Advertisement

Category: ಸರಣಿ

ಹಸಿವು ಇಂಗಿಸುವ ಬಿಸ್ಕಿಟ್‌ ವಾಸನೆ….

ಆ ಸಭೆಯಲ್ಲಿ ಭಾಗವಹಿಸಿದ್ದ ಉಗ್ರಗಾಮಿಗಳ ನಾಯಕ 35 ವರ್ಷದವನಿರಬಹುದು. ಆತ ತನ್ನ ಹೆಂಡತಿ ಮತ್ತು ಮಗುವಿನ ಜೊತೆ ಬಂದಿದ್ದ. ಸಭಿಕರ ಮಧ್ಯದಿಂದ ಆತ ಉಗ್ರಗಾಮಿಗಳ ಪ್ರತಿನಿಧಿಯಾಗಿ ಕಾಶ್ಮೀರ ಸಮಸ್ಯೆ ಕುರಿತು ಮಾತನಾಡಿದ. ಕಾಶ್ಮೀರದಲ್ಲಿ ಎನ್‌ಕೌಂಟರಲ್ಲಿ ಸತ್ತ ಸುಮಾರು 60 ಸಾವಿರ ಯುವಕರ ಹೆಸರು, ವಯಸ್ಸು ಮುಂತಾದ ವಿವರಗಳುಳ್ಳ ಕಂಪ್ಯೂಟರ್ ಲಿಸ್ಟ್ ತಂದಿದ್ದ. ಅದರ ಜೊತೆಗಿದ್ದ ಇನ್ನೊಂದು ಲಿಸ್ಟಲ್ಲಿ ಅತ್ಯಾಚಾರಕ್ಕೊಳಗಾದ 65 ಸಾವಿರ ಕಾಶ್ಮೀರ ಯುವತಿಯರ ಹೆಸರು ಮುಂತಾದ ವಿವರಗಳಿರುವುದಾಗಿ ತಿಳಿಸಿದ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಮಸಲ್‌ ಮೆಮೊರಿ ಮತ್ತು ನಾವು….

ಬರೇ ಜ್ಞಾನ, ವಿಪರೀತ ಮಾಹಿತಿಯಿಂದ ಏನೂ ಪ್ರಯೋಜನವಿಲ್ಲ. ಮನುಷ್ಯನ ನೋವನ್ನು ಗೌರವಿಸುವ, ಅರ್ಥಮಾಡಿಕೊಳ್ಳುವ ಭಾಗವಾಗಿ ಜ್ಞಾನ, ಪುಸ್ತಕಗಳು ಮೂಡಿ ಬರಬೇಕು. ಇಲ್ಲದಿದ್ದರೆ ಜ್ಞಾನ, ಮಾಹಿತಿಯೆಲ್ಲ ಮನುಷ್ಯನಿಂದ, ಬದುಕಿನಿಂದ ವಿಮುಖವಾಗುತ್ತದೆ, ಇದ್ದೂ ಇಲ್ಲದಂತೆ. ಏನೂ ಪ್ರಯೋಜನವಾಗುವುದಿಲ್ಲ. ಇಂತಹ ಜ್ಞಾನ, ಮಾಹಿತಿಯ ಆಧಾರದ ಮೇಲೆ ಬದುಕು, ನಾಗರಿಕತೆ ಯಾಂತ್ರಿಕವಾಗಿರುತ್ತದೆ, Muscle memoryಯನ್ನು ಪ್ರೋತ್ಸಾಹಿಸುತ್ತದೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿ

Read More

ಮಾರುತಿ ಗೋಪಿಕುಂಟೆ ಹೊಸ ಸರಣಿ “ಬಾಲ್ಯದೊಂದಿಗೆ ಪಿಸುಮಾತು” ಆರಂಭ

ಮನೆಯಲ್ಲಿ ಬಹಳ ತುಂಟನಾಗಿದ್ದ ನನ್ನ ಕಾಟಕ್ಕೆ ನಮ್ಮಜ್ಜಿ ಇವನ್ನ ‘ಇಸ್ಕೂಲಿಗೆ ‘ಸೇರುಸ್ಬೇಕು ಮನೇಗಿದ್ರೆ ಯಾವಾಗಲೂ ಜಗಳ ಮಾಡ್ತಿರ್ತಾನೆ” ಎಂದು ದೂರು ಹೇಳುತ್ತಿದ್ದಳು. ನಮ್ಮಪ್ಪ ”ಆರು” ವರ್ಷದವರೆಗೂ ಇಸ್ಕೂಲಿಗೆ ಸೇರುಸ್ಕಮಲ್ಲ ಸುಮ್ನೆ ಯಾಕ್ ಬಡ್ಕೋಮ್ತೀಯ” ಎಂದು ಆಗಾಗ ಅಜ್ಜಿಯನ್ನೆ ಗದರಿಸುತ್ತಿದ್ದ. ಇವನ ವಾರಗೆಯವರೆಲ್ಲಾ ಇಸ್ಕೂಲಿಗೆ ಹೋಗ್ತಾರೆ ಇವನ ಕಾಟ ನಮ್ಗೆ ತಡೆಯೋಕಾಗಲ್ಲ ಎಂದು ಮನೆಯವರೆಲ್ಲರೂ ಹೇಳಿದಾಗ ಅಪ್ಪನಿಗೆ ಇದೆ ಸರಿ ಅನ್ನಿಸಿ ಇಸ್ಕೂಲಿಗೆ ಸೇರ್ಸೆಬಿಡೋಣ ಎಂದು ಶಾಲೆಗೆ ಕರೆದುಕೊಂಡು ಹೋಗೆಬಿಟ್ರು.
ಮಾರುತಿ ಗೋಪಿಕುಂಟೆ ಬರೆಯುವ ಹೊಸ ಸರಣಿ

Read More

ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ ಆರಂಭ

ಮುಂದೆ ಈ ಕುದುರೆ ಗಾಡಿ ಯಾ ಜಟಕಾ ಗಾಡಿ ಪ್ರಸಂಗ ಸಾವಿರಾರು ಸಲ ರಿಪೀಟ್ ಆದವು. ಆಗ ರಾಮಚಂದ್ರಪುರದ ಬಳಿ ಬರುತ್ತಿದ್ದಂತೆ ದೊಡ್ಡ ಇಳಿಜಾರು ಶುರು ಆಗಿ ಸುಮಾರು ನೂರಾ ಐವತ್ತು ಅಡಿ ಆಳಕ್ಕೆ ರಸ್ತೆ ಸರಿದು ನಂತರ ಏರು ಗತಿಯಲ್ಲಿ ಇದು ಮುನ್ನೂರು ಗಜ ದಾಟಿ ರಾಜಾಜಿನಗರ ಎಂಟ್ರೆನ್ಸ್ ತಲುಪುತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ ಹೊಸ ಸರಣಿ “ಹಳೆ ಬೆಂಗಳೂರ ಕಥೆಗಳು” ಇನ್ನು ಹದಿನೈದು ದಿನಗಳಿಗೊಮ್ಮೆ, ಶುಕ್ರವಾರಗಳಂದು ನಿಮ್ಮ ಕೆಂಡಸಂಪಿಗೆಯಲ್ಲಿ ಪ್ರಕಟವಾಗಲಿದೆ.

Read More

ಹತ್ತನೆ ಶತಮಾನ: ಹಿಂದೂ ಸಂಸ್ಕೃತಿಯ ಮಹತ್ತರ ವಿಸ್ತಾರ

ಸಂಗಂ ಯುಗದಲ್ಲಿ ಅಶೋಕನ ಕಾಲಕ್ಕಿಂತಲೂ ಹೆಚ್ಚಿನ ಪ್ರಗತಿ ಕಲೆಯಲ್ಲುಂಟಾಯಿತು. ಪೂನಾದ ಸಮೀಪ ‘ಬಾಜʼ ಎಂಬಲ್ಲಿ ಕ್ರಿ.ಪೂ. ಇದೇ ಶತಮಾನದಲ್ಲಿ ಒಂದು ‘ವಿಹಾರ’ವನ್ನು ಕಡೆದಿರುವರು. ಈ ಕಲೆಯು ವಾಸ್ತವಿಕತೆಯಿಂದ ಕೂಡಿದೆ. ಮುಂಬಯಿಯ ಕಾರ್ಲೆ ಎಂಬಲ್ಲಿ ಕಲ್ಲಿನಿಂದಲೇ ಮಾಡಿದ ಚೈತ್ಯಾಲಯವು ಉತ್ಕೃಷ್ಟವಾಗಿದೆ. ಜುನಾರ್, ನಾಸಿಕ, ಅಜಂತ ಮುಂತಾದೆಡೆಗಳಲ್ಲಿಯೂ ಉತ್ತಮ ಚೈತ್ಯಾಲಯಗಳಿವೆ. ಕೆತ್ತನೆಯ ಕೆಲಸಗಳಿಂದ ಕೂಡಿದ ಬೃಹತ್ ಸ್ತೂಪದ ಹೆಬ್ಬಾಗಿಲು ಪ್ರಸಿದ್ಧವಾಗಿದೆ.
ಕೆ.ವಿ. ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿಯ ಕೊನೆಯ ಬರಹ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ