Advertisement

Category: ಸರಣಿ

ಸೀಮೆಯಿಂದ…. ಸುಗ್ಗಿವರೆಗೆ: ಸುಮಾವೀಣಾ ಸರಣಿ

“ನೀವು ತಿಂದದ್ದಕ್ಕೆ ಹಣ ಕೊಡಬೇಕಿಲ್ಲ ಎಂಥಾ ಸೌಲಭ್ಯವಿದು? ಪುಕ್ಕಟೆಯೇ? ಎಂದು ನೀವು ಕೇಳಬಹುದು ಇಲ್ಲ ಇದಕ್ಕೆ ಉದ್ರಿ ಎನ್ನುವರು. ಕೌಂಟರ್ ಮುಂದೆ ‘ನನ್ನ ಹೆಸರ್ಲೆ ಹಚ್ರಿ ಎಂದು ಹೇಳಿದರೆ ಸಾಕು ಹಚ್ಚುವುದೊಂದೇ ಹಳ್ಳಿ ಫಳಾರದಂಗಡಿಯ ಮಾಲಿಕನ ಕರ್ಮ. ಸುಗ್ಗಿಗೊಮ್ಮೆ ನಾಲ್ಕುಚೀಲ ಜೋಳ ತಂದು ಹೋಟೆಲಿಗೆ ಹಚ್ಚಿದರೆ ಬಾಕಿ ಚುಕ್ತಾ ಆಯ್ತು. ವರ್ಷದವರೆಗೂ ಪೂರಿ, ಬಜಿಗಳನ್ನು ತಿನ್ನುತ್ತಾ ಊರಸುದ್ದಿಯನ್ನು, ಮಾತನಾಡುತ್ತಾ ಎದುರಿಗಿರಲಾರದವರ ಗೇಲಿ ಮಾಡುತ್ತಾ ಹೊತ್ತನ್ನು ಕಳೆಯಬಹುದು” ಎಂಬ ಸಾಲುಗಳು ವೀರೆಂದ್ರ ಸಿಂಪಿಯವರ ‘ಹಳ್ಳಿಯ ಚಹಾ ಹೋಟೆಲುಗಳು’ ಲಲಿತ ಪ್ರಬಂಧದ ಸಾಲುಗಳು.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿ

Read More

ಸಿಕ್ಕೀತೆ ಮುಂದಿನ ದಾರಿ …: ಗುರುಪ್ರಸಾದ ಕುರ್ತಕೋಟಿ ಸರಣಿ

ಅಮೆರಿಕೆಯಲ್ಲಿನ ಸಿರಿತನ ಬಡತನ ಎರಡೂ ನೋಡಿದೆ. ಅತಿಯಾಗಿ ಖರ್ಚು ಮಾಡುವವರನ್ನೂ ಕಂಡೆ, ಮಿತವಾಗಿ ಹಾಸಿಗೆ ಇದ್ದಷ್ಟು ಕಾಲು ಚಾಚುವವರನ್ನೂ ನೋಡಿದ್ದೆ. ನನ್ನ ಜೊತೆಗೆ ಕೆಲಸ ಮಾಡುತ್ತಿದ್ದ ಜಿಮ್ ಎಂಬ ಒಬ್ಬ ಸಹೋದ್ಯೋಗಿ ಹತ್ತು ಡಾಲರ್‌ಗೆ ತೊಳೆದು ಇಸ್ತ್ರಿ ಮಾಡಿ ಮಾರುತ್ತಿದ್ದ ಸಂಸ್ಥೆಯೊಂದರಿಂದ ಸೆಕಂಡ್ ಹ್ಯಾಂಡ್ ಟೀ ಶರ್ಟ್ ಕೊಂಡೆ ಅಂತ ಹೆಮ್ಮೆಯಿಂದ ಬೀಗಿದ್ದನ್ನು ನೋಡಿದ್ದೆ. ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಕೊನೆಯ ಬರಹ

Read More

ಹುಚ್ಚಾಟಗ್ಳು: ಸುಮಾ ಸತೀಶ್ ಸರಣಿ

ಸ್ಯಾನೆ ಟೇಮಿದ್ರೆ ಉಂಗುರ ಸೆಂದಾಗಿ ಮಾಡ್ತಿದ್ವಿ. ವೈನಾಗಿ ಜಡೆ ಹೆಣ್ದು ಅದುನ್ನ ಬೆಳ್ಳಿನ್ ಗಾತ್ರುಕ್ಕೆ ಸರ್ಯಾಗಿ ಬಗ್ಗಿಸಿ, ಸುತ್ತಿ‌ ಬಾಲ ಇಲ್ದಂಗೆ ಮಾಡೀವಿ. ಆತ್ರ ಇದ್ರೆ ತಿಥಿ ಮಾಡ್ಸಾ ಐನೋರು ದರ್ಬೇನಾಗೆ (ಒಣಗಿದ್ ಹುಲ್ಲು) ಸುಮ್ಕೆ ಒಂದು ಗಂಟು ಆಕಿ, ಬೆಟ್ಟಷ್ಟು ಉದ್ದೂಕೆ ನಿಟಾರ್ ಅಂತ ನಿಂತಿರಾ ಹುಲ್ಲು ಕೊಟ್ಟು ಉಂಗ್ರ ಆಕ್ಕಳಿ ಅಂಬಲ್ವೇ ಅಂಗೇ ನಾವೂ ಸುಮ್ಕೆ ಒಂದು ಗಂಟು ಹಾಕಿ, ಉದ್ದೂಕೆ ಗರಿ ಅಂಗೇ ಬುಟ್ಟು, ಕೈಯಾಗೆ ಏರ್ಸಿ ಓಡ್ತಿದ್ವಿ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ

Read More

ಪರೀಕ್ಷೆ ತಪ್ಪಿಸಿಕೊಳ್ಳಲು ಮಾಡಿದ ಐಡಿಯಾ!!!: ಬಸವನಗೌಡ ಹೆಬ್ಬಳಗೆರೆ ಸರಣಿ

ನನಗೆ ಹಲವಾರು ಬಾರಿ ನಮ್ಮನೆ ಕಂಡೀಶನ್‌ಗೆ ಚೆನ್ನಾಗಿ ಓದಬೇಕು ಆದರೆ ಈ ರೀತಿ ಯಾಕೆ ಮಾಡ್ತಾ ಇದೀನಿ ಅನಿಸೋದು. ಆದರೆ ನಾನು, ಲಿಂಗರಾಜ, ಸುಧಾಕರ ಅಕ್ಟೋಬರ್ ವೇಳೆಗಾಗಲೇ ಈ ವರ್ಷ ರಿಜೆಕ್ಟ್ ಮಾಡಬೇಕು ಅಂತಾ ತೀರ್ಮಾನ ಮಾಡಿದ್ವಿ. ನಾನೂ ಈ ತೀರ್ಮಾನಕ್ಕೆ ಬರೋದಿಕ್ಕೂ ಒಂದು ಕಾರಣ ಇತ್ತು. ನಾನು ಮೊದಲ ಪಿಯೂಸಿಯಿಂದ ದ್ವಿತೀಯ ಪಿಯೂಸಿಗೆ ಕಾಲೇಜ್ ಬದಲಾಯಿಸಬೇಕು ಅಂತಾ ಹೋದಾಗ 2 ರಿಂದ 3 ತಿಂಗಳು ಬೋರ್ಡ್‌ಗೆ ಓಡಾಟದ ಮೂಲಕ ಸಮಯ ವ್ಯರ್ಥವಾಗಿ ಹೋಗಿತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಕಾಮ್ರೇಡ್ ಹೆಚ್.ಕೆ. ರಾಮಚಂದ್ರಪ್ಪ ಸ್ಮರಣೆ: ರಂಜಾನ್ ದರ್ಗಾ ಸರಣಿ

ರಾಜಕೀಯ ಮತ್ತು ಆರ್ಥಿಕ ವ್ಯವಸ್ಥೆಯಲ್ಲಿ ಬಹಳ ಬದಲಾವಣೆಗಳಾಗಿವೆ. ಉದಾರೀಕರಣ, ಖಾಸಗೀಕರಣ ಮತ್ತು ಜಾಗತೀಕರಣದ ಸುಲಿಗೆ ಯೋಜನೆ ಮೂಲಕ ಇಡೀ ಜಗತ್ತಿನ ಕಾರ್ಮಿಕರ ಆರ್ಥಿಕ ಸ್ಥಿತಿ ಕುಸಿಯಿತು. ಈ ಎಲ್ಲ ಕಾರಣಗಳಿಂದಾಗಿ ದಾವಣಗೆರೆಯ ಸಂಗಾತಿಗಳ ಸಾಧನೆ ಗತವೈಭವದಂತೆ ಕಾಣತೊಡಗಿತು. ಅಂಥ ಸಂದರ್ಭದಲ್ಲಿ ಕೂಡ ಹೆಚ್.ಕೆ. ರಾಮಚಂದ್ರಪ್ಪ ಅವರು ಎದೆಗುಂದಲಿಲ್ಲ. ಬದುಕಿನ ಕೊನೆಯ ಉಸಿರು ಇರುವವರೆಗೂ ಅವರು ನಗುಮುಖದಿಂದ ಕಾರ್ಮಿಕರ ಒಳಿತಿಗಾಗಿ ದುಡಿದದ್ದು ಇಂದು ಇತಿಹಾಸವಾಗಿದೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 92ನೇ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ