ಬದುಕೆಂದರೆ ಜಟಕಾ ಬಂಡಿಯೇ ಇನ್ನೇನೂ ಅಲ್ಲ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ
ಪಕ್ಕದಲ್ಲಿ ಸ್ಟೂಲ್ ಮೇಲೆ ಕುಳಿತಿರುವ ವಿಜಯ ಕೂಡ ಸಣ್ಣಗೆ ಇಳಿದುಹೋಗಿದ್ದಾಳೆ. ಆದರೂ ಅವಳ ಮುಖದ ಮೇಲಿನ ಕಾಂತಿ ಇನ್ನೂ ಒಂದಷ್ಟು ಉಳಿದುಕೊಂಡಿದೆ. ಅವಳ ಗಂಡ ಚಿನ್ನದ ಗಣಿಗಳಲ್ಲಿ ಕೆಲಸ ಮಾಡುತ್ತಿರುವ ಜ್ಞಾಪಕದಂತೆ ಅವಳ ಕಿವಿಗಳಲ್ಲಿ ಚಿನ್ನದ ಓಲೆಗಳು ಕಾಣಿಸುತ್ತಿವೆ. ವಾರ್ಡ್ನ ಎರಡೂ ಕಡೆ ಗೋಡೆಗಳ ಪಕ್ಕ ಸಾಲಾಗಿ ಹಾಸಿರುವ ಹಾಸಿಗೆಗಳ ಮೇಲೆ ಗಣಿ ಕಾರ್ಮಿಕರು ಹಾಸಿಗೆಗಳಲ್ಲಿ ಕುಳಿತು ಮಲಗಿ ಮಾತನಾಡುತ್ತಿದ್ದಾರೆ. ಈ ವಾರ್ಡ್ನಲ್ಲಿ ಬರೀ ಗಣಿ ರೋಗಗಳಿಂದ ಬಳಲುತ್ತಿರುವ ಕಾರ್ಮಿಕರನ್ನು ಮಾತ್ರ ಸೇರಿಸಿಕೊಳ್ಳಲಾಗುತ್ತದೆ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಹದಿನೇಳನೆಯ ಕಂತು ನಿಮ್ಮ ಓದಿಗೆ
