Advertisement

Category: ವ್ಯಕ್ತಿ ವಿಶೇಷ

ಅರ್ಥಗಾರಿಕೆಯ ಭೇಷಜ, ಡಾ. ಹೈಗುಂದ ಪದ್ಮನಾಭಯ್ಯ: ನಾರಾಯಣ ಯಾಜಿ ಬರಹ

ಹೈಗುಂದ ಡಾಕ್ಟರರು ಕಾವ್ಯವನ್ನು ಅರ್ಥಗಾರಿಕೆಗೆ ಆಧಾರವನ್ನಾಗಿ ಬಳಸುತ್ತಿದ್ದರೂ ಅವರ ಆದ್ಯತೆ ಪ್ರಸಂಗಗಳ ಪದ್ಯಗಳಾಗಿತ್ತು. ಇಲ್ಲಿನ ಕಥಾನಕಕ್ಕೆ ನಿಷ್ಠರಾಗಿಯೇ ಅವರು ಕುಮಾರವ್ಯಾಸನನ್ನೊ ಜೈಮಿನಿಯನ್ನೋ ಬಳಸುತ್ತಿದ್ದರು. ಹಾಗಂತ ಅಲ್ಲಿನ ಪದ್ಯಗಳನ್ನು ಯಥಾವತ್ತಾಗಿ ತರುವದಕ್ಕೆ ಇವರ ವಿರೋಧವಿರುತ್ತಿತ್ತು. ಪ್ರಸಂಗಗಳಲ್ಲಿ ಕನ್ನಡವಲ್ಲದೇ ಅನ್ಯ ಭಾಷೆ ಅದು ಸಂಸ್ಕೃತವೇ ಆಗಿರಲಿ ಅದನ್ನು ಬಳಸುವದನ್ನು ಅಷ್ಟೇ ಉಗ್ರವಾಗಿ ವಿರೋಧಿಸುತ್ತಿದ್ದರು.
ಪ್ರಸಿದ್ಧ ಅರ್ಥಧಾರಿಗಳಾಗಿದ್ದ ಡಾ. ಹೈಗುಂದ ಪದ್ಮನಾಭಯ್ಯನವರ ಕುರಿತು ನಾರಾಯಣ ಯಾಜಿ, ಸಾಲೇಬೈಲು ಬರಹ ನಿಮ್ಮ ಓದಿಗೆ

Read More

ಜಿ. ಎಚ್. ನಾಯಕರ ನೆನಪು: ಡಾ. ಎಲ್.ಸಿ. ಸುಮಿತ್ರಾ ಬರಹ

ಮೀರಕ್ಕ ಕೂಡ ಯಾವಾಗಲೂ ನೂಲಿನ ಸೀರೆ ಧರಿಸುವವರು. ನಾವು ಎಂಎ ಓದುತ್ತಿದ್ದಾಗ ಮಾನಸಗಂಗೋತ್ರಿಯ ಬಯಲು ರಂಗಮಂದಿರದ ಆವರಣದಲ್ಲಿ ನಡೆದ ಯಾವುದೋ ಕಾರ್ಯಕ್ರಮ ನೋಡಲು ಮೀರಕ್ಕ, ಮಗಳು ಕೀರ್ತಿಯೊಡನೆ ಬಂದಿದ್ದರು. ಅವರುಟ್ಟ ರೇಷ್ಮೆ ಸೀರೆಯನ್ನು ಚೆನ್ನಾಗಿದೆಯೆಂದು ನಮ್ಮ ಗುಂಪಿನಲ್ಲಿದ್ದವರು ಯಾರೋ ಹೇಳಿದಾಗ ಕೀರ್ತಿ ತಕ್ಷಣ ಇದು ಅಮ್ಮನಿಗೆ ಯಾರೋ ಪ್ರಸೆಂಟ್ ಮಾಡಿದ್ದು ಅಪ್ಪ ಬರೀ ಕಾಟನ್ ಸೀರೆ ಕೊಡಿಸ್ತಾರೆ ಅಂತ ತಮಾಷೆಗೆಂಬಂತೆ ಹೇಳಿದಳು.
ನೆನ್ನೆಯಷ್ಟೇ ಅಗಲಿದ ಹಿರಿಯ ವಿಮರ್ಶಕ ಜಿ. ಎಚ್. ನಾಯಕರ ಕುರಿತು ಡಾ. ಎಲ್.ಸಿ. ಸುಮಿತ್ರಾ ಹಂಚಿಕೊಂಡಿದ್ದ ನೆನಪುಗಳು ನಿಮ್ಮ ಓದಿಗೆ

Read More

ಅಕ್ಷರದ ಮೂಲಕ ಚಿರಂಜೀವಿಯಾಗಿರುವ ಶ್ರೀನಿವಾಸ ವೈದ್ಯ

ನವೋದಯಕಾಲದ ಲೇಖಕರು ಎದುರಿಸುವ ಎಲ್ಲಬಗೆಯ ವಿಪ್ಲವ ಮತ್ತು ಆತಂಕಗಳನ್ನು ಒಂದು ಕುಟುಂಬದ ಕಥೆಯಮೂಲಕ ಹೇಳುವ ಶ್ರೀನಿವಾಸ ವೈದ್ಯರ ಕ್ರಿಯಾಶೀಲತೆಯನ್ನು ಇಲ್ಲಿ ಕಾಣಬಹುದಾಗಿದೆ. ಅನೇಕ ಸಲ ಅನಂತಮೂರ್ತಿಯವರ ಮೌನಿಯಲ್ಲಿ ಈ ಕಾದಂಬರಿಯ ನೆರಳು ಬಿದ್ದಿರಬಹುದೇ ಅನಿವುವಷ್ಟು ಪ್ರಭಾವಶಾಲಿಯಾಗಿದೆ. ಬೇರು ಕಳೆದುಕೊಂಡ ವ್ಯಕ್ತಿ ಹೊಸ ಬೇರಿನೊಂದಿಗೆ ಕಂಡುಕೊಳ್ಳುವ ಆರ್ಥಿಕ ಭದ್ರತೆ ಮತು ಸಾಮಾಜಿಕ ಸ್ಥಾನಮಾನವನ್ನೂ ಪಡೆದುಕೊಳ್ಳುವ ಕ್ರಿಯೆ ಬ್ರಿಟಿಷರಿಂದ ಭಾರತಕ್ಕೆ ಸಿಗುವ ಸ್ವಾಂತಂತ್ರ್ಯದ ಜೊತೆಗೆ ಹಾಸುಹೊಕ್ಕಾಗಿದೆ.
ಇಂದು ತೀರಿಹೋದ ಶ್ರೀನಿವಾಸ ವೈದ್ಯರ ಕೃತಿಗಳ ಕುರಿತು ನಾರಾಯಣ ಯಾಜಿ ಬರಹ

Read More

ಶ್ರೀನಿವಾಸ ವೈದ್ಯರೆಂದರೆ….

ಅವರು ಈಸಿದಷ್ಟೂ, ಓದುಗರಾದ ನಾವು ಇದ್ದು ಜಯಿಸುತ್ತೇವೆ. ಅಂತರಂಗ-ಬಹಿರಂಗ, ವ್ಯಕ್ತಿ-ಸಮಾಜ ಎಂದೆಲ್ಲ ಕಾಲ್ಪನಿಕ ಗಡಿರೇಖೆ ಹಾಕಿಕೊಳ್ಳದೇ ಒಟ್ಟಂದದಲ್ಲಿ ಸಮಾಜವನ್ನು ತುಂಬಾ ಅಚ್ಛೆಯಿಂದ, ಅಷ್ಟೇ ಅಚ್ಚರಿಯಿಂದ ಅನುಭವಿಸಿದ ಈ ಜೀವಿಯ ಬರವಣಿಗೆಯಲ್ಲಿ ಬದುಕು ತನ್ನೆಲ್ಲ ನೆಳಲು ಬೆಳಕುಗಳೊಂದಿಗೆ ಬಸಿಯುತ್ತದೆ. ಇದು ಹೀಗೇಕೆ ಎಂದೆಲ್ಲ ಕೇಳದೇ, ಅರೆ ಇದು ಹೀಗಿದೆಯಲ್ಲ ಎಂದು ಸೋಜಿಗದಿಂದ ಇರವನ್ನು ಅನುಭವಿಸುವ ಅರಿವಿನ ದಾರಿ ಇದು. `ಅರಿವೇ ಗುರು’ ಎಂದರೆ, `ಹೌದ್ರೀ, ಆದರೆ ಅದೂ ಅಲ್ಲಲ್ಲಿ ಸ್ವಲ್ಪ ಹರಿದಿರ್ತದೆ’ ಎಂದು ಗಹಗಹಿಸಿ ನಗುವ ವೈದ್ಯರ ವಿನೋದ ಅಪ್ಪಟ.

Read More

ಉಳಿದದ್ದೀಗ ನೆನಪುಗಳಷ್ಟೇ….

ಅಡಿಗರ ರಾಮನವಮಿಯ ದಿವಸ ಪದ್ಯದ ಬಗ್ಗೆ ಅವರೊಡನೆ ಚರ್ಚಿಸುತ್ತಿದ್ದ ದಿನಗಳು ನನ್ನ ಬದುಕಿನ ಸುವರ್ಣ ಯುಗ. ಅವ್ರಿಗೆ ತಂತ್ರದ ಬಗ್ಗೆ ವಿಶೇಷ ಆಸಕ್ತಿ ಎಂದಾಗ ಒಪ್ಪಿಕೊಂಡಿದ್ದರು. ಅಡಿಗರ ಕುರಿತ ದೂರುಗಳನ್ನೂ, ಮೆಚ್ಚುಗೆಯನ್ನೂ ಮುಕ್ತವಾಗಿ ಹೇಳುತ್ತಿದ್ದರು. ನೀವೇಕೆ ನಿಮ್ಮ ಬರೆಯುವ ರೀತಿಯನ್ನು ಪದೇ ಪದೇ ಬದಲಾಯಿಸಿದಿರಿ.
ತಮ್ಮ ಗ್ರಹಿಕೆಗೆ ಸಿಕ್ಕ ಕೆ.ವಿ. ತಿರುಮಲೇಶರ ಕುರಿತು ಬರೆದಿದ್ದಾರೆ ಮಾಲಿನಿ ಗುರುಪ್ರಸನ್ನ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ