Advertisement

Category: ಸರಣಿ

ಚಿತ್ರಹಿಂಸೆ ಮತ್ತು ಹೆಡ್ ಕುಕ್: ಸುಮಾವೀಣಾ ಸರಣಿ

ಸೀನರಿ ಅಂದರೆ ನಮ್ಮ ಚಿತ್ರವನ್ನು ಇನ್ನೊಮ್ಮೆ ನೋಡುವ ಸೀನ್ ಇರುತ್ತಲೇ ಇರಲಿಲ್ಲ. ಅದೇ ಸೊರಗಿದ ಮರಗಿಡಬಳ್ಳಿ, ಕೊರಕಲು ನದಿ, ಒಂಟಿ ಕಿಟಕಿಯ ಮನೆ, ರೆಕ್ಕೆ ಸುಟ್ಟಂಥ ಹಕ್ಕಿ, ಸೊಟ್ಟ ರಸ್ತೆ ಹೀಗೆ ಒಂದೇ ಎರಡೇ…. ಸ್ಪುರದ್ರೂಪಿ ಮನುಷ್ಯ ಎಂದೂ ನಮ್ಮಿಂದ ರೂಪುಗೊಳ್ಳಲೇ ಇಲ್ಲ ಬಿಡಿ…. ಅಂತೂ ಚಿತ್ರ -ವಿಚಿತ್ರ ಚಿತ್ರಗಳನ್ನು ಬಿಡಿಸುತ್ತಲೇ ಇದ್ದ ನಮಗೆ ಅನಿವಾರ್ಯವಾಗುತ್ತಿದ್ದುದು ಸೈನ್ಸಿನ ಗಿಡದ ಚಿತ್ರಬಿಡಿಸಿ ಭಾಗಗಳನ್ನು ಗುರುತಿಸಿ ಮತ್ತು ಸೋಷಿಯಲ್ ಸೈನ್ಸಿನ ಭಾರತ ಭೂಪಟ ಬಿಡಿಸಿ ಸ್ಥಳ ಗುರುತಿಸಿ ಎನ್ನುವ ಪ್ರಶ್ನೆ. ಸೈನ್ಸಿನ ಪ್ರಶ್ನೆಯನ್ನು ಎದುರಿಸಿ ಮಾರ್ಕ್ಸ್ ತೆಗೆಯುತ್ತಿದ್ದೆವಾದರೂ ಬೇರು, ಕಾಂಡ, ಎಲೆಗಳು ಕೆಂಪು ಇಂಕಿನಲ್ಲಿ ತಿದ್ದುಪಡಿಯಾಗುತ್ತಿದ್ದವು.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಹದಿನೇಳನೆಯ ಬರಹ ನಿಮ್ಮ ಓದಿಗೆ

Read More

ಮಗುವಿನ ಮೌನ ಹಸಿವಿನಂಥ ಕಾವ್ಯ: ಎಸ್. ಜಯಶ್ರೀನಿವಾಸ ರಾವ್ ಸರಣಿ

ಪಾಕ್ ಚೇಯ್ಸಾಮ್ ಅವರ ಕವಿತೆಗಳು ನೇರ ಆಕ್ರಮಣ ಮಾಡುವುದಿಲ್ಲ, ಆದರೆ ವಿಷಯಗಳ ಸುತ್ತ ಸುತ್ತಾಡುತ್ತಾ ಇರುತ್ತವೆ. ಈ ಕಾವ್ಯಾತ್ಮಕ ಸುತ್ತಾಡುವಿಕೆ ಅನಿವಾರ್ಯವಾಗಿ ಅಂತರವನ್ನು ಸೃಷ್ಟಿಸುತ್ತದೆ, ಇದು ಪ್ರಿಯತಮೆಗಾಗಿ ಹಂಬಲದಂತಹ ಅನ್ಯೋನ್ಯ ವಿಷಯದ ಬಗ್ಗೆಯೂ ಸಹ ಕವಿತೆಗಳು ಮಾತನಾಡುವದರಿಂದ ಬೇರ್ಪಡುವಿಕೆಯ ನೋವನ್ನು ಸೂಚಿಸುತ್ತದೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ದಕ್ಷಿಣ ಕೊರೆಯಾ ದೇಶದ ಹೆಸರಾಂತ ಕವಿ ಪಾಕ್ ಚೇಯ್ಸಾಮ್ -ರವರ
(Pak Chaesam, 1933-1997) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

Read More

ಕೋಟಿಕೋಟಿ ಕೈಜಾರಿದ ದುಃಖ…: ಎಚ್.ಗೋಪಾಲಕೃಷ್ಣ ಸರಣಿ

ಇಡೀ ಬೆಂಗಳೂರಿನ ಉಳ್ಳವರು ಅಂದರೆ ರಿಚ್ ಜನ ಇವರ ಮೋಡಿಗೆ ಒಳಗಾದರು. ಇಡೀ ಬೆಂಗಳೂರು ಒಂದು ರೀತಿಯ ಸಾಮೂಹಿಕ ಸನ್ನಿಗೆ ಒಳಗಾಯಿತು, ಐದು ಹತ್ತು ವರ್ಷ ಹಿಂದೆ ಮನೆ ಕಟ್ಟಿಸಿದವರೂ ಕೊಂಡವರೂ ಸೇರಿದಹಾಗೆ ಹಲವು ತಲೆಮಾರುಗಳಿಂದ ಇದ್ದ ಮನೆಗಳು ನೆಲಸಮ ಆದವು. ವಾಸ್ತು ಸರಿ ಇಲ್ಲ ಎಂದು ವಾಸ್ತು ಶಿಲ್ಪಿ ಹೇಳುವುದು ಮತ್ತು ಅಂತಹ ತಜ್ಞರ ಸಲಹೆ ಮೇರೆಗೆ ಮನೆ ಕೆಡವಿ ಕಟ್ಟುವ ಆಟ ಸುಮಾರು ಎರಡು ದಶಕ ನಡೆಯಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತೊಂಭತ್ತನೆಯ ಕಂತು

Read More

ಮುದ ತುಂಬಿದ ಮಲೆನಾಡಿನ ಮದ್ವೆಮನೆ:‌ ಭವ್ಯ ಟಿ.ಎಸ್. ಸರಣಿ

ಗಂಡು ಮತ್ತು ಹೆಣ್ಣಿನ ಮನೆಯ ಒಂದು ಗೋಡೆಯ ಮೇಲೆ ಹಸೆ ಕಲಾವಿದರು ಚಿತ್ತಾರ ಬಿಡಿಸಿ ಗಂಡು ಮತ್ತು ಹೆಣ್ಣಿನ ಹೆಸರು ಬರೆದಿರುತ್ತಾರೆ. ಇದನ್ನು ಹಸೆಗೋಡೆ ಎನ್ನುತ್ತಾರೆ. ಚಪ್ಪರದ ದಿನ, ಮದುವೆ ಮಂಟಪಕ್ಕೆ ಹೊರಡಿಸುವ ಮೊದಲು, ಮದುವೆಯ ನಂತರ ಮದುಮಕ್ಕಳನ್ನು ಈ ಗೋಡೆಯ ಕೆಳಗೆ ಕೂರಿಸಿ ಬಂಧುಗಳೆಲ್ಲರೂ ಅಕ್ಷತೆ ಹಾಕಿ ಹರಸುತ್ತಾರೆ. ಈ ಹಸೆ ಚಿತ್ತಾರವು ಮದುವೆಯ ಸವಿನೆನಪಾಗಿ ಶಾಶ್ವತವಾಗಿ ಆ ಮನೆಯ ಗೋಡೆಯ ಮೇಲೆ ಉಳಿದಿರುತ್ತದೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ

Read More

ಫ್ರೆಂಚ್ ಹಸ್ತದಿಂದ ಮುಕ್ತವಾದ ಗಿಣಿ ಗಿನಿಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಈ ದೇಶದಲ್ಲಿ ತೀವ್ರವಾದ ಬಡತನವಿದೆ. ಯುವಜನತೆ ಹೆಚ್ಚಿರುವ ದೇಶವಾದ ಕಾರಣ ಜನಸಂಖ್ಯೆ ಈಚೀಚೆಗೆ ಹೆಚ್ಚಾಗುತ್ತಿದೆ. ಇಂತಹ ಸನ್ನಿವೇಶದಲ್ಲಿಯೂ ಸಹ ಗಿನಿಯಾ ದೇಶವು ಅರಣ್ಯ ಪ್ರದೇಶಗಳನ್ನು ಹಾಗೆಯೇ ಉಳಿಸಿಕೊಂಡಿದೆ. ಗಿನಿಯಾ ದೇಶವು ವಿಸ್ತೃತವಾದ ಕರಾವಳಿ ಪ್ರದೇಶವನ್ನು ಹೊಂದಿದೆ. ಸುಮಾರು ಮುನ್ನೂರ ಇಪ್ಪತ್ತು ಕಿಲೋಮೀಟರ್‌ಗಳಷ್ಟು ಉದ್ದದ ಕರಾವಳಿಯನ್ನು ಹೊಂದಿದ ದೇಶವಿದು. ಇದರ ರಾಜಧಾನಿ ಕೊನಾಕ್ರಿ ನೆಲೆನಿಂತಿರುವುದೇ ಕರಾವಳಿಯಲ್ಲಿ. ಎಲ್ಲರ ಕಣ್ಮನ ಸೆಳೆಯುವ ಸುಂದರವಾದ ಕಡಲತೀರಗಳನ್ನು ಹೊತ್ತುನಿಂತಿದೆ ಕರಾವಳಿ.
ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಗಿನಿಯಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ