ನಂತಹ ಖಳರೊಡನೆ ಸಂಪರ್ಕಿಸಲು ಇದ್ದ ಈ ಭೂಲೋಕದ ಇದೊಂದು ಕೊಂಡಿಯೂ ಹೊರಟು ಹೋಗಿದೆ’ ಎಂದು ಪರದಾಡುತ್ತಿರುವ ಮಗುವಿನಂತಹ ಹಿರಿಯ ಲೇಖಕ ಕಾಮರೂಪಿ. `ತಡೀರಿ ಸಾರ್ ನಾನೂ ಒಂದು ಕೈ ನೋಡಿಯೇ ಬಿಡುತ್ತೇನೆ’ ಎಂದು ಕಲಿತ ವಿದ್ಯೆಯನ್ನೆಲ್ಲ ಬಳಸಿ ಇಂಟರ್ನೆಟ್ ಸರಿ ಮಾಡಲು ನೋಡಿದೆ. ಆಗಲಿಲ್ಲ. ನೋಡಿದರೆ ಫೋನೇ ಸತ್ತು ಹೋಗಿತ್ತು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ