Advertisement

Category: ಸರಣಿ

ಗಣಿಗಾರಿಕೆ ಎಂಬ ಭೂಗತ ಜಗತ್ತಿನ ಅನಾವರಣ

ಮಿಂಚು ಹುಳುವಿನಂತೆ ಹೊಳೆಯುತ್ತಿದ್ದ ಆಫ್ರಿಕಾದ ‘ಡರ್ಬನ್’ ಕಡಲ ತೀರ ಸ್ವಲ್ಪ ಸ್ವಲ್ಪವೇ ಗೋಚರಿಸತೊಡಗಿತ್ತು. ಮತ್ತೂ ಮತ್ತೂ ಹತ್ತಿರವಾದಂತೆ ಕಡಲು ಮುಗಿಯಲೇ ಇಲ್ಲ. ಹಡಗಿನೊಳಗಿದ್ದ ಯಾರೂ ತೀರ ಕಂಡ ಬಳಿಕ ನಿದ್ರೆ ಮಾಡಿರಲಿಲ್ಲ. ಅಂತೂ ಬೆಳಗಿನ ಜಾವ ಸುಮಾರು ನಾಲಕ್ಕು ಗಂಟೆಯ ವೇಳೆಗೆ ಹಡಗು ಬಂದರು ತಲುಪಿತು. ಬರೋಬ್ಬರಿ ೭೨ ದಿನಗಳ ತರುವಾಯ ಹೊಸ ಮನುಷ್ಯರು, ಭೂಮಿ ಅವರ ಕಣ್ಣಿಗೆ ಬಿದ್ದಿತ್ತು.
ಮುನವ್ವರ್ ಜೋಗಿಬೆಟ್ಟು ಬರೆಯುವ ಡರ್ಬನ್ ಇದಿನಬ್ಬ ಕಿರು ಕಾದಂಬರಿಯ ಒಂಭತ್ತನೇ ಕಂತು.

Read More

ನವೋದಯದ ಶ್ರೇಷ್ಠಕವಿ ಕಡೆಂಗೋಡ್ಲು

ಕನ್ನಡ ಸಾಹಿತ್ಯ ಲೋಕದಲ್ಲಿ  ತಮ್ಮ ಕಾವ್ಯ ಪ್ರತಿಭೆಯ ಮೂಲಕ ಕಂಡೆಂಗೋಡ್ಲು ಶಂಕರ ಭಟ್ಟರು ಪ್ರಧಾನವಾಗಿ ಗುರುತಿಸಿಕೊಂಡಿದ್ದರೂ, ಅವರ ಜೀವನ ಪಥ ಬಹುಮುಖಿಯಾಗಿತ್ತು.  ಸ್ವಾತಂತ್ರ್ಯ ಚಳವಳಿಯಲ್ಲಿ ಅವರು ಎಷ್ಟೊಂದು ಸಕ್ರಿಯರಾಗಿದ್ದರು ಎಂಬುದಕ್ಕೆ ಅವರು 1921ರಲ್ಲಿ ಬರೆದ ‘ವಸ್ತ್ರಾಪಹರಣ’ ಖಂಡಕಾವ್ಯವೇ ಸಾಕ್ಷಿ. ಖಾದಿ ಮಾರಾಟ, ಮದ್ಯ ಮಾರಾಟ ವಿರೋಧ, ಸ್ತ್ರೀಪರ ಧ್ವನಿ, ಶೋಷಿತರ ಪರ ನಿಲುವುಗಳೊಂದಿಗೆ ತಮ್ಮ ಸಾಹಿತ್ಯ ಪ್ರಯಾಣವನ್ನು ಶ್ರೀಮಂತವಾಗಿಸಿಕೊಂಡಿದ್ದರು. ಡಾ.ಬಿ. ಜನಾರ್ದನ ಭಟ್ ಅವರು,  ಅಡಿಗರಿಗಿಂತ ಹಿಂದಿನ ಯುಗದ ಶ್ರೇಷ್ಠ ಕವಿ ಅಂದರೆ ಕಡೆಂಗೋಡ್ಲು ಶಂಕರ ಭಟ್ಟರ ಕುರಿತು ಬರೆದಿದ್ದಾರೆ. 

Read More

ಗಂಟಲೊಳಗೆ ಇಳಿಯಲೊಲ್ಲದ ಗುಲ್ಜಾರ್ ಖಾನ್ ಕಟ್ಟಿದ ಮುದ್ದೆಗಳು

ಡಬ್ಬಿಯಲ್ಲಿದ್ದ ತಿಂಡಿ ಕಳವಾಗುತ್ತಿರುವುದನ್ನು ನೋಡಿದ ‘ಹಾರ್ಟ್ ವೀಕ್’ ಮಾರನೆ ಬೆಳಗ್ಗೆ ಊಟವಾದ ಮೇಲೆ ಒಂದು ಉಪಾಯ ಮಾಡಿದ, ತನ್ನ ಟ್ರಂಕಿನ ಮುಂದೆ ನಿಂತುಕೊಂಡು ಎಲ್ಲ ವಿದ್ಯಾರ್ಥಿಗಳನ್ನುದ್ದೇಶಿಸಿ ತನ್ನ ತಿಂಡಿಬಾಕ್ಸ್ ಮುಚ್ಚಳವನ್ನು ತೆಗೆದು ಎಲ್ಲರಿಗೂ ಕಾಣುವಂತೆ ‘ನೋಡ್ರಪ್ಪ ನಾನು ನನ್ನ ತಿಂಡಿಗೆ ಬಾಯಿ ತುಂಬ ಉಗಿತಾ ಇದಿನಿ, ಯಾರಾದರೂ ತಿಂದರೆ ನನ್ನ ಎಂಜಲು ತಿಂದಂತೆ’ ಎಂದು ಕ್ಯಾಕರಿಸಿ ಕ್ಯಾಕರಿಸಿ ಚೆನ್ನಾಗಿ ಉಗಿದು, ನಂತರ ಬಾಯಿ ಮುಚ್ಚಿ ಟ್ರಂಕಿಗಿಟ್ಟು ಸ್ಕೂಲಿಗೆ ಹೋದ. ಮಧ್ಯಾಹ್ನ ಬಂದು ನೋಡಿದಾಗ ಆತನ ತಿಂಡಿ ಹೇಗಿತ್ತೋ ಹಾಗೆಯೇ ಇತ್ತು.
ಗುರುಪ್ರಸಾದ್ ಕಂಟಲಗೆರೆ ಬರೆಯುವ ‘ಟ್ರಂಕು-ತಟ್ಟೆ’ ಸರಣಿಯ ಮೂರನೆಯ ಕಂತು

Read More

ಸೀತೆ ನಡೆದ ‘ಪರ್ಯಾಯ ದಾರಿ’

ಅಪ್ಪ ತನ್ನ ಮಗಳನ್ನು ಗಡಂಗಿಗೆ ಪ್ಯಾಕೆಟ್ ತರಲು ಕಳುಹಿಸಲು ಶುರು ಮಾಡಿದ್ದು ಸೀತುವಿನ ಮನಸಿಗೆ ತುಂಬಾ ಕಸಿವಿಸಿಯನ್ನು ಉಂಟು ಮಾಡಿತ್ತು. ದಿನ ಕಳೆದಂತೆ ಗಡಂಗಿನಲ್ಲಿ ಚೋಮನ ದೋಸ್ತುಗಳ ಕಾಟವೂ ಹೆಚ್ಚತೊಡಗಿತು. ದಿನಾ ಸಾರಾಯಿಗೆ ಬರುತ್ತಿದ್ದ ಬೆಳ್ಳಿಯನ್ನು ಚುಡಾಯಿಸುವವರ ಸಂಖ್ಯೆ ಹೆಚ್ಚಿದಾಗ ಸೀತುವಿನ ಮನಸ್ಸು ಅಲ್ಲೋಲ ಕಲ್ಲೋಲವಾಗವಾಗ ತೊಡಗಿತ್ತು. ಸಂಜೆ ಬರುವಾಗಲೇ ಬೊಬ್ಬೆ ಹೊಡೆಯುತ್ತಿದ್ದ ಚೋಮ ಹೇಳದ ಮಾತಿಲ್ಲ. ಎಲ್ಲರೆದುರು ತನ್ನ ಹೆಂಡತಿ, ಮಗಳನ್ನು ತುಚ್ಚವಾಗಿ ಆಡುತ್ತಿದ್ದ ಚೋಮ ಮನೆಗೆ ಬಂದನೆಂದರೆ ಮಕ್ಕಳಾದ ತುಕ್ರ, ತನಿಯ ಓಡಿ ಮೂಲೆ ಸೇರುತ್ತಿದ್ದರು.”

Read More

ಸಾತ್ವಿಕ ಜೀವನವಿಧಾನವೇ ಬಹುದೊಡ್ಡ ಆಸ್ತಿ

ಒಂದು ಸಲ ಮಳೆಗಾಲದಲ್ಲಿ ರಾತ್ರಿ ಹೀಗೆ ಸಿಕ್ಕಿಹಾಕಿಕೊಂಡು ನಾವು ಮಕ್ಕಳು ಮತ್ತು ಹಿರಿಯರೆಲ್ಲ ಬಹಳ ಹಸಿದು ಆ ಹಾಸ್ಟೆಲ್ ಕೋಣೆಯಲ್ಲಿ ಕುಳಿತಿದ್ದೆವು. ಅಷ್ಟೊತ್ತಿಗೆ ಜಂಬಗಿಯವರು ರಾತ್ರಿ ಒಂಬತ್ತು ಗಂಟೆ ಹೊತ್ತಿಗೆ ಯಾವುದೋ ಖಾನಾವಳಿಯಿಂದ ನಮಗೆಲ್ಲ ಸಾಕಾಗುವಷ್ಟು ಬಿಸಿ ಅನ್ನ ಮತ್ತು ಸಾರು ತೆಗೆದುಕೊಂಡು ಬಂದರು. ಅವೆರಡೂ ರುಚಿ ಶುಚಿಯಾಗಿದ್ದವು. ಆ ಚಳಿ, ಆ ಹಸಿವು, ಆ ಬಿಸಿ ಬಿಸಿ ಅನ್ನ ಮತ್ತು ಸಾರಿನ ರುಚಿ ಎಂದೂ ಮರೆಯಲು ಸಾಧ್ಯವಿಲ್ಲ. ನಾನು ದೊಡ್ಡವನಾದ ಮೇಲೆ ಜಂಬಗಿಯವರನ್ನು ಹುಡುಕಲು ಯತ್ನಿಸಿ ವಿಫಲನಾದೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ