Advertisement

Category: ಸಾಹಿತ್ಯ

ಕೋಡೀಹಳ್ಳಿ ಮುರಳೀಮೋಹನ್ ಅನುವಾದಿಸಿದ ತೆಲುಗಿನ ಎಸ್.ವಿ. ಕೃಷ್ಣ ಕತೆ

“ಏಕೆಂದರೆ.. ಒಂಟಿತನ! ಯಾರೂ ನನ್ನ ಜೊತೆ ಮಾತನಾಡುವುದಿಲ್ಲ. ಯಾರೂ ನನ್ನನ್ನು ನೋಡಲು ಸಹ ಬಯಸುವುದಿಲ್ಲ. ನಾನು ಒಂಟಿತನಕ್ಕೆ ರೂಢಿಯಾಗಿದ್ದೇನೆ. ಹೇಗೋ ‘ಏಕಾಂತತೆ’ಯಂತೆ ಭಾಸವಾಗುವ ಈ ಮನಸ್ಥಿತಿಗೆ ನಾನು ರೂಢಿಸಿಕೊಂಡಿದ್ದೇನೆ. ಈ ಸ್ಥಿತಿ.. ಈ ಒಂಟಿತನ.. ಈ ಏಕಾಂತತೆಯಲ್ಲಿ ಮಾತ್ರ ನಾವು ಶಾಂತಿಯಿಂದ ಇರಲು ಸಾಧ್ಯ. ಯಾರೂ ನಮ್ಮನ್ನು ನೋಡುವುದಿಲ್ಲ, ಯಾರೂ ನಮ್ಮ ಬಳಿಗೆ ಬರುವುದಿಲ್ಲ, ಯಾರೂ ನಮ್ಮನ್ನು ನೋಯಿಸುವುದಿಲ್ಲ, ಯಾರೂ ಕೋಪಗೊಳ್ಳುವುದಿಲ್ಲ..”
ಕೋಡೀಹಳ್ಳಿ ಮುರಳೀಮೋಹನ್ ಅನುವಾದಿಸಿದ ತೆಲುಗಿನ ಎಸ್.ವಿ. ಕೃಷ್ಣ ಬರೆದ ಕತೆ “ಅಂತರ್ ನೇತ್ರ” ನಿಮ್ಮ ಈ ಭಾನುವಾರದ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವಿನಯಾ ಒಕ್ಕುಂದ ಕತೆ

ಲ್ಲಯ್ಯ, ನಮ್ಮ ಅಜ್ಜಿಮನೆಯ ಮಾವಿನ ಮರದ ಕೆಳಗೆ ಸೈಕಲ್ ನಿಲ್ಲಿಸಿ ಎಲ್ಲಿಗೆ ಹೋಗುತ್ತಿದ್ದೆ ಮಾರಾಯ? ನಾನು ಪಿಯುಸಿ ಓದುತ್ತಿದ್ದ ಒಂದು ಮೇ ರಜೆಯ ಮಧ್ಯಾಹ್ನ ಚಿಪ್ಪಿಕಲ್ಲಿನ ಸಾರು ಕುದಿಸ್ತಾ ಇರುವಾಗ- ಅಮ್ಮ ದಿಕ್ಕಬಳ್ಳಿ ಮೆಟ್ಟಿ ಬಂದವಳಂತೆ ಬಂದು ‘ಹಡಬೆ ಹೆಣ್ಣೆ! ಮರ್ಯಾದೆ ಕಳೀತಿಯೇನೇ?’ ಎಂದವಳೇ ಒಲೆಮೇಲಿನ ಸಾರೆತ್ತಿ ತೊಡೆ ಮೇಲೆ ಸುರಿದುಬಿಟ್ಟಳು! ನನ್ನ ನೋವುಗಳೇ ಹೀಗೆ. ಇಲ್ಲಿದೆ ಅಂತ ತೋರಿಸಿಕೊಳ್ಳಲು ಆಗದೆ ಹಾಗೆ! ಹೇಳು, ನಾ ಮಾಡಿದ ತಪ್ಪೇನು?
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವಿನಯಾ ಒಕ್ಕುಂದ ಕತೆ “ಒಂದು ಖಾಸಗಿ ಪತ್ರ” ನಿಮ್ಮ ಈ ಭಾನುವಾರದ ಓದಿಗೆ

Read More

ಎ.ಎನ್.‌ ಪ್ರಸನ್ನ ಬರೆದ ನಾಲ್ಕು ಅತಿ ಸಣ್ಣ ಕತೆಗಳು

ಇದು ಅವರ ಊಹೆಯನ್ನು ಮೀರಿ ನೂರಾರು ಬಗೆಯಲ್ಲಿ ಹಬ್ಬಿತು. ನಾಲಗೆ ಒಳಗೊಂದು ಮೂಳೆ ಇದೆ. ಅದಕ್ಕೆ ಘಾತವಾದರೆ ಮಾತನಾಡುವುದಕ್ಕೆ ಸಾಧ್ಯವಾಗುವುದಿಲ್ಲ ಎನ್ನುವ ಅಭಿಪ್ರಾಯ ಇನ್ನಿಲ್ಲದಷ್ಟು ಬೆಳೆಯಿತು. ಜನರು ಪರಸ್ಪರ ಮಾತನಾಡುವಾಗ ಏನು ಮಾತನಾಡುತ್ತಿದ್ದಾರೆ ಎನ್ನುವುದಕ್ಕಿಂತ ಹೇಗೆ ಮಾತನಾಡುತ್ತಿದ್ದಾರೆ, ತಾವು ಮಾತನಾಡುವುದೂ ಅದೇ ಬಗೆಯಲ್ಲಿದೆಯೇ ಅಥವ ಭಿನ್ನವಾಗಿದೆಯೇ… ಹೀಗೆ ಹಲವು ಆಲೋಚನೆಗಳಿಗೆ ಆಸ್ಪದ ಉಂಟಾಯಿತು. ಒಮ್ಮೆ ಅನುಮಾನ ಉಂಟಾದರೆ ಸುಮ್ಮನೆ ಒಂದಿಲ್ಲೊಂದು ನೆಪದ ಕಾರಣ ತೆಗೆದುಕೊಳ್ಳಬೇಕಾದ ಕ್ರಮವನ್ನು ಮುಂದೆ ಹಾಕಲು ಯಾರಿಗೂ ಇಷ್ಟವಾಗುವಂತಿರಲಿಲ್ಲ.
ಎ.ಎನ್.‌ ಪ್ರಸನ್ನ ಬರೆದ ಅತಿ ಸಣ್ಣ ಕತೆಗಳ ಸಂಕಲನ “ಅದೊಂದು ದಿನ” ಕೃತಿಯ ನಾಲ್ಕು ಸಣ್ಣ ಕತೆಗಳು ನಿಮ್ಮ ಓದಿಗೆ

Read More

ರಾಜಲಕ್ಷ್ಮಿ ಎನ್. ರಾವ್ ಬರೆದ ಕತೆ “ಆಗಸ್ಟ್ ಹದಿನೈದು”

ಎಲ್ಲಿಂದಲೋ ಸಿನೆಮಾ ಹಾಡು ಕೇಳಿ ಬಂತು. ಕಡೆಯ ಆಟ ಮುಗಿಯಿತೇನೋ ‘ತಾರಾ ಗಗನಮೇ…’ ತಲೆಯೆತ್ತಿ ನೋಡಿದ. ಆಕಾಶದಲ್ಲೂ ಸ್ವಾತಂತ್ರ್ಯೋತ್ಸವದ ಸಂಭ್ರಮ. ಲಕ್ಷೋಪಲಕ್ಷ ನಕ್ಷತ್ರಗಳು, ಬೊಂಬಾಯಿನಲ್ಲಿ ವಿದ್ಯುದ್ದೀಪಮಾಲೆಗಳ ನಡುವಿನಲ್ಲಿ ಇವುಗಳನ್ನು ಗಮನವಿಟ್ಟು ನೋಡಿರಲಿಲ್ಲ. ಇಲ್ಲಿ ನಿಸರ್ಗಕ್ಕೆ ಮಾನವನ ಸ್ಪರ್ಧೆಯಿಲ್ಲ. ಬೊಂಬಾಯಿನಲ್ಲಿ ವಿದ್ಯುದ್ದೀಪಗಳ ಗೊಂದಲಕ್ಕೆ ಸಿಕ್ಕಿ ಆಕಾಶ ಕೆಂಪಾಗಿತ್ತು.
ಹಿರಿಯ ಕತೆಗಾರ್ತಿ ರಾಜಲಕ್ಷ್ಮಿ ಎನ್. ರಾವ್ ಬರೆದ ಸಮಗ್ರ ಕತೆಗಳನ್ನು ಚಂದನ್‌ ಗೌಡ “ಸಂಗಮ” ಎಂಬ ಶೀರ್ಷಿಕೆಯಡಿಯಲ್ಲಿ ಪ್ರಕಟಿಸಿದ್ದು, ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಈ ಸಂಕಲನದ “ಆಗಸ್ಟ್ ಹದಿನೈದು” ಕತೆ ನಿಮ್ಮ ಓದಿಗೆ

Read More

ಪ್ರವೀಣ್‌ ಕುಮಾರ್‌ ಜಿ. ಬರೆದ ಈ ಭಾನುವಾರದ ಕತೆ

ರಾಜಣ್ಣನ ಕೊನೆಯ ಮಾತುಗಳನ್ನು ಕೇಳಿಸಿಕೊಂಡು ಕವಿತಾಳ ಕಣ್ಣುಗಳು ಗಾಬರಿಯಲ್ಲಿ ಅಗಲವಾದವಾ? ಅವನಿಗದು ಗೊತ್ತಾಗಲಿಲ್ಲವಾದರೂ ಉಸಿರು ಎಳೆಯುತ್ತಿದ್ದ ಕವಿತಾ “ನೀನಾದ್ಮ್ಯಾಲೆ ನನ್ನ ಯಾರೂ ಮುಟ್ಟಿಲ್ಲ.” ಎಂದು ಗೊಗ್ಗರು ದನಿಯಲ್ಲಿ ಹೇಳಿದ ಮಾತಿಗೆ ಬೇಕಾದ ಉಸಿರು ಪೂರ್ತಿ ಗಂಟಲಿನಿಂದಲೇ ಹೊರಗೆ ಹೋಗುತ್ತಿತ್ತು. “ನೀನಾದ್ಮ್ಯಾಲೆ ನನ್ನ…” ಎಂಬ ಶಬ್ದವೊಂದೇ ಅವನಿಗೆ ಅರ್ಧಂಬರ್ಧ ಕೇಳಿಸಿದ್ದು, ಅದೂ ಬರೀ ಗೊರಗೊರ. ಅವಳನ್ನೇ ದಿಟ್ಟಿಸುತ್ತಿದ್ದ ರಾಜಣ್ಣ ಕೆಲವೇ ಕ್ಷಣಗಳಲ್ಲಿ ಅವಳ ಉಸಿರು ನಿಂತಿದ್ದನ್ನು ಗೊತ್ತುಮಾಡಿಕೊಂಡು ತನ್ನ ಕುತ್ತಿಗೆಗೂ ಚಾಕು ಹಾಕಿಕೊಂಡ.
ಪ್ರವೀಣ್‌ ಕುಮಾರ್‌ ಜಿ. ಕಥಾ ಸಂಕಲನ “ಬಯಲು” ಕೃತಿಯ ಶೀರ್ಷಿಕೆ ಕತೆ ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ