Advertisement

Category: ಸರಣಿ

ಅಪರಾಧ ಮತ್ತು ಶಿಕ್ಷೆ: ಇದು ಯಾವ ಪಾಪಕ್ಕೆ…?

ಸಿಡಿಲು ಬಡಿದವಳ ಹಾಗೆ ಕ್ಯಾತರೀನ ಸುಮ್ಮನೆ ನಿಂತಳು. ಪೀಟರ್ ಪೆಟ್ರೊವಿಚ್ ಅದು ಹೇಗೆ ಉಪ್ಪಿನ ಋಣ ಮರೆಯಬಲ್ಲ ಅನ್ನುವುದು ಅರ್ಥವೇ ಆಗಲಿಲ್ಲ ಅವಳಿಗೆ. ನಮ್ಮಪ್ಪನ ಉಪ್ಪಿನ ಋಣ ಅವನಮೇಲಿದೆ ಎಂದು ಒಮ್ಮೆ ಕಲ್ಪನೆ ಮಾಡಿಕೊಂಡ ನಂತರ ಆ ಕಲ್ಪನೆಯನ್ನೇ ಅವಳು ನಿಷ್ಠೆಯಿಂದ ನಂಬಿಕೊಂಡಿದ್ದಳು. ಪೀಟರ್ ಪೆಟ್ರೊವಿಚ್‌ನ ಮಾತಿನ ದನಿಯೂ ಆಘಾತ ತಂದಿತ್ತು. ತೀರ ವ್ಯಾವಹಾರಿಕವಾದ, ನಿರ್ಭಾವವಾದ, ಭಯಹುಟ್ಟಿಸುವಂಥ ತಿರಸ್ಕಾರ ಅವನ ದನಿಯಲ್ಲಿತ್ತು.
. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ಒಂದು ಬೊಗಸೆ ನೀರಿಗೆ ಹರಸಾಹಸ

ಮುಗಿಲೆತ್ತರಕ್ಕೆ ಬೆಳೆದು ನಿಂತಿದ್ದ ತೆಂಗಿನಮರಗಳು ರಾತ್ರಿ ಉಚ್ಚೆ ಉಯ್ಯಲು ಹೊರ ಬಂದು ನೋಡಿದಾಗ ದೆವ್ವದಂತೆ ಕಾಣುತ್ತಿದ್ದವು. ಹಾಸ್ಟೆಲ್ ಹುಡುಗರು ಸಂಜೆ ಸ್ಕೂಲಿಂದ ಬಂದರೆಂದರೆ ಗುರಿ ಇಟ್ಟು ಕಲ್ಲು ಬೀಸಿ ತೆಂಗಿನ ಕಾಯಿ ಉದುರಿಸುತ್ತಿದ್ದರು. ಪ್ರತಿನಿತ್ಯ ಒಂದೆರಡು ತೆಂಗಿನ ಕಾಯಿ ಕಿತ್ತು ಚೂಪಾದ ಕಲ್ಲಿನಿಂದ ಮತ್ತು ಹಲ್ಲಿನಿಂದ ಸಿಪ್ಪೆ ಸಿಗಿದು ಕಾಯಿ ಕೆಚ್ಚಿ ಪಚಿಡಿ ಮಾಡಿ ತಿನ್ನುತ್ತಿದ್ದೆವು. ತೋಟದ ಮಾಲೀಕರಿಗೆ ಗೊತ್ತಾದರೆ ದೊಣ್ಣೆಯೊಂದಿಗೆ ಓಡಿಸಿಕೊಂಡು ಬರುತ್ತಿದ್ದರು. ಅವರ ಹತ್ತಿರ ಬಂದೂಕು ಇದೆ, ಅವರು ನಿರ್ದಯಿಗಳು, ಕಳ್ಳತನ ಮಾಡಿದರೆ ಗುಂಡು ಹಾರಿಸಿ ಸುಟ್ಟು ಬಿಡುತ್ತಾರೆಂದು…”

Read More

ಮೂಕ ರಮೇಶಿಗೆ ತಾಗಿದ ಹಠಾತ್ ಸಾವು

ರಮೇಶಿಯ ಹೊಲಿಗೆ ನೈಪುಣ್ಯದ ಬಗೆಗೆ ಎರಡು ಮಾತಿಲ್ಲ. ಕಾಲಿಂಚೂ ಆಚೀಚೆ ಆಗದ ಅಳತೆಯ ಸ್ಪಷ್ಟತೆ,  ಚೂಡಿದಾರ ಹಾಗೂ ರವಿಕೆಗಳಿಗೆ, ತಾನೇ ಹುಡುಕಿಕೊಂಡು ಇಡುತ್ತಿದ್ದ ಹೊಸಾ ಹೊಸಾ ಕತ್ತಿನ ಡಿಸೈನುಗಳು, ತನ್ನ ಮೂಗಭಾಷೆಯಲ್ಲೇ ನಮಗೆಲ್ಲಾ ವಿವರಿಸಿ ಹೇಳಿ ಹೊಲೆಯುತ್ತಿದ್ದ ಹೊಸ ಶೈಲಿಗಳ ಬಟ್ಟೆಗಳು, ಬೇಡಬೇಡವೆಂದರೂ ಅವನೇ ಉಪಚಾರದ ಸಂಜ್ಞೆಗಳನ್ನು ಮಾಡಿ ತೊಡುವಂತೆ ಮಾಡುತ್ತಿದ್ದ ಡೀಪ್ ನೆಕ್ ಹಾಗೂ ಸಣ್ಣ ತೋಳಿನ ಬಟ್ಟೆಗಳು… ಇವೆಲ್ಲಾ ಹೆಂಗಸರನ್ನು ಉನ್ಮಾದಗೊಳಿಸುತ್ತಿದ್ದವು.
ಮಧುರಾಣಿ ಬರೆಯುವ ‘ಮಠದಕೇರಿ ಕಥಾನಕ’

Read More

ವಿಜಾಪುರ ನಗರಿಯ ರಂಗು, ವಿಸ್ಮಯಗಳು

ವಿಜಾಪುರಕ್ಕೆ ಬಂದಮೇಲೆ ಬಹಳ ದಿನಗಳ ನಂತರ ನಾವು ಟಾಂಗಾದಲ್ಲಿ ಜೋಡಗುಂಬಜ ದರ್ಗಾಕ್ಕೆ ಹೋಗಿ ವಾಪಸ್ ಮನೆಯ ಸಮೀಪ ಬರುತ್ತಿರುವಾಗ ಅಲ್ಲೀಬಾದಿಯಲ್ಲಿ ನಾವು ಸಾಕಿದ ನಾಯಿ ಕಂಡಿತು. ಕಂಡೊಡನೆ ಅದು ಟಾಂಗಾದ ಬೆನ್ನು ಹತ್ತಿತು. ಅದರ ಅವಸ್ಥೆ ನೋಡಿ ನನ್ನ ಕರುಳು ಕಿತ್ತುಬಂದಂತಾಯಿತು. ನಾನು ಮುಟ್ಟುವ ಸ್ಥಿತಿಯಲ್ಲಿ ಅದು ಇರಲಿಲ್ಲ. ಆ ತೆಳ್ಳನೆಯ ಬಿಳಿ ನಾಯಿಯ ಮೈತುಂಬ ಚಿಕ್ಕ ಚಿಕ್ಕ ಹುಣ್ಣುಗಳಾಗಿ ರಕ್ತದ ಬಿಂದುಗಳಂತೆ ಕಾಣುತ್ತಿದ್ದವು. ಅದು ಬಹಳ ಆಯಾಸಗೊಂಡಿತ್ತು. ಆದರೆ ಟಾಂಗಾದ ಬೆನ್ನು ಬಿಡಲಿಲ್ಲ. ಮನೆ ಬಂದಿತು.
ರಂಜಾನ್ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿಯ ಒಂಭತ್ತನೆಯ ಕಂತು.

Read More

ಹಸಿವಿನ ವಿಕಾರದ ಮುಂದೆ ಸ್ವಾತಂತ್ರ್ಯಕ್ಕೆ ಬೆಲೆ ಎಲ್ಲಿ?

ಕರೀಂ ಸಾಹೇಬರ ಮನೆಯಿಂದ ಇದಿನಬ್ಬ ಓಡಿ ಬಂದಿದ್ದ. ಓಡಿ ಓಡಿ ದಣಿವಾಗಿ ಒಂದೆಡೆ ಕುಳಿತಾಗಲೇ ಅವನಿಗೆ ಹಸಿವಿನ ನೆನಪಾಯಿತು. ಜೊತೆಗೆ ಮನೆಯವರ ನೆನಪೂ ಕಾಡತೊಡಗಿತು. ಭಯಂಕರ ಕ್ಷಾಮವು ಆ ಊರನ್ನು ಅಡರಿಕೊಂಡಿದ್ದರಿಂದ, ತಿನ್ನಲು, ಕುಡಿಯಲು ಏನೂ ಸಿಗುತ್ತಿರಲಿಲ್ಲ. ಹಸಿವಿನ ಹಿಂಸೆ ರುದ್ರನರ್ತನ ಮಾಡುತ್ತಿತ್ತು. ಇದಿನಬ್ಬ ಮೊದಲ ಬಾರಿಗೆ ತನ್ನನ್ನೇ ತಾನು ಮಾರಿಕೊಳ್ಳಲು ನಿರ್ಧರಿಸಿದ. ಮತ್ತೊಂದು ಮಾಲೀಕತ್ವವು ಇದಿನಬ್ಬನನ್ನು ಎಲ್ಲಿಗೆ ಕರೆದೊಯ್ದಿತು ?
ಮುನವ್ವರ್ ಜೋಗಿಬೆಟ್ಟು ಬರೆಯುವ ಡರ್ಬನ್ ಇದಿನಬ್ಬ ಕಿರು ಕಾದಂಬರಿಯ ಏಳನೇ ಕಂತು ಇಲ್ಲಿದೆ.

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ