Advertisement

Category: ಸರಣಿ

ಫ್ರೂಟ್ ಕಟರ್ ಕರುಣಿಸಿದ ದಾನಿ ಪಟ್ಟ!: ಪೂರ್ಣೇಶ್‌ ಮತ್ತಾವರ ಸರಣಿ

ಕೆಲವರು ಕಬ್ಬಿಣದ ರಾಡ್‌ನ ಒಂದು‌ ತುದಿಗೆ ವೈರ್ ಕಟ್ಟಿ ಮತ್ತೊಂದು ತುದಿಯನ್ನು ನೀರಲ್ಲಿ ಬಿಟ್ಟು ಪರ್ಯಾಯ ವಾಟರ್ ಹೀಟರ್ ಮಾಡಿಕೊಂಡರೆ ಮತ್ತೆ ಕೆಲವರು ಪೆನ್ಸಿಲ್‌ನ ತುದಿಗೆ ಸೂಪರ್ ಮ್ಯಾಕ್ಸ್ ಬ್ಲೇಡ್ ಸಿಕ್ಕಿಸಿ ಪರ್ಯಾಯ ರೆಡಿ ಶೇವರ್ ಮಾಡಿಕೊಂಡು ಬಿಡುತ್ತಿದ್ದರು. ಮುಂದುವರೆದು, ಐರನ್ ಬಾಕ್ಸನ್ನು ಕಾಯಿಸಿ ಅದರ ಮೇಲೆ ಮೊಟ್ಟೆ ಹೊಯ್ದು ಅದನ್ನು ಪರ್ಯಾಯ ಆಮ್ಲೆಟ್ ಪ್ಯಾನ್ ಮಾಡ ಹೊರಟ ಮಹನೀಯರೂ ಇದ್ದರು.
ಪೂರ್ಣೇಶ್‌ ಮತ್ತಾವರ ಬರೆಯುವ “ನವೋದಯವೆಂಬ ನೌಕೆಯಲ್ಲಿ…” ಸರಣಿಯ ಏಳನೆಯ ಬರಹ

Read More

ನಾಲ್ಗೆ ಚಪ್ಲ ತೀರಿಸ್ತಿದ್ದ ತಿಂಡಿಗ್ಳು: ಸುಮಾ ಸತೀಶ್ ಸರಣಿ

ಹಬ್ದಾಗೆ ಒಬ್ಬಟ್ಟು‌ ಮಾಡ್ದಾಗೆಲ್ಲಾ‌ ಒಬ್ಬಟ್ಟಿನ್ ಸಾರೂ ಮಾಡ್ತಿದ್ರು. ಒಬ್ಬಟ್ ಎಂಗೆ ಪಿರೂತೀನೋ ಆ ಸಾರೂ ಆಟೇಯಾ. ಒಬ್ಬಟ್ಟು ಸೀಗಿರ್ತಿತ್ತಲ್ಲ, ಅದುಕ್ಕೆ ನಮ್ಮನ್ಯಾಗೆ ಎಲ್ರೂವೇ ಸಾರು ಹಾಕ್ಕಂಡು ತಿನ್ನಾರು.‌ ನಂಗೇ ಮಾತ್ರ ಅದು‌ ಹಿಡುಸ್ತಿರ್ಲಿಲ್ಲ. ನಾನು ಹಾಲೂ ತುಪ್ಪ ಹಾಕ್ಕಂಡೇ ತಿಂಬ್ತಿದ್ದೆ.‌‌
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಆಗಿನ ಕಾಲದ ತಿಂಡಿಗಳ ಕುರಿತ ಬರಹ ನಿಮ್ಮ ಓದಿಗೆ

Read More

ವಿಭಜನೆ, ಅಸ್ತಿತ್ವವಾದ ಮತ್ತು ಪೋಲಂಡ್: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ಈಗಿನ ಕಾಲಘಟ್ಟದಲ್ಲಿ ಪೋಲಂಡ್‌ನ ಸಾಂಸ್ಕೃತಿಕ ಬಹುತ್ವ ಕ್ಷೀಣಿಸತೊಡಗಿದೆ. ನಗರಕೇಂದ್ರಿತವಾದ ಸಂಸ್ಕೃತಿಯೇ ಪ್ರಾಬಲ್ಯ ಮೆರೆಯುತ್ತಾ, ಎಲ್ಲರ ಜೀವನ ವಿಧಾನವನ್ನು ಅದೇ ಬಗೆಯಲ್ಲಿ ರೂಪಿಸತೊಡಗಿದೆ. ಪೋಲಂಡ್‌ನ ಆಧುನಿಕ ಮಾಧ್ಯಮಗಳೂ ಸಹ ಏಕರೂಪದ ಸಂಸ್ಕೃತಿಯೆಡೆಗೆ ಒತ್ತು ನೀಡುತ್ತಿವೆ. ಪೋಲಂಡ್‌ನ ಪರಂಪರೆಯನ್ನು ಸಂರಕ್ಷಿಸಬೇಕೆಂಬ ಮನೋಭಾವದ ಕೆಲವರು ಜಾನಪದ ಸಂಸ್ಕೃತಿಯಲ್ಲಿ ಕಂಡುಬರುವ ಧಾರ್ಮಿಕ ಸಂಗತಿಗಳ ಕಡೆಗೆ ಗಮನಹರಿಸುತ್ತಿದ್ದಾರೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಪೋಲಂಡ್‌ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

‘ಮೈಕ್ರೊಗ್ರಾಮ್’ ಕವಿತೆಗಳು: ಎಸ್. ಜಯಶ್ರೀನಿವಾಸ ರಾವ್ ಸರಣಿ

“ಚಲಿಸುವ ಹಿಮದಂತೆ ಕಾಣುವ ಫ್ಲೆಮಿಂಗೊ ಪಕ್ಷಿಯ ಉತ್ಸಾಹ, ಕಳ್ಳಿಗಿಡದ ಸಸ್ಯಜನ್ಯ ಮಾನವದ್ವೇಷ, ಮರದಲ್ಲಿ ಕಂಬಳಿಹುಳಗಳು ನಡೆಸುವ ಗುಪ್ತಕಾರ್ಯ – ಇವೆಲ್ಲ ನನ್ನನ್ನು ಪಕ್ಷಿಗಳ ವರ್ಣಮಾಲೆಯನ್ನು ಅರ್ಥಮಾಡಿಕೊಳ್ಳಲು ಬ್ರಹ್ಮಾಂಡದ ಏಣಿಯ ಮೇಲೆ ಏರಲು ಕರೆದೊಯ್ದವು; ಇವು ಈ ಗ್ರಹದ ಆಧ್ಯಾತ್ಮಿಕ ಕ್ರಮವನ್ನು ಕಾಪಾಡುವ ಉಚ್ಛ ಸಂಕೇತಗಳಾಗಿವೆ.”
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

ಸಾದೃಶಾಭಾಸ ಪದಗಳೊಂದಿಗೆ ಸೆಣಸಾಟ: ಸುಮಾವೀಣಾ ಸರಣಿ

ಮಕ್ಕಳಿಗೆ ಕನ್ನಡ ಪುಸ್ತಕವನ್ನು ಓದುವುದೆಂದರೆ ಬಹಳ ತ್ರಾಸಿನ ಕೆಲಸ. ಕಾರ್ಟೂನನ್ನು ನೋಡಿದ ಗುಂಗಿನಲ್ಲಿ ಇದ್ದ ಮಗುವೊಂದು ಸಭಾಸದ ಎಂದೋದಲು ಸಬಾಸ್ಟಿಯನ್ ಎಂದು ಓದಿದ್ದು ನೆನಪಾಗುತ್ತದೆ. ಎಲೆ ಅಡಿಕೆ ಮೆಲ್ಲುತ್ತಿದ್ದ ಎಂದು ಓದಬೇಕಾದ್ದನ್ನು ಎಲೆ ಅಡಿಕೆ ಮೇಯುತ್ತಿದ್ದ ಎಂದರೆ ಆಭಾಸವೇ ತಾನೆ! ರಂಗ ನಾಯಕಿ > ಲಂಗನಾಯಕಿ, ಆಸ್ಥಾನದ ದಾಸಿ ಹಾಸನದ ಆಶ ಆಂದರೆ ರಕ್ಷಿಸ ಬೇಕು ಎನ್ನಲು ಹೋಗಿ ರಸ್ಕ್ ಬೇಕು ಎಂದರೆ ಎಲ್ಲಿಕೊಡಕ್ಕಾಗುತ್ತೆ?
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಏಳನೆಯ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ