Advertisement

Category: ಸರಣಿ

ಹಂಪ್ ಮೇಲೆ ಚೆಲ್ಲಿದ ರಕ್ತದ ಕಲೆಗಳ ಭಯ

ನನಗೆ ಆ ದಿನಗಳಲ್ಲಿ ಮಧ್ಯರಾತ್ರಿ ಹನ್ನೆರೆಡಕ್ಕೆ ಸರಿಯಾಗಿ ಎಚ್ಚರಾಗುತ್ತಿತ್ತು. ತಲೆ ತುಂಬ ರಗ್ಗು ಹೊದ್ದು ಕಣ್ಣು ಮುಚ್ಚಿಕೊಂಡರೂ ನಿದ್ರೆ ಬರುತ್ತಿರಲಿಲ್ಲ. ಸದಾ ಎಚ್ಚರವಾಗೆ ಇರುತ್ತಿದ್ದೆ. ಎದೆ ಕಂಪಿಸುತ್ತಿತ್ತು. ಅಲುಗಾಡದೆ ಮುದುರಿಕೊಂಡಿರುತ್ತಿದ್ದೆ. ವಿಶಲ್ ಊದುತ್ತಾ ಲಾಟಿ ಬಡಿಯುತ್ತ ಬರುವ ಗೂರ್ಖನ ಬೂಟುಗಾಲಿನ ಸದ್ದು ಕೇಳಿಸುತ್ತಿತ್ತು. ಸರಿಯಾಗಿ ಹನ್ನೆರೆಡು ಗಂಟೆಗೆ ರೈಲಿನ ಬೆಲ್ಲು ಢಣಗುಡುತ್ತಿತ್ತು. ರೈಲು ಬರುವ ಸದ್ದು ಕೇಳಿದ ತಕ್ಷಣ ನನ್ನ ಕಲ್ಪನೆಗಳು ಗರಿಗೆದರುತ್ತಿದ್ದವು.”

Read More

ಹಾಥಿ ಮತ್ತು ಚೂನಿ ಎಂಬ ಎರಡು ನತದೃಷ್ಟ ಆನೆಗಳ ಕಥೆ

ಒಂದೆಡೆ ಚೂನಿಯ ಸಾವಿನ ಬಗೆಗೆ ಪ್ರತಿಭಟನೆ ನಡೆಯುತ್ತಿದ್ದರೆ, ಇನ್ನೊಂದು ಕಡೆ, ಆನೆಯ ಮಾಂಸದ ರುಚಿಯ ಅನುಭವ ಹೇಗಿರಬಹುದೆಂಬ ಮಾತುಗಳೂ ಕೇಳಿ ಬಂದವು. ಆನೆ ಮಾಂಸದ ತಿನುಸುಗಳ ರೆಸಿಪಿಗಳೂ ಪ್ರಕಟವಾದವು. ಎರಡನೆಯ ಮಹಾಯುದ್ಧದ ಸಂದರ್ಭದಲ್ಲಿ ಹಿಟ್ಲರ್‌ನ ಜರ್ಮನ್ ವಿಮಾನಗಳು ಲಂಡನ್ ಮೇಲೆ ಬಾಂಬ್ ದಾಳಿ ಮಾಡಿದಾಗ, ಚೂನಿಯ ಅಸ್ತಿ ಪಂಜರ ಚೂರು ಚೂರಾಗಿ ಲಂಡನ್ನಿನ ಮಣ್ಣಿನೊಳಗೆ ಬೆರೆಯಿತು.
ಶೇಷಾದ್ರಿ ಗಂಜೂರು ಬರೆಯುವ ‘ಆನೆಗೆ ಬಂದ ಮಾನ’ ಸರಣಿ.

Read More

ʻದ ಮಿಲ್ಕ್ ಆಫ್‌ ಸಾರೋʼ: ವಿಷಾದದ ಹನಿಗಳು

ಈ ಚಿತ್ರದಲ್ಲಿ ಮೊದಲ ಹಾಡಿನ ಭಾವದ ನೆಲೆಯಲ್ಲಿಯೇ ಚಿತ್ರದ ಕಥನವಿದೆ. ಚಿತ್ರ ತೆರೆದುಕೊಳ್ಳುತ್ತಿದ್ದಂತೆ ಈ ವಿಷಾದ ಭಾವವನ್ನು ಇನ್ನೊಂದು ರೀತಿಯಲ್ಲಿ ಸ್ಥಿರಪಡಿಸುತ್ತಾಳೆ ನಿರ್ದೇಶಕಿ. ಮದುವೆಗೆ ಸಿದ್ಧವಾಗುತ್ತಿರುವ ಮ್ಯಾಕ್ಸಿಮಾ ತನ್ನ ಸ್ಕರ್ಟಿನ ಸೊಂಟಕ್ಕಿರುವ ಬಟ್ಟೆಯ ಉದ್ದ ಸಾಲದೆಂದು ಕೂಗಾಡುವಾಗ ಮೆಲ್ಲನೆ ಹೆಜ್ಜೆ ಇಟ್ಟು ಬರುತ್ತಾಳೆ ಫಾಸ್ಟಾ. ಅವಳಿಗೆ ಎದುರಾಗುತ್ತದೆ ಮದುವೆಗೆ ಸಂಬಂಧಪಟ್ಟ ವಿಷಯ. ಮದುವೆ! ಅವಳಿಗೆ ಅಷ್ಟೇ ಸಾಕಾಗುತ್ತದೆ. ಗಂಡು-ಹೆಣ್ಣಿಗೆ ಸಂಬಂಧಿಸಿದ, ಅವರಿಬ್ಬರ ಸಮಾಗಮಕ್ಕೆ ಅನುವುಮಾಡಿಕೊಡುವ ವಿಷಯ!
ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್‌’ನಲ್ಲಿ ಪೆರು ದೇಶದ ʻದ ಮಿಲ್ಕ್ ಆಫ್‌ ಸಾರೋʼ

Read More

ಏನೋ ಲೆಕ್ಕಹಾಕಿ ಶಾಲೆಗೆ ಹೆಸರು ಹಚ್ಚಿದ ಮಾಸ್ತರರು

ಅದಾವುದೊ ಸ್ಥಾನಕ್ಕೆ ಆಯ್ಕೆಯಾದ ಗಣ್ಯವ್ಯಕ್ತಿಯೊಬ್ಬರಿಗೆ ಸನ್ಮಾನಿಸುವ ಮತ್ತು ಮಕ್ಕಳನ್ನು ಉದ್ದೇಶಿಸಿ ಅವರು ಮಾತನಾಡುವ ಕಾರ್ಯಕ್ರಮವೊಂದು ನಡೆಯಿತು. ಸ್ವಲ್ಪ ಸಮಯದ ನಂತರ ಬಂದ ಆ ಗಣ್ಯವ್ಯಕ್ತಿ ಶರಣಯ್ಯ ವಸ್ತ್ರದ ಎಂಬುದು ತಿಳಿಯಿತು. ಅವರು ಅಟವಳಕರ್ ಸಾಹೇಬರ ಹಾಗೆ ಪ್ಯಾಂಟು ಹ್ಯಾಟು ತೊಟ್ಟಿರಲಿಲ್ಲ. ನನ್ನ ತಂದೆಯ ಹಾಗೆ ಸಾದಾ ಧೋತರ, ಅಂಗಿ ಮತ್ತು ಟೋಪಿ ಧರಿಸಿದ್ದರು. ನನ್ನ ತಂದೆಯಂಥ ಸಾಮಾನ್ಯರೂ ದೊಡ್ಡ ಮನುಷ್ಯರಾಗಿರುತ್ತಾರೆ ಎಂಬುದು ನನಗೆ ಮೊದಲ ಬಾರಿಗೆ ಅನಿಸಿತು.”

Read More

ಗಣಿಗಾರಿಕೆ ಎಂಬ ಭೂಗತ ಜಗತ್ತಿನ ಅನಾವರಣ

ಮಿಂಚು ಹುಳುವಿನಂತೆ ಹೊಳೆಯುತ್ತಿದ್ದ ಆಫ್ರಿಕಾದ ‘ಡರ್ಬನ್’ ಕಡಲ ತೀರ ಸ್ವಲ್ಪ ಸ್ವಲ್ಪವೇ ಗೋಚರಿಸತೊಡಗಿತ್ತು. ಮತ್ತೂ ಮತ್ತೂ ಹತ್ತಿರವಾದಂತೆ ಕಡಲು ಮುಗಿಯಲೇ ಇಲ್ಲ. ಹಡಗಿನೊಳಗಿದ್ದ ಯಾರೂ ತೀರ ಕಂಡ ಬಳಿಕ ನಿದ್ರೆ ಮಾಡಿರಲಿಲ್ಲ. ಅಂತೂ ಬೆಳಗಿನ ಜಾವ ಸುಮಾರು ನಾಲಕ್ಕು ಗಂಟೆಯ ವೇಳೆಗೆ ಹಡಗು ಬಂದರು ತಲುಪಿತು. ಬರೋಬ್ಬರಿ ೭೨ ದಿನಗಳ ತರುವಾಯ ಹೊಸ ಮನುಷ್ಯರು, ಭೂಮಿ ಅವರ ಕಣ್ಣಿಗೆ ಬಿದ್ದಿತ್ತು.
ಮುನವ್ವರ್ ಜೋಗಿಬೆಟ್ಟು ಬರೆಯುವ ಡರ್ಬನ್ ಇದಿನಬ್ಬ ಕಿರು ಕಾದಂಬರಿಯ ಒಂಭತ್ತನೇ ಕಂತು.

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ