Advertisement

Category: ಸಂಪಿಗೆ ಸ್ಪೆಷಲ್

ಗುಬ್ಬಕ್ಕ ಸಿಕ್ಕಳು ಸುಮ್-ಸುಮ್ನೆ ನಕ್ಕಳು!

ಕೈ ಬೊಗಸೆಯಲ್ಲಿ ನೀರು ಹಿಡಿದು ಬಂದಾಗ ನನ್ನ ಕೈ ಮೇಲೆ ಎಗರಿ ಬಂದು ಕುಳಿತು, ನೀರನ್ನು ಗುಟುಕು ಗುಟುಕಾಗಿ ಕುಡಿದು ನನ್ನ ಮುಖ ನೋಡಿದ ಗುಬ್ಬಕ್ಕ “ನಮ್ಮ ಪೂರ್ವಜರು, ನಿಮ್ಮ ತರಹ ಸಹಾಯ ಮಾಡಿದವನ್ನೆಲ್ಲ ಹುಡುಕಿ ನಮ್ಮೆಲ್ಲರ ಪರವಾಗಿ ಕೃತಜ್ಞತೆ ಹೇಳಲು ಆಜ್ಞೆ ಮಾಡಿದ್ದರು. ನಿಮ್ಮ ಪೂರ್ವಜರಿಗೆಲ್ಲರಿಗೂ, ನಿನ್ನ ಮೂಲಕ ನಮ್ಮೆಲ್ಲರ ನಮಸ್ಕಾರಗಳು. ಈ ಸಣ್ಣ ಪ್ರಯತ್ನದಿಂದ ನಮ್ಮೆಲ್ಲ ಬಂಧುಗಳಿಗೆ ಶಾಂತಿ ದೊರೆಯುತ್ತದೆ.
ಬೆಂಗಳೂರಿನಂಥ ಮಹಾನಗರಗಳನ್ನು ತೊರೆದುಹೋದ ಗುಬ್ಬಚ್ಚಿಗಳ ಕುರಿತು ಬರೆದಿದ್ದಾರೆ ವಾಸುದೇ ಕೃಷ್ಣಮೂರ್ತಿ

Read More

ಔದಾರ್ಯದ ಉರುಳಲ್ಲಿ ಚಿಕ್ಕೋಳೂ ಹಿರಿದಿಮ್ಮಿ

ಕಷ್ಟದಲ್ಲಿರುವವರಿಗೆ ಸಹಾಯ ಮಾಡಬೇಕೆಂಬುದು ನಿಜವಾದರೂ, ಔದಾರ್ಯವು, ನೀಡುವವನ ಬದುಕನ್ನೆ ಕಸಿದುಕೊಳ್ಳುವಷ್ಟು ಅತಿಯಾಗಿ ಇರಬಾರದೇನೋ. ಜನಪದ ಕಥನ ಕಾವ್ಯವಾದ ‘ಚಿಕ್ಕೋಳು ಹಿರಿದಿಮ್ಮಿ’ಯಲ್ಲಿ ಮನುಷ್ಯರ ಔದಾರ್ಯ, ಪ್ರಾಣಿಗಳ ಪ್ರಾಮಾಣಿಕತೆಯ ಉತ್ತುಂಗದ ಪರಿಚಯವಾದಂತೆಯೇ, ಮನುಷ್ಯರು ಮೃಗಕ್ಕಿಂತಲೂ ಕೀಳಾಗಿ ವರ್ತಿಸುವ ಮತ್ತೊಂದು ಪಾತ್ರದ ಪರಿಚಯವೂ ಆಗುತ್ತದೆ. ಈ ಖಂಡ ಕಾವ್ಯದ ಕತೆಯನ್ನು ಹೇಳಿದ್ದಾರೆ ಲೇಖಕಿ ಸುಮಾವೀಣಾ.

Read More

ತಪ್ಪು ಮಾಡುವುದಿಲ್ಲವೆಂದು ಎಷ್ಟೇ ನಿರ್ಣಯಿಸಿದರೂ…

ತಾಯಿಯ ಗರ್ಭದಲ್ಲಿರುವ ಭ್ರೂಣವೊಂದು ಹಿಂದಿನ ಜನ್ಮದಲ್ಲಿ ತಾನು ಮಾಡಿದ ತಪ್ಪುಗಳನ್ನೆಲ್ಲ ನೆನಪಿಸಿಕೊಳ್ಳುತ್ತದೆ. ಮುಂದಿನ ಜನ್ಮದಲ್ಲಿ ಅಂತಹ ತಪ್ಪುಗಳನ್ನು ಖಂಡಿತಾ ಮಾಡುವುದಿಲ್ಲವೆಂದು ನಿಕ್ಕಿ ಮಾಡಿಕೊಳ್ಳುತ್ತದೆ. ಯಾವುದು ಆ ತಪ್ಪುಗಳು ಎಂದು ಸಿಂಹಾವಲೋಕನ ಮಾಡಿದರೆ -ಅವುಗಳೇ ಜೀವನದ ಹತ್ತು ಅವಸ್ಥೆಗಳು. ಗುರುಗ್ರಂಥದಲ್ಲಿರುವ ‘ಗುರುಬನಿ’ಯೊಂದನ್ನುಆಯ್ದುಕೊಂಡು ಪ್ರಸಿದ್ಧ ಭರತನಾಟ್ಯ ಕಲಾವಿದೆ ರಮಾವೈದ್ಯನಾಥನ್ ಅವರು ಅದನ್ನು ರಸಿಕವರ್ಗಕ್ಕೆ ಉಣಬಡಿಸಿದ ನೃತ್ಯರೂಪಕವೇ ಜೀವದಶಾವಸ್ಥಾ. ಈ ಕುರಿತು ಕೋಡಿಬೆಟ್ಟು ರಾಜಲಕ್ಷ್ಮಿ ಬರೆದ ಲೇಖನವೊಂದು ಇಂದಿನ ಓದಿಗಾಗಿ.

Read More

ಪೂರಂ ಎಂಬ ಸಂಭ್ರಮವೂ ಆನೆಗಳ ಗಾಂಭೀರ್ಯವೂ

ನಾವು ಅಲ್ಲಿಗೆ ಹೋಗಿ ತಾಸು ಹೊತ್ತಿನ ಮೇಲೆ ಒಂದೊಂದೇ ಆನೆಗಳು ಮೆಲ್ಲಗೆ ತಮ್ಮ ಮೇಲೆ ನಿಂತಿದ್ದ ಎರಡು-ಮೂರು ಜನ ಹಾಗೂ ಮಾವುತರೊಟ್ಟಿಗೆ, ದೇವಸ್ಥಾನದ ಒಳಗೆ ಹೊರಡಲಾರಂಭಿಸಿದವು. ನಮಗೆ ಮೂರ್ನಾಲ್ಕು ಆನೆಗಳನ್ನು ಹತ್ತಿರದಿಂದಲೇ ಕಣ್ತುಂಬಿಕೊಳ್ಳುವ ಅವಕಾಶ ಸಿಕ್ಕಿತು. ಇನ್ನೇನು ಆ ಕಾರ್ಯಕ್ರಮ ಮುಗಿಯುವ ಹಂತಕ್ಕೆ ಬಂದಾಗ, ನಾವು ಮೆಲ್ಲನೆ ಅಲ್ಲಿಂದ ಹೊರಟು, ಕಾಂಪೌಂಡ್‌ನ ಇನ್ನೊಂದು ಬದಿಗೆ ಬಂದು, ಆನೆಗಳ ಸಾಲು ನಿಂತಿದ್ದಲ್ಲಿಗೆ ಹೋದಾಗ, ಅಲ್ಲಿ ಆಗಲೇ ಜನರ ಗುಂಪು ಮೆಲ್ಲನೆ ಕರಗಲಾರಂಭಿಸಿದ ಕಾರಣ, ಅಲ್ಲಿ ಇನ್ನೊಂದಷ್ಟು ಹತ್ತಿರದಿಂದ ಆನೆಗಳನ್ನು ಕಾಣಲು ಸಿಕ್ಕಿತು.
ಕೇರಳದ ತ್ರಿಶ್ಶೂರ್‌ ಪೂರ ಕುರಿತು ತಮ್ಮ ಅನುಭವಗಳನ್ನು ಬರೆದಿದ್ದಾರೆ ರೂಪಶ್ರೀ ಕಲ್ಲಿಗನೂರ್

Read More

ಹಾಗಾದರೆ ನಾನು ನಿಮಗೆ ಬೇಡವಾ.. ಮಳೆಯದ್ದೊಂದು ಪ್ರಶ್ನೆ

ಈ ಮಳೆಯೋ ಜೀವ ಸಂಕುಲವನ್ನು ಉಳಿಸಲೆಂದೇ ದೇವರು ಬಂದಂತೆ ಪ್ರತೀ ವರ್ಷ ನಮ್ಮ ಮೇಲೆ ನಂಬಿಕೆಯಿಟ್ಟು ಬರುತ್ತದೆ. ಅದು ಕೊಡುವ ಖುಷಿಯಿಂದ ಕವನವೊಂದು ಮೊಳಕೆಯೊಡೆದರೆ ಆ ಸಾಲುಗಳನ್ನು ಯಾರೊಡನೆ ಹಂಚಿಕೊಳ್ಳಬೇಕು ಎಂದು ತಿಳಿಯದೇ ಮನಸ್ಸು ತಬ್ಬಿಬ್ಬಾಗುತ್ತದೆ. ಎಲ್ಲಿಯೂ ಹರಿದು ಹೋಗಲು ಒಂದಿಷ್ಟು ಜಾಗವಿಲ್ಲದೇ, ಬಂಧಿಯಾದಂತೆ ಚಡಪಡಿಸುವ ಮಳೆನೀರಿಗೆ ‘ಪ್ರವಾಹ’ವೆಂಬ ನಾಮಕರಣವಾಗಿದೆ. ಆದರೂ ಈ ಮಳೆಯೋ ನಿಸ್ವಾರ್ಥಿ ಪ್ರೇಮಿಯಂತೆ ನಮ್ಮನ್ನು ಹಚ್ಚಿಕೊಂಡು, ಮುದ್ದಿಸುತ್ತ ಸುಮ್ಮನೇ ಸುರಿಯುತ್ತಿದೆ. ಕೋಡಿಬೆಟ್ಟು ರಾಜಲಕ್ಷ್ಮಿ ಬರಹ ನಿಮ್ಮ ಇಂದಿನ ಓದಿಗಾಗಿ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ