Advertisement

Category: ಸರಣಿ

ಬಿಟ್ಟೇನೆಂದರೂ ಬಿಡದ ಹಣೆಪಟ್ಟಿಗಳ ಕಳಚುವುದು ಹೇಗೆ…

ಈ ಹೆಸರಿನಿಂದುಂಟಾಗುವ ಸಾಮಾಜಿಕ ಅಪಮಾನದಿಂದ ದೂರಾಗಲು ಈ ಸಮುದಾಯ ತನ್ನ ಹೆಸರನ್ನು ಹೊಸ ವೃತ್ತಿಗನುಗುಣವಾಗಿ ಗಿರಣಿ ವಡ್ಡರ್ ಮುಂತಾಗಿ ಕರೆದುಕೊಂಡಿದ್ದಾರೆ. ಹೀಗಾಗಿ ಡಿನೋಟಿಫೈಡ್ ಸಮುದಾಯ ಅಪರಾಧಿ ಬುಡಕಟ್ಟು ಎನ್ನುವ ಹಣೆಪಟ್ಟಿ ಕಳಚಿದರೂ ಅಪರಾಧದ ಸಂಕೇತವಾದ `ಗಂಟಿಚೋರ್ಸ್’ ಎನ್ನುವ ಹೆಸರಿನಿಂದಲೇ ಈ ಸಮುದಾಯದ ಜನರು ತಮ್ಮ ಇರವನ್ನು ಗುರುತಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ.
ಡಾ. ಅರುಣ್ ಜೋಳದಕೂಡ್ಲಿಗಿ ಸರಣಿ

Read More

ಯುದ್ಧ ನಂತರದ‌ ಕತ್ತಲಲ್ಲಿ ಅರಿವಿನ ಬೆಳಕು

ಜೈನಾ ದುಬಾಯಿಂದ ಬೈರುತ್ ಗೆ ಬಂದು ಅಲ್ಲಿಂದ ಆಕ್ರಮಣಕ್ಕೆ ಒಳಗಾದ ಬಿಂಟ್ ಬಿಲ್‌ ಊರನ್ನು ತಲುಪಿರುತ್ತಾಳೆ. ಟೋನಿಯೊಂದಿಗೆ ಪ್ರಯಾಣ ಸಾಗುತ್ತಿದ್ದಂತೆ ಇಬ್ಬರಿಗೂ ತಮ್ಮಷ್ಟಕ್ಕೆ ಇರುವುದು ಅಸಹಜವೆನ್ನಿಸಿ, ನಿಧಾನವಾಗಿ ಕೇವಲ ವ್ಯಕ್ತಿಗಳಂತೆ ಇದ್ದವರು ಪರಸ್ಪರ ಅರಿತುಕೊಳ್ಳಲು ಪ್ರಾರಂಭಿಸುತ್ತಾರೆ. ಇದು ಅವರ ಭಾವಗಳಲ್ಲಿ, ಮುಖಚಹರೆಗಳಲ್ಲಿ ವ್ಯಕ್ತವಾಗುವುದನ್ನು ಸಮೀಪ ಚಿತ್ರಿಕೆಗಳಲ್ಲಿ ನಿರೂಪಿತಗೊಂಡಿವೆ. ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್‌’ನಲ್ಲಿ ಲೆಬನಾನ್‌ನ ʻಅಂಡರ್‌ ದ ಬಾಂಬ್ಸ್ʼ ಸಿನಿಮಾದ ವಿಶ್ಲೇಷಣೆ

Read More

ದೇಸಾಯ್ತಿಯ ಸೀರೆ

ಆಡಳಿತ ನಿರ್ವಹಣೆಯಲ್ಲಿ ತೊಡಗಿದ್ದ ಪುರುಷರು ಮನಸ್ಸು ಇಲ್ಲದ ಮಾರ್ಗದಂತೆ ದೇಸಾಯ್ತಿಯ ಕಾರ್ಯ ನಿರ್ವಹಿಸತೊಡಗಿದರು. 25 ಗ್ರಾಮಗಳ ಕಂದಾಯ ವಸೂಲಿ ಮಾಡುವಲ್ಲಿ ಸಮಸ್ಯೆಯಾಯಿತು. ಈ ಗ್ರಾಮಗಳಲ್ಲಿನ ದೇಶಗತಿಯ ವತನಿ ಭೂಮಿಯೆ 16 ಸಾವಿರ ಎಕರೆಗಳಷ್ಟಿತ್ತು! ಉತ್ತರಾಧಿಕಾರದ ಬಯಕೆಯಿಂದಾಗಿ ದಾಯಾದಿಗಳು ಕೂಡ ಅತೃಪ್ತರಾಗಿದ್ದರು. ಆದರೆ ಕಾಶೀಬಾಯಿ ಎದೆಗುಂದದೆ ಎಲ್ಲ ನೌಕರರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತದಲ್ಲಿ ಯಶಸ್ಸು ಸಾಧಿಸಿದರು. ರಂಜಾನ್ ದರ್ಗಾ ಬರೆಯುವ “ನೆನಪಾದಾಗಲೆಲ್ಲ” ಸರಣಿಯ ಮೂವತ್ತನೆಯ ಕಂತು

Read More

ಯಾವ ಅಖಾಡಗಳಲ್ಲೂ ನಾನು ಗೆಲ್ಲಲಿಲ್ಲ

ಸುಮ್ಮನಿರಲಾರದ ನಾನು ಒಂದು ಚೇಷ್ಟೆ ಮಾಡಿದ್ದೆ. ಹುಡುಗಾಟಿಕೆಯೊ ಬರಹದ ಉತ್ಸಾಹವೊ; ಒಟ್ಟಿನಲ್ಲಿ ಹಾಸ್ಟೆಲಲ್ಲಿ ದೆವ್ವಗಳ ಕಾಟ ಎಂದು ವೆಂಕಟೇಶನ ಭೀತಿಯ ಬಗ್ಗೆ ಲೇಖನ ಬರೆದು ಬಿಟ್ಟಿದ್ದೆ. ಅದನ್ನು ಸಾಮಾನ್ಯರು ಓದಿದ್ದರೆ ಖಂಡಿತ ಹೆದರಿ ನಂಬಿಬಿಡುತ್ತಿದ್ದರು. ಆ ಪರಿಯಲ್ಲಿ ಹಾರಾರ್ ಆಗಿ ಬರೆದಿದ್ದೆ. ಕಲ್ಪನೆಯೇ ಹೆಚ್ಚಾಗಿತ್ತು. ಸುಮ್ಮನೆ ವೆಂಕಟೇಶನ ಜೊತೆ ‘ದೆವ್ವಗಳ ಕಾಟವಂತಲ್ಲಾ’ ಎಂದು ವಿಚಾರಿಸಿದ್ದೆ ಅಷ್ಟೇ. ಆತ ಒಂದಿಷ್ಟು ವಿವರ ಹೇಳಿದ್ದು ನಿಜ. ಮೊಗಳ್ಳಿ ಗಣೇಶ್ ಬರೆಯುವ ‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಸರಣಿ.

Read More

ಇರಾನ್ ದೇಶಕ್ಕೆ ತೆರಳಿದ್ದ ಕ್ರೀಡಾಪಟು ಅರ್ಜುನ ಬಸಪ್ಪ ಗಾಯಕವಾಡ

ಗಂಟಿಚೋರ್ ಸಮುದಾಯದಲ್ಲಿ ಹೆಚ್ಚು ಪ್ರಸಿದ್ಧಿಯನ್ನು ಪಡೆದ ಕ್ರೀಡಾಪಟು ಅಂದರೆ, ಅರ್ಜುನ ಬಸಪ್ಪ ಗಾಯಕವಾಡ. ಕ್ಷೇತ್ರಕಾರ್ಯದಲ್ಲಿ ರಾಯಭಾಗ ಸಮೀಪದ ಶಾಹು ಪಾರ್ಕ್ ನೋಡಲು ಹೋದಾಗ ನಮ್ಮ ಜತೆಗೆ ಎ.ಬಿ. ಗಾಯಕವಾಡ ಅವರ ಮಗ ವಿಜಯ್ ನಮ್ಮ ಜೊತೆಗೆ ಬಂದಿದ್ದರು. ತನ್ನ ತಂದೆಯ ಕ್ರೀಡಾ ಸಾಹಸವನ್ನು ವಿವರಿಸಿದರು. ಗಾಯಕವಾಡರ ರಾಯಭಾಗದ ಮನೆಗೆ ಹೋಗಿದ್ದೆವು. ಅಲ್ಲಿ ಗಾಯಕವಾಡರು ಕ್ರೀಡೆಯಲ್ಲಿ ಭಾಗವಹಿಸಿದ ಫೋಟೋ ಚಿತ್ರಗಳು ನೋಡಲು ಸಿಕ್ಕವು. ಡಾ. ಅರುಣ್ ಜೋಳದಕೂಡ್ಲಿಗಿ ಬರೆಯುವ ಗಂಟಿಚೋರರ ಕಥನ ಸರಣಿಯ ಇಪ್ಪತ್ತಮೂರನೆಯ ಕಂತು

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ