Advertisement

Category: ಸಂಪಿಗೆ ಸ್ಪೆಷಲ್

ಮಾನ್ಸೂನ್ ಮಳೆ ಬಾಲ್ಯದ ನೆನಪುಗಳನ್ನು ಹೊತ್ತು ತರುವ ತೇರು: ಮಹಾಲಕ್ಷ್ಮೀ. ಕೆ. ಎನ್. ಬರಹ

ಬೆಚ್ಚಗಿನ ಸ್ವೆಟರ್, ರಾತ್ರಿ ಚಳಿಗೆ ಬೆಚ್ಚಗಿನ ಕಂಬಳಿ, ಮನೆಯ ಹೆಂಚಿನ ಮೇಲಿಂದ ಮಳೆ ನೀರು ಇಳಿಯುವ ಜೋಗುಳದಂತಹ ಶಬ್ದ, ಅಕ್ಕನ ಎಂಟು ತಿಂಗಳ ಮಗಳು ತೊಟ್ಟಿಲಿನಿಂದ ಹೊರಗೆ ತಿಳಿ – ಬಿಳಿ ಕಣ್ಣು ಬಿಟ್ಟು ಜಿಟಿಜಿಟಿ ಮಳೆಯ ರಭಸ ನೋಡುವ ಕುತೂಹಲದ ಕೂಸು. ಹಬೆಯಾಡುವ – ಹೊಗೆಯಾಡುವ ಸ್ನಾನದ ಮನೆ ಕಂಡರೆ ಸುಡುಸುಡು ನೀರನ್ನು ಒಂದೆರಡು ಕಡಾಯ ಮೈಮೇಲೆ ಸುರಿದುಕೊಳ್ಳುವ ಬಯಕೆ – ಹೊರಗಿನ ಕೆಲಸ ಮುಗಿಸಿ ಬಂದವರ ಮನಸ್ಸನ್ನು ಆಯಸ್ಕಾಂತದಂತೆ ಎಳೆಯುತ್ತಲೇ ಇರುತ್ತದೆ.
ಮಾನ್ಸೂನ್‌ ಕುರಿತು ಮಹಾಲಕ್ಷ್ಮೀ. ಕೆ. ಎನ್. ಬರಹ ನಿಮ್ಮ ಓದಿಗೆ

Read More

ತಮ್ಮ ಬೆಂಗಳೂರಿಗೆ ಬಂದ..: ವಿನಾಯಕ ಅರಳಸುರಳಿ ಲಲಿತ ಪ್ರಬಂಧ

ಕೊಂಚ ಸ್ಥಿತಿವಂತರಾಗಿದ್ದ ಪಕ್ಕದ ಮನೆಯ ಅಣ್ಣನ ಮಗನ ಬರ್ತಡೇ ಪಾರ್ಟಿಯಲ್ಲಿ ತಿನ್ನಲು ಸಿಕ್ಕ ಚಿಕ್ಕ ಕೇಕ್‌ನ ತುಣುಕನ್ನೇ ಸ್ವರ್ಗ ಲೋಕದ ತಿನಿಸೆಂಬಂತೆ ಅದೊಂದು ದಿನ ತಿಂದಿದ್ದೆವು. ಇನ್ನೊಂದು ಪೀಸ್ ಬೇಕು ಎಂಬ ಆಸೆಯನ್ನು ಬಾಯಲ್ಲೇ ಇಟ್ಟುಕೊಂಡು ಕೈ ತೊಳೆದಿದ್ದೆವು. ಯಾರೋ ತುಂಡೊಂದನ್ನು ಬೇಡವೆಂದು ತಟ್ಟೆಯಲ್ಲೇ ಬಿಟ್ಟಾಗ ಅದು ನಮಗೆ ಸಿಗುವುದೇನೋ ಎಂದು ಆಸೆಯಿಂದ ಕಾದಿದ್ದೆವು. ಇಂತಿಪ್ಪ ಅಪೂರ್ಣ ಬಯಕೆಗಳ ಬಾಲ್ಯವನ್ನೇ ಕಳೆದ ತಮ್ಮನಿಗೆ ಈಗಲೂ ಈ ಪಟ್ಟಣದ ವಿಶೇಷ ತಿಂಡಿಗಳ ಬಗ್ಗೆ ಆಸೆಯಿದ್ದರೆ ಅದರಲ್ಲಿ ಯಾವ ತಪ್ಪಾಗಲೀ, ಅತಿಯಾಸೆಯಾಗಲೀ ನನಗೆ ಕಾಣಲಿಲ್ಲ.
ವಿನಾಯಕ ಅರಳಸುರಳಿ ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

Read More

ಅಂತ್ಯವಿಲ್ಲದೊಂದು ಕತೆ: ನಿ”ಶಾಂತ” ಬರಹ

ಆಮೇಲೆ ಬರುಬರುತ್ತಾ ನಮ್ಮ ಭೇಟಿಯ ದಿನಗಳು ಕ್ಷೀಣಿಸಿದವು. ಆದರೂ ಯಾಕೋ ಆ ಕಾರಣಕ್ಕೆ ಇಬ್ಬರೂ ಜಗಳ ತೆಗೆಯುವುದನ್ನು ನಿಲ್ಲಿಸಿದ್ದೆವು. ಒಬ್ಬರು ಸಿಗ್ತಿಯಾ ಅಂದಾಗ, ಬೆಂಗಳೂರಿನ ಆ ತುದಿಯಲ್ಲಿದ್ದರೂ ಬಂದು ಭೇಟಿ ಮಾಡಿಹೋಗುತ್ತಿದ್ದೆವು. ಮತ್ತೆ ಮುಂದಿನ ಭೇಟಿ ಬಗ್ಗೆ ಮಾತೇ ಇಲ್ಲ… ಸುಮ್ಮನೇ ನಮ್‌ನಮ್ಮ ಕೆಲಸಗಳ ಕುರಿತು, ಮನೆಯ ಪರಿಸ್ಥಿತಿಗಳ ಕುರಿತ ಮಾತಷ್ಟೇ. ಅಲ್ಲಿ ಯಾವುದೇ ಕವಿತೆಗೂ, ಗಜಲ್‌ಗೂ ಅವಕಾಶವಿರುತ್ತಿರಲಿಲ್ಲ. ಅದು ಇಬ್ಬರಿಗೂ ಬೇಕಾಗೂ ಇರಲಿಲ್ಲವೆನ್ನಿಸುತ್ತೆ. ಹಾಗಾಗಿ ಮೂರು ವರ್ಷಗಳ ಒಡನಾಟದ ಸಲುವಾಗಿಯಾದರೂ ಒಂದು ಗುಡ್‌ಬೈ ಸಹ ಹೇಳದೇ ನಮ್ಮ ನಮ್ಮ ಬದುಕಿನ ಹಾದಿಯಲ್ಲಿ ಸಿಕ್ಕ ತಿರುವುಗಳಲ್ಲಿ ನಡೆದುಹೋಗಿಬಿಟ್ಟಿದ್ದೆವು.
 “ದಡ ಸೇರದ ದೋಣಿ” ಹೊಸ ಸರಣಿಯಲ್ಲಿ ಅಂತ್ಯ ಸಿಕ್ಕದ ಪ್ರೇಮವೊಂದರ ಕುರಿತು ನಿ”ಶಾಂತ” ಬರಹ

Read More

ಎಲ್ಲ ಕಾಲದ ಮನುಷ್ಯರೂ ಒಂದೇ!: ರೂಪಶ್ರೀ ಕಲ್ಲಿಗನೂರ್‌ ಬರಹ

ಗಣಿತದಲ್ಲಿ ತಪ್ಪು ಲೆಕ್ಕ ಬರೆದ ಮಕ್ಕಳನ್ನು ಕರೆದು ಅಂಗೈ ಮುಂದೆ ಮಾಡಲು ಹೇಳಿ, ಗೆಣ್ಣಿಗೆ ಹೊಡೆಯುತ್ತಿದ್ದ ರೀತಿ ಇನ್ನೂ ಚೆನ್ನಾಗಿ ನೆನಪಿದೆ. ಒಮ್ಮೊಮ್ಮೆ ತೀರಾ ಸಿಟ್ಟಿನಲ್ಲಿ ರಪರಪ ಬಾರಿಸಿದ್ರೆ, ಇನ್ನೂ ಕೆಲವೊಮ್ಮೆ ಏನೋ ಮನಸ್ಸಿಲ್ಲದೇ, ತನ್ನ ಕರ್ತವ್ಯ ಪಾಲಿಸುವುದಕ್ಕಾಗಿ ಇಷ್ಟು ಜೋರಾಗಿ ಹೊಡಿತಿದ್ದೀನಿ ಅನ್ನುವಂತೆ ಮುಖ ಮಾಡಿಕೊಂಡು ಶಿಕ್ಷಿಸುತ್ತಿದ್ದರು. ಹಾಗವರು ಮೃಗೀಯವಾಗಿ ಹೊಡೆಯುವಾಗ, ಅವರ ಮಗು ಅಲ್ಲೇ ಪಕ್ಕದಲ್ಲಿ ತೊಟ್ಟಿಲಲ್ಲಿ ನೆಮ್ಮದಿಯಿಂದ ಮಲಗಿರುತ್ತಿತ್ತು. ಅಷ್ಟು ಚಿಕ್ಕ ಮಗುವಿನ ತಾಯಿಯೊಬ್ಬಳು, ಓದಿನಲ್ಲಿ ತಪ್ಪು ಮಾಡಿದ ಮಕ್ಕಳಿಗೆ ಹೇಗೆ ಅಷ್ಟು ಮನುಷ್ಯತ್ವವಿಲ್ಲದೇ ಶಿಕ್ಷಿಸಲು ಸಾಧ್ಯ?
ರೂಪಶ್ರೀ ಕಲ್ಲಿಗನೂರ್‌ ಬರಹ ನಿಮ್ಮ ಓದಿಗೆ

Read More

“ಹಳದಿ ಕೊಡೆ”: ಡಾ. ಖಂಡಿಗೆ ಮಹಾಲಿಂಗ ಭಟ್ ಅನುವಾದಿಸಿದ ರಸ್ಕಿನ್‌ ಬಾಂಡ್‌ ಬರಹ

ಅವನು ಸಾಮಾನ್ಯವಾಗಿ ನನ್ನನ್ನು ನನ್ನ ಆಫೀಸ್‌ನಲ್ಲಿ ಕಾಣುತ್ತಿದ್ದನು. ಇಲ್ಲವಾದರೆ ಕಿರಿದಾದ ಹೂವಿನ ತೋಟದಲ್ಲಿ ಸ್ನ್ಯಾಪ್ ಡ್ರ್ಯಾಗನ್ ಮತ್ತು ಪೆಟೋನಿಯಾಗಳನ್ನು ಬೆಳೆಸಲೆತ್ನಿಸುವಾಗ ಕಾಣುವನು. ಬಿಸಿಲಿನ ದಿನಗಳಲ್ಲಿ ಬಾಯಾರಿಕೆ ಆರಿಸಲು ನೀರನ್ನು ಕುಡಿದು ಬಾಯಾರಿಕೆ ನಿವಾರಿಸಿಕೊಂಡ ಮೇಲೆ ಅವನು ತಗ್ಗಿದ ತೋಟದ ಗೋಡೆಯ ಮೇಲೆ ಐದರಿಂದ ಹತ್ತುನಿಮಿಷ ಕುಳಿತು ಪೇಟೆಯಲ್ಲಿನ ಹೊಸಹೊಸ ಸುದ್ದಿಗಳನ್ನೆಲ್ಲ ನನಗೆ ತಿಳಿಸುತ್ತಿದ್ದನು.
ರಸ್ಕಿನ್‌ ಬಾಂಡ್‌ ಬರೆದ “ಯೆಲ್ಲೋ ಅಂಬ್ರೆಲ್ಲಾ” ಬರಹವನ್ನು ಡಾ. ಖಂಡಿಗೆ ಮಹಾಲಿಂಗ ಭಟ್ ಕನ್ನಡಕ್ಕೆ ಅನುವಾದಿಸಿದ್ದು, ನಿಮ್ಮ ಓದಿಗೆ ಇಲ್ಲಿದೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ