Advertisement

Category: ಸಂಪಿಗೆ ಸ್ಪೆಷಲ್

ಅಪರೂಪದ ಗ್ರೂಪ್ ಫೋಟೋ: ಜಯಂತ ಕಾಯ್ಕಿಣಿ ಬರಹ

ವ್ಯಕ್ತಿಗತವಾಗಿ ವಿಭಿನ್ನ ಹುಡುಕಾಟ, ನೋಟ, ನಿಲುವುಗಳಿದ್ದರೂ, ಒಟ್ಟಾರೆ ಸೇರಿ ಏನೋ ಒಂದು ಒಳ್ಳೆಯದರಲ್ಲಿ ತೊಡಗಿರುವ ಭಾವವೊಂದು ಇಲ್ಲಿ ನಿಚ್ಚಳವಾಗಿದೆ. ‘ಬೇಂದ್ರೆ-ತರಾಸು ತೊಡೆನಾಟʼ ಇದಕ್ಕೆ ಸೊಗಸಾದ ಸಾಕ್ಷಿ. ಬೇಂದ್ರೆ ಮತ್ತು ಅಡಿಗರ ನಡುವೆ ಕಾಯ್ಕಿಣಿ, ಎಕ್ಕುಂಡಿ, ಶರ್ಮ ಇರುವುದೇ ಒಂದು ರೂಪಕ. ಬಹುಶಃ ಇದು ಆಗ ನಡೆದಿದ್ದ ಕುಮಟಾ ಸಾಹಿತ್ಯ ಸಮ್ಮೇಳನಕ್ಕೆ ಬಂದ ಕೆಲವು ಅತಿಥಿಗಳು ಗೋಕರ್ಣವನ್ನೂ ನೋಡಿಕೊಂಡು ಹೋಗಲು ಬಂದಾಗ ನಡೆದ ಕೂಟ ಕಲಾಪ….
ಕವಿ, ಕತೆಗಾರ, ಸಿನಿಮಾ ಹಾಡುಗಳ ಸರದಾರ, ಜಯಂತ ಕಾಯ್ಕಿಣಿ ತಮ್ಮ ತಂದೆ; ವಿದ್ವಾಂಸ, ವಿಮರ್ಶಕ, ಸಂಶೋಧಕ ಗೌರೀಶ ಕಾಯ್ಕಿಣಿ ಮತ್ತು ಅವರ ಸಮಕಾಲೀನ ಬರಹಗಾರರರನ್ನು ಅಪರೂಪದ ಫೋಟೋವೊಂದರ ಮೂಲಕ ನೆನಪಿಸಿಕೊಂಡಿದ್ದಾರೆ.

Read More

ತಾವರೆಯ ಧ್ಯಾನ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಲಲಿತ ಪ್ರಬಂಧ

ರೀಲ್ಸ್‌ನಲ್ಲಿ ತೋರಿಸಿದ ಹಾಗೆ ಎರಡು ದಿನಗಳಲ್ಲಿ ಅದರಲ್ಲಿ ಸೃಷ್ಟಿಯ ಕುರುಹುಗಳು ಕಂಡುಬರಬೇಕಿತ್ತು. ದಿನ ಎರಡಾಯಿತು ಮೂರಾಯಿತು ಬೀಜ ಕದಲಲಿಲ್ಲ. ಬೀಜಗಳನ್ನು ಹೊರತೆಗೆದು ಕೈಯಲ್ಲಿಟ್ಟು ನೋಡಿದ. ತಿರುಗಿಸಿ ತಿರುಗಿಸಿ ನೋಡಿದರೂ ಬೀಜ ನಿಸ್ತೇಜವಾಗಿ ಬಿದ್ದುಕೊಂಡಿತ್ತು. ಅದು ಮೊಳಕೆಯೊಡೆಯುವ ಯಾವ ಮನಸ್ಸನ್ನೂ ಮಾಡಲಿಲ್ಲ. ಮೊದಮೊದಲು ಧ್ರುವನ ಈ ತಳಮಳವನ್ನು ನೋಡಿ ನಾನು ಜೋರಾಗಿ ನಗುತ್ತಿದ್ದೆ. ಮೊದಲೇ ಹೇಳಿದ್ದೆ ನಿಂಗೆ ಇದು ವರ್ಕ್ ಔಟ್ ಆಗಲ್ಲ ಅಂತ. ಸುಮ್ನೆ ಟೈಮ್ ವೇಸ್ಟ್. ರೀಲ್ಸ್‌ನಲ್ಲಿ ಸುಮ್ನೆ ತೋರಿಸಿ ನಮ್ಮನ್ನು ಮಂಗ ಮಾಡ್ತಾರೆ.
ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

Read More

ಶ್ರಾವಣ ಬಂತೂ ನಾಡಿಗೆ….: ಮಹಾಲಕ್ಷ್ಮೀ ಕೆ. ಎನ್. ಬರಹ

ಈ ಹಸಿರ ಬಸಿರ ತಿಳಿಗಾಳಿಯನ್ನು ಉಸಿರಾಡುವವರು ನಾವುಗಳು. ಜೀವರಾಶಿಗಳ ಚಟುವಟಿಕೆಗಳು ಕೂಡ ಹೆಚ್ಚಾಗುತ್ತವೆ. ಪ್ರಕೃತಿ ಮತ್ತು ಜೀವಿಗಳ ನಡುವಿನಲ್ಲಿ ನಡೆಯುವ ಭಾವನಾತ್ಮಕ ಸಂವಾದ ಹೆಚ್ಚಾಗುತ್ತದೆ. ಭೂಮಿಯನ್ನು ಚುಂಬಿಸುವ ಮಳೆರಾಯ, ಅವಕಾಶ ಸಿಕ್ಕಾಗ ಮಳೆಯಲ್ಲೇ ಚೂರು ಬಂದು ಹೋಗುವ ಸೂರ್ಯ. ಅದ್ಭುತ ಋತುಚಕ್ರ. ನಿಸರ್ಗದ ಕಲಾತ್ಮಕತೆಗೆ ಜೀವವೈವಿಧ್ಯದ ಸಂಗಮಕ್ಕೆ ಕಾರಣವಾಗಿದೆ ಈ ಶ್ರಾವಣ ಮಾಸ. ಪ್ರಕೃತಿಯ ಹೃದಯಧ್ವನಿಯ ಹಬ್ಬ. ಮರದ ರೆಂಬೆ ಕೊಂಬೆಗಳಲ್ಲಿ ಅಳಿಲುಗಳು ಮಾತಿಗಿಳಿಯುತ್ತವೆ, ಕೆಲವೊಮ್ಮೆ ಕೀಟಗಳು ಬಂದು ಇಣುಕಿ ಹೋಗುತ್ತವೆ.
ಶ್ರಾವಣ ಸಂದರ್ಭದಲ್ಲಿ ಪ್ರಕೃತಿಯಲ್ಲಾಗುವ ಬದಲಾವಣೆಗಳ ಕುರಿತು ಮಹಾಲಕ್ಷ್ಮೀ ಕೆ. ಎನ್. ಬರಹ ನಿಮ್ಮ ಓದಿಗೆ

Read More

ದೇವರಂಥಾ ಗೆಳೆಯ… ನನ್ನ ಗಣೇಶ: ಆಶಾ ಜಗದೀಶ್ ಬರಹ

ನನ್ನ ಬಾಲ್ಯದ ಪುಟಗಳ ಮೇಲೆ ಅಚ್ಚೊತ್ತಿರುವ ಗಣೇಶನ ನೆನಪುಗಳು, ಬೆಳೆಯುತ್ತಾ ಬೆಳೆಯುತ್ತಾ ದೊಡ್ಡವರು ಎನಿಸಿಕೊಳ್ಳುವ ಹೊತ್ತಿಗೆ, ತೀವ್ರತೆಯನ್ನು ಕಳೆದುಕೊಳ್ಳತೊಡಗಿದ್ದವು. ಹಾಸ್ಟೆಲ್‌ನಲ್ಲಿ ಮನೆಯಲ್ಲಿ ಮಾಡುವಂತೆ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಗೆಳತಿಯರ ಮುಂದೆ ನಗೆಪಾಟಲಿಗೆ ಈಡಾಗುವ ಭಯವಿತ್ತು. ಆದರೆ ಗಣೇಶ ಆ ಹೊತ್ತಿಗೆಲ್ಲಾ ಗೆಳೆಯನಂತಾಗಿ ಹೋಗಿದ್ದ. ಎಂಥದ್ದೇ ಸಮಸ್ಯೆ ಎದುರಾದರೂ, ‘ವಿಘ್ನೇಶ್ವರ ಕಾಪಾಡು ತಂದೆ’ ಎಂದುಕೊಂಡರೆ ಸಾಕು ಅವ ಕಾಪಾಡೇ ಕಾಪಾಡ್ತಾನೆ ಎನ್ನುವುದೊಂದು ಬಲವಾದ ನಂಬಿಕೆಯಾಗಿ ಮನಸಿನಲ್ಲಿ ಆಳವಾಗಿ ಬೇರೂರಿತ್ತು. ಈಗಲೂ ಹಾಗೇ, ಸಮಸ್ಯೆ ಎಂದರೆ ಸಾಕು ಮೊದಲು ನಾಲಿಗೆ ನೆನೆಸಿಕೊಳ್ಳುವುದು ಅವನನ್ನೇ.
ತಮ್ಮ ಪಾಲಿಗೆ ಗೆಳೆಯನಂತೆ ಆಗಿರುವ ಗಣೇಶನ ಕುರಿತು ಆಶಾ ಜಗದೀಶ್‌ ಬರಹ ನಿಮ್ಮ ಓದಿಗೆ

Read More

ಮಳೆ, ಮಂಜು ಮತ್ತು ಚಾರಣ: ಮುನವ್ವರ್, ಜೋಗಿಬೆಟ್ಟು ಬರಹ

ಒಂದು ಶಾಂತ ಬಯಲಿನಲ್ಲಿ ಮರಗಳ ನೆರಳಲ್ಲಿ ಪ್ರತಿಷ್ಠಾಪಿಸಿದಂತಿದ್ದ ಆ ಪ್ರದೇಶ ಸೂಫಿ ಅನುಭಾವಕ್ಕೆ ನಮ್ಮನ್ನು ಬರಮಾಡಿಕೊಳ್ಳತೊಡಗಿತು. ಅದು ಹಾಸನದ ಮುಸ್ಲಿಮರ ಪಾಲಿಗೆ ವಿಶೇಷ ಸ್ಥಳ. ಅದೇ‌ ಊರಿನವರಾಗಿದ್ದ ಹಝ್ರತ್ ಖಲಂದರ್ ಶಾ ವಲಿಯುಲ್ಲಾಹಿರವರು ಆಧ್ಯಾತ್ಮಿಕವಾಗಿ ಒಂದು ತಲೆಮಾರನ್ನೇ ಮುನ್ನಡೆಸಿದವರು. ಸೂಫಿ ನೆರಳಿನಂತೆ ಜನರ ಕಷ್ಟ ಕಾರ್ಪಣ್ಯಗಳಿಗೆ ಸಲಹೆ ಸೂಚನೆಗಳನ್ನು ಕೊಟ್ಟು ಅವರಿಗೆ ಮನಶ್ಶಾಂತಿಯನ್ನು ಕರುಣಿಸುತ್ತಿದ್ದವರು. ಅವರ ಶಾಂತ ಚಿತ್ತ ಮಾತುಗಳನ್ನು ಆಲಿಸಲು ಅವರ ಹರಸುವಿಕೆಯ ಅನುಗ್ರಹವನ್ನು ಸ್ವೀಕರಿಸಲು ದೇಶದ ನಾನಾ ಭಾಗಗಳಿಂದ ಜನರು ಬರುವುದುಂಟು. ನಾವು ಬಾಬರು ಕುಳಿತುಕೊಳ್ಳುತ್ತಿದ್ದ ಸ್ಥಳವನ್ನೂ ಅವರ ಬಳಸುತ್ತಿದ್ದ ಅನುಗ್ರಹೀತ ವಸ್ತುಗಳನ್ನು ನೋಡಿ‌ ಕಣ್ತುಂಬಿಕೊಂಡು- ಅಲ್ಲಿ ಯಾತ್ರಾರ್ಥಿಗಳಿಗಾಗಿ ನೀಡುವ ಚಹಾವನ್ನು ಸವಿದೆವು.
ಮುನವ್ವರ್, ಜೋಗಿಬೆಟ್ಟು ಬರೆದ ಪ್ರವಾಸ ಕಥನ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ