Advertisement

Category: ಸರಣಿ

ನೀಲ ಕುರುಂಜಿಯ ನಾಡಿನಲ್ಲಿ ರಕ್ತಸಿಕ್ತ ಅಧ್ಯಾಯ

ಯಾವುದೇ ಮನೆ, ಕಾಂಕ್ರೀಟ್ ಕಾಡಿನ ಕಟ್ಟಡಗಳಿಲ್ಲದ, ಒಂದು ಪ್ರಶಾಂತವಾದ ಜಾಗ. ಆದರೆ ಅಲ್ಲಿಗೆ ಹೋಗಿ ತಲುಪುವುದು ಸ್ವಲ್ಪ ಕಷ್ಟದ ಕೆಲಸ. ಹತ್ತು ಕಿಲೋಮೀಟರು ದೂರದವರೆಗೆ ನಿಮ್ಮ ವಾಹನಗಳಲ್ಲಿ ಹೋಗಿ, ಅಲ್ಲಿಂದ ಮುಂದೆ ಅದಕ್ಕೆಂದೇ ಬಾಡಿಗೆ ಇರುವ ಕೆಲವು ಫೋರ್ ವ್ಹೀಲ್ ಜೀಪ್‌ಗಳಲ್ಲಿ ಮಾತ್ರ ಹೋಗಬಹುದು. ಓರೆ ಕೋರೆ, ನೀರು ಹರಿದು, ಅರ್ಧ ಹಾಳಾದ ರಸ್ತೆಯಲ್ಲಿ ಹೋಗುವುದೇ ಒಂದು ಸಾಹಸ ಕ್ರೀಡೆ ಅರ್ಥಾತ್ ಅಡ್ವೆಂಚರ್. ಸಮುದ್ರ ಮಟ್ಟದಿಂದ ನಾಲ್ಕು ಸಾವಿರ ಅಡಿ ಮೇಲೆ ಇರುವ ಸ್ಥಳ.
ಡಾ. ಕೆ.ಬಿ. ಸೂರ್ಯಕುಮಾರ್ ಬರೆಯುವ ‘ನೆನಪುಗಳ ಮೆರವಣಿಗೆ’

Read More

ಚಪ್ಪಲಿ ಸಾಹೇಬರ ಚೌರ್ಯಸಂಬಂಧೀ ನೆನಪು

ಸುಮಾರು ದೂರ ಓಡಿ ಅವರನ್ನು ಹಿಡಿದು ಭುಜ ತಟ್ಟಿ ಮಾತಾಡಿಸಿ ಅದೇನೋ ಕೇಳಿದ. ಕೂಡಲೇ ನಕ್ಕು ಪ್ರತಿಕ್ರಿಯಿಸಿದ ಆ ವಯೋವೃದ್ಧರು ತಮ್ಮ ಕೈಲಿದ್ದ ಪ್ಲಾಸ್ಟಿಕ್ ಸಂಚಿಯನ್ನು ಇವನ ಕೈಗೆ ವರ್ಗಾಯಿಸಿದರು. ಇವನು ಅವರ ಕೈ ಕುಲುಕಿದ. ನಾವು ಎಲ್ಲವೂ ಅಯೋಮಯವಾದಂತೆ ನೋಡುತ್ತ ಪಿಳಿಪಿಳಿ ಕಣ್ಣು ಬಿಡುತ್ತಾ ನಿಂತೇ ಇದ್ದೆವು. ಇಬ್ಬರ ಮುಖದಲ್ಲೂ ಹುಸಿನಗೆಯೊಂದು ಕಾಣುತ್ತಲೇ ಇತ್ತಾಗಿ ಧೈರ್ಯ. ಮತ್ತಾವುದೇ ಕಿರಿಕ್ ನಡೆಯದೆಂಬ ಸಮಾಧಾನ. ಮಧುರಾಣಿ ಬರೆಯುವ ‘ಮಠದ ಕೇರಿ’ ಕಥಾನಕ

Read More

ಛಡಿಯಾಮಿ ಛಂ ಛಂ, ವಿದ್ಯಾಯಾಮಿ ಘಂ ಘಂ

ಪ್ರತಿಯೊಬ್ಬ ವಿದ್ಯಾರ್ಥಿ ವೈವಿಧ್ಯಮಯವಾಗಿ ಬನಿಯನ್ ಬಾಕ್ಸ್‌ಗಳಲ್ಲಿ ಸರಸ್ವತಿಯ ಚಿತ್ರವಿಟ್ಟು ತನ್ನಿಚ್ಛೆಯಂತೆ ಸಿಂಗರಿಸಿ ಖುಷಿ ಪಡುತ್ತಿದ್ದ. ತುಂಬ ಶ್ರಮವಹಿಸಿ ತಯಾರಿಸಿದ ಈ ಸುಂದರ ‘ಸರಸ್ವತೀಮಂದಿರ’ಗಳನ್ನು ಬೇರೆ ವಿದ್ಯಾರ್ಥಿಗಳು ನೋಡುವುದು ಕಡಿಮೆ. ಪ್ರತಿಯೊಬ್ಬ ವಿದ್ಯಾರ್ಥಿ ತನ್ನ ಸಿಂಗರಿಸಿದ ಸರಸ್ವತಿಯನ್ನು ತಾನೇ ನೋಡುತ್ತ, ನೋಡುತ್ತ ಆನಂದತುಂದಿಲನಾಗಿ ತನ್ನ ಮತ್ತು ಸರಸ್ವತಿಯ ಮಧ್ಯೆ ಯಾರೂ ಇಲ್ಲದ ಹಾಗೆ ತದೇಕಚಿತ್ತನಾಗಿರುತ್ತಿದ್ದ. ಆ ಕ್ಷಣದ ಆನಂದವೇ ಆನಂದ. ಇದು ಒಂದುರೀತಿಯ ಲಿಂಗಾಂಗಸಾಮರಸ್ಯದಂತೆ!
ರಂಜಾನ್‌ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿಯ ಹನ್ನೆರಡನೆಯ ಕಂತು

Read More

ಚಿನ್ನದ ಗಣಿಯಲ್ಲಿ ಭಯಾನಕ ದಿನಗಳು

ಹತ್ತುವರ್ಷಗಳ ಕಾಲ ಕೆಲಸ ಮಾಡುವ ಕರಾರು ಮುಕ್ತಾಯವಾಗುತ್ತಲೇ ಗಣಿಯಿಂದ ಒಬ್ಬೊಬ್ಬರೇ ಹೊರಡತೊಡಗಿದರು. ಇದಿನಬ್ಬ ಕೂಡ, ಸಂಬಳ ಕೊಡುವ ಕಂಪೆನಿಯ ಮ್ಯಾನೇಜರ್ ಬಳಿ ಬಂದು ವಿನಮ್ರನಾಗಿ ನಿಂತು,’ಸರ್, ನಾನು ಊರಿಗೆ ಹೋಗುತ್ತೇನೆ’ ಎಂದ. ಹೋಗಬಹುದು ಎಂದು ಮ್ಯಾನೇಜರ್ ಒಪ್ಪಿದ. ನನ್ನ ಸಂಬಳ ಕೊಟ್ಟುಬಿಡಿ ಎಂದು ಮನವಿ ಮಾಡಿದಾಗ, ಅಧಿಕಾರಿ ಅಚ್ಚರಿಯಿಂದ, ‘ಯಾವ ಸಂಬಳ ? ಅದನ್ನು ಸಿಲೋನಿನಲ್ಲೇ ಕೊಟ್ಟಾಗಿದೆಯಲ್ಲಾ..’ ಎಂದು ಹೇಳಿದ. ಈ ಮಾತು ಕೇಳಿದ ಇದಿನಬ್ಬ ಕುಸಿದು ಕುಳಿತುಬಿಟ್ಟ. ಮುನವ್ವರ್ ಜೋಗಿಬೆಟ್ಟು ಬರೆಯುವ ಡರ್ಬನ್ ಇದಿನಬ್ಬ ಕಿರುಕಾದಂಬರಿಯ ಹತ್ತನೇ ಕಂತು.

Read More

ದಾರಿ ಯಾವುದಯ್ಯಾ….

ಎಷ್ಟೋ ದಿನಗಳ ನಂತರ ಮೊದಲ ಬಾರಿಗೆ ‘ಮನಸ್ಸು ಸ್ವಸ್ಥವಾಗಿದೆ,’ ಅನ್ನಿಸುತಿತ್ತು. ‘ಏನು ಆಗತ್ತೋ ಆಗಲಿ, ಸ್ವಿದ್ರಿಗೈಲೋವ್ ವಿಚಾರ ಮುಗಿಸಬೇಕು, ಎಷ್ಟು ಬೇಗ ಆಗತ್ತೋ ಅಷ್ಟು ಬೇಗ. ಅವನೂ ಕೂಡ ನನಗಾಗಿ ಕಾಯತಾ ಇದಾನೆ ಅನಿಸತ್ತೆ,’ ಅಂದುಕೊಂಡ. ಆ ಕ್ಷಣದಲ್ಲಿ, ಅವನ ದಣಿದ ಮನಸಿನಲ್ಲಿ ಎಷ್ಟು ದ್ವೇಷ ಹುಟ್ಟಿತೆಂದರೆ ಸ್ವಿದ್ರಿಗೈಲೋವ್ ಅಥವಾ ಪೋರ್ಫಿರಿ ಇಬ್ಬರಲ್ಲಿ ಒಬ್ಬರನ್ನಾದರೂ ಕೊಲ್ಲಬೇಕು ಅನಿಸಿತು.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ