Advertisement

Category: ಸರಣಿ

ಮಾಘಿಯ ಚಳಿಯಲ್ಲಿ, ಆಲೆಮನೆಯ ಘಮಲಲ್ಲಿ…: ರೂಪಾ ರವೀಂದ್ರ ಜೋಶಿ ಸರಣಿ

ಅಪ್ಪಯ್ಯ “ಯೇ ಹುಡುಗ್ರೇ ಏಳ್ರೇ. ಆಲೇಮನೀಗೆ ಹೋಗಿ ಹಾಲು ಕುಡೀರೇ.” ಎಂದು ಏಳಿಸುತ್ತಿದ್ದರು. ಹಸಿದ ಹೊಟ್ಟೆಗೆ ಕಬ್ಬಿನ ಹಾಲು ಕುಡಿದರೆ ಅದೆಲ್ಲ ರಕ್ತವೇ ಆಗಿಬಿಡುತ್ತದೆಯಂತೆ ಎಂದು ಅಪ್ಪಯ್ಯ ಯಾವಾಗಲೂ ಹೇಳುತ್ತಿದ್ದರು. ಅಪ್ಪಯ್ಯನ ದನಿಗೆ, ನಾವು ಹೊದಿಕೆ ಕಿತ್ತೊಗೆದು, ಮುಖ ತೊಳೆದ ಶಾಸ್ತ್ರಮಾಡಿ, ಆಲೆಮನೆಯತ್ತ ಓಡುತ್ತಿದ್ದೆವು. ಅಷ್ಟರಲ್ಲಿ ಅಪ್ಪಯ್ಯ ಒಳ್ಳೆಯ ಕಬ್ಬು ಹುಡುಕಿ, ಗಾಣಕ್ಕೆ ಕೊಡಿಸಿ, ನಮಗೆ ಕುಡಿಯಲು ಸವಿಯಾದ ಐಸ್ ಕೋಲ್ಡ್ ಹಾಲು ಹಿಡಿದು ಇಟ್ಟಿರುತ್ತಿದ್ದರು. ಮೊದಲೇ ಮಾಘ ಮಾಸದ ಛಳಿ. ಆ ಥಣ್ಣನೆಯ ಹಾಲು ಹೊಟ್ಟೆಗಿಳಿಯುತ್ತಿದ್ದಂತೆಯೇ, ದಂತ ಪಂಕ್ತಿಗಳು, ಮಸೆದುಕೊಳ್ಳುತ್ತ, ಕಟ ಕಟನೆ ಸಪ್ಪಳ ಮಾಡತೊಡಗುತ್ತಿದ್ದವು.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಹಾಡೋ ಹಕ್ಕಿಗೆ ಬೇಕೇ ಬಿರುದು ಸನ್ಮಾನ?: ಬಸವನಗೌಡ ಹೆಬ್ಬಳಗೆರೆ ಸರಣಿ

ಟಿಸಿಹೆಚ್ ಕಾಲೇಜಿನಲ್ಲಿ ಬಹುತೇಕರು ಇಷ್ಟಪಡುತ್ತಿದ್ದುದು ‘ಅಪುನಾ ಸರ್’ ಅವರನ್ನೇ. ಇವರನ್ನು ನಾವು ನಮ್ಮ ಕಾಲೇಜು ಮಿತಿಯಲ್ಲಿ ‘ನಡೆದಾಡುವ ವಿಶ್ವಕೋಶ’ ಎಂದೇ ಕರೆಯುತ್ತಿದ್ದೆವು. ಅವರು ಮೂಲತಃ ‘ಜೀವ ವಿಜ್ಞಾನ ಶಿಕ್ಷಕ’ ರಾಗಿದ್ದಾಗ್ಯೂ ನಮಗೆ ಅವರ ಇಂಗ್ಲೀಷ್ ಭಾಷಾ ಪ್ರಾವೀಣ್ಯತೆ, ಸಮಾಜ ವಿಜ್ಞಾನದಲ್ಲಿ ಅವರಲ್ಲಿದ್ದ ಪಾಂಡಿತ್ಯ, ಪ್ರಖರ ದೇಶಪ್ರೇಮ, ಸಮಯಪ್ರಜ್ಞೆ, ನಾಯಕತ್ವ ಗುಣ, ಪಾಠವನ್ನು ಅರ್ಥೈಸುತ್ತಿದ್ದ ರೀತಿ ನಮ್ಮನ್ನು ಸೂಜಿಗಲ್ಲಿನಂತೆ ಆಕರ್ಷಿಸುತ್ತಿತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತೈದನೆಯ ಕಂತು ನಿಮ್ಮ ಓದಿಗೆ

Read More

ಸರ್ಕಾರಿ ಸಿಬ್ಬಂದಿಯೊಂದಿಗೆ ನಡೆದ ಜಟಾಪಟಿ: ಎಚ್. ಗೋಪಾಲಕೃಷ್ಣ ಸರಣಿ

ಬೆಳಿಗ್ಗೆಯಿಂದ ಸುತ್ತಿದ್ದು, ಹಸಿವಿನ ಹೊಟ್ಟೆ, ನಾಲ್ಕು ಮಹಡಿ ಹತ್ತು ಎರಡು ಮಾಡಿ ಇಳಿ… ಬಿಪಿ ಏರಿತು ಕಾಣಿರಿ… ವಾಚಾಮಗೋಚರ ಪುಂಖಾನು ಪುಂಖವಾಗಿ ಬಾಯಿಂದ ಬೈಗುಳ ಹೆಂಗೆ ಯಾವ ಡೆಸಿಮಲ್‌ನಲ್ಲಿ ಉಕ್ಕಿತು ಅಂದರೆ ಮೇಲಿನ ಮಹಡಿ ಕೆಳಗಿನ ಮಹಡಿ ನಾನು ನಿಂತಿದ್ದ ಮಹಡಿ ಜನ ಸುತ್ತಲೂ ಸೇರಿಬಿಟ್ಟರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಅರವತ್ತೆಂಟನೆಯ ಕಂತು

Read More

ಗಣಪನ ಸಂಗಡ ವ್ಯಾಕರಣ: ಸುಮಾವೀಣಾ ಸರಣಿ

ರುಚಿನೋಡಿ ರವೆಯನ್ನು ನೋಡುತ್ತಿದ್ದಂತೆ 12 ವರ್ಷದ ಮಗನ ನೆನಪಿಗೆ ಬಂದದ್ದೆ “ರವೆ ಉಂಡೆ ರವೆ ಉಂಡೆ ಬೀರಿನಲ್ಲಿ ಕಂಡೆ” ಎಂಬ ಶಿಶುಪದ್ಯದ ಸಾಲುಗಳು ಬಂದರೆ ನನಗೆಂತೂ ಆ ರವಮಂ ನಿರ್ಜಿತ ಕಂಠೀರವಮಂ ನಿರಸ್ತಘನ ರವಮಂ ಕೋಪಾರುಣ ನೇತ್ರಂ ಕೇಳ್ದಾ ನೀರೊಳಗಿರ್ದುಂ ಬೆಮರ್ತನ್ ಉರಗಪತಾಕಂ ಎಂಬ ರನ್ನನ ಕೃತಿಯ 6ನೇ ಸಂಧಿಯ 22 ನೆಯ ಪದ್ಯ. ಇದು ದುರ್ಯೋಧನನ್ನು ಆತನ ಕೋಪವನ್ನು ವಿವರಿಸುವ ಪದ್ಯ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಇಪ್ಪತ್ನಾಲ್ಕನೆಯ ಬರಹ ನಿಮ್ಮ ಓದಿಗೆ

Read More

ಪುಸ್ತಕ ಕೊಳ್ಳಲು ಹೋದವನಿಗೆ ಲೈಬ್ರರಿ ಕೊಟ್ಟವರು: ದರ್ಶನ್‌ ಜಯಣ್ಣ ಸರಣಿ

ಮಾತು ಕಥೆಯೆಲ್ಲ ಮುಗಿದಮೇಲೆ ಕಾರಿನ ಡಿಕ್ಕಿ ಮತ್ತೊಮ್ಮೆ ತೆಗೆಯಲು ಹೇಳಿದರು. ನಾನೂ ಹಾಗೆಯೇ ಮಾಡಲಾಗಿ ಸಾರಾ ಮತ್ತು ಆಲ್ವಿನ್ ದಂಪತಿಗಳು ತಮ್ಮ ಕಾರಿನಿಂದ ಹಲವು ಬ್ಯಾಗುಗಳಲ್ಲಿದ್ದ ನೂರಾರು ಪುಸ್ತಕಗಳನ್ನು ನಾನು ಕೇಳದೆಯೇ ಉಚಿತವಾಗಿ ನನ್ನ ಕಾರಿಗೆ ಸೇರಿಸಿದರು. ನಾನು ಇವೆಲ್ಲವನ್ನೂ ಯಾವಾಗ ಓದುವುದು ಎಂದು ಯೋಚಿಸುತ್ತಿದ್ದೆ! ಬೇಡವೆಂದರೂ ಅವರು ಕೇಳಲಿಲ್ಲ. ಹೀಗೆ ಪುಸ್ತಕ ಕೊಳ್ಳಲು ಹೊರಟವನಿಗೆ ಲೈಬ್ರರಿಯೇ ದೊರಕಿದ್ದು ಅತ್ಯಂತ ಚೇತೋಹಾರಿ ಸಂಗತಿ.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ