Advertisement

Category: ಸರಣಿ

ಹಸಿವಿನ ವಿಕಾರದ ಮುಂದೆ ಸ್ವಾತಂತ್ರ್ಯಕ್ಕೆ ಬೆಲೆ ಎಲ್ಲಿ?

ಕರೀಂ ಸಾಹೇಬರ ಮನೆಯಿಂದ ಇದಿನಬ್ಬ ಓಡಿ ಬಂದಿದ್ದ. ಓಡಿ ಓಡಿ ದಣಿವಾಗಿ ಒಂದೆಡೆ ಕುಳಿತಾಗಲೇ ಅವನಿಗೆ ಹಸಿವಿನ ನೆನಪಾಯಿತು. ಜೊತೆಗೆ ಮನೆಯವರ ನೆನಪೂ ಕಾಡತೊಡಗಿತು. ಭಯಂಕರ ಕ್ಷಾಮವು ಆ ಊರನ್ನು ಅಡರಿಕೊಂಡಿದ್ದರಿಂದ, ತಿನ್ನಲು, ಕುಡಿಯಲು ಏನೂ ಸಿಗುತ್ತಿರಲಿಲ್ಲ. ಹಸಿವಿನ ಹಿಂಸೆ ರುದ್ರನರ್ತನ ಮಾಡುತ್ತಿತ್ತು. ಇದಿನಬ್ಬ ಮೊದಲ ಬಾರಿಗೆ ತನ್ನನ್ನೇ ತಾನು ಮಾರಿಕೊಳ್ಳಲು ನಿರ್ಧರಿಸಿದ. ಮತ್ತೊಂದು ಮಾಲೀಕತ್ವವು ಇದಿನಬ್ಬನನ್ನು ಎಲ್ಲಿಗೆ ಕರೆದೊಯ್ದಿತು ?
ಮುನವ್ವರ್ ಜೋಗಿಬೆಟ್ಟು ಬರೆಯುವ ಡರ್ಬನ್ ಇದಿನಬ್ಬ ಕಿರು ಕಾದಂಬರಿಯ ಏಳನೇ ಕಂತು ಇಲ್ಲಿದೆ.

Read More

ಗುರುಪ್ರಸಾದ್ ಕಂಟಲಗೆರೆ ಬರೆಯುವ ‘ಟ್ರಂಕು ತಟ್ಟೆ’ ಸರಣಿ ಇಂದಿನಿಂದ ಶುರು

ಹಾಸ್ಟೆಲ್ ಜೀವನವೆಂದರೆ ಬದುಕನ್ನು ಸ್ವಯಂ ಅನ್ವೇಷಿಸುವ ಮೊದಲ ಹೆಜ್ಜೆಯಂತೆ. ಸಮವಯಸ್ಕರ ಜೊತೆಗೆ ಬದುಕುವ ಅವಕಾಶ ಸಿಗುವುದರಿಂದ ಅಲ್ಲಿನ ನೋವು ನಲಿವುಗಳೊಡನೆ ನವಿರು ಭಾವವೊಂದು ಸೇರಿಕೊಂಡಿರುತ್ತದೆ. ಕಥೆಗಾರ ಗುರುಪ್ರಸಾದ್ ಕಂಟಲಗೆರೆ ತೀರಾ ಎಳವೆಯಲ್ಲಿಯೇ ಹಾಸ್ಟೆಲ್ ಬದುಕನ್ನು ಕಂಡವರು. ಆ ನೆನಪುಗಳನ್ನು ಅವರು ಪ್ರತಿವಾರ ‘ಟ್ರಂಕು ತಟ್ಟೆ’ ಎಂಬ ಸರಣಿಯಲ್ಲಿ ಬರೆಯಲಿದ್ದಾರೆ. ಈ ಬರಹಗಳು ಅಕ್ಷರಗಳನ್ನು ಮೀರಿದ ಕಥೆಯೊಂದನ್ನು ಹೇಳುತ್ತವೆಯೆನಿಸುತ್ತದೆ. ಮೊದಲ ಬರಹ ನಿಮ್ಮ ಓದಿಗಾಗಿ ಇಲ್ಲಿದೆ.

Read More

ಐಕ್ಯಗಾನ ಮೊಳಗಿಸಿದ, ಜನಪರ ಕವಿ ಕಯ್ಯಾರ ಕಿಞ್ಞಣ್ಣ ರೈ

1933 ರ ಹೊತ್ತಿಗಾಗಲೇ ಹದಿನೆಂಟರ ಯುವಕ ಕಯ್ಯಾರರು ಒಳ್ಳೆಯ ಕವಿಯಾಗಿ ಗುರುತಿಸಿಕೊಂಡದ್ದಕ್ಕೆ ಒಂದು ಉದಾಹರಣೆ: ಪುತ್ತೂರಿನಲ್ಲಿ ಕಾರಂತರು ನಡೆಸುತ್ತಿದ್ದ ನಾಡಹಬ್ಬದಲ್ಲಿ ಬೇಂದ್ರೆಯವರ ಅಧ್ಯಕ್ಷತೆಯ ಕವಿಗೋಷ್ಠಿಯಲ್ಲಿ ಅವರು ‘ಊರ್ಮಿಳಾ’ ಎಂಬ ಕವನ ಓದಿದರು. ಅದನ್ನು ಕೇಳಿದ ಬೇಂದ್ರೆಯವರು ಕಯ್ಯಾರ ಅವರಿಂದ ಇನ್ನೊಂದುಕವಿತೆಯನ್ನು ಓದಿಸಿದರು.
‘ಕರಾವಳಿಯ ಕವಿರಾಜಮಾರ್ಗ’ ಸರಣಿಯಲ್ಲಿ ಕಯ್ಯಾರ ಕಿಞ್ಞಣ್ಣ ರೈ ಕುರಿತು ಬರೆದಿದ್ದಾರೆ ಡಾ.ಬಿ. ಜನಾರ್ದನ ಭಟ್.

Read More

ಭರಣಿ ಕೃತಿಕೆ ನಂಬಿದ ಅಪ್ಪ, ಪಡಿಪಾಟಲು ಅನುಭವಿಸಿದ ನಾನು

ಊರಿನಿಂದ ಬೆಳಿಗ್ಗೆ ಪ್ರಯಾಣಮಾಡಿ ಕಾಲೇಜಿನಲ್ಲಿ ಓಡಾಟ, ಹಾಸ್ಟೆಲ್ಲಿನ ಜಂಜಾಟ, ಎಲ್ಲಾ ಆಗುವಾಗ ಅಂದು ರಾತ್ರಿ ನನಗೆ ಬಂದದ್ದು ತಡೆಯಲಾರದ ತಲೆನೋವು. ಪರಿಚಯ ಇಲ್ಲದ ಜನ, ಗೊತ್ತಿಲ್ಲದ ಮನೆ.. ಇತ್ತ ತಲೆನೋವು ಜೋರಾಗಿ ವಾಂತಿ ಬರುತ್ತಿದೆ. ಯಾರಲ್ಲಿ ಹೇಳಿಕೊಳ್ಳುವುದು ನನ್ನ ಪರಿಸ್ಥಿತಿ. ಬಾತ್ರೂಮಿನಲ್ಲಿ ಹೋಗಿ ವಾಂತಿ ಮಾಡುತ್ತಿದ್ದ ನನ್ನನ್ನು ಕಂಡ ದೊಡ್ಡಗೌಡ್ರು ಕೂಡಲೇ ಬಂದು ನನ್ನ ತಲೆಯನ್ನು ಹಿಡಿದುಕೊಂಡರು. ಸ್ವಲ್ಪ ಹೊತ್ತಿಗೆ ವಾಂತಿ ಆಗಿ ತಲೆನೋವು ಸ್ವಲ್ಪ ಕಡಿಮೆಯಾದಂತೆ ಅನ್ನಿಸಿತು. ಪಾಪದ ಜನ ಅವರು.
ಡಾ. ಕೆ.ಬಿ. ಸೂರ್ಯಕುಮಾರ್ ಬರೆಯುವ ‘ನೆನಪುಗಳ ಮೆರವಣಿಗೆ’

Read More

ಸ್ನೇಹದ ದೋಣಿಯಲಿ ಆನೆಗಳ ನೆನಪಿನ ಪಯಣ

ಜೆನ್ನಿ ಮತ್ತು ಷರ್ಲಿ ಒಂದೇ ಲಾಯದಲ್ಲಿದ್ದರೂ, ಅಕ್ಕ-ಪಕ್ಕದ ಸ್ಟಾಲ್‌ಗಳಲ್ಲಿ ಇರಲಿಲ್ಲ. ಮಧ್ಯದಲ್ಲಿ ಕಬ್ಬಿಣದ ಗೇಟುಗಳು ಇದ್ದವು. ಜೆನ್ನಿಯ ಚಡಪಡಿಕೆಯನ್ನು ಕೇಳಿದ ಷರ್ಲಿ ತಾನೂ ಚಡಪಡಿಸತೊಡಗಿದಳು. ತಮ್ಮ ಸ್ಟಾಲ್‌ಗಳ ನಡುವೆ ಇದ್ದ ಗೇಟುಗಳ ಸಂದಿಗಳ ಮೂಲಕ ತಮ್ಮ ಸೊಂಡಿಲುಗಳನ್ನು ಚಾಚಿ ಹೇಗಾದರೂ ಮಾಡಿ ಒಂದನ್ನೊಂದು ಮುಟ್ಟಲು ಎರಡೂ ಆನೆಗಳು ಪ್ರಯತ್ನ ಪಡಲಾರಂಭಿಸಿದವು. ಗೇಟುಗಳ ತಳ್ಳುವಿಕೆ, ಜೋರಾದ ಘರ್ಜನೆ-ಘೀಳಿಡುವಿಕೆಗಳೂ ಪ್ರಾರಂಭವಾದವು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ