Advertisement

Category: ಸರಣಿ

ರೂಪಾ ರವೀಂದ್ರ ಜೋಶಿ ಹೊಸ ಸರಣಿ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಇಂದಿನಿಂದ

ಏನೇ ಹೇಳಿ, ಆ ಕಾಡು ಮಧ್ಯದ ಪುಟ್ಟ ಶಾಲೆಯಲ್ಲಿ ಓದುವಾಗಿನ ಆ ನೆನಪುಗಳು ನಿಜಕ್ಕೂ ಚಿರಸ್ಮರಣೀಯ. ನಮ್ಮನೆಯಿಂದ ಶಾಲೆ ಸುಮಾರು ಎರಡು ಕಿ.ಮೀ. ನಷ್ಟು ದೂರವಿತ್ತು. ಎರಡು ಸೊಪ್ಪಿನ ಬೆಟ್ಟ ದಾಟಿ, ಒಂದು ಗುಡ್ಡ ಏರಿಳಿದರೆ, ನಮ್ಮ ಶಾಲೆ. ಮಳೆಗಾಲದಲ್ಲಿ ಒಂದು ಪುಟ್ಟ ಕಾಲುವೆ ದಾಟಬೇಕಾಗುತ್ತಿತ್ತು. ಹೆಚ್ಚು ಕಮ್ಮಿ ಮಾರಗಲವಿದ್ದ ಆ ಕಾಲುವೆ, ಅಂಥ ಭಯಂಕರ ಕಾಲುವೆಯೇನೂ ಆಗಿರಲಿಲ್ಲ. ಅದೂ ಕೂಡಾ ನಮ್ಮ ಬಾಲ್ಯದ ಸಂಗಾತಿಯಂತೇ ನಮ್ಮ ಖುಶಿಯಲ್ಲಿ ಪಾಲು ಪಡೆದಿತ್ತು.
ರೂಪಾ ರವೀಂದ್ರ ಜೋಶಿ ಹೊಸ ಸರಣಿ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಇಂದಿನಿಂದ

Read More

ಅಲಾರಾಂ ಹಾಗೂ ಓದುವ ವೇಳೆಯ ಕುರಿತು ಒಂದಷ್ಟು ಮಾತು… ಬಸವನಗೌಡ ಹೆಬ್ಬಳಗೆರೆ ಸರಣಿ

ನಮ್ಮಜ್ಜನ ಮನೆಯಲ್ಲಿ ಇದ್ದಾಗ, ನಮ್ಮಜ್ಜ ನನ್ನನ್ನು ಬೆಳಗ್ಗೆ ಏಳಿಸುವ ಅಲಾರಾಂನಂತೆ ಕೆಲಸ ಮಾಡುತ್ತಿದ್ದರು. ಆದರೆ ಯಾವಾಗ ಹಾಸ್ಟೆಲ್ ಸೇರಿದೆನೋ ಅಲ್ಲಿ ಹಾಸ್ಟೆಲ್ ವಾರ್ಡನ್ ಪೀಪಿಯನ್ನು ಊದಿ ಏಳಿಸುತ್ತಿದ್ದರು. ಆಗ ನಮ್ಮ ಮಲ್ಲಾಡಿಹಳ್ಳಿಯ ಹಾಸ್ಟೆಲ್ಲಿನಲ್ಲಿ ತುಂಬಾ ಶಿಸ್ತು ಇತ್ತು. ನಾವು ಕಡ್ಡಾಯವಾಗಿ ಬೆಳಗ್ಗೆ 5 ಕ್ಕೆ ಏಳಲೇಬೇಕಾಗಿತ್ತು. ಏಳದಿದ್ದರೆ ಕೋಲು ಹಿಡಿದುಕೊಂಡು ಬರುತ್ತಿದ್ದರು. ಒಂದೊಮ್ಮೆ ಮಲಗಿರುವುದನ್ನು ಕಂಡರೆ ಕುಂಡೆಯ ಮೇಲೆ ಬಾರಿಸುತ್ತಾ ಹೋಗುತ್ತಿದ್ದರು, ಬೆಳಗ್ಗೆ ಎದ್ದು ಕೆಲವರು ಓದುತ್ತಾ ಕುಳಿತರೆ ಕೆಲವರು ಬ್ರಷ್ ಮಾಡಲು ಹೋಗುತ್ತಿದ್ದರು. ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಪದಗಳಲ್ಲಡಗಿದ ಅನೇಕಾರ್ಥ ಮತ್ತು ನ್ಯಾಂಡೊ ಪೆರಾಡೊ: ಸುಮಾವೀಣಾ ಸರಣಿ

ಈ ‘ಮಾನ’ ಎಂದಾಗ ಮೊನ್ನೆ ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತವೇ ನೆನಪಾಗುತ್ತದೆ. ‘ವಿಮಾನ’ ಬರೆ ಪ್ರಯಾಣಿಕರನ್ನು ಹೊತ್ತು ಸಾಗುವುದಲ್ಲ. ದೇವಾಲಯದ ಗರ್ಭಗುಡಿಯ ಮೇಲ್ಭಾಗದ ಗೋಪುರಕ್ಕೂ ‘ವಿಮಾನ’ ಎಂದು ಕರೆಯುತ್ತಾರೆ. ವಿಚಿತ್ರ ಎಂದರೆ ಪಾರ್ಥೀವ ಶರೀರವನ್ನು ಸಾಗಿಸುವ ಬಿದಿರಿನ ಜೋಡಣೆಗೂ ವಿಮಾನವೆನ್ನುವರು. ಒಂದೊಮ್ಮೆ ತಿರುಪತಿ ಗೋವಿಂದರಾಜ ದೇವಸ್ಥಾನವನ್ನು ವೀಕ್ಷಣೆ ಮಾಡುತ್ತಾ ಇದು ‘ವಿಮಾನ ಗೋಪುರ’ ಎಂದು ವಿವರಿಸುತ್ತಿದ್ದಂತೆ ನಿಜವಾಗಿ ವಿಮಾನವೊಂದು ಹಾರಿ ಹೋಗಿದ್ದು ಇಲ್ಲಿ ನೆನಪಾಗುತ್ತಿದೆ…
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿ

Read More

ಮಲೆನಾಡಿನ ಗದ್ದೆಗಳಲ್ಲಿ ನೆಟ್ಟಿ ಸಂಭ್ರಮ: ಭವ್ಯ ಟಿ. ಎಸ್. ಸರಣಿ

ಹೂಟಿ ಮಾಡಿದ ನೆಲದ ಮಣ್ಣು ಉಬ್ಬು ತಗ್ಗುಗಳಿಂದ ಕೂಡಿದ್ದು ಅದನ್ನು ನೆಟ್ಟಿಗೆ ಸಹಾಯಕವಾಗುವಂತೆ ಸಮತಟ್ಟು ಮಾಡಲು ನಳ್ಳಿ ಬಳಸುತ್ತಾರೆ. ಹಿಂದೆ ಎತ್ತುಗಳನ್ನು ಬಳಸಿ ಹೂಟಿ ಮಾಡುತ್ತಿದ್ದರಿಂದ ಇದಕ್ಕಾಗಿ ಬಳಸುವ ನೊಗ ಮತ್ತು ನೇಗಿಲು ಪ್ರತಿ ಮನೆಗಳಲ್ಲಿ ಇರುತ್ತಿತ್ತು. ಕಾಲ ಬದಲಾದಂತೆ ಇವುಗಳ ಸ್ಥಾನವನ್ನು ಆಧುನಿಕ ಕೃಷಿ ಸಲಕರಣೆಗಳು ಆಕ್ರಮಿಸಿವೆ. ಈ ಎತ್ತುಗಳಿಗೆ ಆಹಾರವಾಗಿ ಕೊಡಲು ಹುರುಳಿಯನ್ನು ಬೇಯಿಸುತ್ತಿದ್ದರು. ಇದನ್ನು ಬೇಯಿಸಿದ ನೀರೇ ಹುರುಳಿಕಟ್ಟು. ಮಳೆಗಾಲದಲ್ಲಿ ಹುರುಳಿ ಕಟ್ಟಿನ ಘಮ ತೇಲಿ ಬಂದರೆ ಆಹಾ ಎಷ್ಟು ಸುಂದರ ಅನುಭೂತಿ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ

Read More

ಸೌದಿ ದೇಶದ ಹಿನ್ನೆಲೆ…: ದರ್ಶನ್‌ ಜಯಣ್ಣ ಸರಣಿ

ಈ ದೇಶದ ಮೊದಲ ಹೆಸರು ನಜ್ದ್ ಮತ್ತು ಹೇಜಾಜ್ ಎಂದಾಗಿತ್ತು. ಹೆಜಾಜ್‌ನಲ್ಲಿಯೇ ಮೆಕ್ಕಾ- ಮದೀನಾ ಎಲ್ಲ ಇರುವುದು ಮತ್ತು ನಜ್ದ್ ಎಂದರೆ ಇಂದಿನ ಸೌದಿಯ ಮಧ್ಯ ಭಾಗವಾಗಿದೆ. ಅಬ್ದುಲ್ ಅಜೀಜ್(1875 – 1953) ಈ ಎರಡು ಭಾಗಗಳ ಜೊತೆಗೆ ತಂಪಾದ ಬೆಟ್ಟಗುಡ್ಡಗಳಿಂದ ಕೂಡಿರುವ ಯೆಮೆನ್‌ಗೆ ಹೊಂದಿಕೊಂಡಿರುವ ದಕ್ಷಿಣದ ನಜ್ರನ್, ಅಸಿರ್ ಮತ್ತು ಉತ್ತರದ ಅಂದರೆ ಸಿರಿಯಾ ಇರಾಕ್‌ನ ಕಡೆಯ ನಾರ್ದರ್ನ್ ಗಡಿಯನ್ನು ಹಾಗೆಯೇ ಇಂದಿನ ತೈಲದ ತೊಟ್ಟಿಲಾದ ಈಸ್ಟರ್ನ್ ಪ್ರಾವಿನ್ಸ್ ಅನ್ನು ನಂತರದ ವರ್ಷಗಳಲ್ಲಿ ದಂಗೆ ಹೊರಟು ಸೌದಿಗೆ ಸೇರಿಸಿಕೊಳ್ಳುತ್ತಾನೆ.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿಯ ನಾಲ್ಕನೆಯ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ