Advertisement

Category: ಸರಣಿ

ಮೇಸ್ತ್ರಿಯೊಂದಿಗೆ ಗೆದ್ದ ಯುದ್ಧ…: ಎಚ್. ಗೋಪಾಲಕೃಷ್ಣ ಸರಣಿ

ನನ್ನ ತಲೆಯಿಂದ ದೊಡ್ಡ ಹೊರೆ ಇಳಿದ ಹಾಗನ್ನಿಸಿತು. ಸಾವಿರಾರು ರುಪಾಯಿ ಮಿಗಿಸಿದ ಸಂತೋಷ ಆಯ್ತು. ರೂಪಿ ಸೆವ್ಡ್ ಈಸ್ ರೂಪಿ ಅರ್ನ್‌ಡ್ ಎನ್ನುವ ಫಿಲಾಸಫಿ ನನ್ನದು ಆ ಕಾಲದಿಂದಲೇ…….! ಈ ಸಂತೋಷ ಒಂದುಕಡೆ ಮತ್ತು ಇಡೀ ಜೀವಮಾನ ಅನುಭವಿಸಬೇಕಿದ್ದ ಮಾನಸಿಕ ಒತ್ತಡ ಒಂದುಕಡೆ ನಿವಾರಣೆ ಆದ ಖುಷಿ ಸಿಕ್ತಾ?
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಅರವತ್ತನೆಯ ಕಂತು

Read More

ಮಳೆ ಹಿಡಿಯೋ ಮೊದ್ಲು…..: ಭವ್ಯ ಟಿ‌. ಎಸ್. ಸರಣಿ

ಮಳೆಗಾಲ ಬಂತೆಂದರೆ ಮೀನುಗಳ ಕಾಲವೂ ಬಂದಂತೆಯೇ. ಹತ್ ಮೀನು, ಅವ್ಲು, ಗೌರಿ ಮೊದಲಾದ ಹೊಳೆ ಮೀನುಗಳು ಸಿಗುವಾಗ ರುಚಿಕರವಾದ ಮೀನು ಸಾರಿಗೆ ಬೇಕಾದ ತರತರದ ಹುಳಿಗಳು ಈ ಮೇ ತಿಂಗಳಲ್ಲಿ ತಯಾರಾಗಬೇಕು. ಮಲೆನಾಡಿನ ಕಾಡುಗಳಲ್ಲಿ ವಾಟೆ ಮರ ಇರುತ್ತದೆ. ಈ ವಾಟೆ ಕಾಯಿಗಳನ್ನು ಉದುರಿಸಿ ತಂದು ಸಣ್ಣಗೆ ಹೆಚ್ಚಿ, ಒಣಗಿಸಿ, ಬೀಜ ತೆಗೆದು ಉಪ್ಪು ಹಾಕಿ ಡಬ್ಬಿಗಳಲ್ಲಿ ಸಂಗ್ರಹಿಸಿಡುತ್ತಾರೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿಯಲ್ಲಿ ಮಳೆ ಶುರುವಾಗುವ ಮುಂಚೆ ಮಾಡಿಟ್ಟುಕೊಳ್ಳುವ ಸಿದ್ಧತೆಗಳ ಕುರಿತ ಬರಹ ಇಲ್ಲಿದೆ

Read More

ಏಷ್ಯಾದ ಕಳೆದುಹೋದ ಜಗತ್ತು ಇಂಡೋನೇಷ್ಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಇಂಡೋನೇಷ್ಯಾವು ನೂರಕ್ಕೂ ಹೆಚ್ಚು ಅಳಿವಿನಂಚಿನಲ್ಲಿರುವ ಜೀವಿಗಳಿಗೆ ನೆಲೆಯಾಗಿದೆ. ಏಷ್ಯಾದ ಕಳೆದುಹೋದ ಜಗತ್ತು ಎನ್ನುವ ವಿಶೇಷ ಹೆಸರನ್ನು ಹೊಂದಿದೆ ಇಂಡೋನೇಷ್ಯಾ. ಬೇರೆ ಕಡೆಗಳಲ್ಲಿ ಕಂಡುಬರದ, ಈಗಾಗಲೇ ಅಳಿದುಹೋದ ಅಪರೂಪದ ಜೀವಿಗಳು ಇಲ್ಲಿ ಕಂಡುಬರುತ್ತವೆ. ಸುಮಾತ್ರನ್ ಘೇಂಡಾಮೃಗ, ಒರಾಂಗ್-ಉಟಾನ್ಸ್, ಅನೋವಾ, ಸುಮಾತ್ರಾನ್ ಹುಲಿ, ಸಮುದ್ರ ಆಮೆಗಳು, ಟಾರ್ಸಿಯಸ್ ಟಾರ್ಸಿಯರ್, ಕೊಮೊಡೊ ಡ್ರ‍್ಯಾಗನ್, ಮೆರಾಕ್ ಮೊದಲಾದವು ಇಲ್ಲಿ ಕಾಣಸಿಗುವ, ಬೇರೆಲ್ಲೂ ಹೆಚ್ಚಾಗಿ ಕಾಣಸಿಗದ ಜೀವಿಗಳು.
ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಇಂಡೋನೇಷ್ಯಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ಸೌದಿ ಡೇಟ್ಸ್ – 2: ದರ್ಶನ್‌ ಜಯಣ್ಣ ಸರಣಿ

ಸೌದಿ ಆಧುನಿಕತೆಯನ್ನ ಎಲ್ಲರಂತೆ ಅಪ್ಪಿಕೊಂಡರೂ ಅದನ್ನ ಒಪ್ಪಿಕೊಂಡಿರಲಿಲ್ಲ. ಸಂಪ್ರದಾಯ ಮತ್ತು ಆಧುನಿಕತೆ, ಇಸ್ಲಾಂ ಮತ್ತು ಇತರೆ ಧಾರ್ಮಿಕ ಪದ್ಧತಿಗಳು, ಹಣ ಗಳಿಕೆ ಮತ್ತು ಜಾಗತಿಕ ಪ್ರಭಾವ, ಶಿಕ್ಷಣ ಮತ್ತು ಧರ್ಮ, ಸಂಪನ್ಮೂಲಗಳು ಮತ್ತು ನುರಿತ ಕೆಲಸಗಾರರು, ಕಮಾಂಡ್ ಅಂಡ್ ಕಂಟ್ರೋಲ್ ಇವೇ ಮುಂತಾದ ವಿಷಯಗಳನ್ನ ಎರಡು ದೋಣಿಯ ಪಯಣ ಅಂತಲೇ ಬಹುಶ ಭಾವಿಸಿತ್ತು ಅನ್ನಿಸುತ್ತದೆ. ಇತರೇ ಅರಬ್ ರಾಷ್ಟ್ರಗಳು ಇಲ್ಲಿಗೆ ಬಂದು ನೆಲಸಿ ನೌಕರಿ ಮಾಡುವವರನ್ನು ಮುಕ್ತವಾಗಿ ನಮ್ಮ ದೇಶವನ್ನ ಕಟ್ಟಿದವರಲ್ಲಿ ಇವರ ಪಾಲೂ ಹೆಚ್ಚಿದೆ ಎಂದು ಹೇಳಿದರೆ ಸೌದಿ ಅಂತಾ ಯಾವ ಹೇಳಿಕೆಯನ್ನೂ ಕೊಡುವುದಿಲ್ಲ.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿ

Read More

ಮಹಾಮಾತೆ ನನ್ನತ್ತೆ: ಸುಮಾ ಸತೀಶ್ ಸರಣಿ

ಅವರ ಜೀವನ ಪ್ರೀತಿ ಬಲು ಹಿತವಾಗಿತ್ತು.‌ ಮನೆತುಂಬ ಮಕ್ಕಳಿದ್ದಾಗ ತರಾವರಿ ಅಡುಗೆ ಮಾಡುತ್ತಿದ್ದರು.‌ ಕೊನೆಗೆ ತಾವಿಬ್ಬರೇ ಇರುವಾಗಲೂ ಯಾವೊಂದು ತಿಂಡಿಯನ್ನೂ ಬಿಡದೆ ಮಾಡುತ್ತಿದ್ದರು. ಇಡ್ಲಿ, ದೋಸೆ, ಕಡುಬು, ಒಬ್ಬಟ್ಟು ಊಹೂ ಯಾವುದೂ ಬಿಡುತ್ತಿರಲಿಲ್ಲ. ಸೋಮಾರಿತನ ಇವರನ್ನು ಕದ್ದು ನೋಡಲೂ ಹೆದರಿ ಓಡುತ್ತಿತ್ತು. ಕೊನೆಗೆ ಮಾಮ ಹೋದ ಮೇಲೆ ಸುಮಾರು ವರ್ಷಗಳು ಒಬ್ಬರೇ ಇದ್ದಾಗಲೂ ಅದೇ ಆಹಾರ ಪದ್ಧತಿಯಿತ್ತು. ತಾವೊಬ್ಬರೇ ತಿನ್ನದೆ ಅಕ್ಕಪಕ್ಕದವರಿಗೆ, ಹತ್ತಿರದ ಬಡಮಕ್ಕಳಿಗೆ, ಕೂಲಿ ಕೆಲಸದವರಿಗೆ‌ ಕೊಟ್ಟು ತಿನ್ನುತ್ತಿದ್ದರು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ