Advertisement

Category: ಸರಣಿ

ಬೇಡದ್ದಲ್ಲೇ ಸೈಟು ಖರೀದಿಸಿದ್ದು: ಎಚ್. ಗೋಪಾಲಕೃಷ್ಣ ಸರಣಿ

ತೆಪ್ಪಗೆ ಜೇಬಿಂದ ಎರಡು ಹತ್ತರ ನೋಟು ಬಿಡಿಸಿ ಕೊಟ್ಟೆ. ಇನ್ನೂ ಬೇಕು.. ಅಂದ. ಮೂರು ನೋಟು ಅವನ ಕೈ ಸೇರಿದ ಮೇಲೆ ಅದನ್ನು ಅವನ ಜೇಬಿಗೆ ತುರುಕಿಕೊಂಡ. ನಂತರ ನನ್ನ ಬೆರಳು ಬಾಂಡ್ ಪೇಪರಿನ ಮೇಲೆ ಬಲವಾಗಿ ಊರಿ ಅವನ ಭಾರ ಎಲ್ಲಾ ಬಿಟ್ಟು ಹೊರಳಿಸಿದ. ಅವನು ಎಷ್ಟು ಕೋಪ ರೋಷದಿಂದ ಬೆರಳನ್ನು ಹೊರಳಿಸಿದ್ದ ಅಂದರೆ ಒಂದು ಕಾಲ ಮೇಲೆ ನಿಂತು ಇಡೀ ಅವನ ತೂಕವನ್ನು ನನ್ನ ಬೆರಳಿಗೆ ಹೊರೆಸಿದ್ದ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಲವತ್ತೊಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಹುಡುಗಾಟಗ್ಳು: ಸುಮಾ ಸತೀಶ್ ಸರಣಿ

ಔಟೂಂದ್ರೆ ಅಂಗೇ ಕಣ್‌ ಬುಟ್ಟು ನೋಡಿ, ದಿಟ್ವಾಗ್ಲೂ ಔಟೇನಾ‌ ಎಂಗೆ ಅಂಬ್ತ ತಿಳ್ಕಂಡೇ ಕಾಲು ‌ಪಕ್ಕುಕ್ಕೆ‌ ಮಡಗ್ಬೇಕು. ಎದುರ್ನವೇನಾರಾ ಸುಮ್ ಸುಮ್ಕೆ ಯೋಳಿ ಕಿಸೀತಾವಾ ಅಂಬ್ತ ಮೊದ್ಲು ಅವ್ರ ಮಕ ನೋಡೀವು. ಆಮ್ಯಾಕೆ ಕಾಲು ಗೆರೆ‌ ಮ್ಯಾಗೆ ಮಡಗೈತಾ ಅಂಬ್ತ ಕಂಡ್ಕಂಡು ಆಚೀಕ್ ಬರಾದು. ಅದೆಂತದು ಅಮ್ಮಾಟೇ‌ ಅಂದ್ರೆ ಅದು ಆಮ್‌ ಐ ರೈಟ್ ಅಂಬ್ತ ಇಂಗ್ಲಿಷ್ ‌ನಾಗೆ ಕ್ಯೋಳೋದು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಅವರ ಬಾಲ್ಯದ ಆಟಗಳನ್ನು ಕುರಿತು ಬರೆದಿದ್ದಾರೆ

Read More

ಕೂರಾಪುರಾಣ ೧೧: ಅವನಿದ್ದರೆ ಮನೆ ತುಂಬಿದಂತೆ, ಮನಸ್ಸು ಅರಳಿದಂತೆ…

ನಮ್ಮನ್ನು ಕಾಡುತ್ತಿದ್ದ ಒಂದು ಸಂಗತಿಯೆಂದರೆ ಇಡೀ ದಿನ ಅವರು ನಾಯಿಯನ್ನು ಮನೆಯಲ್ಲಿಯೇ ಬಿಟ್ಟು ಹೋಗುತ್ತಿದ್ದುದು. ಕೂರಾನಿಗೆ ಅದು ಅಭ್ಯಾಸವಿರದೇ ಇದ್ದುದ್ದರಿಂದ ಅವನು ಹೇಗೆ ವರ್ತಿಸುತ್ತಾನೋ ಎಂಬ ಚಿಂತೆ. ಅವರ ಮನೆಯಲ್ಲಿನ ವೈರ್, ಬೆಡಶೀಟ್, ಟವೆಲ್ ಎಲ್ಲವನ್ನು ಕಚ್ಚಿ ಹಾಕುವವನೇ.. ನಾವು ಭಾರತಕ್ಕೆ ಹಾರಿದ ಮೇಲೆ ಇಲ್ಲಿ ಅವನಿಗೆ ತೊಂದರೆಯಾದರೆ ಎಂದೆಲ್ಲ ಯೋಚನೆಗಳು ಬರತೊಡಗಿ ಮತ್ತಾರಾದರು ಆ ಆಪ್‌ನಲ್ಲಿ ನಮಗೆ ಹೊಂದುವಂತವರು ಸಿಗುತ್ತಾರೇನೋ ಎಂದು ನೋಡಹತ್ತಿದೆವು.
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿ

Read More

ಚಿ ಛೀ ಚೀನಾ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ಅಂದವಾಗಿ ಬರೆಯುವ ಕಲೆಯಾದ ಕ್ಯಾಲಿಗ್ರಫಿ ಮತ್ತು ಚಿತ್ರಕಲೆಗಳ ಬಗ್ಗೆ ಚೀನಾದ ಜನರಿಗೆ ಅತೀವವಾದ ಆಸಕ್ತಿಯಿದೆ. ಚಿತ್ರಕಲೆ ಮತ್ತು ಕ್ಯಾಲಿಗ್ರಫಿ ಕಲೆಗಳು ಚೀನಾದಲ್ಲಿ ಒಂದಕ್ಕೊಂದು ಪೂರಕ ಎನ್ನುವಂತೆ ಬೆಳೆದುಕೊಂಡು ಬಂದಿವೆ. ವರ್ಣಚಿತ್ರವನ್ನು ರಚಿಸಿದ ಬಳಿಕ ಆ ವರ್ಣಚಿತ್ರಕ್ಕೆ ಸರಿಹೊಂದುವ ಕವಿತೆಯನ್ನು ಕಲಾತ್ಮಕವಾಗಿ ಬರೆಯಲಾಗುತ್ತಿತ್ತು. ಹೀಗೆ ಕ್ಯಾಲಿಗ್ರಫಿಯು ಚಿತ್ರಕಲೆಯ ಸೊಬಗನ್ನು ಹೆಚ್ಚಿಸುತ್ತಿತ್ತು. ಚಿತ್ರಕಲೆಗೆ ಅನುಗುಣವಾಗಿ ಕ್ಯಾಲಿಗ್ರಫಿ ಸ್ಪಂದಿಸುತ್ತಿತ್ತು. ಹಿಂದಿನ ಕಾಲದ ಚೀನೀಯರಿಗೆ ಅಕ್ಷರಗಳ ಬಗ್ಗೆ ವಿಪರೀತವೆನಿಸುವ ಮೋಹವಿತ್ತು.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ವೈಚಾರಿಕತೆಯ ಶುಷ್ಕತೆಯನ್ನು ದೂರವಿಡುವ ರೂಪಕಗಳು: ಎಸ್. ಜಯಶ್ರೀನಿವಾಸ ರಾವ್ ಸರಣಿ

“ವಿಜ್ಞಾನಿಗಳಿಗೆ ಕವಿಗಳೆಂದರೆ ಅನುಮಾನ; ಕವಿಗಳು, ಒಂದು ರೀತಿಯಲ್ಲಿ, ಜವಾಬ್ದಾರಿ ಇಲ್ಲದವರು ಎಂದು ಅವರು ಭಾವಿಸುತ್ತಾರೆ. ಹಾಗೂ ತನ್ನ ವೈಜ್ಞಾನಿಕ ವೃತ್ತಿಯನ್ನು ಕೂಡ ತನ್ನ ಸಾಹಿತ್ಯಿಕ ಸ್ನೇಹಿತರು ಅದೇ ರೀತಿಯಾಗಿ ಶಂಕಿಸುತ್ತಾರೆ ಎಂದು ಅವರು ಒಪ್ಪಿಕೊಂಡರು…”
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಚೆಕ್ ಗಣರಾಜ್ಯದ ಕವಿ ಮಿರೊಸ್ಲಾವ್ ಹೊಲುಪ್-ರವರ (Miroslav Holub, 1923-1998) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ