Advertisement

Category: ಸಂಪಿಗೆ ಸ್ಪೆಷಲ್

ಕಲಿಸುವಷ್ಟೇ, ಕಲಿಯುವುದೂ ಇದೆ…

ಈ ಪುಟ್ಟ ವೀಡಿಯೋ ಎತ್ತುವ ಪ್ರಶ್ನೆಗಳು ಅಸೀಮ. ನಾವು ಎಂಥ ವ್ಯವಸ್ಥೆ ಮತ್ತು ಪರಿಸ್ಥಿತಿಯಲ್ಲಿ ಇದ್ದೇವೆ ಎಂದು ನೋವಾಗುತ್ತದೆ. ಆದರೆ ನೋಯುವುದಕ್ಕಿಂತ ಸಧ್ಯದ ಜರೂರತ್ತೆಂದರೆ ನಾವು ನಮ್ಮ ಹೆಣ್ಣುಮಕ್ಕಳ ಬ್ಯಾಗಿನಲ್ಲಿ ಕಸ್ಮೆಟಿಕ್ಸ್ ಗಳಿಗಿಂತಲೂ ಮುಖ್ಯವಾಗಿ ಒಂದು ಬ್ಲೇಡನ್ನೋ ಅಥವಾ ಪೆಪ್ಪರ್‌ ಸ್ಪ್ರೇಯನ್ನೋ ಇಟ್ಟುಕೊಳ್ಳುವ ಅಭ್ಯಾಸ ಮಾಡಿಸಬೇಕಿದೆ. ಮತ್ತದನ್ನು ಸರಿಯಾದ ಸಂದರ್ಭದಲ್ಲಿ ಸರಿಯಾಗಿ ಬಳಸುವುದನ್ನೂ ಕಲಿಸಬೇಕಿದೆ. ಯಾರೋ ಬಂದು ನಮ್ಮನ್ನು ಕಾಪಾಡುತ್ತಾರೆ ಎಂದು ಕಾಯುವ ಬದಲು, ನಮ್ಮನ್ನು ನಾವೇ ಕಾಪಾಡಿಕೊಳ್ಳುವುದು ಒಳಿತಲ್ಲವೇ…
ಆಶಾ ಜಗದೀಶ್‌ ಬರಹ ನಿಮ್ಮ ಓದಿಗೆ

Read More

ಕೈ ಹಿಡಿದು ಮುನ್ನಡೆಸುವ ಕತೆಗಳೆಂಬ ದೋಣಿಗಳು

ಸೂರ್ಯೋದಯದಲ್ಲೋ, ಸೂರ್ಯಾಸ್ತದಲ್ಲೋ ಆಗಸದಲ್ಲಿ ಚೆಲ್ಲಿ ಹೋದ ಬಣ್ಣಗಳು ಕ್ಷಣ ಕ್ಷಣಕ್ಕೂ ಬದಲಾಗುತ್ತಾ ಹೋದಂತೆ, ಗ್ರಹಿಕೆಗಳು ಒಬ್ಬರಿಂದ ಮತ್ತೊಬ್ಬರಿಗೆ ಬದಲಾಗುತ್ತಲೇ ಇರುತ್ತವೆ. ಒಬ್ಬನೇ ವ್ಯಕ್ತಿಯು ಒಂದೊಂದು ಕಾಲದಲ್ಲಿ ಬದುಕನ್ನು ಗ್ರಹಿಸುವ ರೀತಿಯೂ ಬದಲಾಗಿರುತ್ತದೆಯಲ್ಲವೇ. ಹಾಗೆಯೇ ಈ ಕತೆಗಳು ಕೂಡ ಎಂದೆನಿಸುತ್ತದೆ. ಹಾಗೆ ನೋಡಿದರೆ ಎಷ್ಟೊಂದು ಕಲಾತ್ಮಕವಾದ ಕತೆಗಳನ್ನು ಬರೆದರೂ ʻಕತೆಗಾರರುʼ ರೂಪುಗೊಳ್ಳುವುದು ಓದುಗರ ಮನಸ್ಸಿನಲ್ಲಿ ಅಲ್ಲವೇ.
ಕತೆಗಳ ಜಾಡು ಹಿಡಿದ ಬರಹವೊಂದನ್ನು ಬರೆದಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ.

Read More

ರಂಗಸ್ಥಳದಲ್ಲೀಗ ಸಮಯಮಿತಿಯ ವಾಗ್ವಿಲಾಸ

1985 ಕ್ಕಿಂತ ಮುಂಚೆಯೇ  ಇಡಗುಂಜಿ ಮೇಳ ವಿವಿಧ ಪ್ರವಾಸ ಕೈಗೊಳ್ಳುವ ಸಂದರ್ಭದಲ್ಲಿ ಕಾಲಮಿತಿಯ ಯಕ್ಷಗಾನ  ಪ್ರದರ್ಶನವನ್ನು ಆರಂಭಿಸಿತ್ತು. 1968 ರಲ್ಲಿ ಮತ್ತು 1971ರಲ್ಲಿ ದೆಹಲಿಯಲ್ಲಿ ಜರಾಸಂಧವಧೆ, ಕರ್ಣಪರ್ವ ಮುಂತಾದ ಪ್ರಸಂಗಗಳನ್ನು ಕಾಲಮಿತಿಯಲ್ಲಿ ಪ್ರದರ್ಶಿಸಿತ್ತು. ಆ ಸಂದರ್ಭದಲ್ಲಿ ಜನರ ಮನಸ್ಸು ಇನ್ನು ಸಮಯಮಿತಿಗೆ ಒಗ್ಗಿಕೊಳ್ಳದ ಸಂದರ್ಭವಾದರೂ, ಸುಮಾರು 75ಕ್ಕೂ ಮಿಕ್ಕಿ ಪ್ರದರ್ಶನ ನಡೆಯಿತು. ಹಾಗೆ ನೋಡಿದರೆ ಜಗತ್ತಿನ ಯಾವ ರಂಗಭೂಮಿಗೊ, ನಾಟ್ಯಪ್ರಕಾರಕ್ಕೋ ʻಕಾಲಮಿತಿʼ ಎಂಬುದು ಒಂದು ಚರ್ಚಿಸಬೇಕಾದ ವಿಷಯವೇ ಅಲ್ಲ ಎನ್ನುವ  ಹಿರಿಯ ಕಲಾವಿದ ಕೆರೆಮನೆ ಶಿವಾನಂದ ಹೆಗಡೆ ಅವರು ಮೇಳವನ್ನು ನಡೆಸುವವರೂ ಹೌದು. ಹಿರಿಯ ಕಲಾವಿದರೂ ಹೌದು. ಅವರು ಬರೆದ ಲೇಖನ ಇಂದಿನ ಓದಿಗಾಗಿ. 

Read More

‘ಸುದರ್ಶನ’: ಧ್ಯೇಯ ಆದರ್ಶಗಳ ದರ್ಶನ

ಸುದರ್ಶನನು ದೀನಾನಂದನಾಗಿ ಗಳಿಸಿದ ಜನಪ್ರಿಯತೆ, ಯಶಸ್ಸು, ನಿರ್ಲಿಪ್ತತೆ ಮತ್ತು ನೈತಿಕ ಕಟ್ಟುಪಾಡುಗಳಿಗೆ ಒಗ್ಗಿದ ಬದುಕಿನ ಕಡೆಗೆ ಕಾದಂಬರಿಯು ಗಮನವನ್ನು ಹರಿಸಿದ್ದರೂ ಇದನ್ನು ಕೇವಲ ಸುದರ್ಶನನ್ನು ಕುರಿತ ಕಾದಂಬರಿಯನ್ನಾಗಿ ಓದಲಾಗದು. ಆತನು ಕಾದಂಬರಿಯ ಪ್ರಧಾನ ಪಾತ್ರವಾದರೂ ಇವನೊಂದಿಗೆ ವೈದೃಶ್ಯದಲ್ಲಿ ನಿಲ್ಲಬಲ್ಲ ಹಲವು ಪಾತ್ರಗಳು ಇವೆ. ಆ ಪಾತ್ರಗಳು ಸೂಚಿಸುವ ಬಹುಮುಖೀ ನೆಲೆಗಳ ಒಟ್ಟು ವಿನ್ಯಾಸದಲ್ಲಿ ಕಾದಂಬರಿಯನ್ನು ಗ್ರಹಿಸಬೇಕಾಗುತ್ತದೆ. ಆನಂದಕಂದರ ‘ಸುದರ್ಶನ’ ಕಾದಂಬರಿಯ ಕುರಿತು ಡಾ. ಸುಭಾಷ್ ಪಟ್ಟಾಜೆ ಬರಹ ನಿಮ್ಮ ಓದಿಗೆ

Read More

ಕನ್ನಡಿಗರೆಂಬ ಸಂಪನ್ನರೂ ಸಜ್ಜನರೂ..

ಇಡೀ ಭಾರತ ದೇಶದಲ್ಲಿ ಸಂಪನ್ನರೆಂದರೆ ಯಾರು? ಎಂದು ಯಾರಾದರೂ ಕೇಳಿದರೆ ನಾನಂತೂ ಕನ್ನಡಿಗರೇ ಎಂದು ಕೇಕೆ ಹಾಕಿ ಹೇಳಬಲ್ಲೆ. ಏಕೆಂದರೆ ಕನ್ನಡಿಗರಷ್ಟು ಸಂಪನ್ನರು ಮತ್ತು ಸಹೃದಯಿಗಳು ಭಾರತದ ಇತರೆ ರಾಜ್ಯಗಳಲ್ಲಿ ಇಲ್ಲ. ಇಂದು ಯಾವುದೇ ರಾಜ್ಯದ, ಯಾವುದೇ ಭಾಷೆಯ ಮಂದಿ ಕರ್ನಾಟಕದಲ್ಲಿ ಬಂದು ನೆಲೆಸಬಹುದು. ಕರ್ನಾಟಕದಲ್ಲಿ ಉದ್ಯೋಗ, ವ್ಯಾಪಾರ ಮಾಡಿಕೊಂಡು ನೆಮ್ಮದಿಯಿಂದ ಜೀವಿಸಬಹುದು. ಎರಡ್ಮೂರು ತಲೆಮಾರುಗಳಿಂದ ಕರ್ನಾಟಕದಲ್ಲಿ ನೆಲೆಸಿದ್ದರೂ ಕನ್ನಡ ಭಾಷೆ ಕಲಿಯದೆ ಸುಖವಾಗಿ ಜೀವನ ನಡೆಸಬಹುದು.  ಕನ್ನಡಿಗರು ಎಷ್ಟು ಸಂಪನ್ನ ಮಂದಿಯೆಂದರೆ ಅನ್ಯಭಾಷಿಕರಿಗೆ ಕನ್ನಡ ಕಲಿಸುವ ಬದಲು ತಾವೇ ಅವರ ಭಾಷೆ ಕಲಿತು, ಅವರೊಂದಿಗೆ ಅದೇ ಭಾಷೆಯಲ್ಲಿ ವ್ಯವಹರಿಸುತ್ತಾರೆ. ವಿಕಾಸ ಹೊಸಮನಿ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ