Advertisement

Category: ಸರಣಿ

ಏಕೆ ಇಷ್ಟೊಂದು ದ್ವೇಷ!: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಇವರೆಲ್ಲ ಎಷ್ಟು ಸುಖವಾಗಿದ್ದಾರೆ, ಆರಾಮವಾಗಿದ್ದಾರೆ, ಯಾವುದೇ ಗೊಂದಲವಿಲ್ಲ, ತಳಮಳವಿಲ್ಲ. ಮುಖದಲ್ಲಿ ಅದೆಷ್ಟು ಜೀವಂತಿಕೆ, ಆರೋಗ್ಯ, ಉಲ್ಲಾಸ. ಯಾವುದರಲ್ಲೂ ಆತುರವಿಲ್ಲ, ಧಾವಂತವಿಲ್ಲ. ಪ್ರತಿ ಕ್ಷಣವನ್ನೂ ವಿವರವಾಗಿ, ವಿರಾಮವಾಗಿ ಅನುಭವಿಸುತ್ತಿದ್ದಾರೆ. ವಾಯುವಿಹಾರದ ಸಮಯದಲ್ಲಿ. ಟ್ರಾಮ್ ಒಳಗಡೆ ಕುಳಿತಾಗ, ಮಾರ್ಕೆಟ್‌ನಲ್ಲಿ ವ್ಯಾಪಾರ ಮಾಡುವಾಗ, ಸ್ಕೂಲ್ ಬಳಿ ಮಕ್ಕಳನ್ನು ಬಿಡಲು ಬರುವಾಗ ನೋಡಿದ್ದೇನೆ. ಎಲ್ಲರೂ ಬಿಳಿ ಬಣ್ಣದವರು, ಕೆಂಪು ಬಣ್ಣದವರು. ತುಂಬಾ ಸುಖವಾಗಿದ್ದಾರೆ, ಸಂತೃಪ್ತಿಯಿಂದಿದ್ದಾರೆ ಎಂಬ ಭಾವನೆ. ಸರಿ, ಅವರು ಸಂತೋಷವಾಗಿದ್ದರೆ, ಸುಖವಾಗಿದ್ದರೆ ನನಗೇಕೆ ಈ ರೀತಿಯ ಅಸೂಯೆ, ದ್ವೇಷ?
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿ

Read More

ಮತ್ತೆ ಸಿಗುವ ಆಶಯದ ಪಯಣ: ಚಂದ್ರಮತಿ ಸೋಂದಾ ಸರಣಿ

ಮನೆಯ ಜನರೆಲ್ಲರಿಗೂ ʻಹೋಗಿ ಬರ್ತೇನೆʼ ಎನ್ನುತ್ತ ಅವರು ಎಲ್ಲಿದ್ದಾರೋ ಅಲ್ಲಿಗೆ ಹೋಗಿ ಹೇಳುವುದು, ಅಲ್ಲಿಂದ ನಡುಮನೆಯಲ್ಲಿ ಕೆಲಹೊತ್ತು ಮಾತನಾಡುತ್ತ ನಿಲ್ಲುವುದು, ಅಲ್ಲಿಂದ ಜಗಲಿಗೆ, ಅನಂತರ ಹೆಬ್ಬಾಗಿಲಲ್ಲಿ ತುಸುಹೊತ್ತು ಮಾತನಾಡುತ್ತ ನಿಂತರೆ, ಹೊರಡಲು ಮುಂದಾದವರು ʻಇನ್ನೂ ಮಾತು ಮುಗಿದಿಲ್ವಾ?ʼ ಎಂದು ಕೇಳುತ್ತಲೇ ʻಬಂದೆʼ ಎಂದು ಬಾಯಲ್ಲಿ ಹೇಳಿದರೂ ಅಂಗಳದ ತುದಿಯಲ್ಲಿ ಒಂದು ಗಳಿಗೆಯ ಮಾತುಕತೆ. ಹೀಗೆ ಸಾಗುವ ವಿದಾಯದ ಕ್ಷಣ ನೆನಪಿಡುವಂಥದು. ಕೆಲವೊಮ್ಮೆ ಮನೆಗೆ ಬಂದ ಅಣ್ಣ-ತಮ್ಮಂದಿರು, ಅಥವಾ ಅಕ್ಕ-ತಂಗಿಯರನ್ನು ಕಳುಹಿಸಲು ಊರಬಾಗಿಲತನಕ ಹೋಗುವುದಿದೆ. ಎಲ್ಲರ ಎದುರಿನಲ್ಲಿ ಹಂಚಿಕೊಳ್ಳಲು ಆಗದ ಅದೆಷ್ಟೋ ಸಂಗತಿಗಳು ಅಲ್ಲಿ ವಿನಿಮಯಗೊಳ್ಳುತ್ತಿದ್ದವು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಕೊನೆಯ ಕಂತು

Read More

ದೂರದೂರಲ್ಲಿ ಸಿಕ್ಕನು ಅಣ್ಣ: ಗುರುಪ್ರಸಾದ ಕುರ್ತಕೋಟಿ ಸರಣಿ

ಅದೇನು ಅದೃಷ್ಟವೋ ಕೂಡಲೇ ಉತ್ತರಿಸಿದ. ಬಾ ಅಂತ ಆಹ್ವಾನಿಸಿದ ಕೂಡ. ಪುಣ್ಯಕ್ಕೆ ಲ್ಯಾಂಡ್ ಲೈನ್‌ನಿಂದ ಕರೆ ಕೂಡ ಮಾಡಿದ. ಅವನ ಜೊತೆಗೆ ನಾನು ಬಹುಶಃ ಪ್ರಥಮ ಬಾರಿಗೆ ಮಾತಾಡಿದ್ದೆ! ನಾನು ಹುಟ್ಟುವುದಕ್ಕಿಂತ ಮೊದಲೆಯೇ ಅವನು ಭಾರತ ಬಿಟ್ಟು ಬಂದಿದ್ದ ಕಾರಣ ನಾನು ಅವನ ಜೊತೆಗೆ ಈಗಾಗಲೇ ಮಾತಾಡಬಹುದಾದ ಅವಕಾಶಗಳು ತೀರಾ ಕಡಿಮೆ ಇದ್ದವು. ಅವನು ಮಾತಾಡುವ ಶೈಲಿ ನನ್ನ ಅಪ್ಪನ ತರಹವೇ ಅನಿಸಿತು. ಬಹಳ ಖುಷಿ ಆಯ್ತು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಇಪ್ಪತ್ತೈದನೆಯ ಬರಹ
ಗದಗ ನನ್ನ ಹೃದಯಕ್ಕೆ ಬಹು ಹತ್ತಿರದ ಊರು. ಅಲ್ಲಿ ನಾನು ಹುಟ್ಟಿದ್ದು ಅಷ್ಟೇ ಆದರೂ ಅಲ್ಲಿ ಕಳೆದ ಕೆಲವೇ ಕೆಲವು

Read More

ಚಿಕ್ಕ್ಮಾಲೂರಿನ ದೊಡ್ಮನೆ: ಸುಮಾ ಸತೀಶ್ ಸರಣಿ

ಮೈಗೆ ಲೈಫ಼್ ಬಾಯ್ ಸೋಪು.‌ ಮಕಕ್ಕೆ ಮೈಸೂರು ಸ್ಯಾಂಡಲ್ ಸೋಪು.‌ ಮನೆ ಮಂದೀಗೆಲ್ಲಾ ಒಂದೆ ಸೋಪು. ಅದ್ಯಾಕೋ ಗೊತ್ತಿಲ್ಲಪ್ಪ ಮೈಸೂರು ಸ್ಯಾಂಡ್ಲು ಮಕಕ್ಕೆ ಮಾತ್ರ. ಮೈಗೆಲ್ಲ ಲೈಫ್ ಬಾಯಿ. ಮಕ ಬೆಳ್ಳಕಾದ್ರೆ ಸಾಕು ಅಂತ್ಲೋ ಏನೋ! ನಾನು ಚಿಕ್ಕೋಳಾಗಿದ್ದಾಗಿಂದ ಮದ್ವೆ ಆಗಾತಂಕ ಅದೇ ಎರ್ಡು ಸೋಪುಗಳ ರೂಡಿ ಬಂದಿತ್ತು. ಹಲ್ಲಿಗೆ ನಂಜನಗೂಡು ‌ಹಲ್ಲಿನಪುಡಿ. ಒಂದೇ ಕಿತ ಹಲ್ಲುಜ್ಜೋದು. ರಾತ್ರಿ ಉಜ್ಜೋ ಇಸ್ಯವೇ ಗೊತ್ತಿರ್ಲಿಲ್ಲ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಚಿಕ್ಮಾಲೂರಿನ ಮನೆ-ಮನೆಯ ಜನಗಳ

Read More

ಸಹಪಾಠಿಗಳ ಸಾಧನೆ ಹಾಗೂ ಕೊಂಡಜ್ಜಿ ಕ್ಯಾಂಪ್: ಬಸವನಗೌಡ ಹೆಬ್ಬಳಗೆರೆ ಸರಣಿ

ಈ ಕ್ಯಾಂಪಿನಿಂದ ಬಂದು ವಾಪಸ್ಸು ಹೋದಾಗಲೇ ನನಗೆ ತಿಳಿದದ್ದು ಈ ಸಮಯದಲ್ಲಿ ಹಲವಾರು ಪಾಠಗಳನ್ನು ನಮ್ಮ ಮೇಷ್ಟ್ರು ಮುಗಿಸಿದ್ದಾರೆ ಎಂಬುದು. 8 ರಲ್ಲಿ ಮೂರನೇ ರ್ಯಾಂಕು, 9 ರಲ್ಲಿ ಎರಡನೇ ರ್ಯಾಂಕು ಬಂದಿದ್ದವನು 10 ನೇ ತರಗತಿಯಲ್ಲಿ ಮೊದಲ ರ್ಯಾಂಕನ್ನು ಗಳಿಸುತ್ತಾನೆ ಎಂಬ ಹಲವರ ನಿರೀಕ್ಷೆ ಸುಳ್ಳಾಗಲು ಇದೂ ಒಂದು ಕಾರಣವಾಗಿತ್ತು. ಎಷ್ಟೇ ಪ್ರಯತ್ನ ಪಟ್ಟರೂ ಪಾಠದ ವಿಷಯದಲ್ಲಿ ನನಗೆ ರೀಟೇಕ್ ಆಗಲು ಸಾಧ್ಯವಾಗಲೇ ಇಲ್ಲ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ