Advertisement

Category: ಸರಣಿ

ಬದುಕಿಗೆ ಪರಿಧಿಯ ಬರೆವ ಕರ್ಮಫಲವೆಂಬ ಕೈವಾರ: ರಾಮ್ ಪ್ರಕಾಶ್ ರೈ ಕೆ ಸರಣಿ

ಸುಜಿಗೆ ಒಳ್ಳೆಯ ಬದುಕಿತ್ತು. ಮಧುವಿನ ಪತ್ನಿಗೂ. ಆದರೆ, ಅವಳಲ್ಲಿನ ಖಾಲಿತನವನ್ನು ತುಂಬಲು ಆಕೆ ಹೊರಟಳು. ಸುಜಿ ಆ ಅವಕಾಶವನ್ನು ಬಳಸಿ ಆಕೆಯ ನಂಬಿಕೆ, ಆತ್ಮಾಭಿಮಾನದ ಜೊತೆಗೆ ಆಟವಾಡಿಬಿಟ್ಟ. ಇವೆಲ್ಲವೂ ನಡೆದಾಗ ಮಧು ಮೂಕ ಪ್ರೇಕ್ಷನಾಗಿದ್ದ. ಆದರೆ ಪತ್ನಿಯ ಮೇಲಿನ ಆತನ ಅಸ್ಖಲಿತ ಪ್ರೇಮ, ಗೌರವಕ್ಕೆ ಧಕ್ಕೆಯಾದಾಗ ಆತ ಹಿಂಸೆಯ ದಾರಿಯ ಹಿಡಿದ. ಸರಿ ತಪ್ಪುಗಳಾಚೆ ಇಂತಹ ಅದೆಷ್ಟೋ ಕ್ರಿಮಿಗಳಿಗೆ ‘ಸಾವು ಮಲಗಿರುತ್ತೆ ನಿನ್ನ ಪಕ್ಕದಲ್ಲೇ, ಗೊತ್ತಾಗೋದು ಎದ್ದಾಗಲೇ’ ಎಂದು ಪಾಠವಾಯಿತು ಆತನ ನಡೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿಯಲ್ಲಿ ಮಲಯಾಳಂನ ‘ಇಲಾ ವಿಳಾ ಪೂಂಚಿರಾ’ ಸಿನಿಮಾದ ವಿಶ್ಲೇಷಣೆ

Read More

ಮದುವೆಮನೇನೋ ಸಂತೆಕಟ್ಟೇನೋ: ಸುಮಾ ಸತೀಶ್ ಸರಣಿ

ಇಂತಾ ಜೋರಿನ ಅತ್ತೇ ಒಂದು ಪುಂಡ ಹಸಾನ ಪಳಗಿಸಿದ್ಲು. ಆ ಹಸು ಎಷ್ಟು ಜೋರು ಅಂದ್ರೇ ಯಾರಿಗೂ ಹಾಲು ಕರೆಯೋಕೇ ಬಿಡ್ತಿರಲಿಲ್ಲ. ನಮ್ಮತ್ತೇನೂ ಜೋರಲ್ವಾ. ಅದೂ ಜೋರು. ಇಬ್ರಲ್ಲೂ ಬಲು ಸ್ನೇಹ. ನಮ್ಮತ್ತೆ ಹಾಲು ಕರೆದರೆ ಕಮಕ್‌ ಕಿಮಕ್ ಅಂತಿರಲಿಲ್ಲ ತುಡುಗು ಮುಂಡೇದು. ಕೊನೇಗೆ ಮದುವೇ ದಿನ ಹಸೆಮಣೇ ಮೇಲಿದ್ದಾರೆ. ಈ ಹಸಾ ಹಾಲು ಕೊಡಲಿಲ್ಲ ಅಂತಾ ಹೇಳಿದ್ದಾರೆ. ನಮ್ಮತ್ತೆ ಹಸೇಮಣೇ ಮೇಲಿಂದ ಎದ್ದು ಹೋಗಿ ಹಾಲು ಕರೆದುಕೊಟ್ಟು ಬಂದಿದ್ದಾರೆ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಮದುವೆ ಮನೆಯ ಮತ್ತಷ್ಟು ವಿಷಯಗಳ ಕುರಿತ ಬರಹ ನಿಮ್ಮ ಓದಿಗೆ

Read More

ಹೋಳಿಗೆ ಕೊಡಿಸಿದ ಯುಗಾದಿ ಚಂದಿರ..: ಪೂರ್ಣೇಶ್‌ ಮತ್ತಾವರ ಸರಣಿ

ಹಬ್ಬದ ಹಿಂದಿನ ಸಂಜೆ “ನಾಳೆ ರಜಾ, ಕೋಳಿ ಮಜಾ..” ಎನ್ನುತ್ತಾ ರಜೆಯ ಸಡಗರವನ್ನು ಅನುಭವಿಸಿ, ಹಗಲಿಡೀ‌‌ ಆಟವಾಡಿ, ಮಧ್ಯಾಹ್ನ ಸಿಹಿ‌ ತಿಂದು ಖುಷಿಪಟ್ಟವರು ಸಂಜೆಯಾಗುತ್ತಲೇ ನಮಗೆ ತಿಳಿಯದಲೇ ಬೇಸರಿಸಿಕೊಂಡು ಬಿಡುತ್ತಿದ್ದೆವು. “ಹೋಂ ಸಿಕ್ ನೆಸ್” ಎಂಬುದು ನಮಗರಿವಿಲ್ಲದಲೇ ಹಬ್ಬದ ದಿನಗಳಲ್ಲೇ ಹೆಚ್ಚಾಗಿ ನಮ್ಮನ್ನು ಆವರಿಸಿಕೊಂಡು ಬಿಡುತ್ತಿತ್ತು. ಕೊಟ್ಟ ಹೋಂ ವರ್ಕ್ “ನಾಳೆ ಮಾಡಿದರಾಯ್ತು” ಎಂದು ಮುಂದೂಡಿ ಈಗ ಮಾಡಬೇಕಿರುವುದೂ ನಮ್ಮ ದುಃಖವನ್ನು ಮತ್ತಷ್ಟು ಹೆಚ್ಚಿಸಿ ಬಿಡುತ್ತಿತ್ತು.
ಪೂರ್ಣೇಶ್‌ ಮತ್ತಾವರ ಬರೆಯುವ “ನವೋದಯವೆಂಬ ನೌಕೆಯಲ್ಲಿ…” ಸರಣಿಯ ಹನ್ನೆರಡನೆಯ ಬರಹ

Read More

ಒಳಗೊಂದು ಪರಿಸ್ಥಿತಿ.. ಹೊರಗೊಂದು ಪರಿಸ್ಥಿತಿ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಮಣಿ, “ಸೆಲ್ವಿ ನನ್ನ ಮಾತು ಕೇಳು. ಅಬಾರ್ಶನ್ ಮಾಡಿಕೊಂಡರೆ ಎಲ್ಲವೂ ಸರಿಯೋಗುತ್ತದೆ. ಮುಂದೆ ಅಂತಹ ತಪ್ಪು ನಡೆಯದಂತೆ ನೋಡಿಕೊಳ್ಳೋಣ. ನೀನು ಮುಂದಕ್ಕೆ ಓದಬಹುದು. ನಾನೂ ಹೇಗಾದರು ಮಾಡಿ ರಾತ್ರಿ ತರಗತಿಗಳಿಗೆ ಹೋಗಿ ಡಿಗ್ರಿ ಮುಗಿಸಬಹುದು. ಕಾಲೇಜಿನಲ್ಲಿ ಹೇಗೊ ರಾತ್ರಿಯೊತ್ತು ಆರ್ಟ್ ತರಗತಿಗಳಿಗೆ ಪಾಠ ಮಾಡ್ತಾರೆ” ಎಂದ. ಸೆಲ್ವಿ, “ಇಲ್ಲ ನಾನು ಅಬಾರ್ಶನ್ ಮಾತ್ರ ಮಾಡಿಕೊಳ್ಳುವುದಿಲ್ಲ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಹದಿಮೂರನೆಯ ಕಂತು ನಿಮ್ಮ ಓದಿಗೆ

Read More

ಮಲ್ಲಯ್ಯನ ಮರಳು ತಕರಾರು: ಎಚ್.ಗೋಪಾಲಕೃಷ್ಣ ಸರಣಿ

ಒಂದು ಕಾಲದಲ್ಲಿ ತಮ್ಮ ಜೀವನ ನಿರ್ವಹಣೆಗೆ ಇಲ್ಲಿನ ಕ್ವಾರಿಗಳನ್ನು ನಂಬಿದ್ದ ಹಲವಾರು ಕುಟುಂಬಗಳು ಈಗ ಬೇರೆ ಬೇರೆ ವೃತ್ತಿ ಹಿಡಿದಿದ್ದಾರೆ. ಅದರ ಜತೆಗೆ ದೇವನಹಳ್ಳಿಯಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಆದ ನಂತರ ಅಲ್ಲಿಗೆ ಹಲವು ಸಂಪರ್ಕ ರಸ್ತೆಗಳ ನಿರ್ಮಾಣ ಶುರು ಆಯಿತು. ಬೆಟ್ಟಹಳ್ಳಿ ಮೂಲಕ ಒಂದು ರಸ್ತೆ ಅಗಲ ಮಾಡುವ ಯೋಜನೆ ಹಮ್ಮಿಕೊಳ್ಳಲಾಯಿತು. BEL ವೃತ್ತದಿಂದ ಈ ರಸ್ತೆ ಬೆಟ್ಟಹಳ್ಳಿ ಹಾದು ಯಲಹಂಕದ ಬಳಿ ದೇವನಹಳ್ಳಿ ರಸ್ತೆ ಸೇರುವಂತೆ ಯೋಜನೆ ರೂಪಿಸಿದ್ದು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತೈದನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ