Advertisement

Category: ಸಾಹಿತ್ಯ

ಆಕರ್ಷ ಕಮಲ ಬರೆದ ಈ ಭಾನುವಾರದ ಕತೆ

ಪಜಲ್ ಪೀಸ್‌ಗಳನ್ನು ಕೆಳಕ್ಕಿರಿಸಿ ಕೀಲಿಕೈಗಳ ಗೊಂಚಲನ್ನು ಚರಂಡಿಗೆ ಎಸೆಯಲು ನಿರ್ಧರಿಸಿದ್ದನೇನೋ ಎನ್ನುವಷ್ಟೇ ವೇಗವಾಗಿ ಎಲಿವೇಟರ್‌ಗಳ ಕಡೆಗೆ ಓಡಿದ. ಹದಿಮೂರನೇ ಮಹಡಿಯಿಂದ ಗ್ರೌಂಡ್ ಫ್ಲೋರ್ ಲಾಬಿಗೆ ಬರುವಷ್ಟರಲ್ಲಿ ಕಚೇರಿಯಿಂದ ಹೊರನಡೆಯುವಾಗ ತನ್ನ ಹೆಸರು ನೆನಪಿಲ್ಲದ ಕಾವಲುಗಾರನಿಗೆ ಏನು ಹೇಳಬಹುದು, ಮನಸ್ಸನ್ನು ನೋಯಿಸದೆ ಪೊಲಿಟಿಕಲಿ ಕರೆಕ್ಟ್ ಆಗಿ ಹೇಗೆ ಮಾತನಾಡಬಹುದು ಎಂದೆಲ್ಲ ಯೋಚಿಸಿದ. ಆಕ್ಸೆಸ್ ಕಾರ್ಡ್ ಇಲ್ಲದೆಯೇ ಮತ್ತೆ ಕಚೇರಿಗೆ ಬರಲೇಬೇಕು.
ಆಕರ್ಷ ಕಮಲ ಬರೆದ ಕತೆ “ಆಯತಾಕಾರದ ನೆರಳು” ನಿಮ್ಮ ಈ ಭಾನುವಾರದ ಓದಿಗೆ

Read More

ಎಂದಿಗೂ ಹುಟ್ಟದ ಮಗುವಿಗೆ ಮೂರು ಕಿನ್ನರ ಕತೆಗಳು

ಪಾತ್ರೆ ತೊಳೆದು ಮುಗಿಸಿದ ಅಮ್ಮ ಹಾಲಿಗೆ ಬಂದು ಮೊದಲು ನೆಲದ ಹಾಸನ್ನು ಬ್ರಶ್‌ನಿಂದ ತಿಕ್ಕಿ ಸ್ವಚ್ಛಗೊಳಿಸುತ್ತಿದ್ದರು. ನಂಆಗೆಲ್ಲ ಆ ಸುಂದರ ಹೆಂಗಸು ಸೋಫಾದ ಮೇಲೆ ಮಲಗಿ ಪುಸ್ತಕವನ್ನು ಓದುತ್ತಲೇ, ಏನಾದರೂ ದೂರುಗಳನ್ನು ದಾಖಲಿಸುತ್ತಿದ್ದಳು. ಟೇಬಲ್ ಮೇಲೆ ಕುಳಿತು ಇದನ್ನೆಲ್ಲ ನೋಡುತ್ತಿದ್ದ ಪುಟ್ಟ ಹುಡುಗಿಗೆ ಅರ್ಥವಾಗದ ವಿಷಯವೊಂದಿತ್ತು.
ಇಟಲಿಯ ಸಾಹಿತಿ ಮತ್ತು ಪತ್ರಕರ್ತೆಯಾಗಿದ್ದ ಓರಿಯಾನ ಪಲಾಸಿಯವರ ‘ಎಂದಿಗೂ ಹುಟ್ಟದ ಮಗುವಿಗೆ ಪತ್ರ’ ಕಾದಂಬರಿಯನ್ನು ಸುಧಾ ಆಡುಕಳ ಕನ್ನಡಕ್ಕೆ ಅನುವಾದಿಸುತ್ತಿದ್ದು, ಅದರ ಭಾಗವೊಂದು ನಿಮ್ಮ ಓದಿಗೆ ಇಲ್ಲಿದೆ

Read More

ಅಬ್ದುಲ್‌ ರಶೀದ್‌ ಬರೆದ ಈ ಭಾನುವಾರದ ಕಥೆ

ಕಾಣೆಯಾಗಿದ್ದ ಟಿಬೆಟನ್ ಕ್ಯಾಂಪಿನ ಮೂವರು ಹಸುಳೆಗಳು ಇದೇ ಬಿಡಾರದ ಬಾಗಿಲು ತಟ್ಟಿ ಆಹಾರ ಕೋರಿದ್ದರು. ಕುಡಿದು ಬಿದ್ದಿದ್ದ ಈ ಆಸಾಮಿ ಕಣ್ಣೇ ಬಿಟ್ಟಿರಲಿಲ್ಲ. ಆತ ಕಣ್ಣು ಬಿಟ್ಟಾಗ ಆತನ ಮಡದಿ ಅದಾಗಲೇ ಲಾಮಾ ಮಕ್ಕಳ ಬಟ್ಟೆ ಬದಲಾಯಿಸಿ, ಬಿಸಿ ನೀರಲ್ಲಿ ಸ್ನಾನ ಮಾಡಿಸಿ, ಹೊಟ್ಟೆಗೆ ತಿನ್ನಲು ಕೊಟ್ಟು, ಅವರ ಕಾಷಾಯ ವಸ್ತ್ರಗಳನ್ನು ಒಗೆದು ಬಿಸಿಲಿಗೆ ಒಣಗಲು ಹಾಕಿ, ಅವರಿಗೆ ಕಂಬಳಿ ಹೊದೆಸಿ ಬೆಚ್ಚಗೆ ಮಲಗಿಸಿ ಅವರನ್ನು ಕಾದು ಕುಳಿತಿದ್ದಳು.
ಅಬ್ದುಲ್‌ ರಶೀದ್‌ ಬರೆದ ಕಥೆ “ಅಂತಾರಾಷ್ಟ್ರೀಯ ಕುಂಬಳಕಾಯಿ”

Read More

ಶ್ರೀನಿವಾಸ ವೈದ್ಯರು ಇನ್ನಿಲ್ಲ….

‘ಹಳ್ಳ ಬಂತು ಹಳ್ಳ’ ಕೃತಿ ಬಂದಾಗ ಅವರ ವಿದ್ವತ್ತು ಓದುಗರಿಗೆ ಪರಿಚಯವಾಯ್ತು. ಶುದ್ಧ ಹಾಸ್ಯ ಸೃಷ್ಟಿಸುವ ಶಕ್ತಿ ಇರುವವರಿಗೆ ಬದುಕನ್ನು ಗಾಢವಾಗಿ ನೋಡುವ ಶಕ್ತಿಯೂ ಇರುತ್ತದೆ ಎಂಬುದು ಈ ಕೃತಿ ನಿರೂಪಿಸಿತ್ತು. ಯಾವುದೇ ಅನುಮಾನವಿಲ್ಲದೆ ಈ ಕಾದಂಬರಿ ಕನ್ನಡ ಸಾಹಿತ್ಯಲೋಕದ ಅಪರೂಪದ ಕೃತಿ. ಅದು ಬಿಡುಗಡೆಯಾದಾಗ ನಾನು ಸಂಭ್ರಮ ಪಟ್ಟು ಅದರ ಕುರಿತು ವಿ.ಕ. ದಲ್ಲಿ ವಿಮರ್ಶೆ ಬರೆದಿದ್ದೆ. ಆ ವಿಮರ್ಶೆಯಲ್ಲಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬರಲಿ ಎಂದು ಆಶಿಸಿದ್ದೆ. ಅಂತೆಯೇ ಅವರಿಗೆ ಆ ಪ್ರಶಸ್ತಿ ಅನಂತರದ ವರ್ಷ ಬಂದಿತು.
ಇಂದು ಬೆಳಗ್ಗಿನ ಜಾವ ತೀರಿಕೊಂಡ ಹಿರಿಯ ಸಾಹಿತಿ ಶ್ರೀನಿವಾಸ ವೈದ್ಯರ ಕುರಿತು ಕಥೆಗಾರ ವಸುಧೇಂದ್ರ ಬರಹ

Read More

ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಈ ಭಾನುವಾರದ ಕತೆ

ದೊಡ್ಡ ಮನೆ, ಐದೆಕರೆ ಫಲವತ್ತಾದ ಕೃಷಿಭೂಮಿ, ಅಡಕೆ ತೋಟ ಮೇಲಾಗಿ ಅತ್ತೆ ನಾದಿನಿಯರ ಕಾಟವಿಲ್ಲದ ಎಲ್ಲರೂ ಬಯಸುವ ಕನಸಿನ ಸಂಸಾರ! ಏನು ಕೊರತೆ ಇತ್ತು ಸುಖಕ್ಕೆ? ಆದರೆ ಯಾಕೋ ಅಲ್ಲಿ ಸ್ವರ್ಗಕ್ಕೆ ಕಿಚ್ಚು ಹಚ್ಚುವ ಯಾವುದೇ ಸಂಭ್ರಮ ಕಾಣದೇ ನಿಧಾನವಾಗಿ ಸಂಸಾರದೊಳಗೇ ಅಸಮಾಧಾನದ ಕಿಚ್ಚು ಹೊತ್ತಿಕೊಂಡದ್ದು ಅಷ್ಟು ಬೇಗನೇ ಯಾರ ಅರಿವಿಗೂ ಬರಲಿಲ್ಲ. ಆದರೆ ಎಲ್ಲರ ಅರಿವಿಗೆ ಬರುವ ಹೊತ್ತಿಗೆ ಬಹಳ ತಡವಾಗಿ ಹೋಗಿತ್ತು.
ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಕತೆ “ಶಿಕ್ಷೆ” ನಿಮ್ಮ ಈ ಭಾನುವಾರದ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ