Advertisement

Category: ಸಂಪಿಗೆ ಸ್ಪೆಷಲ್

ಸೀರೆ ಎಂಬ ಮಾಯಾವಿನಿ

ಸೀರೆ ಎಂಬ ಈ ವಿಚಿತ್ರ. ವಿಶಿಷ್ಟ ಉಡುಪು ಯಾಕೆ ಮತ್ತು ಹೇಗೆ ರೂಪು ತಳೆದಿರಬಹುದು ಎಂದು ಯೋಚಿಸುತ್ತ ಹೋದ ಹಾಗೂ ಇದು ಪುರುಷ ಪ್ರಧಾನ ವ್ಯವಸ್ಥೆಯ ರಾಜಕಾರಣದ ಒಂದು ಭಾಗವಾಗಿ ಬೆಳೆದಿದೆ ಅನ್ನಿಸಿದೆ. ಸಂಸ್ಕೃತಿ, ಸಂಪ್ರದಾಯಗಳ ಹೆಸರಿನಲ್ಲಿ ನಮ್ಮ ದೇಶದ ಕೆಲಭಾಗಗಳ ಮಹಿಳೆಗೆ ಸೀರೆ ಉಡುವುದನ್ನು ಕಡ್ಡಾಯ ಮಾಡಲಾಗಿದೆ! ಕೆಲವು ಪ್ರದೇಶಗಳಲ್ಲಿ ಸೀರೆಯ ಸೆರಗನ್ನು ತಲೆಗೆ ಹೊದೆಯುವುದೂ ಕಡ್ಡಾಯ. ವಿಜಯಶ್ರೀ ಹಾಲಾಡಿ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಯುದ್ಧವು ರಸ್ತೆಬದಿಯಲ್ಲಿ ಮಲಗಿದೆ

ಲ್ಯಾಟ್ವಿಯಾ ದೇಶದ ಕವಿ ಅಮಾಂಡ ಐಜಪ್ಯುರಿಯೆತ್ರ, ಪತ್ರಿಕೆಗಳ ಸಾಹಿತ್ಯ ವಿಭಾಗದ ಸಂಪಾದಕರಾಗಿದ್ದರು. ಬಹಿಷ್ಕೃತರೆಂದು ಪರಿಗಣಿಸಲ್ಪಟ್ಟ ಅನೇಕ ಕವಿಗಳ ಕವನಗಳನ್ನು ಪ್ರಕಟಿಸಿದರು. ಅನಾಗರಿಕ ಜಗತ್ತಿನಲ್ಲಿ ಆವಾಗಾವಾಗ ಕಾಣುವ ಅಲ್ಪ ಸೌಂದರ್ಯವನ್ನು ಗುರುತಿಸಿ ತಾವೂ ಕವನಗಳನ್ನು ಬರೆದಿದ್ದಾರೆ. ಅವರ ಕವನಗಳಲ್ಲಿ ಕಾವ್ಯವಿಷಯದ ವಿಸ್ತಾರವಿದೆ. ಕಾವ್ಯಸೃಷ್ಟಿ, ಸ್ವ-ಮನನ, ಯುದ್ದದ ಭೀತಿ, ದಬ್ಬಾಳಿಕೆಯ ಆಡಳಿತದಡಿಯಲ್ಲಿನ ಬದುಕಿನ ಕುರಿತ ಪ್ರತಿಬಿಂಬಗಳಿವೆ. ಅವರ ಕವಿತೆಗಳು ಇಂ‍ಗ್ಲಿಷ್ ಗೆ ಅನುವಾದಗೊಂಡಿದ್ದು,  ಇಂಗ್ಲಿಷ್‍ ಮೂಲದಿಂದ ಎಸ್‍. ಜಯಶ್ರೀನಿವಾಸ ರಾವ್ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ.  

Read More

ಸಾಹಿತ್ಯ ಪುರವಣಿಗಳು ಅನುತ್ಪಾದಕವೇ?

ಕನ್ನಡ ಪತ್ರಿಕೋದ್ಯಮದಲ್ಲಿ ಸಾಹಿತ್ಯಪುರವಣಿಗಳು ಕ್ಷೀಣವಾಗಿವೆ, ಅಥವಾ ಕೆಲವು ಮಾಧ್ಯಮ ಸಂಸ್ಥೆಗಳು ಪುರವಣಿಯನ್ನೇ ನಿಲ್ಲಿಸಿಬಿಟ್ಟಿವೆ. ಎರಡು ವರ್ಷಗಳ ಹಿಂದೆ ಕೋವಿಡ್‍ ಸೋಂಕು ವ್ಯಾಪಿಸದಂತೆ ಹೇರಿದ್ದ ಲಾಕ್‍ ಡೌನ್‍ ಸಂದರ್ಭದಲ್ಲಿ ಮಾಧ್ಯಮ ಸಂಸ್ಥೆಗಳು ನಷ್ಟವನ್ನು ಭರಿಸಿಕೊಳ್ಳಲು ಅನೇಕ ಪುಟಗಳನ್ನು ಕಡಿತ ಮಾಡಿದವು. ಕೋಡಿಬೆಟ್ಟು ರಾಜಲಕ್ಷ್ಮಿ ಬರಹ ಇಲ್ಲಿದೆ.

Read More

ನೆಮ್ಮದಿ ಎಂಬ ಕಾಂಚನ ಮೃಗದ ಬೆನ್ನಟ್ಟಿ

ನೆಮ್ಮದಿಯ ಬದುಕು ಎಲ್ಲರ ಕನಸೂ ಹೌದು. ಆದರೆ ನಾವು ಕಟ್ಟಿಕೊಂಡಿರುವ ಆಸೆಯ ಸೌಧದ ನಿರ್ಮಾಣ ಮುಗಿಯುವುದೇ ಇಲ್ಲ. ದಿನ ದಿನಕ್ಕೋ, ಇಲ್ಲ ಕ್ಷಣ ಕ್ಷಣಕ್ಕೋ ಅದರ ಗೋಡೆಗೆ ಇಟ್ಟಿಗೆ ಜೋಡಿಸುತ್ತಲೇ ಹೋಗುವವರು ನಾವು. ನಮ್ಮನೆಗೆ ಎರಡು ರೂಮು ಸಾಕೆನ್ನಿಸಿದರೂ, ಯಾವತ್ತೋ ಬಂದು ಹೋಗುವ ನೆಂಟರಿಗೊಂದು ಪ್ರತ್ಯೇಕ ಕೋಣೆ ಬೇಡವಾ ಎನ್ನುತ್ತದೆ ಮನಸ್ಸು. ರೂಪಶ್ರೀ ಕಲ್ಲಿಗನೂರ್‌ ಬರಹ

Read More

ಮುಗ್ಧತೆಯನ್ನೂ ತಾತ್ವಿಕತೆಯನ್ನೂ ಪೋಣಿಸಿಕೊಂಡ ರಶೀದ್‍ರ ಕತೆಗಳು

ಹೆಚ್ಚು ಪ್ರಯಾಸವಿಲ್ಲದೆ ಬರೆಯುವ ಶೈಲಿ  ಕತೆಗಾರ ಅಬ್ದುಲ್ ರಶೀದ್ ಅವರಿಗೆ ಒಲಿದಿದೆ. ಅವರು ಹಾಗೆ ಬರೆದಂತಹ ಬರಹವು ತಿಳಿಹಾಸ್ಯದಿಂದ ಓದುಗರಿಗೆ ಕಚಗುಳಿ ಇಡುವುದು, ತನ್ನ ವಿಶಿಷ್ಟ ಕಾಣ್ಕೆಗಳಿಂದ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತೆ ಮಾಡುವುದು, ಕೆಲವು ಪಾತ್ರಗಳು ಹಾಗೂ ಪ್ರಸಂಗಗಳು ಮನಸ್ಸಿನ ಮೂಲೆಯಲ್ಲಿ ಮನೆ ಮಾಡುವುದು. ಎಂತಹ ಸಂದರ್ಭದಲ್ಲೂ ರಶೀದ್ ಅವರಲ್ಲಿನ ಕಥೆಗಾರ ಜಾಗೃತನಾಗಿರುತ್ತಾನೆ. ಸುಮತಿ ಮುದ್ದೇನಹಳ್ಳಿ ಬರಹ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ