Advertisement

Category: ಸರಣಿ

ಭೂಮಿ ಬಯಕೆ ತೀರಿಸುವ ಭೂಮಿ ಹುಣ್ಣಿಮೆ ಹಬ್ಬ: ಭವ್ಯ ಟಿ.ಎಸ್. ಸರಣಿ

ಆಶ್ವಯುಜ ಮಾಸದಲ್ಲಿ ಬರುವ ಭೂಮಿ ಹುಣ್ಣಿಮೆಯ ಕುರಿತು ಹೇಳುತ್ತಿದ್ದೇನೆ. ಮಲೆನಾಡಿಗರ ಭಾಷೆಯಲ್ಲಿ ಇದು ಭೂಮಣಿ ಹಬ್ಬ. ಭೂಮಿಹುಣ್ಣಿಮೆ ಎಂದ ಕೂಡಲೇ ನನ್ನ ಮನ ನಿಲ್ಲದೆ ತೀರ್ಥಹಳ್ಳಿಯ ಸಮೀಪದ ನನ್ನ ಅಜ್ಜಿ ಮನೆಯೆಡೆಗೆ ಓಡುತ್ತದೆ. ನಮ್ಮ ಅಜ್ಜಿ ಈ ಹಬ್ಬವನ್ನು ತುಂಬಾ ‌ಶ್ರದ್ಧೆಯಿಂದ ಆಚರಿಸುತ್ತಿದ್ದರು. ಹಬ್ಬದ ಮುನ್ನಾ ದಿನ ಗದ್ದೆಯ ಅಂಚಿನ ಒಂದು ಭಾಗವನ್ನು ಶುಚಿಗೊಳಿಸಿ, ಸಗಣಿ ಸಾರಿಸಿ, ಬಾಳೆಕಂಬ, ತೋರಣಗಳಿಂದ ಅಲಂಕರಿಸಿ ಬರುತ್ತಾರೆ. ಅಂದು ಮನೆಯ ಮಕ್ಕಳು ಒಂದು ಬುಟ್ಟಿ ಹಿಡಿದು ಸುತ್ತಮುತ್ತ ತಿರುಗಿ ಬಗೆಬಗೆಯ ಸೊಪ್ಪುಗಳನ್ನು ಆಯ್ದು ತರಬೇಕು.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ ನಿಮ್ಮ ಓದಿಗೆ

Read More

ಆಟೋ ಕರೆಕ್ಷನ್: ಸುಮಾವೀಣಾ ಸರಣಿ

ಇಂಥ ಅದೆಷ್ಟೋ ಸನ್ನಿವೇಶಗಳನ್ನು ನೀವುಗಳೂ ಕೇಳಿರಬಹುದು. ಆಟೋಗಳಲ್ಲಿ, ಸಿಟಿ ಬಸ್‌ಗಳಲ್ಲಿ ಓಡಾಡುವಾಗ ಇಂಥ ಕೆಲವು ತುಣುಕುಗಳು ಯಾವುದೋ ಸಿನೆಮಾ ಟೀಸರ್‌ಗಳಂತೆ ನಮ್ಮ ಕಣ್ಣೆದುರು ಹಾದು ಹೋಗಬಹುದು. ತರಹೇವಾರಿ ಸಿನೆಮಾಗಳು ಬಂದಂತೆ ಪ್ರಯಾಣದ ಸನ್ನಿವೇಶಗಳೂ ಕೂಡ ಬಂದು ಬಂದು ಹೋಗುತ್ತವೆ. ಕೊರೊನಾ ನಂತರ ಥಿಯೇಟರಿನಲ್ಲಿ ಸಿನೆಮಾಗಳನ್ನು ನೋಡುವವರ ಸಂಖ್ಯೆ ಈಗ ಕುಸಿದಿದೆ. ಎಲ್ಲಾ ಓಟಿಟಿಯಲ್ಲಿ ನೋಡಿಬಿಡ್ತಾರೆ. ಈಗಂತೂ ‘ಡೌನ್ ಪೇಮೆಂಟೋ, ಇಲ್ಲಾ ಸೆಕೆಂಡ್ ಹ್ಯಾಂಡೋ ಮನೆಗ್ ಒಂದ್ ಕಾರ್ ಇರ್ಲಿ’ ಎಂದು ದುಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಆದರೂ ಸ್ವಂತ ವಾಹನ ಹೊಂದಿದ ಬದಲಾವಣೆಯಾಗಿದೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ

Read More

ಅವಳಿ ನಗರಗಳ ದರ್ಶನ: ದರ್ಶನ್‌ ಜಯಣ್ಣ ಸರಣಿ

ಇದೆಲ್ಲಕ್ಕೆ ಶಿಕರಪ್ರಾಯದಂತೆ ಇದ್ದುದು ಅಲ್ಲಿನ ಆಲ್ ಕರಾ ಗುಹೆ. ನೋಡಲಿಕ್ಕೆ ನಮ್ಮ ಬದಾಮಿಯ ಗುಹೆಯ ಬಣ್ಣವಿರುವ ಇದು ಸಾವಿರಾರು ವರ್ಷಗಳ ಹಿಂದೆ ಇಲ್ಲಿದ್ದ ಸಮುದ್ರದಿಂದ ರೂಪುಗೊಂಡಿರುವುದಾಗಿಯೂ ಅದರ ಒಳಮೈಯಲ್ಲಿ ಕ್ಯಾಲ್ಸಿಯಂ ಕಾರ್ಬೊನೇಟ್ ಇರುವುದಾಗಿಯೂ ಅಲ್ಲಿನ ಗೈಡ್ ನಮಗೆ ಹೇಳಿದರು. ಅದರ ಎತ್ತರ ಆಕೃತಿ ನಮ್ಮ ಶಿರಸಿಯ ಯಾಣದಂತಿದೆಯಾದರೂ ಒಂದು ಲಾವಾದ ಪರಿಣಾಮದಿಂದ ಮತ್ತೊಂದು ಮರಳುಗಾಡಿನಲ್ಲಿ ಯಾವಾಗಲೋ ಬಿದ್ದ ಬೀಳುತ್ತಿದ್ದ ಮಳೆಯಿಂದ ಆಗಿರಬಹುದೆಂದು ನಂತರ ನಾನು ತಿಳಿದುಕೊಂಡೆ.

Read More

ಮಾಘಿಯ ಚಳಿಯಲ್ಲಿ, ಆಲೆಮನೆಯ ಘಮಲಲ್ಲಿ…: ರೂಪಾ ರವೀಂದ್ರ ಜೋಶಿ ಸರಣಿ

ಅಪ್ಪಯ್ಯ “ಯೇ ಹುಡುಗ್ರೇ ಏಳ್ರೇ. ಆಲೇಮನೀಗೆ ಹೋಗಿ ಹಾಲು ಕುಡೀರೇ.” ಎಂದು ಏಳಿಸುತ್ತಿದ್ದರು. ಹಸಿದ ಹೊಟ್ಟೆಗೆ ಕಬ್ಬಿನ ಹಾಲು ಕುಡಿದರೆ ಅದೆಲ್ಲ ರಕ್ತವೇ ಆಗಿಬಿಡುತ್ತದೆಯಂತೆ ಎಂದು ಅಪ್ಪಯ್ಯ ಯಾವಾಗಲೂ ಹೇಳುತ್ತಿದ್ದರು. ಅಪ್ಪಯ್ಯನ ದನಿಗೆ, ನಾವು ಹೊದಿಕೆ ಕಿತ್ತೊಗೆದು, ಮುಖ ತೊಳೆದ ಶಾಸ್ತ್ರಮಾಡಿ, ಆಲೆಮನೆಯತ್ತ ಓಡುತ್ತಿದ್ದೆವು. ಅಷ್ಟರಲ್ಲಿ ಅಪ್ಪಯ್ಯ ಒಳ್ಳೆಯ ಕಬ್ಬು ಹುಡುಕಿ, ಗಾಣಕ್ಕೆ ಕೊಡಿಸಿ, ನಮಗೆ ಕುಡಿಯಲು ಸವಿಯಾದ ಐಸ್ ಕೋಲ್ಡ್ ಹಾಲು ಹಿಡಿದು ಇಟ್ಟಿರುತ್ತಿದ್ದರು. ಮೊದಲೇ ಮಾಘ ಮಾಸದ ಛಳಿ. ಆ ಥಣ್ಣನೆಯ ಹಾಲು ಹೊಟ್ಟೆಗಿಳಿಯುತ್ತಿದ್ದಂತೆಯೇ, ದಂತ ಪಂಕ್ತಿಗಳು, ಮಸೆದುಕೊಳ್ಳುತ್ತ, ಕಟ ಕಟನೆ ಸಪ್ಪಳ ಮಾಡತೊಡಗುತ್ತಿದ್ದವು.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಹಾಡೋ ಹಕ್ಕಿಗೆ ಬೇಕೇ ಬಿರುದು ಸನ್ಮಾನ?: ಬಸವನಗೌಡ ಹೆಬ್ಬಳಗೆರೆ ಸರಣಿ

ಟಿಸಿಹೆಚ್ ಕಾಲೇಜಿನಲ್ಲಿ ಬಹುತೇಕರು ಇಷ್ಟಪಡುತ್ತಿದ್ದುದು ‘ಅಪುನಾ ಸರ್’ ಅವರನ್ನೇ. ಇವರನ್ನು ನಾವು ನಮ್ಮ ಕಾಲೇಜು ಮಿತಿಯಲ್ಲಿ ‘ನಡೆದಾಡುವ ವಿಶ್ವಕೋಶ’ ಎಂದೇ ಕರೆಯುತ್ತಿದ್ದೆವು. ಅವರು ಮೂಲತಃ ‘ಜೀವ ವಿಜ್ಞಾನ ಶಿಕ್ಷಕ’ ರಾಗಿದ್ದಾಗ್ಯೂ ನಮಗೆ ಅವರ ಇಂಗ್ಲೀಷ್ ಭಾಷಾ ಪ್ರಾವೀಣ್ಯತೆ, ಸಮಾಜ ವಿಜ್ಞಾನದಲ್ಲಿ ಅವರಲ್ಲಿದ್ದ ಪಾಂಡಿತ್ಯ, ಪ್ರಖರ ದೇಶಪ್ರೇಮ, ಸಮಯಪ್ರಜ್ಞೆ, ನಾಯಕತ್ವ ಗುಣ, ಪಾಠವನ್ನು ಅರ್ಥೈಸುತ್ತಿದ್ದ ರೀತಿ ನಮ್ಮನ್ನು ಸೂಜಿಗಲ್ಲಿನಂತೆ ಆಕರ್ಷಿಸುತ್ತಿತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತೈದನೆಯ ಕಂತು ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ