ನಾಟಕರಂಗದ ತಮಾಷೆ ಪ್ರಸಂಗಗಳು: ಚಿತ್ರಾ ವೆಂಕಟರಾಜು ಸರಣಿ
ಬರುವಾಗ ಸುಳ್ಯ, ಪುತ್ತೂರಿನ ಸಮೀಪ ಬೆಳಗಿನ ಜಾವ ಸುಮಾರು ೪ ಗಂಟೆಗೆ ಮೂತ್ರವಿಸರ್ಜನೆಗಾಗಿ ಗಾಡಿ ನಿಲ್ಲಿಸಿದರು. ನಂತರ ಹೊರಟು ಇನ್ನೇನು ಮೈಸೂರು ಹತ್ತಿರ ಬರುತ್ತಿದ್ದಂತೆ ಎಲ್ಲರಿಗೂ ಸಂಪೂರ್ಣ ಎಚ್ಚರವಾಯಿತು. ಇದ್ದಕ್ಕಿದ್ದಂತೆ ಯಾರೋ ‘ರಾಜಪ್ಪ ಎಲ್ಲಿ’ ಅಂತ ಕೇಳಿದರು. ಟೆಂಪೋ ಎಲ್ಲಾ ಹುಡುಕಿದರೂ ರಾಜಪ್ಪ ಇಲ್ಲ. ಎಲ್ಲಿ ಬಿಟ್ಟು ಬಂದ್ವಿ ಗೊತ್ತಿಲ್ಲ. ಅವರು ಪಾಪ ಒಂದು ಪಟಾಪಟಿ ಲುಂಗಿ ಬನಿಯನ್ ಮತ್ತು ಟವೆಲ್ ಸುತ್ತಿಕೊಂಡು ಇಳಿದವರು ವಾಪಸ್ ಬರುವ ಹೊತ್ತಿಗೆ ಟೆಂಪೋ ಹೊರಟಾಗಿತ್ತು. ಕಾಲಲ್ಲಿ ಚಪ್ಪಲಿಯೂ ಇಲ್ಲದಂತೆ ಯಾರದ್ದೋ ಸಹಾಯ ಕೇಳಿ ಕೊನೆಗೆ ಚಾಮರಾಜನಗರದಲ್ಲಿ ಕಾಣಿಸಿಕೊಂಡರು.
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿ
