Advertisement

Category: ಸಂಪಿಗೆ ಸ್ಪೆಷಲ್

ಮುನ್ನೂರ ಅರವತ್ತೈದು ದಿನಗಳ ಹೊಸ ತಃಖ್ತೆ!

ಹೊಸದಿನಗಳಲ್ಲಿ ನೀವು ಬರೆಯುವ ದಿನಾಂಕದಲ್ಲಿ ಹಳೆ ಇಸ್ವಿ ಇಣುಕುತ್ತದೆ. ಮತ್ತೆ ಮತ್ತೆ ಹಳೆಯದನ್ನೇ ಬರೆದು ಛೇ ಎಂದು ತಿದ್ದುತ್ತೇವೆ. ಹೊಸದಕ್ಕೆ ಹೊಂದುಕೊಳ್ಳುವುದಕ್ಕೆ ಸಮಯಬೇಕು. ಹಳೆಯದನ್ನು ಬಿಡುವುದಕ್ಕೆ ಸಮಯ ಬೇಕು. ಈ ಹಳೆಯದು ಮತ್ತು ಹೊಸದರ ಸಂಬಂಧ ‘ನ್ಯೂ ಇಯರ್’ ದಿನ ಕೇಕ್ ಕತ್ತರಿಸಿ ತೆಗೆದಂತೆ ಅಲ್ಲ. ಹೊಸದರೊಳಗೆ ಹಳೆಯದು ಸೇರಿಕೊಳ್ಳಬೇಕು. ಹಳೆಯದರ ಒಡಲಿನಲ್ಲಿ ಹೊಸತರ ಗುಟ್ಟಿರಬೇಕು.
ಸದಾಶಿವ ಸೊರಟೂರು ಪ್ರಬಂಧ

Read More

ನನ್ನ ಉಂಡೆ ಪಂಚಮಿ ಕತೆ!

ಪಾಕ ಹದಕ್ಕೆ ಬಂದಂತೆನಿಸಿತು. ಅಷ್ಟೂ ಸಾಮಾಗ್ರಿ ಸುರುವಿ ಗೊಟ.. ಗೊಟ.. ಗೊಟಾಯಿಸಿ ಪರಾತಕ್ಕೆ ಸುರುವಿದೆ. ಈಗಲೆ ಕಟ್ಟುವದೋ.. ಆರಿದ ನಂತರವೋ..? ಮತ್ತೆ ಓವರ್ ಟು ಅವ್ವಾ.. ತಲೆ ಇದ್ದಲ್ಲಿಂದಲೆ ಓಡಿತು. ಆರಿದ ಮೇಲೆ ಉಂಡೆಯಾಗುವದಿಲ್ಲವೋ ಮಂಕೆ. ಉಂಡೆ ಬಂಡೆಯಾಗುತ್ತದೆ.. ಅವ್ವ ತಿಳಿ ಹೇಳಿದಂತಾಯಿತು. ಅಂಗೈಗೆ ಎಣ್ಣೆ ನೀರು ಸವರಿಕೊಂಡು ಸುಡು ಸುಡುವದನ್ನೆ ಎಳೆದುಕೊಂಡೆ. ಬರೆ ಕೊಟ್ಟಂತಾಯಿತು. ಹಾ.. ಎಂದಿತು ಜೀವ. ಅದು ನೋವೋ ಸುಖವೋ ಅಂತೂ ಉಂಡೆಗಳೆಂಬ ಗುಂಡುಗಳು ತಯಾರಾದವು.
ಲಿಂಗರಾಜ ಸೊಟ್ಟಪ್ಪನವರ್ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಭಾರತದ ಮೊದಲ ಮಕ್ಕಳ ಮೂಕಿ ಚಿತ್ರ ʻದಿ ಗಾರ್ಡ್‌ʼ

ಮಾತುಗಳು ಇರಬೇಕಾದ ಜಾಗದಲ್ಲಿ ಭಾವ ಸಂವೇದನೆ ಮತ್ತು ಸಂಜ್ಞೆಗಳನ್ನು ಪ್ರತಿಮಾತ್ಮಕವಾಗಿ ಸೃಷ್ಟಿಸಿ ಮೌನ ಪ್ರತಿಮೆ, ಭಾವರೂಪಕಗಳಲ್ಲೇ ಕತೆ ಹೇಳುವ ಪ್ರಯೋಗದಲ್ಲಿ ನಿರ್ದೇಶಕರು ಯಶಸ್ವಿಯಾಗಿದ್ದಾರೆ. ಇದು ಹಿರಿಯರ ಚಿತ್ರವಾಗಿದ್ದರೂ ಅಷ್ಟೇನೂ ಮಹತ್ವ ಅಥವಾ ಹೊಸತನದ ವಿಶೇಷತೆ ಇದಕ್ಕೆ ಸಲ್ಲುತ್ತಿರಲಿಲ್ಲ. ಈ ರೀತಿಯ ಮಕ್ಕಳ ಚಿತ್ರವನ್ನು ನಿರ್ಮಿಸಿದ ದಾಖಲೆ ಭಾರತೀಯ ಚಲನಚಿತ್ರ ಇತಿಹಾಸದಲ್ಲೇ ಇಲ್ಲ. ಹಾಗಾಗಿ ʻದಿ ಗಾರ್ಡ್‌ʼ ಚಿತ್ರ ಆ ಸ್ಥಾನವನ್ನು ತುಂಬಿ ಕನ್ನಡದ ಹೆಚ್ಚುಗಾರಿಕೆ ಮೆರೆದಿದೆ.
ಉಮೇಶ್‌ ಬಡಿಗೇರ ನಿರ್ದೇಶನದ ಭಾತರದ ಮೊದಲ ಮಕ್ಕಳ ಮೂಕಿ ಚಿತ್ರ ʻದಿ ಗಾರ್ಡ್‌ʼ ಕುರಿತು ಕುಮಾರ ಬೇಂದ್ರೆ ಬರಹ

Read More

ಪೊಟ್ಟಣದ ಮೆಲುಕಿನಲ್ಲಿ..

ಅಶ್ವತ್ಥ ಕಟ್ಟೆಯ ದೊಡ್ಡ ಮರದ ಕೊಂಬೆಗಳಲ್ಲಿ, ಬೀದಿಯ ಸುತ್ತಮುತ್ತಲ ಮನೆಗಳು, ಕಾಂಪೌಂಡ್ ಗೋಡೆಗಳ ಮೇಲೆ, ರಾಮಮಂದಿರದೊಳಗೆ ಹಾಗೂ ದಾರಿಯುದ್ದಕ್ಕೂ ಇರುತ್ತಿದ್ದ ಕೋತಿಗಳ ಗುಂಪಿನ ದಾಳಿಯ ಭೀತಿಯಲ್ಲೇ ದಿನಸಿ ಬ್ಯಾಗನ್ನು ಉದ್ದನೆಯ ಲಂಗದ ನೆರಿಗೆಗಳಲ್ಲಿ ಮುಚ್ಚಿಟ್ಟುಕೊಂಡು ಅವುಗಳಿಂದ ತಪ್ಪಿಸಿಕೊಂಡು ಮನೆಗೆ ಹೋಗುವಷ್ಟರಲ್ಲಿ ಹೈರಾಣಾಗುತ್ತಿದ್ದೆ.
ಎಂ.ಜಿ. ಶುಭಮಂಗಳ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಮುಸ್ಸಂಜೆಯ ಮಧುರವಾಗಿಸುವ ಪರಿ

ಅವರು ಅಪ್ಪನ ಚಡ್ಡಿ ದೋಸ್ತ್. ಅದೊಂದು ಕಾಲ್ ಇಡೀ ವಾತಾವರಣವನ್ನು ತಿಳಿಯಾಗಿಸಿತು. ಹೋದವರು ಹೋಗೇ ಬಿಟ್ಟರು. ಎಲ್ಲಿ ಹುಡುಕಿದರೂ ಸಿಗುವುದೂ ಇಲ್ಲ, ಹಿಂದಿರುಗಿ ಬರುವುದೂ ಇಲ್ಲ. ಆದರೆ ಇದ್ದವರು ಇನ್ನೂ ಇರಲೇ ಬೇಕಾದ ಅನಿವಾರ್ಯ. ತಮ್ಮ ಸಮಯ ಬರುವವರೆಗೆ… ಅದೂ ಇದ್ದಷ್ಟು ಕಾಲ ನೆಮ್ಮದಿಯಿಂದ ದಿನಗಳೆಯಬೇಕು ಎನಿಸಿ ಈ ರೀತಿ ಮಾಡಿದೆ. ಆದರೂ ಅಪ್ಪನ ಜೀವನೋತ್ಸಾಹ ಎಲ್ಲರಿಗೂ ಮಾದರಿಯಾಗುವಂತಿದೆ.
ಕಾವ್ಯಶ್ರೀ ಮಹಾಗಾಂವಕರ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ