Advertisement

Category: ಸಂಪಿಗೆ ಸ್ಪೆಷಲ್

ಅಡಿಗರ ‘ವರ್ಧಮಾನ’ ಮತ್ತು ಭಾರತದ ವರ್ತಮಾನ: ಡಾ. ವಿಶ್ವನಾಥ ನೇರಳಕಟ್ಟೆ ಬರಹ

ಕವಿತೆಯ ಕೊನೆಯ ಭಾಗ ಭೌತಿಕ ನೆಲೆಯ ಇಲ್ಲವೇ ಮೂರ್ತ ರೂಪದ ವಿಕಾಸ ಕ್ರಮವನ್ನು ಮೀರಿದ ಆಂತರಂಗಿಕವಾದ ಬೆಳವಣಿಗೆಯ ಕಡೆಗೆ ಬೆರಳು ತೋರುತ್ತದೆ. ವ್ಯಕ್ತಿತ್ವದೊಳಗಿನ ಹಲವು ಅಂಶಗಳು ಸಂಘರ್ಷಕ್ಕೆ ಒಳಗಾಗುತ್ತಲೇ ಕೆಡುಕನ್ನು ಕಳಚಿಕೊಂಡು ಒಳಿತಿನ ಬೆಳಕು ಉದಯಿಸುವುದರ ಕಡೆಗೆ ಕವಿತೆ ತುಡಿಯುತ್ತದೆ. ಬಾಹ್ಯ ಗೋಚರವೆನಿಸಿಕೊಳ್ಳಬಹುದಾದ ಬದುಕಿನ ಸಾಧನೆ ಆಂತರಂಗಿಕವಾದ ಪರಿಧಿಯಲ್ಲಿ ಪ್ರಕಟಗೊಂಡು ಜೀವನ ವಿಕಾಸಕ್ಕೆ ನೆಲೆಯಾಗುವ ಬಗೆ ಇಲ್ಲಿ ಗೋಚರವಾಗುತ್ತದೆ.
ಗೋಪಾಲಕೃಷ್ಣ ಅಡಿಗರ ‘ವರ್ಧಮಾನ’ ಕವಿತೆಯ ಕುರಿತು ಡಾ. ವಿಶ್ವನಾಥ ನೇರಳಕಟ್ಟೆ ಬರಹ

Read More

“ಹಳೆಯ ಪುಟಗಳಿಂದ…” ಸರಣಿಯಲ್ಲಿ ಡಾ. ಎಚ್.ಎಸ್. ಅನುಪಮಾ ಬರಹ ಬರಹ

ಹಂದಿ ಹಾವಳಿಯಿಂದ ಬೇಸತ್ತ ಹೆಗಡೇರು, ಈಗ ಹದಿನೈದು ದಿನದಿಂದ ತೋಟದ ಸುತ್ತ ಇರೋ ಮರಗಿಡ ಕಡಿಸಿ, ಐಬೆಕ್ಸ್ ಬೇಲಿ ಎಳೆಸಿ, ಅಲ್ಲೇ ಹತ್ತಿರ ಇರುವ ಕರೆಂಟು ಕಂಬದಿಂದ ರಾತ್ರಿ ಹೊತ್ತು ಬೇಲಿಗೆ ಕರೆಂಟು ಹರಿಸುವ ವ್ವವಸ್ಥೆ ಮಾಡಿಕೊಂಡಿದ್ದಾರೆ. ಕರೆಂಟು ತಾಗಿಯೋ, ಹೇಗೋ, ಅವರ ಬೇಲಿ ಹಾರಿಸಿದ್ದೆ ದಿನಾ ಮೂರು ನಾಕು ಮಂಗ ಸತ್ತು ಬೀಳತೊಡಗಿದವು. ಮೂವತ್ತು ಕೆ.ಜಿ. ಹತ್ತಿರವಿರುವ ಒಳ್ಳೆ ಗಟ್ಟಿಮುಟ್ಟಾದ ಮಂಗಗಳು! ಐಬೆಕ್ಸ್ ಬೇಲಿ ತಾಗಿಸಿಕೊಳ್ಳುವಷ್ಟು ದಡ್ಡ ಪ್ರಾಣಿಗಳೆಲ್ಲ ಮಂಗಗಳು ಎಂದುಕೊಳ್ಳುತ್ತಿರುವಾಗಲೇ, ಹೆಗಡೇರಿಗೆ ವಿಪರೀತ ಜ್ವರ ಬಂತು. ಕಂಗಾಲಾಗುತ್ತಾಳೆಂದು ಮೊದಲು ಹೆಂಡತಿಗೆ ಹೇಳದೇ, ಮನೆಯಲ್ಲಿದ್ದ ಕ್ರೋಸಿನ್, ವಿಕ್ಸ್ ಆಕ್ಷನ್ ನುಂಗುತ್ತ ಉಳಿದರು.
“ಹಳೆಯ ಪುಟಗಳಿಂದ…” ಸರಣಿಯಲ್ಲಿ ಡಾ. ಎಚ್.ಎಸ್. ಅನುಪಮಾ ಬರಹ

Read More

ಮರೆವು ಎಂಬ ಅದ್ಭುತ ಅಸ್ತ್ರ: ವಿನಾಯಕ ಎಸ್.‌ ನಾಯಕ ಬರಹ

ಹದಿಹರೆಯದವರನ್ನೊಮ್ಮೆ ಮಾತನಾಡಿಸಿ ಅವರ ಮಾತಿನ ಮಧ್ಯೆ ಹಲವಾರು ಸಾರಿ ಆದರು ನನಗೆ ನೆನಪೆ ಇಲ್ಲ ಎಂಬ ಶಬ್ಧ ಪುನರಾವರ್ತಿತವಾಗುತ್ತಾ ಇರುತ್ತದೆ. ಇದು ಯಾವ ಜಾಣ ಕುರುಡು ಅಲ್ಲ ಹಾಗೆ ವಿಷಯದ ತಿರುಚುವಿಕೆಯೂ ಅಲ್ಲ ಇಲ್ಲಿ ಕೇವಲ ಮಾತಿನ ನುಣುಚುವಿಕೆ ಅಷ್ಟೆ. ಹಳೆ ರೋಗಿಗೆ ವೈದ್ಯರ ಚೀಟಿ ಮರೆತು ಬಂದೆನೆಂಬುದು ಆ ಕ್ಷಣದ ಸಬೂಬು ವೈದ್ಯರ ಸಿಡುಕಿನಿಂದ ತಪ್ಪಿಸಿಕೊಳ್ಳಲು. ಎಲ್ಲಾ ವೃತ್ತಿಯವರಲ್ಲು ತಮ್ಮ ವೃತ್ತಿಗೆ ಸಂಬಂದಪಟ್ಟಂತೆ ಕಾರ್ಯಕಾರಣ ಮರೆವು ಸಂದರ್ಭಕ್ಕೆ ಅನುಗುಣವಾಗಿ ಸರ್ವೆಸಾಮಾನ್ಯ ಇದಕ್ಕೆ ಉಪಶಮನದ ಅವಶ್ಯಕತೆಯು ಇಲ್ಲಾ. ಇದು ರೋಗವು ಅಲ್ಲ.
ವಿನಾಯಕ ಎಸ್.‌ ನಾಯಕ ಬರೆದ ಪ್ರಬಂಧ ನಿಮ್ಮ ಓದಿಗೆ

Read More

“ಹಳೆಯ ಪುಟಗಳಿಂದ…” ಸರಣಿಯಲ್ಲಿ ವೈದೇಹಿ ಬರಹ

ಏನು ಕಾರಣವೋ, ಮದುವೆಯಾಗಿಯೂ ಒಬ್ಬಂಟಿಯಿದ್ದರು. ಬರೆಯುತ್ತಿದ್ದಂತೆ, ಉಸಿರನ್ನು ನಡುನಡುವೆ ಸಶಬ್ದ ಒಳಗೆಳೆದುಕೊಂಡು ಸೇಂಕಿ ಮಾತಾಡುವ ಅವರ ಪರಿ ಅಚ್ಚ ನೆನಪಿನಿಂದ ಹೇಗೆ ಎದ್ದು ಬರುತ್ತಿದೆ! ಹೋಗಲಿ, ಹೊಲಿಗೆ ದುಡ್ಡು ಇಷ್ಟಾಯಿತು ಅಂತ ಹೇಳುವುದರಲ್ಲಾದರೂ ಸಂಕೋಚ ಬಿಡುವರೆ? ಇಲ್ಲ. ಹೇಳಿದ ಮೇಲೆ ಈಗ ಇಟ್ಟುಬಿಡಿ ಅಂತ ಅಂದವರೂ ಅಲ್ಲ. ಸ್ವಲ್ಪ ಕೊಟ್ಟು ಉಳಿದದ್ದು ಎರಡುದಿನ ಬಿಟ್ಟು ಕಳಿಸಿಕೊಡುತ್ತೇನೆ ಎಂದರೆ ‘ಆಯಿತಪ್ಪ, ಅಡ್ಡಿಲ್ಲ ಅಡ್ಡಿಲ್ಲ’. ಕೊಟ್ಟ ದುಡ್ಡನ್ನು ಎದುರೇ ಎಣಿಸಿದವರೂ ಅಲ್ಲ. ನನಗೆ ತಿಳಿದಂತೆ ದುಡ್ಡಿನ ಮಟ್ಟಿಗೆ ಅವರಿಗೆ ಮೋಸಮಾಡಿದ ಮನೆಗಳೂ ಇಲ್ಲ. ಬಿಡಿ.
“ಹಳೆಯ ಪುಟಗಳಿಂದ…” ಸರಣಿಯಲ್ಲಿ ಕನ್ನಡದ ಅನುಪಮ ಲೇಖಕಿ ವೈದೇಹಿ ಬರಹ

Read More

ಕೊಡಗು ಜಿಲ್ಲಾ ಹದಿನೇಳನೆಯ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಅಬ್ದುಲ್ ರಶೀದ್ ಭಾಷಣ

ಇವತ್ತು ಇಲ್ಲಿ ಈ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವ ಈ ಬಿರುಬಿಸಿಲ ಹೊತ್ತು ಅವರು ಯಾರೂ ಇಲ್ಲಿ ಇಲ್ಲ. ಆದರೆ ಅವರ ಹಾಗಿರುವ ಹಲವು ಹಾಡುಗಾರರೂ ಇಲ್ಲೇ ಅಕ್ಕಪಕ್ಕ ತೋಟದಲ್ಲಿ ಕೆಲಸ ಮಾಡುತ್ತಿರಬಹುದು. ಅಥವಾ ಅವರ ಜಾಗವನ್ನು ಅಸ್ಸಾಮಿನಿಂದ ಬಂಗಾಳದಿಂದ ಬಂದ ಕೆಲಸಗಾರರು ವಹಿಸಿಕೊಂಡಿರಬಹುದು. ಅವರಲ್ಲೂ ಇಂತಹ ಕಥೆಗಾರರಿರಬಹುದು. ಸುಮಾರು ಐವತ್ತು ವರ್ಷಗಳ ಹಿಂದೆ ಅಸ್ಸಾಮಿನಿಂದ ಜೇನುಪೆಟ್ಟಿಗೆಗಳನ್ನು ಇಡಲು ದಾಸ್ ಎಂಬ ಯುವಕ ಬಂದಿದ್ದ. ಅವನೂ ಆಗ ಬಾಲಕನಾಗಿದ್ದ ನನಗೆ ಕಥೆಗಳನ್ನು ಹೇಳುತ್ತಿದ್ದ. ಈಗ ಬಹುಶಃ ಆತ ಎಲ್ಲಿರಬಹುದೋ ಗೊತ್ತಿಲ್ಲ. ಆದರೆ ಆತ ನನ್ನ ಕಥಾ ಪಾತ್ರವಾದ.
ಕೊಡಗು ಜಿಲ್ಲೆಯ ಸುಂಟಿಕೊಪ್ಪದಲ್ಲಿ ನಡೆದ “ಕೊಡಗು ಜಿಲ್ಲಾ ಹದಿನೇಳನೆಯ ಕನ್ನಡ ಸಾಹಿತ್ಯ ಸಮ್ಮೇಳನ”ನ ಅಧ್ಯಕ್ಷರಾದ ಅಬ್ದುಲ್ ರಶೀದ್ ಭಾಷಣ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ